Friday, October 18, 2024
spot_img
spot_img
spot_img
spot_img
spot_img
spot_img
spot_img

Lokayukta raid : ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ ಲೋಕಾಯುಕ್ತ ಬಲೆಗೆ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ರೋಣ ತಾಲ್ಲೂಕು ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರು ಭಾನುವಾರ ರಾತ್ರಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.

ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕ ವಿ. ಗಿರೀಶ್‌ ಲೋಕಾ ಬಲೆಗೆ ಬಿದ್ದಿದ್ದಾರೆ.

ಇದನ್ನು ಓದಿ : ಇನ್ಮುಂದೆ ಅಪ್ರಾಪ್ತರು e-scooter ಓಡಿಸಬಹುದು : ಕೇಂದ್ರ ಸರ್ಕಾರದ ನಿರ್ಧಾರ ; condition apply.!

ಗಜೇಂದ್ರಗಡ ತಾಲ್ಲೂಕಿನ ನೀರಲಕೇರಿ ಗ್ರಾಮದ ಅರುಣ್‌ ಕುಮಾರ್‌ ಎಂಬುವರು ಸರ್ವೇಯರ್‌ ಪರವಾನಗಿ ನವೀಕರಿಸಿಕೊಡುವಂತೆ ವಿ. ಗಿರೀಶ್‌ ಬಳಿ ಹೋದಾಗ, ಪರವಾನಗಿ ನವೀಕರಣಕ್ಕೆ ₹25 ಸಾವಿರ ಲಂಚ ಕೊಡುವಂತೆ ಡಿಮ್ಯಾಂಡ್ ಮಾಡಿದ್ದರು.

ಈ ಸಂಬಂಧ ಅರುಣ್‌ ಕುಮಾರ್‌ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇದನ್ನು ಓದಿ : Video : ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು.!

ಗಿರೀಶ್‌ ಅವರು ಭಾನುವಾರ ರಾತ್ರಿ ಗದಗ ನಗರದ ಸಾಯಿಬಾಬ ಗುಡಿಯ ಬಳಿ ₹25 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈಎಸ್‌ಪಿ ವಿಜಯ್‌ ಬಿರಾದಾರ್‌ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img