Saturday, July 12, 2025

Janaspandhan News

HomeBelagavi NewsSnake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!
spot_img
spot_img

Snake : ತನಗೆ ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ಯಿ.!

- Advertisement -

ಜನಸ್ಪಂದನ ನ್ಯೂಸ್, ಬೆಳಗಾವಿ : ವ್ಯತ್ತಿಯೋರ್ವ ತನಗೆ ಕಚ್ಚಿದ ಹಾವಿನ (Snake) ಸಮೇತ ವೈದ್ಯರ ಬಳಿ ಬಂದ ಅಪರೂಪದ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಇಂತಹ ಅಪರೂಪದ ಘಟನೆಯೊಂದು ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಸಾಮಾನ್ಯವಾಗಿ ನಮಗೆ ಏನಾದ್ರು ಹಾವು (Snake) ಕಚ್ಚಿದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತೇವೆ.

ಇದನ್ನು ಓದಿ : Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!

ಆದರೆ ಕಚ್ಚಿದ ಹಾವನ್ನು (Snake) ಜೊತೆಗೆ ತೆಗೆದುಕೊಂಡು ಹೋಗಿರುವವರು ವಿರಳಾತಿ ವಿರಳ. ಆದರೆ ತನಗೆ ಕಚ್ಚಿದ ಹಾವಿನ ಸಮೇತ ವೈದ್ಯರ ಬಳಿ ಬಂದ ಅಪರೂಪದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ನಡೆದಿದೆ.

ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ರೈತನೊಬ್ಬನಿಗೆ ಹಾವು ಕಚ್ಚಿದೆ. ಆಗ ತನಗೆ ಕಚ್ಚಿದ ಹಾವನ್ನು (Snake) ಹಿಡಿದು ಅದರೊಂದಿಗೆ ಆಸ್ಪತ್ರೆಗೆ ತೆಗೆದುಕೊಂಡು ಬಂದಿರುವ ಅಪರೂಪ ಘಟನೆ ನಡೆದಿದೆ.

ಇದನ್ನು ಓದಿ : ಈ ಲಕ್ಷಣಗಳಿದ್ದರೆ ದೇಹದಲ್ಲಿ ಕೆಟ್ಟ Cholesterol ಹೆಚ್ಚಾಗಿದೆ ಅಂತನೇ ಅರ್ಥ.!

ಹೀಗೆ ಕಚ್ಚಿದ ಹಾವಿ (Snake) ನೊಂದಿಗೆ ಆಸ್ಪತ್ರೆಗೆ ಬಂದ ರೈತನ್ನು ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದ ರೈತ ಯಲ್ಲಪ್ಪ ಎಂದು ಗುರುತಿಸಲಾಗಿದೆ.

ಅಂಬೇವಾಡಿ ಗ್ರಾಮದ ರೈತ ಯಲ್ಲಪ್ಪ ತಮ್ಮ ಹೊಲದಲ್ಲಿ ಕೆಲಸ ಮಾಡುವಾಗ ಹಾವೊಂದು ಕಚ್ಚಿದೆ. ಆಗ ರೈತ ಯಲ್ಲಪ್ಪ ತನಗೆ ಕಚ್ಚಿದ ಹಾವ (Snake) ನ್ನು ಡಬ್ಬಿಯಲ್ಲಿ ತೆಗೆದುಕೊಂಡು ಬಂದಿದ್ದಾನೆ.

ಇದನ್ನು ಓದಿ : Rape : ಬಾಯ್‌ ಫ್ರೆಂಡ್ ಜೊತೆಯಲ್ಲಿದ್ದ ಯುವತಿ ಮೇಲೆ 10 ಯುವಕರಿಂದ ಅತ್ಯಾಚಾರ.!

ರೈತ ಯಲ್ಲಪ್ಪ ತಮ್ಮ ಹೊಲದಲ್ಲಿ ಕೆಲಸ ಮಾಡುವಾಗ ವಿಷಕಾರಿ ಹಾವೊಂದು ಕಚ್ಚಿದೆ, ತಕ್ಷಣ ಆಸ್ಪತ್ರೆಗೆ ಹೊರಟ ಯಲ್ಲಪ್ಪ ತನ್ನ ಜೊತೆ ತನಗೆ ಕಚ್ಚಿದ ಕೊಳಕು ಮಂಡಲ ಹಾವ (Snake) ನ್ನ ಡಬ್ಬದಲ್ಲಿ ಹಾಕಿಕೊಂಡು ಬಂದಿದ್ದಾನೆ.

ಮಂಗಳವಾರ ರೈತ ಯಲ್ಲಪ್ಪನಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ತಕ್ಷಣ ಯಲ್ಲಪ್ಪ ಜಿಲ್ಲಾ (ಬಿಮ್ಸ್) ಆಸ್ಪತ್ರೆಗೆ ಧಾವಿಸಿದ್ದಾರೆ. ಅಷ್ಟೆ ಅಲ್ಲ, ತನ್ನ ಜೊತೆ ತನಗೆ ಕಚ್ಚಿದ ಹಾವ (Snake)ನ್ನೂ ಕೂಡಾ ತಂದಿದ್ದಾನೆ.

ಡಾಕ್ಟರ್‌ಗೆ ಯಾವ ಹಾವು ಕಚ್ಚಿದೆ ಎಂಬುದು ತಿಳಿದರೆ ಚಿಕಿತ್ಸೆ ನೀಡಲು ಸುಲಭವಾಗುತ್ತದೆ ಎನ್ನುವ ದೃಷ್ಟಿಯಿಂದ ಯಲ್ಲಪ್ಪ ಈ ಕೆಲಸ ಮಾಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನು ಓದಿ : RRB : ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ ; 6,374 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ದೃಶ್ಯವನ್ನು ನೋಡಿದ ಆಸ್ಪತ್ರೆಯಲ್ಲಿದ್ದ ರೋಗಿಗಳು ಬೆಚ್ಚಿ ಬಿದ್ದಿದ್ದಾರೆ. ಸದ್ಯ ಬಿಮ್ಸ್‌ ಆಸ್ಪತ್ರೆಯಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಈ ಘಟನೆ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Tution-Class

Honeytrap-case : ಯುವತಿ, ಪೊಲೀಸ್‌ ಕಾನ್ಸ್‌ಟೇಬಲ್ ಸೇರಿ 5 ಜನರ ಬಂಧನ.!

ಜನಸ್ಪಂದನ ನ್ಯೂಸ್‌, ಮೈಸೂರು : ಹನಿಟ್ರ್ಯಾಪ್‌ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ವಿಚಿತ್ರ ಏನೆಂದರೆ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸ್ವತಃ ಪೊಲೀಸ್ ಪೇದೆಯೇ ಸಾಥ್ ನೀಡಿರುವುದು.

ಹನಿಟ್ರ್ಯಾಪ್‌ (Honeytrap) ಪ್ರಕರಣದಲ್ಲಿ ಪೊಲೀಸ್‌ ಸಾಥ್‌ ನೀಡಿರುವುದು ಸ್ವತಃ ಪೊಲೀಸ್‌ ಇಲಾಖೆಗೆಯೇ ಶಾಕ್ ಆಗಿದ್ದು, ಯುವತಿ ಸೇರಿ ಒಟ್ಟು 5 ಜನರನ್ನು ಬಂಧಿಸಲಾಗಿದ್ದು, ಅದರಲ್ಲಿ ಪೊಲೀಸ್‌ ಸಿಬ್ಬಂದಿ ಕೂಡ ಇದ್ದಾನೆ.

ಇದನ್ನು ಓದಿ : BSF : ಸಹೋದ್ಯೋಗಿಯಿಂದ ಬಿಎಸ್‌ಎಫ್ ಯೋಧನ ಹತ್ಯೆ.!

‌ಕಂಪಲಾಪುರದ ಓರ್ವ ಬಟ್ಟೆ ವ್ಯಾಪಾರಿಯನ್ನು ಈ ಹನಿಟ್ರ್ಯಾಪ್‌ನಲ್ಲಿ ಸಿಲುಕಿಸಿ ಲಕ್ಷಾಂತರ ರೂಪಾಯಿ ಸುಲಿಗೆ ನಡೆಸಲು ಪ್ರಯತ್ನಿಸಲಾಗಿದ್ದು, ಹನಿಟ್ರ್ಯಾಪ್ (Honeytrap) ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಬಂಧಿಸಲಾಗಿದೆ.

ಕಂಪಲಾಪುರದ ದಿನೇಶ್ ಕುಮಾರ್ ಎಂಬವರು ತಮ್ಮ ಊರಿನಲ್ಲಿ ಬಟ್ಟೆ ಅಂಗಡಿಯನ್ನು ನಡೆಸುತ್ತಿದ್ದಾರೆ. 3-4 ದಿನಗಳ ಹಿಂದೆ ಅವರ ಅಂಗಡಿಗೆ ಬಂದಿದ್ದ ಯುವತಿಯೊಬ್ಬರು ಬಟ್ಟೆ ಖರೀದಿಯ ನೆಪದಲ್ಲಿ ಪರಿಚಯ ಬೆಳೆಸಿ, ಬಳಿಕ ಮೊಬೈಲ್ ನಂಬರ್ ಪಡೆದು ವಾಟ್ಸಾಪ್ ಚಾಟಿಂಗ್ ಮಾಡುತ್ತಿದ್ದರು.

ಇದನ್ನು ಓದಿ : Breakfast : ಬೆಳಗ್ಗೆ ನೀವು ಉಪಾಹಾರ ಸೇವಿಸದೇ ಇರ್ತೀರಾ.? ಈ ಸುದ್ದಿ ಓದಿ.!

ಕಳೆದ ಜೂನ್‌ 14ರಂದು ಮಧ್ಯಾಹ್ನ ನಮ್ಮ ಮನೆಯಲ್ಲಿ ಯಾರೂ ಇಲ್ಲ, ನೀವೂ ನಾನು ಕಳುಹಿಸುವ ಲೋಕೇಷನ್‌ ಮೂಲಕ ನಮ್ಮ ಚಿಕ್ಕಮ್ಮನ ಮನೆಗೆ ಬನ್ನಿ ಎಂದು ಯುವತಿ, ವ್ಯಾಪಾರಿಯನ್ನು ಮನೆಗೆ ಬರುವಂತೆ ಆಹ್ವಾನ ನೀಡಿದ್ದಾಳೆ.

ಯುವತಿಯ ಮಾತನ್ನು ನಂಬಿದ ವ್ಯಾಪಾರಿ, ಯುವತಿ ಹೇಳಿದ ಸ್ಥಳಕ್ಕೆ ಕಾರಿನಲ್ಲಿ ತೆರಳಿದ್ದಾರೆ. ಮನೆಗೆ ಬಂದ ವ್ಯಾಪಾರಿಯನ್ನು ಆಹ್ವಾನಿಸಿದ ಯುವತಿ ಡೋರ್‌ ಲಾಕ್‌ ಮಾಡಿ ಬರುವುದಾಗಿ ಹೇಳಿ, ಲಾಕ್‌ ಮಾಡದೆ‌ (Honeytrap ಉದ್ದೇಶಕ್ಕಾಗಿ) ಬಂದು ವ್ಯಾಪಾರಿ ಜೊತೆ ಆತ್ಮೀಯವಾಗಿ ಕುಳಿತ್ತಿದ್ದಾಳೆ.

ಇದನ್ನು ಓದಿ : Witchcraft : ಮಹಿಳೆಯ ‘ಬೆತ್ತಲೆ ವೀಡಿಯೋ’ ಮಾಡಿ ಬ್ಲ್ಯಾಕ್ ಮೇಲ್ : ಕಾಮುಕ ಅರ್ಚಕ ಅರೆಸ್ಟ್..!

ಆಗ ಸ್ಥಳಕ್ಕೆ ಅಪರಿಚಿತರಿಬ್ಬರು ಬಂದು ಇಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬಂತೆ ದಾಳಿ ನಡೆಸಿ ದಿನೇಶ್ ಅವರನ್ನು ಹಿಗ್ಗಾಮುಗ್ಗ ಥಳಿಸಿ ಅದನ್ನು Honeytrap ಮಾಡಲು ವಿಡಿಯೋ ಶೂಟ್ ಮಾಡಿದ್ದಾರೆ. ಕೆಲ ಸಮಯದ ನಂತರ ಪೊಲೀಸ್‌ ಪೇದೆ (Honeytrap ಗುಂಪಿನ ಸದಸ್ಯ) ಶಿವಣ್ಣ ಅಲಿಯಾಸ್​ ಪಾಪಣ್ಣ, ಇದೇ ರೂಮಿಗೆ ಬಂದು “ನಿನ್ನನ್ನು ಬಿಟ್ಟು ಕಳಿಸಲು ನಾವು ಇವರೊಂದಿಗೆ ಮಾತನಾಡುತ್ತೇವೆ” ಎಂದು ದಿನೇಶ್​ ಕುಮಾರ್ ಅವರಿಗೆ ನಂಬಿಸಿ, 10 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ.”

ಆಗ ವ್ಯಾಪಾರಿ ದಿನೇಶ್ ಅವರು ತಮ್ಮ ಸಹೋದರನಿಗೆ 10 ಲಕ್ಷ ರೂ. ಹಣವನ್ನು ತಾನು ಹೇಳುವ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಆದರೆ ದಿನೇಶ್‌ ಅವರ ಮಾತಿನಿಂದ ಸಂಶಯಗೊಂಡು ಹಣವನ್ನು ತೆಗೆದುಕೊಂಡು ಹೋಗುವ ಮುನ್ನ ದಿನೇಶನ ಸಹೋದರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನು ಓದಿ : Sheetal : ಕತ್ತು ಸೀಳಿ ಖ್ಯಾತ ಮಾಡೆಲ್ ಹತ್ಯೆ ; ಕಾಲುವೆಯಲ್ಲಿ ಶವ ಪತ್ತೆ.!

ತಮ್ಮ ಚಾಲಾಕಿ ಕೆಲಸ ಪೊಲೀಸರಿಗೆ ತಿಳಿದ ಹನಿಟ್ಯ್ರಾಪ್‌ ಗ್ಯಾಂಗ್‌ ವ್ಯಾಪಾರಿ ದಿನೇಶ್‌ ಕುಮಾರ ಅವರನ್ನು ಬಿಟ್ಟು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಪೊಲೀಸರು ಪೊಲೀಸ್‌, ಯುವತಿ ಸೇರಿ 5 ಜನರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

- Advertisement -
spot_img
spot_img
spot_img
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments