ಜನಸ್ಪಂದನ ನ್ಯೂಸ್, ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು (Kadur) ತಾಲೂಕಿನ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ಬಹಳಷ್ಟು ಪ್ರಸಿದ್ಧಿ ಪಡೆದಿದೆ.
ಅಂತೆಯೇ ಈ ವರ್ಷ ‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್’ ಎಂದು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ.
ಇದನ್ನು ಓದಿ : ಕೋಳಿ ಸಾಕಾಣಿಕೆ ಮಾಡಲು 25 ಲಕ್ಷ ರೂ. ಸಹಾಯಧನ ; ಇಂದೇ ಅರ್ಜಿ ಸಲ್ಲಿಸಿ.!
ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯಲ್ಲಿ ಮಳೆ-ಬೆಳೆ ಚೆನ್ನಾಗಿ ಆಗಲಿದೆ ಎಂಬ ಆಶಾವಾದದ (optimism) ನುಡಿಯನ್ನೂ ಹೇಳಲಾಗಿದೆ.
ಈ ವರ್ಷ ಮಳೆ ಬೆಳೆ ಸಮೃದ್ಧವಾಗಿ ಆಗುತ್ತದೆ. ಕಮಲ ಪಕ್ಷ ಅರಳುವುದು ನಿಶ್ಚಿತ (sure) ಎಂಬುದೇ ಇದರ ಅರ್ಥವೆಂದು ಭಕ್ತರು ವ್ಯಾಖ್ಯಾನಿಸಿದ್ದಾರೆ.
ಇದನ್ನು ಓದಿ : ಈ ವರ್ಷದಿಂದ 1ನೇ ತರಗತಿ ಪ್ರವೇಶಕ್ಕೆ ಮಗುವಿಗೆ ಇಷ್ಟು ವರ್ಷ ಕಡ್ಡಾಯ : ಕೇಂದ್ರ ಸರ್ಕಾರ.!
ಲೋಕಸಭೆ ಚುನಾವಣೆಗೆ (Lok Sabha Elections 2024) ಇನ್ನೇನು ಕೆಲವೇ ತಿಂಗಳು ಬಾಕಿ ಇದೆ. ಮತ್ತೆ ಕೇಂದ್ರದಲ್ಲಿ ಬಿಜೆಪಿಯೇ (BJP) ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂಬರ್ಥದಲ್ಲಿ ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ. ಇನ್ನೂ ಕಾರ್ಣಿಕ ನುಡಿಗೆ ಸಾವಿರಾರು ಭಕ್ತರು ಸಾಕ್ಷಿಯಾದರು.