ಜನಸ್ಪಂದನ ನ್ಯೂಸ್, ಡೆಸ್ಕ್ : ನವರಾತ್ರಿ ಪ್ರಯುಕ್ತ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರು ಕಾಲ್ತುಳಿತಕ್ಕೆ ಸಿಕ್ಕು ಮೂವರು ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ದುರ್ಗಾ ಪೂಜಾ ವೇಳೆ ಸಂಭವಿಸಿದ ನೂಕುನುಗ್ಗಲಿನಿಂದಾಗಿ ಈ ದುರ್ಘಟನೆ ನಡೆದಿದ್ದು, ಐದು ವರ್ಷದ ಬಾಲಕ ಸೇರಿದಂತೆ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ನಿನ್ನೆ (ದಿ.23) ರಂದು ರಾತ್ರಿ ಬಿಹಾರದ ಗೋಪಾಲಗಂಜ್ ಜಿಲ್ಲೆಯ ರಾಜದಳ ಪ್ರದೇಶದಲ್ಲಿ ದುರ್ಗಾ ಪೂಜಾ ವೇಳೆ ಪ್ರಸಾದ ಸ್ವೀಕರಿಸುವ ಸಂದರ್ಭದಲ್ಲಿ ಕಾಲ್ತುಳಿತದಿಂದಾಗಿ ಹಲವರು ಗಾಯಗೊಂಡಿದ್ದಾರೆ.
ಪೂಜಾ ನಂತರ ಪ್ರಸಾದ ಸ್ವೀಕರಿಸಲು ಭಕ್ತರು ಸಾಲುಗಟ್ಟಿ ನಿಂತಿದ್ದ ವೇಳೆ ಒಮ್ಮಿಂದೊಮ್ಮೇಲೆ ನೂಕುನುಗ್ಗಲು ಉಂಟಾಗಿ ಬಾಲಕ ಕೆಳಗೆ ಬಿದ್ದಿದ್ದಾನೆ.
ಬಾಲಕ ಕೆಳಗೆ ಬೀಳುವುದನ್ನು ಕಂಡ ಮಹಿಳೆಯರು ಬಾಲಕನನ್ನು ರಕ್ಷಿಸಲು ಮುಂದಾದಾಗ ಅವರು ಸಹ ಕೆಳಗೆ ಬಿದ್ದು ಜನರ ಕಾಲ್ತುಳಿತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್ ತಿಳಿಸಿದ್ದಾರೆ.
ಇದನ್ನು ಓದಿ : H.D. ರೇವಣ್ಣ ಆಪ್ತನ ಹತ್ಯೆ ಯತ್ನ ಕೇಸ್ : ಇನ್ಸ್ಪೆಕ್ಟರ್ ಸೇರಿದಂತೆ 6 ಜನ ಅರೆಸ್ಟ್.!
ದುರ್ಘಟನೆ ನಡೆದ ನಂತರ ನಡೆದ ಗಲಾಟೆಯಲ್ಲಿ 13 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ.
ಅವರನ್ನು ಸದರ್ ಆಸ್ಪತ್ರೆಗೆ ಕರೆದೊಯ್ಯಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದಂತೆ ಇನ್ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ.