Monday, October 27, 2025

Janaspandhan News

HomeHealth & Fitness"ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ...
spot_img
spot_img
spot_img

“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

- Advertisement -

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation̤They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

vande-bharat

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕೊನೆಗೂ ಬೆಳಗಾವಿ – ಬೆಂಗಳೂರು ವಂದೇ ಭಾರತ್ (Vande-Bharat) ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ ದೊರೆಯುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಬೆಳಗಾವಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ (Vande-Bharat) ರೈಲು ಆರಂಭಿಸಲು ಶತ ಪ್ರಯತ್ನ ನಡೆಸಿದ್ದರು. ಕೊನೆಗೂ ಅದಕ್ಕೆ ದಿನ ನಿಗದಿಯಾಗಿದೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಹಾಗೂ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನು ಓದಿ : ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ.

ಕರ್ನಾಟಕ ಪ್ರವಾಸದಂದು ಮೋದಿ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ (Vande-Bharat) ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬೆಳಗಾವಿ – ಬೆಂಗಳೂರು Vande-Bharat ರೈಲಿನ ವೇಳಾ ಪಟ್ಟಿ :

ಸಂಸದರ ಕೋರಿಕೆಯ ಮೇರೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ (Vande-Bharat) ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ’ ಎಂದು ಜೋಶಿ ತಿಳಿಸಿದ್ದಾರೆ.

ರೈಲು ಯೋಜನೆ ಜಾರಿಗೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ಎಂದು ಜೋಶಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments