ಜನಸ್ಪಂದನ ನ್ಯೂಸ್, ಬೆಳಗಾವಿ : ನಿಪ್ಪಾಣಿ ಪಟ್ಟಣದ ರಾಮ ಮಂದಿರ ಸ್ಫೋಟಿಸುತ್ತೇವೆ (We will explode), ಸುಧಾರಿಸಿಕೊಳ್ಳಿ ಎಂದು ಅಲ್ಲಾ ಹು ಅಕ್ಟರ್ ಹೆಸರಿನಲ್ಲಿ ದುಷ್ಕರ್ಮಿಗಳು ಬೆದರಿಕೆ ಪತ್ರ ಬರೆದಿದ್ದಾರೆ.
ಕಳೆದ ತಿಂಗಳು ಫೆಬ್ರವರಿ 7 ಹಾಗೂ 28 ರಂದು ಎರಡು ಪತ್ರಗಳು ಬಂದಿದ್ದು, ಮುಂದಿನ 20, 21 ತಾರೀಖಿನ ಒಳಗಡೆ ರಾಮ ಮಂದಿರ (Mandir) ವನ್ನು ದೊಡ್ಡ ಪ್ರಮಾಣದಿಂದ ಸ್ಪೋಟಿಸುತ್ತೇವೆ ಎಂದು ಅನಾಮಧೇಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ.
ದೇವಸ್ಥಾನದ ಅರ್ಚಕ ಸುರೇಶ ಜೀವಾಜಿ ದೇಶಪಾಂಡೆ ಅವರು ಮೊದಲು ಪತ್ರವನ್ನು ನೋಡಿ ದೇವಸ್ಥಾನದ ಆಡಳಿತ ಮಂಡಳಿಗೆ ಮೊದಲು ಮಾಹಿತಿ ನೀಡಿದ್ದರು. ಅಲ್ಲಿ ಚರ್ಚೆಯಾಗಿ ನಿಪ್ಪಾಣಿ ನಗರ (Nippani city) ಠಾಣೆಗೆ ದೂರು ನೀಡಲಾಗಿದೆ.
ಪದೇ ಪದೇ ನಿಮ್ಮ ಮೇಲೆ Evil Eye ಬೀಳುತ್ತಿದೆಯೇ.? ಹಾಗಾದ್ರೆ ಹೀಗೆ ಮಾಡಿ.!
ದುಷ್ಕರ್ಮಿಗಳು ಫೆಬ್ರವರಿ 7 ಹಾಗೂ 28 ರಂದು ಬರೆದ ಎರಡು ಪತ್ರ (Two letters) ಗಳು ಸದ್ಯ ಸಂಚಲನ ಸೃಷ್ಟಿಸಿದೆ.
ಮೊದಲನೆಯ ಪತ್ರ : ಶ್ರೀರಾಮ ಮಂದಿರ 101 ವರ್ಷಗಳ ಇತಿಹಾಸ ಹೊಂದಿದೆ. ಮೊದಲನೆಯ ಪತ್ರ ರಾಮ ಮಂದಿರ ಗರ್ಭ ಗುಡಿಯಲ್ಲಿ ಪತ್ತೆಯಾಗಿದೆ.
ಎರಡನೇ ಪತ್ರ : ಎರಡನೇ ಪತ್ರ ಮಂದಿರದ ಆವರಣದ ಹನುಮಾನ ಮಂದಿರದಲ್ಲಿ ಪತ್ತೆಯಾಗಿದೆ. ಬೆದರಿಕೆ ಪತ್ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೋಲಿಸ್ ಹೈ ಅಲರ್ಟ್ (Hi alert) ಆಗಿದ್ದು, ಮಂದಿರದ ಆವರಣದಲ್ಲಿ 14 ಸಿಸಿಟಿವಿಗಳನ್ನು ಅಳವಡಿಸಿಲಾಗಿದೆ.
Health : ಬೇಸಿಗೆಯಲ್ಲಿ ಕಬ್ಬಿನ ರಸ ಕುಡಿಯುವುದರಿಂದ ಆಗುವ ಪ್ರಯೋಜನಗಳು.!
ನಿಪ್ಪಾಣಿ ಹಳೆ ಪಿಬಿ (Old PB Read) ರಸ್ತೆಯ ರಾಮಮಂದಿರ ಇದಾಗಿದ್ದು, ಪತ್ರವನ್ನು ಗಮನಿಸಿದ ದೇವಸ್ಥಾನದ ಅರ್ಚಕರ ಮೂಲಕ ನಿಪ್ಪಾಣಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ.
ಪತ್ರದ ಆರಂಭದಲ್ಲೇ ಅಲ್ಲಾ ಹೋ ಅಕ್ಬರ್ ಎಂದು ಬರೆಯಲಾಗಿದೆ. ಹೀಗಾಗಿ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿ ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಒಂದು ಡಿಆರ್ ಪೋಲಿಸ್ (DR Police) ತುಕಡಿಯನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ.