Friday, October 18, 2024
spot_img
spot_img
spot_img
spot_img
spot_img
spot_img
spot_img

ಗಣೇಶನ ಮೂರ್ತಿಗೆ ಕಲ್ಲು ತೂರಿದ ಕಿಡಿಗೇಡಿಗಳು; ಉದ್ವಿಗ್ನ ಪರಿಸ್ಥಿತಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ವಿಜಯಪುರ : ವಿಜಯಪುರ ನಗರದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಕಲ್ಲಿನ ಮಂಟಪವನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ನಡೆದಿದೆ.

ಇಲ್ಲಿನ ಸಿದ್ದೇಶ್ವರ ದೇವಸ್ಥಾನ ಬಳಿಯ ಗಣಪತಿ ಚೌಕ್ ನಲ್ಲಿ ಈ ಘಟನೆ ಜರುಗಿದೆ.

ಚತುರ್ಮುಖ ಗಣಪನ ಮೂರ್ತಿ ಇರುವ ಕಲ್ಲಿನ ಮಂಟಪಕ್ಕೆ ಕಿಡಿಗೇಡಿಗಳು ಕಲ್ಲು ತೂರಿದ್ದು, ಎರಡು ಗಾಜುಗಳನ್ನು ಪುಡಿ -ಪುಡಿ ಮಾಡಿದ್ದಾರೆ.

ಇದನ್ನು ಓದಿ : ಅಕ್ರಮ ಮರಳುಗಾರರ ಪರ ಮಾತನಾಡಿದ ಶಾಸಕರಿಗೆ ಖಡಕ್ ಉತ್ತರ ಕೊಟ್ಟ ಲೇಡಿ ಆಫೀಸರ್.!

ವಿಷಯ ತಿಳಿದು ಸ್ಥಳದಲ್ಲಿ‌ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯ ಜನರು ಜಮಾವಣೆಗೊಂಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಅಲ್ಲದೇ, ಸ್ಥಳಕ್ಕೆ ಗಾಂಧಿ ಚೌಕ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img