ಜನಸ್ಪಂದನ ನ್ಯೂಸ್, ಡೆಸ್ಕ್ : ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ಹೋಗಿದ್ದ ಗ್ಯಾಂಗ್ಸ್ಟರ್ನನ್ನು ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಸೇರಿ ಹೊಡೆದು ಹತ್ಯೆ ಮಾಡಿದ ಘಟನೆ ಬಿಹಾರದ ಬೇಗುಸರಾಯ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ವೈದ್ಯ ಅಜಿತ್ ಪಾಸ್ವಾನ್ ಎಂಬಾತನ ಬಳಿ ಗ್ಯಾಂಗ್ಸ್ಟರ್ ಚಂದನ್ ಕುಮಾರ್ ಚಿಕಿತ್ಸೆಗೆಂದು ಹೋಗಿದ್ದನು. ಈ ವೇಳೆ ವೈದ್ಯರೊಂದಿಗೆ ವಾಗ್ವಾದ ನಡೆದು ಆತನನ್ನು ವೈದ್ಯರು ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿ ಸೇರಿ ಹೊಡೆದು ಕೊಂದಿದ್ದಾರೆ ಎಂದು ಎಸ್ಪಿ ಯೋಗೇಂದ್ರ ಕುಮಾರ್ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.
ಹತ್ಯೆಗೆ ಸಂಚು ರೂಪಿಸಿ ಗ್ಯಾಂಗ್ಸ್ಟರ್ನನ್ನು ಕೊಲ್ಲಲು ಹರಿತವಾದ ವಸ್ತುಗಳನ್ನು ಬಳಸಿದ್ದರು. ಇದನ್ನು ಓದಿ : ಗೋಕಾಕ : ನಡುರಸ್ತೆಯಲ್ಲೇ ಯುವಕನ ಬರ್ಬರ ಹತ್ಯೆ.!
ಇನ್ನು ಘಟನೆಯ ಬಳಿಕ ಆ ಗ್ಯಾಂಗ್ಸ್ಟರ್ನ ಅನುಯಾಯಿಗಳು ಆಸ್ಪತ್ರೆ ಹಾಗೂ ವೈದ್ಯರಿಗೆ ಸಂಬಂಧಿಸಿದ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಡಿಎಸ್ಪಿ ಅಮಿತ್ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ವೈದ್ಯರು ಹಾಗೂ ಕಾಂಪೌಂಡರ್ನನ್ನು ಬಂಧಿಸಲು ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.