ಜನಸ್ಪಂದನ ನ್ಯೂಸ್, ಬೆಂಗಳೂರು : ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ (state Congress government) ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ-2024 ಅನ್ನು ಮಂಡಿಸಲಾಗಿತ್ತು.
ವಿಧಾನಸಭೆ, ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಕಿತ (imprint) ದೊರೆತಿತ್ತು. ಈ ಮಸೂಧೆಯನ್ನು ಕಾಯ್ದೆಯಾಗಿಸುವ ನಿಟ್ಟಿನಲ್ಲಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು.
ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್ : ಅಂತರ್ ಜಿಲ್ಲಾ ವರ್ಗಾವಣೆಗೆ ಒಪ್ಪಿದ ಸರ್ಕಾರ.!
ಇಂದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ರಾಜ್ಯಪಾಲರ ಒಪ್ಪಿಗೆ ದೊರೆತಿದೆ. ಹೀಗಾಗಿ ವಿಶೇಷ ರಾಜ್ಯಪತ್ರಿಕೆಯಲ್ಲಿ ಅಧಿಕೃತವಾಗಿ ಆದೇಶ (order) ಮಾಡಲಾಗಿದೆ.
ವಿಶೇಷ ರಾಜ್ಯ ಪತ್ರದಲ್ಲಿ ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿಸಬೇಕು ಎಂಬುದಾಗಿ ತಿಳಿಸಲಾಗಿದೆ.
ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆಗಳು, ಪ್ರಯೋಗಾಲಯಗಳು, ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್’ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸಬೇಕು ಎಂದು ತಿಳಿಸಲಾಗಿದೆ.