ಜನಸ್ಪಂದನ ನ್ಯೂಸ್, ಆನೇಕಲ್ : ಯುವಕನೋರ್ವ ಮನಸ್ಸಾರೆ ಪ್ರೀತಿಸಿದ ಹುಡುಗಿಯೋರ್ವಳು ಬೇರೊಬ್ಬನ ಜೊತೆ ಅಕ್ರಮ ಸಂಬಂಧ ಇರುವುದನ್ನು ಕಣ್ಣಾರೆ ಕಂಡ ಪರಿಣಾಮ ಮನನೊಂದು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಡೆದಿದೆ.
ಈ ಬಗ್ಗೆ ಮೃತನ ಪೋಷಕರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ತಮ್ಮ ಮಗನ ಆತ್ಮಹತ್ಯೆಗೆ ಯುವತಿಯೇ ಪ್ರಚೋದನೆ (stimulus) ನೀಡಿದ್ದಾಳೆ ಎಂದು ಗಂಭೀರವಾದ ಆರೋಪ ಮಾಡಿದ್ದಾರೆ.
ಇದನ್ನು ಓದಿ : ಕಾಲೇಜು ವಿದ್ಯಾರ್ಥಿನಿಗೆ PSI, ಕಾನ್ಸ್ಟೇಬಲ್ ಕಿರುಕುಳ ನೀಡಿದ ಕೇಸ್’ಗೆ ಬಿಗ್ ಟ್ವಿಸ್ಟ್.!
ಆರೋಪಿತ ಯುವತಿಯನ್ನು ದಿವ್ಯಾ ಎಂದು ಹೇಳಲಾಗುತ್ತಿದ್ದು, ಈ ಯುವತಿ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಿ ಬಳಿಕ ವಿಚ್ಛೇದನ ಪಡೆದಿದ್ದಳು. ಈ ಯುವತಿ ವಿಚ್ಛೇದನ (divorce) ಪಡೆದ ಕೆಲವೇ ದಿನದಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸಲು ಆರಂಭಿಸಿದ್ದಳು.
ಅಷ್ಟೆ ಅಲ್ಲಾ ಗಂಡ ಹೆಂಡತಿ ಎಂದು ಹೇಳಿ ಚಿಕ್ಕನಾಗಮಂಗಲದ ಬಾಡಿಗೆ ಮನೆ ಪಡೆದು ಕಳೆದ ಆರು ತಿಂಗಳಿನಿಂದ ಲಿವ್ ಇನ್ ರಿಲೇಷನ್ನಲ್ಲಿದ್ದರು.
ಯುವತಿ ವಿದ್ಯಾ ಐಟಿ ಕಂಪನಿ ಉದ್ಯೋಗಿಯಾಗಿದ್ದರೆ, ಅನ್ಬರಾಸನ್ ಫ್ಲಿಪ್’ಕಾರ್ಟ್ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಈ ನಡುವೆ ವಿದ್ಯಾ ಅನ್ಬರಾಸನ್ ಜೊತೆ ಪ್ರೀತಿಯಲ್ಲಿ ಇರುವಾಗಲೇ ಸಂತೋಷ್ ಎಂಬ ಮತ್ತೊಬ್ಬ ಯುವಕನ ಜೊತೆ ಲವ್ವಿಡವ್ವಿ ಶುರು ಮಾಡಿದ್ದಾಳೆ.
ಇದನ್ನು ಓದಿ : ಕರಿಮಣಿ ಮಾಲೀಕ ಹಾಡಿಗೆ ಹೊಸ ಟ್ವಿಸ್ಟ್ ಕೊಟ್ಟ ನಾನು ನಂದಿನಿ ಖ್ಯಾತಿಯ ವಿಕಾಸ್ ; Video viral.!
ಹೀಗಿರುವಾಗ ಒಮ್ಮೆ ಮನೆಯಲ್ಲಿ ಸಂತೋಷ್ ಹಾಗೂ ವಿದ್ಯಾ ಜೊತೆಯಲ್ಲಿರುವಾಗ, ಅನ್ಬರಾಸನ್ ಕಣ್ಣಾರೆ ಕಂಡ ಹಿನ್ನಲೆಯಲ್ಲಿ ವಿದ್ಯಾಗೆ ಬುದ್ಧಿ ಹೇಳಿದರೂ ಆಕೆ ಕೇಳಿರಲಿಲ್ಲ. ಪರಿಣಾಮ ಅನ್ಬರಾಸನ್ ಮನನೊಂದು
ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ (case) ದಾಖಲಾಗಿದೆ.