ಜನಸ್ಪಂದನ ನ್ಯೂಸ್, ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದಾದ್ಯಂತ 40 ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ (Lokayukta Raids) ಮಾಡಿದ್ದು, ಈ ಮೂಲಕ ಮತ್ತೆ ಭಷ್ಟ್ರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರೆದಿದೆ.
ಇದನ್ನು ಓದಿ : BSF : ಆಕಸ್ಮಿಕ್ ಗಡಿ ದಾಟಿದ್ದ ಬಿಎಸ್ಎಫ್ ಯೋಧ ಪಾಕ್ ನಿಂದ ಬಿಡುಗಡೆ.
ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲುಸುತ್ತಿದ್ದಾರೆ.
ಇದನ್ನು ಓದಿ : Health : ಬೆಳಿಗ್ಗೆ ಲವಂಗ ನೆನೆಸಿದ ನೀರು ಕುಡಿಯುವುದರಿಂದ ಆಗುವ Health ಪ್ರಯೋಜನಗಳು.!
ರಾಜ್ಯದಾದ್ಯಂತ 7 ಅಧಿಕಾರಿಗಳಿಗೆ ಸೇರಿದಂತೆ ಮನೆ, ಕಚೇರಿ, ಗೋಡೋನ್, ಸಂಬಂಧಿಕರ ಮನೆಗಳು ಸೇರಿದಂತೆ 40 ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಎಲ್ಲೇಲ್ಲಿ :
- ಬೆಂಗಳೂರಿನ 12 ಕಡೆ,
- ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಕಡೆ,
- ಯಾದಗಿರಿ 5,
- ವಿಜಯಪುರ 4 ಹಾಗೂ
- ಮಂಗಳೂರಿನ 4 ಕಡೆ ಸೇರಿದಂತೆ 40 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನು ಓದಿ : ಲೋಕಾಯುಕ್ತ ಬಲೆಗೆ ಬಿದ್ದ FDA, ಅಕೌಂಟೆಂಟ್.
ಯಾರ ಮೇಲೆ ದಾಳಿ :
1) ರಾಜಶೇಖರ್, ನಿರ್ಮಿತಿ ಕೇಂದ್ರದ ನಿರ್ದೇಶಕರು, ತುಮಕೂರು.
2) ಮಂಜುನಾಥ್, ಸರ್ವೆ ಮೇಲ್ವಿಚಾರಕರು, ದ.ಕ. ಮಂಗಳೂರು.
3) ರೇಣುಕಾ. ಸಾತರ್ಲೆ, ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಜಯಪುರ.
4) ಮುರಳಿ ಟಿವಿ, ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು ನಗರ.
5) ಎಚ್ ಆರ್ ನಟರಾಜ್, ಇನ್ಸ್ಪೆಕ್ಟರ್, ಕಾನೂನು ಮಾಪನಶಾಸ್ತ್ರ, ಬೆಂಗಳೂರು.
6) ಅನಂತ್ ಕುಮಾರ್ SDA, ಹೊಸಕೋಟೆ ತಾಲೂಕು ಕಛೇರಿ,ಬೆಂಗಳೂರು ಗ್ರಾಮಾಂತರ.
7) ಉಮಾಕಾಂತ್, ಶಹಾಪುರ ತಾಲೂಕು, ಯಾದಗಿರಿ.
ಹಿಂದಿನ ಸುದ್ದಿ : ಉಪ್ಪು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತೀರಾ.?
ಜನಸ್ಪಂದನ ನ್ಯೂಸ್, ಡೆಸ್ಕ್ :ಉಪ್ಪನ್ನು ಹೆಚ್ಚು ತಿನ್ನುವುದು ಒಳ್ಳೆಯದಲ್ಲ ಅಂತ ಕಡಿಮೆ ತಿನ್ನುತ್ತಿದ್ದೀರಾ.? ಈ ಅಭ್ಯಾಸ ನಿಮ್ಮ ಆರೋಗ್ಯವನ್ನು ಸುಧಾರಿಸಬಹುದೇ.?
ಸಾಮಾನ್ಯವಾಗಿ ವೈದ್ಯರು ಅಧಿಕ ರಕ್ತದೊತ್ತಡ, ಹೃದ್ರೋಗ ಅಥವಾ ಇನ್ನಾವುದೇ ಗಂಭೀರ ಕಾಯಿಲೆಯಿಂದ (serious illness) ಬಳಲುತ್ತಿರುವವರಿಗೆ ಮಾತ್ರ ಕಡಿಮೆ ಉಪ್ಪನ್ನು ಸೇವಿಸಬೇಕು ಎಂದು ಸಲಹೆ ನೀಡುತ್ತಾರೆ.
ಆದರೆ ಅತಿಯಾದ ಉಪ್ಪು ಯಾರಿಗಾದರೂ ಗಂಭೀರವಾದ ಹಾನಿಯನ್ನುಂಟು ಮಾಡಬಹುದು. ಹೀಗಾಗಿ ಬಹುತೇಕ ಜನರು ಕಡಿಮೆ ಉಪ್ಪನ್ನು ತಿನ್ನುವುದರಿಂದ ಗಂಭೀರ ಕಾಯಿಲೆಗಳು ಬರುವುದಿಲ್ಲ ಅಂತ ಅಂದುಕೊಂಡು ಉಪ್ಪನ್ನು ಕಡಿಮೆ ತಿನ್ನುತ್ತಾರೆ.
ಇದನ್ನು ಓದಿ : ವಿಡಿಯೋ : ಸೇವೆಗೆ ತೆರಳುತ್ತಿದ್ದ ಸೈನಿಕನ ಬಳಿ ಲಂಚ ಕೇಳಿದ TTE ; ಆಮೇಲೆನಾಯ್ತು.?
* ಕಡಿಮೆ ಉಪ್ಪನ್ನು ತಿನ್ನುವ ಜನರು ಸಾಮಾನ್ಯ ಜನರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ರೆನಿನ್, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ಹೊಂದಿರುತ್ತಾರೆ.
ಆರೋಗ್ಯವಂತ ವ್ಯಕ್ತಿಗಳಲ್ಲಿ ಕಡಿಮೆ ಸೋಡಿಯಂ ಆಹಾರವು ಎಲ್ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಅನ್ನು ಶೇ. 4.6 ಮತ್ತು ಟ್ರೈಗ್ಲಿಸರೈಡ್ಗಳನ್ನು ಶೇ. 5.9 ರಷ್ಟು ಹೆಚ್ಚಿಸಿದೆ ಎಂದು National Library of Medicine ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ ತಿಳಿಸಿದೆ.
ಇದನ್ನು ಓದಿ : ಬೆಳಗಾವಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಕರ್ನಲ್ ಸೋಫಿಯಾ ಖುರೇಷಿ : ಹುಕ್ಕೇರಿ ಶಿವಾಚಾರ್ಯ ಶ್ರೀ.
* ಹೃದಯ ಮತ್ತು ರಕ್ತಕ್ಕೆ ಆಮ್ಲಜನಕದ ಅಗತ್ಯಗಳನ್ನು ಪೂರೈಸಲು ಬೇಕಾದಷ್ಟು ರಕ್ತವನ್ನು ಪಂಪ್ ಮಾಡಲು ಸಾಧ್ಯವಾಗದಿದ್ದಾಗ ಹೃದಯ ವೈಫಲ್ಯ (Heart failure) ಉಂಟಾಗುತ್ತದೆ. ಇದರ ಅರ್ಥ ಹೃದಯವು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ಆದರೆ ಇದು ಗಂಭೀರವಾದ ಆರೋಗ್ಯ ಸಮಸ್ಯೆಯಾಗಿದೆ.
ರಾಡ್ ಎಸ್. ಟೇಲರ್ ಮತ್ತು ಸಹೋದ್ಯೋಗಿಗಳ ಸಂಶೋಧನೆಯು (research), ಹೃದಯ ವೈಫಲ್ಯ ಹೊಂದಿರುವ ಜನರು ಕಡಿಮೆ ಸೋಡಿಯಂ ಸೇವನೆಯಿಂದ ಸಾಯುವ ಅಪಾಯವನ್ನು ಸೂಚಿಸುತ್ತದೆ.
ಇದನ್ನು ಓದಿ : ಬೆಳಿಗ್ಗೆ ತುಟಿ colour ಬದಲಾಗಿ ಮುಖ ಊದಿಕೊಳ್ಳುತ್ತಿದೆಯೇ.? ಇದು ಈ ಗಂಭೀರ ರೋಗದ ಲಕ್ಷಣ.!
* ಕಡಿಮೆ ಉಪ್ಪನ್ನು ತಿನ್ನುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ನಿಜ. ಅದಾಗ್ಯೂ, ಅಧಿಕ ರಕ್ತದೊತ್ತಡಕ್ಕೆ ಉಪ್ಪು ಮಾತ್ರ ಕಾರಣವಲ್ಲ (Salt is not the only cause of high blood pressure). ಅಧ್ಯಯನದ ಪ್ರಕಾರ, ದಿನಕ್ಕೆ 2,000 ಮಿ ಗ್ರಾಂ ಗಿಂತ ಕಡಿಮೆ Sodium ತೆಗೆದುಕೊಳ್ಳುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದ್ರೋಗದಿಂದ ಮರಣ ಹೊಂದುವ ಅಪಾಯ ಹೆಚ್ಚು.
* ಕಡಿಮೆ ಉಪ್ಪನ್ನು ತಿನ್ನುವುದರಿಂದ ಹೈಪೋನಾಟ್ರೀಮಿಯಾದ (Hyponatremia) ಅಪಾಯ ಹೆಚ್ಚಾಗುತ್ತದೆ. ಈ ಹೈಪೋನಾಟ್ರೀಮಿಯಾ ಎನ್ನುವುದು ರಕ್ತದಲ್ಲಿ ಕಡಿಮೆ ಮಟ್ಟದ ಸೋಡಿಯಂನಿಂದ ಉಂಟಾಗುವ ಸ್ಥಿತಿಯಾಗಿದೆ. ಇದರ ಲಕ್ಷಣಗಳು ನಿರ್ಜಲೀಕರಣದಿಂದ ಉಂಟಾಗುವ ಲಕ್ಷಣಗಳನ್ನು ಹೋಲುತ್ತವೆ. ತೀವ್ರತರವಾದ ಪ್ರಕರಣಗಳಲ್ಲಿ ಮೆದುಳಿನ ಊತ ಇರಬಹುದು.
ಇದನ್ನು ಓದಿ : ಎಚ್ಚರಿಕೆ : ನಿಮ್ಮ ಮನೆಗೆ ತಂದ LPG ಸಿಲಿಂಡರ್ ಮೇಲೆ ಬರೆದಿರುವ ಈ ಕೋಡ್ ಖಂಡಿತವಾಗಿ ನೋಡಿ.
* ಉಪ್ಪನ್ನು ಸೇವಿಸದಿದ್ದರೆ ದೇಹದಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನಕ್ಕೆ (Electrolyte imbalance) ಕಾರಣವಾಗುತ್ತದೆ. ಇದರ ಪರಿಣಾಮ ಸ್ನಾಯುಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಯಾವುದೇ ರೀತಿಯ ನರ ಸಂವಹನವನ್ನು ಕಡಿತಗೊಳಿಸಲಾಗುತ್ತದೆ. ಇದರಿಂದ ದೇಹದಲ್ಲಿ ವಾಕರಿಕೆ, ತಲೆಸುತ್ತು, ನಿರ್ಜಲೀಕರಣದಂತಹ ಸಮಸ್ಯೆಗಳು ಶುರುವಾಗುತ್ತವೆ. ಹಾಗಾಗಿ ಉಪ್ಪನ್ನು ಬಿಡುವ ಬಗ್ಗೆ ಎಂದಿಗೂ ಯೋಚಿಸಬಾರದು
* ದಿನವಿಡೀ ಉಪ್ಪನ್ನು ತಿನ್ನದಿರುವುದು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಅಧ್ಯಯನದ ಪ್ರಕಾರ, ಜೀವಕೋಶಗಳು ಹಾರ್ಮೋನ್ ಇನ್ಸುಲಿನ್ ಸಿಗ್ನಲ್ಗೆ ಪ್ರತಿಕ್ರಿಯಿಸದಿದ್ದಾಗ, ಇನ್ಸುಲಿನ್ ಪ್ರತಿರೋಧ ಉಂಟಾಗುತ್ತದೆ.
ಇದನ್ನು ಓದಿ : Reels : ನಿಮಗೂ ರೀಲ್ಸ್ ಹುಚ್ಚಾ.? ಹಾಗಾದ್ರೆ ಮೈ ಜುಂ ಎನ್ನೋ ವಿಡಿಯೋ ನೋಡಿ.
* ಟೈಪ್ 1 ಹಾಗೂ ಟೈಪ್ 2 ಡಯಾಬಿಟಿಸ್ ಇರುವವರು ಕಡಿಮೆ ಸೋಡಿಯಂ ಡಯಟ್ನಿಂದ ಸಾಯುವ ಅಪಾಯವಿದೆ (There is a risk of death from a sodium diet) ಎಂದು ಸಂಶೋಧನೆಗಳು ತಿಳಿಸಿವೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ ಮತ್ತು ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.