ಜನಸ್ಪಂದನ ನ್ಯೂಸ್, ಚಿತ್ರದುರ್ಗ : ಲಂಚ ಪ್ರಕರಣದಲ್ಲಿ ಜೈಲು ಸೇರಿದ್ದ ಪುರಸಭೆ ಮುಖ್ಯಾಧಿಕಾರಿ (Municipal Chief Officer) ಸಾವನ್ನಪ್ಪಿದ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪುರಸಭೆ (Hosadurga Municipality in Chitradurga District) ಮುಖ್ಯಾಧಿಕಾರಿ 40 ವರ್ಷದ ತಿಮ್ಮರಾಜು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!
ಏಪ್ರಿಲ್ 20 ರಂದು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ (Lokayukta trap) ಬಿದ್ದಿದ್ದ ಮುಖ್ಯಾಧಿಕಾರಿ ತಿಮ್ಮರಾಜು ಚಿತ್ರದುರ್ಗ ಜೈಲು ಸೇರಿದ್ದರು.
ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆ ಫಲಿಸದೇ ತಿಮ್ಮರಾಜು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!
ಇನ್ನು ಇ- ಖಾತೆ ಮಾಡಿಕೊಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ (Demand for a bribe of Rs. 50 thousand) ಇಟ್ಟಿದ್ದ ತಿಮ್ಮರಾಜು ಬಳಿಕ ಪುರಸಭೆ ಸದಸ್ಯ ಎನ್. ಶಾಂತಪ್ಪ ಬಳಿ 25 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.
ಹಿಂದಿನ ಸುದ್ದಿ : ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಬೇಡಿ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಆಹಾರವು ಮಾನವನ ಮೂಲಭೂತ ಅಗತ್ಯ. ಆದರೆ ಈ ಆಹಾರ ಪದಾರ್ಥಗಳನ್ನು ಅತಿಯಾಗಿ ತಿನ್ನಲೇಬೇಡಿ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಿರಿ.
ನಾವು ಸರಿಯಾದ ವೇಳೆಗೆ ಆರೋಗ್ಯಕರ ಆಹಾರವನ್ನು ಸೇವಿಸಬೇಕು. ನಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಕೆಲವು ಮುನ್ನೆಚ್ಚರಿಕೆ ವಹಿಸಬೇಕು.
ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್ಫೋನ್ ಬ್ಲಾಸ್ಟ್ ಆಗಬಹುದು.?
ಅತಿಯಾದರೆ ಅಮೃತವು ವಿಷ (If too much nectar is poison) ಎನ್ನುವ ಗಾದೆ ಮಾತಿನಂತೆ ಆಹಾರ ಪದಾರ್ಥಗಳಿಗೆ ಸಂಬಂಧಿಸಿದಂತೆ ಈ ಹತ್ತು ಆಹಾರ ಪದಾರ್ಥಗಳನ್ನು ಅತಿಯಾಗಿ ಅಥವಾ ಹೆಚ್ಚು ಸೇವಿಸದಂತೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಎಚ್ಚರಿಕೆ ನೀಡಿದೆ.
ಹಾಗಾದರೆ ಆ ಹತ್ತು ಆಹಾರ ಪದಾರ್ಥಗಳು ಯಾವುವು ಅಂತ ತಿಳಿಯೋಣ
* ಉಪ್ಪಿಗಿಂತ (Salt) ರುಚಿಯಿಲ್ಲ ಎಂದು ಉಪ್ಪನ್ನು ಹೆಚ್ಚು ಸೇವಿಸಿದರೆ ಅದರಿಂದ ಅನಾರೋಗ್ಯವೇ ಜಾಸ್ತಿ. ಉಪ್ಪನ್ನು ಹೆಚ್ಚಾಗಿ ತಿನ್ನುವುದರಿಂದ ಅಧಿಕ ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.
ಇದನ್ನು ಓದಿ : Video : ವಾಷಿಂಗ್ ಮಷಿನ್ನೊಳಗೆ ಕಲ್ಲು ಹಾಕಿದ ಯುವಕ ; ಆಮೇಲೆನಾಯ್ತು ಗೊತ್ತಾ?
* ಆಲೂಗಡ್ಡೆ ಚಿಪ್ಸ್ ನಂತಹ (Potato chips) ಹಾನಿಕಾರಕ ತಿಂಡಿಗಳನ್ನು ಅತಿಯಾಗಿ ತಿನ್ನುವುದರಿಂದ ಹೆಚ್ಚಿನ ಮಟ್ಟದ ಕೊಬ್ಬಿನ ಅಂಶ ಶೇಖರಣೆಗೊಂಡು (Fat storage) ನಮ್ಮ ದೇಹದಲ್ಲಿ ಅನೇಕ ತೊಂದರೆಗಳು ಉಂಟಾಗಲು ಕಾರಣವಾಗಬಹುದು.
* ಬೆಳಿಗ್ಗೆ ಎದ್ದು ಕುಡಿಯುವ ಕಾಫಿಯನ್ನು (Coffee) ಪದೇ ಪದೇ ಸೇವಿಸಬಾರದು ಎಂದು WHO ತಿಳಿಸಿದೆ. ಕಾಫಿಯಲ್ಲಿ ಕೆಫೀನ್ ಅಧಿಕವಾಗಿರುತ್ತದೆ. ಇದು ಅಧಿಕ ರಕ್ತದೊತ್ತಡ, ತಲೆನೋವು, ಖಿನ್ನತೆ ಮತ್ತು ನಿದ್ರಾಹೀನತೆಯಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹೀಗಾಗಿ ಕಾಫಿಯನ್ನು ಸಹ ಮಿತಿಯಾಗಿ ಸೇವಿಸಬೇಕು.
ಇದನ್ನು ಓದಿ : Health : ಕಪ್ಪು ಕಲೆ ಇರುವ ಈರುಳ್ಳಿಯನ್ನು ತಿನ್ನಬಹುದೇ.?
* ಕರಿದ ಆಹಾರಗಳು (Fried foods) ಕ್ಯಾಲೋರಿಗಳು, ಉಪ್ಪು ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಇದರಿಂದ ಹೃದಯದ ಸಮಸ್ಯೆಗಳಿಗೆ ಕಾರಣವಾಗಬಹುದು.
* ತಾಳೆ ಎಣ್ಣೆ (Palm oil) ಕೂಡ ಆರೋಗ್ಯಕ್ಕೆ ಒಳ್ಳೆಯದಲ್ಲ. ಅಧಿಕ ಕೊಲೆಸ್ಟ್ರಾಲ್ (High cholesterol) ದೀರ್ಘಕಾಲೀನ ಸಮಸ್ಯೆಗಳನ್ನು ಉಂಟುಮಾಡಬಹುದು.
ಇದನ್ನು ಓದಿ : Mobile ಕಸೆದುಕೊಂಡ ಅಧ್ಯಾಪಕಿ ; ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ ; ವಿಡಿಯೋ ವೈರಲ್.!
* ಪಿಜ್ಜಾ ಮತ್ತು ಬರ್ಗರ್ ಗಳನ್ನು (Pizza and Burger) ಸಹ ಹೆಚ್ಚು ತಿನ್ನುವುದನ್ನು ತಪ್ಪಿಸಬೇಕು. ಅಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ.
* ಚೀಸ್ (Cheese) ಅಧಿಕವಾಗಿರುವ ಆಹಾರವನ್ನು ಸೇವಿಸುವುದರಿಂದ ಹೃದಯದ ಸಮಸ್ಯೆಗಳು ಉಂಟಾಗಬಹುದು. ಇದು ಬೊಜ್ಜಿಗೆ ಕಾರಣವಾಗುವುದರಿಂದ ಇವುಗಳನ್ನು ತಪ್ಪಿಸಬೇಕು.
ಇದನ್ನು ಓದಿ : Health : ಮುಖದ ಮೇಲಿನ ಮೊಡವೆಗಳೇ ತಿಳಿಸುತ್ತವೆ ನಿಮ್ಮ ಆರೋಗ್ಯ ಸಮಸ್ಯೆ ಕುರಿತು.!
* ಸಕ್ಕರೆ (Sugar) ಬೊಜ್ಜಿಗೆ ಕಾರಣವಾಗಬಹುದು. ಅತಿಯಾದ ಸಕ್ಕರೆಯ ಬಳಕೆಯಿಂದ ಯಕೃತ್ತು, ಮೇದೋಜ್ಜೀರಕ ಗ್ರಂಥಿ ಮತ್ತು ಅಜೀರ್ಣ ಸಮಸ್ಯೆಗಳು ಉಂಟಾಗಬಹುದು. ಸಕ್ಕರೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕಂತಲ್ಲ. ಸ್ವಲ್ಪ ತೆಗೆದುಕೊಂಡರೆ ಸಾಕು.
* ಪಾಸ್ತಾ ಮತ್ತು ಬ್ರೆಡ್ ನಲ್ಲಿರುವ (Pasta and Bread) ಪದಾರ್ಥಗಳು ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ. ಅವು ಇನ್ಸುಲಿನ್ ಮಟ್ಟವನ್ನು ಸಹ ಹೆಚ್ಚಿಸುತ್ತವೆ.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.