Sunday, September 8, 2024
spot_img
spot_img
spot_img
spot_img
spot_img
spot_img
spot_img

ಮತ್ತೆ ಮೂವರಿಗೆ ಭಾರತ ರತ್ನ ಘೋಷಿಸಿದ ನರೇಂದ್ರ ಮೋದಿ.!

spot_img
WhatsApp Group Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಭಾರತ ಸರ್ಕಾರವು ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್​, ಚೌಧರಿ ಚರಂಣ್ ಸಿಂಗ್​ ಹಾಗೂ ಹಸಿರುವ ಕ್ರಾಂತಿಯ ಪಿತಾಮಹ ಎಂ.ಎಸ್​ ಸ್ವಾಮಿನಾಥನ್​ ಅವರಿಗೆ ಭಾರತ ರತ್ನ ಪುರಸ್ಕಾರಕ್ಕೆ (award) ಆಯ್ಕೆ ಮಾಡಿದೆ.

ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್, ಚರಣ್​ ಸಿಂಗ್ ಚೌಧರಿ ಹಾಗೂ ಹಸಿರು ಕ್ರಾಂತಿಯ ಹರಿಕಾರ ಸ್ವಾಮಿನಾಥನ್​ ಅವರು ಭಾರತಕ್ಕೆ ಸಲ್ಲಿಸಿದ ಗಣನೀಯ ಸೇವೆಯನ್ನು ಅರಿತು ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿ (Highest civilian award) ಭಾರತ ರತ್ನ ಪುರಸ್ಕಾರವನ್ನು ನೀಡಲು ತೀರ್ಮಾನಿಸಿದೆ.

ಇದನ್ನು ಓದಿ : ಕರ್ನಾಟಕದ ಹಿರಿಯ IPS ಅಧಿಕಾರಿ ಪ್ರತಾಪ್ ರೆಡ್ಡಿ ರಾಜೀನಾಮೆ.!

ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇನ್ನೂ 2023-24ನೇ ಸಾಲಿನಲ್ಲಿ ಬಿಹಾರದ ಖ್ಯಾತ ಸಮಾಜವಾದಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್​ ಅವರಿಗೆ ಮರಣೋತ್ತರವಾಗಿ ಇದೇ ಜ.23 ರಂದು ಭಾರತ ರತ್ನ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿತ್ತು.

ಇದನ್ನು ಓದಿ : ಫೇಸ್‌ಬುಕ್ ಲೈವ್‌ನಲ್ಲಿ ಗುಂಡಿನ ದಾಳಿ ನಡೆಸಿ ರಾಜಕೀಯ ನಾಯಕನ ಹತ್ಯೆ ; ವಿಡಿಯೋ Viral.!

ಬಳಿಕ ದೇಶದ ಮಾಜಿ ಉಪಪ್ರಧಾನಿ (Ex Deputy Prime Minister) ಲಾಲ್ ಕೃಷ್ಣ ಅಡ್ವಾಣಿಯವರಿಗೂ ಭಾರತ ರತ್ನವನ್ನು ಘೋಷಣೆ ಮಾಡಲಾಯಿತು. ಇದೀಗ ಮತ್ತೆ ಮೂವರು ನಾಯಕರಿಗೆ ಭಾರತ ಸರ್ಕಾರ ಭಾರತ ರತ್ನವನ್ನು ಘೋಷಿಸಿದೆ ಎಂದು ತಿಳಿದು ಬಂದಿದೆ.

WhatsApp Group Join Now
Telegram Group Join Now
Instagram Account Follow Now
spot_img
spot_img
- Advertisment -spot_img