ಗುರುವಾರ, ಫೆಬ್ರವರಿ 5, 2026

Janaspandhan News

Home Blog Page 45

Instagram-love : ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ 21 ವರ್ಷದ ಯುವಕನಿಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಭೀಕರ ತೀರ್ಪು ನೀಡಿದೆ. ಇನ್‌ಸ್ಟಾಗ್ರಾಮ್ (instagram-love) ಮೂಲಕ ಪರಿಚಯವಾದ ಯುವತಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಿಸಿದ ಪ್ರಕರಣದಲ್ಲಿ ಆರೋಪಿಗೆ ಕಠಿಣ ಜೈಲು ಶಿಕ್ಷೆ.!

ಹೌದು, ಎಡತ್ತನಾಟ್ಟುಕರ ವಡಮ್ಮಣ್ಣಪುರಂ ನಿವಾಸಿ ಮೊಹಮ್ಮದ್ ಅಜಾಸ್ (21) ಗೆ 60 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ರೂ.20,000/- ದಂಡವನ್ನು ವಿಧಿಸಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಪಾಟಾಂಬಿ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ನ್ಯಾಯಾಲಯವು ದಂಡದ ಮೊತ್ತವನ್ನು ದೌರ್ಜನ್ಯಕ್ಕೊಳಗಾದ ಯುವತಿಗೆ ನೀಡುವಂತೆ ನಿರ್ದೇಶಿಸಿದೆ. 2021ರಲ್ಲಿ ಯುವತಿ ಮಣ್ಣಾರ್ಕಾಡ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ 24 ದಾಖಲೆಗಳು ಮತ್ತು 15 ಸಾಕ್ಷಿಗಳ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು.

ಶಾಸಕರ ವಿರುದ್ಧವೂ ಕ್ರಮ :

ಇದೇ ವೇಳೆ, ಪಾಲಕ್ಕಾಡ್ ಶಾಸಕರಾದ ರಾಹುಲ್ ಮಮ್‌ಕೂಟತಿಲ್ ವಿರುದ್ಧವೂ ಕ್ರೈಂ ಬ್ರಾಂಚ್ ಪ್ರಕರಣ ದಾಖಲಿಸಿದೆ. ಮಹಿಳೆಯರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದ್ದು, ಡಿಜಿಪಿಗೆ ಸಲ್ಲಿಕೆಯಾದ ದೂರುಗಳ ಆಧಾರದ ಮೇಲೆ ತನಿಖೆ ಪ್ರಾರಂಭವಾಗಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮುಖ್ಯಮಂತ್ರಿ ಈ ಕುರಿತು ಸ್ಪಷ್ಟನೆ ನೀಡಿದ ನಂತರ, ಕ್ರೈಂ ಬ್ರಾಂಚ್ ಮಹಿಳೆಯರ ಹೇಳಿಕೆಗಳನ್ನು ಸಂಗ್ರಹಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಶಾಸಕರ ವಿರುದ್ಧ ಐಪಿಸಿ‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Courtesy : Suvarna News


Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.

ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!

0

ಜನಸ್ಪಂದನ ನ್ಯೂಸ್‌, ಕಲಬುರಗಿ : ಕಲಬುರಗಿ ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ಅಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ (Student) ಬುಧವಾರ ಮಧ್ಯಾಹ್ನ 2:30ರ ಹೊತ್ತಿಗೆ ಶೌಚಾಲಯದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ಈ ಬೆಳವಣಿಗೆ ತಡವಾಗಿ ಹೊರಬಂದಿದ್ದು, ಶಿಕ್ಷಣ ಇಲಾಖೆ ಹಾಗೂ ಸ್ಥಳೀಯ ಸಮಾಜದಲ್ಲಿ ಆಘಾತ ಮೂಡಿಸಿದೆ. ವಸತಿ ನಿಲಯದಲ್ಲಿ ಉಳಿಯುತ್ತಿರುವ ಇತರ ವಿದ್ಯಾರ್ಥಿನಿ (Student) ಯರ ಪಾಲಕರಲ್ಲಿಯೂ ಈ ಘಟನೆ ಆತಂಕ ಹೆಚ್ಚಿಸಿದೆ.

ತಾಯಿ ಮತ್ತು ಮಗು ಸುರಕ್ಷಿತ :

ಘಟನೆ ತಿಳಿದು ತಕ್ಷಣವೇ ವಿದ್ಯಾರ್ಥಿನಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆಡಳಿತದ ನಿರ್ಲಕ್ಷ್ಯ?

ವಸತಿ ನಿಲಯದ ಮೇಲ್ವಿಚಾರಕಿ ಗೀತಾ, “ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ” ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ ಶಾಲೆಯ ಪ್ರಾಂಶುಪಾಲ ಬಸ್ಸಮ್ಮ ಅವರು, “ವಿದ್ಯಾರ್ಥಿನಿ (Student) ಗರ್ಭಿಣಿಯಾಗಿದ್ದ ಲಕ್ಷಣವೂ ನಮಗೆ ಕಾಣಿಸಿರಲಿಲ್ಲ. ಈ ಘಟನೆ ನಮಗೂ ಆಘಾತ ಉಂಟುಮಾಡಿದೆ. ವಿದ್ಯಾರ್ಥಿನಿಯ ಮದುವೆ ಆಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪೋಷಕರು ನಮಗೆ ತಿಳಿಸಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಹಕ್ಕುಗಳ ಆಯೋಗದ ಕ್ರಮ :

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸುಂಬೆ ಅವರು, “ಘಟನೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿ (Student) ಗರ್ಭಧಾರಣೆಗೆ ಕಾರಣ ಯಾರು?

ವಿದ್ಯಾರ್ಥಿನಿ (Student) ಗರ್ಭಿಣಿಯಾಗಲು ಕಾರಣ ಯಾರು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿದ್ಯಾರ್ಥಿನಿ ಈ ಬಗ್ಗೆ ಮೌನವಾಗಿದ್ದಾಳೆಂದು ವಸತಿ ನಿಲಯದ ಆಡಳಿತ ವರ್ಗ ಹೇಳಿದೆ. ಸಂಬಂಧಿಕರು ಕಾರಣವಾ, ನಿಲಯದ ಸಿಬ್ಬಂದಿ ಕಾರಣವಾ ಅಥವಾ ಹೊರಗಿನವರು ಕಾರಣವಾ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಬಯಲಿಗೆಳೆದು, ಪೋಷಕರಲ್ಲಿ ಗಂಭೀರ ಆತಂಕ ಹುಟ್ಟಿಸಿದೆ.


ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ.!

ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 9ನೇ ತರಗತಿ Student.!

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

Belagavi ಸಮೀಪ ಬಸ್ ಪಲ್ಟಿ : ಇಬ್ಬರ ದುರ್ಮರಣ, 9 ಮಂದಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ (Belagavi) ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಬೆಳಗಾವಿ (Belagavi) ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ :

ಹುಬ್ಬಳ್ಳಿಯಿಂದ ಪುಣೆಯ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಘಟನೆ ನಡೆದಿದೆ. ‘ಗೋಗಟೆ’ ಸಂಸ್ಥೆಗೆ ಸೇರಿದ ಬಸ್ ಬೆಳಗಾವಿ (Belagavi) ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳ ಮಠದ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದುದಾಗಿ ತಿಳಿದುಬಂದಿದೆ.

ಅಪಘಾತ ಸಂಭವಿಸಿದ ಸಂದರ್ಭದಲ್ಲಿ ವಾಹನದಲ್ಲಿ ಒಟ್ಟು 12 ಮಂದಿ ಪ್ರಯಾಣಿಕರು ಇದ್ದರು. ಅಪಘಾತದ ನಂತರಹಿರೇಬಾಗೇವಾಡಿ (Belagavi) ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದರು.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

ಬಸ್‌ನಲ್ಲಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದು, ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ (Belagavi) ಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ದುರಂತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಸಂಚಾರವನ್ನು ಸರಾಗಗೊಳಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ.

ಈ ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಸುರಕ್ಷತಾ ಕ್ರಮಗಳ ಕುರಿತು ಮತ್ತೆ ಚರ್ಚೆ ಶುರುವಾಗಿದೆ.


Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

Liver

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

0

ಜನಸ್ಪಂದನ ನ್ಯೂಸ್, ಆರೋಗ್ಯ : ಯಕೃತ್ತು (Liver) ದೇಹದ ಪ್ರಮುಖ ಅಂಗ. ದೇಹದಿಂದ ವಿಷಗಳನ್ನು ಹೊರಹಾಕಿ ಆರೋಗ್ಯವನ್ನು ಕಾಪಾಡುತ್ತದೆ. ಆದರೆ ಕೆಲವೊಮ್ಮೆ ಲಿವರ್‌ (Liver) ನಲ್ಲೂ ಕೊಳೆ ಮತ್ತು ವಿಷದ ಅಂಶಗಳು ಜಮಾಗುತ್ತವೆ. ಇದನ್ನು ಶುದ್ಧೀಕರಿಸಲು ಸರಳವಾದ ಮನೆಮದ್ದು ಶುಂಠಿ-ಪುದೀನಾ ನೀರು ಉತ್ತಮ ಆಯ್ಕೆ.

ಶುಂಠಿಯ ಲಾಭಗಳು :
  • ಶುಂಠಿಯಲ್ಲಿ ಜಿಂಜರಾಲ್ ಮತ್ತು ಶೋಗೋಲ್ ಎಂಬ ಜೈವಿಕ ಅಂಶಗಳಿವೆ.
  • ಲಿವರ್‌ (Liver) ನಲ್ಲಿ ಉರಿಯೂತ ಕಡಿಮೆ ಮಾಡಲು ಮತ್ತು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ.
  • ಜೀರ್ಣಕ್ರಿಯೆಯನ್ನು ಸುಧಾರಿಸಿ ದೇಹವನ್ನು ಡಿಟಾಕ್ಸ್ ಮಾಡುತ್ತದೆ.
RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪುದೀನದ ಲಾಭಗಳು :
  • ಪುದೀನಾದಲ್ಲಿ ಇರುವ ಮೆಂಥಾಲ್ ಜೀರ್ಣಾಂಗ ವ್ಯವಸ್ಥೆಗೆ ಶಾಂತಿ ನೀಡುತ್ತದೆ.
  • ಲಿವರ್‌ (Liver) ನಲ್ಲಿ ಪಿತ್ತರಸ ಉತ್ಪಾದನೆ ಹೆಚ್ಚಿಸಿ ಕೊಬ್ಬು ಕರಗಿಸಲು ನೆರವಾಗುತ್ತದೆ.
  • ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವುದರಿಂದ ಲಿವರ್ ಕಾರ್ಯ ಸುಧಾರಿಸುತ್ತದೆ.
ಪ್ರತಿದಿನ ಕುಡಿಯುವುದರಿಂದ ಲಾಭ :
  • ಲಿವರ್ (Liver) ಶುದ್ಧೀಕರಣ : ವಿಷ ಮತ್ತು ಕೊಳೆಯ ನಿವಾರಣೆ, ಕೊಬ್ಬಿನ ಲಿವರ್ ತಡೆಯಲು ಸಹಕಾರಿ.
  • ಜೀರ್ಣಕ್ರಿಯೆ ಸುಧಾರಣೆ : ಅಜೀರ್ಣ, ಅನಿಲ, ಹೊಟ್ಟೆ ನೋವು ನಿವಾರಣೆ.
  • ತೂಕ ನಿಯಂತ್ರಣ : ಚಯಾಪಚಯ ಕ್ರಿಯೆ ವೇಗಗೊಳಿಸಿ ತೂಕ ಇಳಿಸಲು ಸಹಾಯ.
  • ರೋಗನಿರೋಧಕ ಶಕ್ತಿ ಹೆಚ್ಚಳ : ವಿಟಮಿನ್ ಮತ್ತು ಆಂಟಿಆಕ್ಸಿಡೆಂಟ್‌ಗಳಿಂದ ದೇಹ ಬಲಪಡುತ್ತದೆ.
  • ಹೈಡ್ರೇಷನ್ : ದೇಹ ತಂಪಾಗಿ, ಬೇಸಿಗೆಯಲ್ಲಿ ತಾಜಾತನ ನೀಡುತ್ತದೆ.
harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?
ಶುಂಠಿ-ಪುದೀನಾ ನೀರು ತಯಾರಿಸುವ ವಿಧಾನ :
ಬೇಕಾಗುವ ಸಾಮಗ್ರಿಗಳು :
  • 1 ಇಂಚಿನ ಶುಂಠಿ ತುಂಡು.
  • 10–15 ಪುದೀನ ಎಲೆಗಳು.
  • 1 ಗ್ಲಾಸ್ ನೀರು.
  • ½ ನಿಂಬೆ ರಸ.
  • ಸ್ವಲ್ಪ ಕಪ್ಪು ಉಪ್ಪು.
ತಯಾರಿಸುವ ವಿಧಾನ :
  1. ಒಂದು ಪಾತ್ರೆಯಲ್ಲಿ ನೀರಿಗೆ ಶುಂಠಿ ತುಂಡು ಮತ್ತು ಪುದೀನ ಎಲೆ ಹಾಕಿ ಕುದಿಸಿ.
  2. ಅರ್ಧ ನೀರು ಉಳಿದಾಗ ಉರಿ ಆರಿಸಿ, ತಣ್ಣಗಾಗಲು ಬಿಡಿ.
  3. ಸೋಸಿ ಲೋಟಕ್ಕೆ ಸುರಿದು, ಬೇಕಿದ್ದರೆ ನಿಂಬೆ ರಸ ಮತ್ತು ಕಪ್ಪು ಉಪ್ಪು ಸೇರಿಸಿ.
  4. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದು ಉತ್ತಮ.
Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

👉 ಗಮನಿಸಿ : ಇದು ಮನೆಮದ್ದು ಮತ್ತು ಸಾಮಾನ್ಯ ಮಾಹಿತಿ ಆಧಾರಿತವಾಗಿದೆ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆ ಪಡೆಯುವುದು ಮುಖ್ಯ.


ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ.!

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

Liver : ಹಾಳಾದ ಲಿವರ್‌ ಗುಣಪಡಿಸಲು ನಿತ್ಯ 1 ಗ್ಲಾಸ್‌ ಈ ಪಾನೀಯ ಕುಡಿಯಿರಿ.!

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

harassing : ಯುವತಿಯರನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿದ 2 ಜನ ಯುವಕರು ; ಮುಂದೆನಾಯ್ತು.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಯುವತಿಯರನ್ನು ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಯುವಕರ ಗತಿ ಏನಾಯಿತು ಅಂತ ನೋಡಲೇ ಬೇಕಾದ ವಿಡಿಯೋ ಒಂದನ್ನು ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಾ.

ಹರಿಯಾಣದ ಪಾಣಿಪತ್ ನಗರದಲ್ಲಿ ಮಹಿಳೆಯರ ಸುರಕ್ಷತೆಯನ್ನು ತೊಡೆತಟ್ಟುವ ಘಟನೆ ನಡೆದಿದ್ದು, ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!

ಸಿಗ್ನಲ್ ಬಳಿ ರಸ್ತೆ ದಾಟುತ್ತಿದ್ದ ಯುವತಿಯರನ್ನು ಬೈಕ್‌ನಲ್ಲಿ ಬಂದ ಇಬ್ಬರು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದರು. ಬಳಿಕ ಅವರು ವೇಗವಾಗಿ ಪರಾರಿಯಾದರೂ, ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

https://twitter.com/i/status/1960190360849699201

ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ವಿಡಿಯೋ ಹರಿದಾಡಿದ ಕೆಲವೇ ಗಂಟೆಗಳಲ್ಲಿ ಪಾಣಿಪತ್ ಪೊಲೀಸರು ತ್ವರಿತ ಕ್ರಮ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದರು.

ಪೊಲೀಸರ ಕ್ರಮ :

ಬಂಧನದ ನಂತರ, ಆರೋಪಿಗಳಿಗೆ ಶಿಕ್ಷೆ ನೀಡಲಾಗಿದ್ದು, ಅವರನ್ನು ಕುಂಟುತ್ತಾ ನಡೆಯುತ್ತಿರುವ ದೃಶ್ಯಾವಳಿಯನ್ನು ಪಾಣಿಪತ್ ಪೊಲೀಸರು ತಮ್ಮ ಅಧಿಕೃತ X (ಹಿಂದಿನ ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಎಸ್ಪಿ ಪ್ರತಿಕ್ರಿಯೆ :

ಪಾಣಿಪತ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ಭೂಪೇಂದ್ರ ಸಿಂಗ್ (IPS) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ, “ಯುವತಿಯರನ್ನು ಹಿಂದಿನಿಂದ ಅಸಭ್ಯವಾಗಿ (harassing) ಸ್ಪರ್ಶಿಸಲು ಯತ್ನಿಸಿದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ. ಮಹಿಳೆಯರ ಸುರಕ್ಷತೆ ನಮ್ಮ ಪ್ರಾಥಮಿಕ ಗುರಿ,” ಎಂದು ತಿಳಿಸಿದ್ದಾರೆ.

https://twitter.com/i/status/1960003702552424925


Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

Lemon

ಜನಸ್ಪಂದನ ನ್ಯೂಸ್‌, ಆರೋಗ್ಯ : ನಿಂಬೆಹಣ್ಣು (Lemon) ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯ ಹಾಗೂ ಸ್ವಚ್ಛತೆಗೆ ಸಹ ಸಹಾಯಕವಾಗುತ್ತದೆ. ತಜ್ಞರ ಪ್ರಕಾರ, ನಿಂಬೆ ಹೋಳುಗಳನ್ನು ರೆಫ್ರಿಜರೇಟರ್‌’ನಲ್ಲಿ ಇಡುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು.

ಫ್ರಿಡ್ಜ್‌’ನಲ್ಲಿ Lemon ಇಡುವುದರಿಂದ ಸಿಗುವ ಅದ್ಭುತ ಪ್ರಯೋಜನಗಳು :
👉 ಫ್ರಿಡ್ಜ್‌ನ ವಾಸನೆ ಹೋಗಲಾಡಿಸುತ್ತದೆ :

ಫ್ರಿಡ್ಜ್ ಎಷ್ಟು ಸ್ವಚ್ಛವಾಗಿದ್ದರೂ, ಕೆಲವೊಮ್ಮೆ ಅದರಿಂದ ಅಸಹ್ಯವಾದ ವಾಸನೆ ಬರುತ್ತದೆ. ಇಂತಹ ಸಂದರ್ಭಗಳಲ್ಲಿ, ನಿಂಬೆಹಣ್ಣ (Lemon) ನ್ನು ಕತ್ತರಿಸಿ ಒಳಗೆ ಇಟ್ಟರೆ, ಸಿಟ್ರಿಕ್ ಆಮ್ಲವು ಕೆಟ್ಟ ವಾಸನೆಯನ್ನು ಹೀರಿಕೊಳ್ಳುತ್ತದೆ ಮತ್ತು ತಾಜಾ ವಾತಾವರಣವನ್ನು ನೀಡುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
👉 ಆಹಾರ ಹೆಚ್ಚು ಕಾಲ ತಾಜಾವಾಗಿರುತ್ತದೆ :

ಕೆಲವು ಆಹಾರಗಳು ಫ್ರಿಡ್ಜ್‌’ನಲ್ಲಿ ಬೇಗನೆ ಹಾಳಾಗುತ್ತವೆ. ಆದರೆ ನಿಂಬೆ (Lemon) ಹೋಳುಗಳನ್ನು ಬಳಸುವುದರಿಂದ ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಆಹಾರವನ್ನು ಹೆಚ್ಚು ದಿನಗಳು ತಾಜಾವಾಗಿರಲು ಸಹಾಯ ಮಾಡುತ್ತವೆ. ಇದರಿಗಾಗಿ ತಾಜಾ ಹಾಗೂ ಶುದ್ಧ ನಿಂಬೆಯನ್ನೇ ಬಳಸುವುದು ಉತ್ತಮ.

👉 ನೈಸರ್ಗಿಕ ಗಾಳಿ ಶುದ್ಧೀಕರಣ :

ನಿಂಬೆಹಣ್ಣು (Lemon) ಫ್ರಿಡ್ಜ್‌ನ ಗಾಳಿಯನ್ನು ನೈಸರ್ಗಿಕವಾಗಿ ಶುದ್ಧಗೊಳಿಸುವ ಸಾಮರ್ಥ್ಯ ಹೊಂದಿದೆ. ಇದರಿಂದ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ ಮತ್ತು ಸೋಂಕು ಹರಡುವ ಅಪಾಯ ತಗ್ಗುತ್ತದೆ. ತಜ್ಞರ ಪ್ರಕಾರ, ಇದು ಮನೆಯವರ ಆರೋಗ್ಯ ಕಾಪಾಡಿಕೊಳ್ಳಲು ಸಹ ಪರಿಣಾಮಕಾರಿ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

Disclaimer : This article is based on reports and information available on the internet. Janaspandhan News is not affiliated with it and is not responsible for it.

fenugreek ನೀರಿನ ಅದ್ಭುತ ಪ್ರಯೋಜನಗಳು : 2 ವಾರಗಳ ಸೇವನೆಯಿಂದ ಏನಾಗುತ್ತದೆ.?

0

ಜನಸ್ಪಂದನ ನ್ಯೂಸ್, ಆರೋಗ್ಯ : ಮೆಂತ್ಯ (fenugreek) ಕೇವಲ ಅಡುಗೆಯಲ್ಲಿ ಸುವಾಸನೆ ನೀಡುವ ಮಸಾಲೆ ಮಾತ್ರವಲ್ಲ, ಅನೇಕ ಆರೋಗ್ಯಕರ ಗುಣಗಳನ್ನು ಹೊಂದಿದೆ.

ಮೆಂತ್ಯದಲ್ಲಿ ಫೈಬರ್, ಪ್ರೋಟೀನ್, ಕಬ್ಬಿಣ, ಕ್ಯಾಲ್ಸಿಯಂ, ಸೋಡಿಯಂ, ಪೊಟ್ಯಾಸಿಯಂ, ವಿಟಮಿನ್-ಡಿ ಮತ್ತು ಸಿ ಮುಂತಾದ ಪೋಷಕಾಂಶಗಳು ತುಂಬಿ ತುಳುಕುತ್ತವೆ. ಈ ಅಂಶಗಳು ದೇಹವನ್ನು ಹಲವಾರು ಕಾಯಿಲೆಗಳಿಂದ ದೂರವಿಡಲು ಸಹಕಾರಿಯಾಗುತ್ತವೆ.

Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

ಮೆಂತ್ಯ (fenugreek) ದ ಕೆಲವು ಸಂಯುಕ್ತಗಳು ಇನ್ಸುಲಿನ್ ಕ್ರಿಯೆಯನ್ನು ಸುಧಾರಿಸುತ್ತವೆ, ಇದರಿಂದ ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಸಾಧ್ಯವಾಗುತ್ತದೆ. ಕರಗುವ ಫೈಬರ್ ರಕ್ತದಲ್ಲಿ ಸಕ್ಕರೆಯ ಹಠಾತ್ತನೆ ಏರಿಕೆಯನ್ನು ತಡೆಯುತ್ತದೆ.

ಹೀಗಾಗಿ, ಪ್ರತಿದಿನ ಎರಡು ವಾರಗಳ ಕಾಲ ಮೆಂತ್ಯ ನೀರನ್ನು ಸೇವಿಸಿದರೆ ದೇಹದಲ್ಲಿ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎಂಬುದನ್ನು ತಿಳಿಯೋಣ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
1. ತೂಕ ನಿಯಂತ್ರಣ :

ಮೆಂತ್ಯ (fenugreek) ನೀರು ಜೀರ್ಣಾಂಗಕ್ಕೆ ಒಳ್ಳೆಯದು. ಹೆಚ್ಚಿನ ಫೈಬರ್ ಹೊಟ್ಟೆ ಬೇಗನೆ ತುಂಬಿದ ಅನುಭವ ನೀಡುತ್ತದೆ, ಹಸಿವು ಕಡಿಮೆಯಾಗುತ್ತದೆ. ಇದರಿಂದ ತೂಕ ನಿಯಂತ್ರಣಕ್ಕೆ ಸಹಾಯವಾಗುತ್ತದೆ. ಜೊತೆಗೆ ಮಲಬದ್ಧತೆ, ಆಮ್ಲೀಯತೆ ಹಾಗೂ ಹೊಟ್ಟೆ ನೋವು ನಿವಾರಣೆಯಲ್ಲಿಯೂ ಸಹಕಾರಿ.

2. ಹೃದಯದ ಆರೋಗ್ಯ :

ಮೆಂತ್ಯ (fenugreek) ನೀರಿನ ನಿಯಮಿತ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ, ರಕ್ತ ಪರಿಚಲನೆ ಸುಧಾರಿಸುತ್ತದೆ ಹಾಗೂ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!
3. ಹೊಳೆಯುವ ಚರ್ಮ ಮತ್ತು ಕೂದಲು :

ಮೆಂತ್ಯ (fenugreek) ನೀರಿನಲ್ಲಿ ಇರುವ ಆಂಟಿ-ಆಕ್ಸಿಡೆಂಟ್ಸ್ ಚರ್ಮದ ಟೋನ್ ಸುಧಾರಿಸುತ್ತವೆ, ಮೊಡವೆ ಮತ್ತು ಕಲೆ ಕಡಿಮೆ ಮಾಡುತ್ತವೆ. ನೈಸರ್ಗಿಕ ಹೊಳಪನ್ನು ನೀಡುವ ಜೊತೆಗೆ ಕೂದಲಿನ ಆರೋಗ್ಯವನ್ನೂ ಉತ್ತಮಗೊಳಿಸುತ್ತದೆ, ತಲೆಹೊಟ್ಟು ನಿಯಂತ್ರಿಸುತ್ತದೆ.

4. ರೋಗನಿರೋಧಕ ಶಕ್ತಿ :

ಮೆಂತ್ಯ (fenugreek) ನೀರಿನಲ್ಲಿರುವ ಫೈಟೊಈಸ್ಟ್ರೊಜೆನ್‌ಗಳು ಹಾರ್ಮೋನ್‌ಗಳ ಸಮತೋಲನ ಕಾಯ್ದುಕೊಳ್ಳಲು ಸಹಕಾರಿ. ಫ್ಲೇವನಾಯ್ಡ್ ಹಾಗೂ ಪಾಲಿಫಿನಾಲ್‌ಗಳಂತಹ ಆಂಟಿ-ಆಕ್ಸಿಡೆಂಟ್ಸ್ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಸೋಂಕುಗಳಿಂದ ರಕ್ಷಣೆ ನೀಡುತ್ತವೆ.

Disclaimer : This article is based on reports and information available on the internet. Janaspandhan News is not affiliated with it and is not responsible for it.

——— ———- ———– ———– ————- ———-

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

KSCCF

ಜನಸ್ಪಂದನ ನ್ಯೂಸ್‌, ನೌಕರಿ : ಬೆಂಗಳೂರು ಮೂಲದ ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF) 2025ರ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ KSCCF ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ KSCCF ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
ನೇಮಕಾತಿ ವಿವರಗಳು :
  • ಇಲಾಖೆ ಹೆಸರು : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತ (KSCCF).
  • ಒಟ್ಟು ಹುದ್ದೆಗಳು : 34.
  • ಹುದ್ದೆಗಳ ಹೆಸರು : ಮಾರಾಟ ಸಹಾಯಕ ಮತ್ತು ಇತರೆ ಹುದ್ದೆಗಳು.
  • ಉದ್ಯೋಗ ಸ್ಥಳ : ಬೆಂಗಳೂರು, ಕರ್ನಾಟಕ.
  • ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್.
ವೇತನ ಶ್ರೇಣಿ :
  • ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.12,500 ರಿಂದ ರೂ.29,600/- ವರೆಗೆ ಪ್ರತಿ ತಿಂಗಳು ಸಂಬಳ ನೀಡಲಾಗುತ್ತದೆ.
ವಯೋಮಿತಿ :
  • ಕನಿಷ್ಠ ವಯಸ್ಸು : 18 ವರ್ಷ.
  • ಗರಿಷ್ಠ ವಯಸ್ಸು : 35 ವರ್ಷ.
KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
ಅರ್ಜಿ ಶುಲ್ಕ :
  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು : ರೂ.500/-
  • ಇತರೆ ಎಲ್ಲಾ ಅಭ್ಯರ್ಥಿಗಳು : ರೂ.1000/-
ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC / 10ನೇ ತರಗತಿ, ಫಾರ್ಮಸಿಯಲ್ಲಿ ಡಿಪ್ಲೊಮಾ ಅಥವಾ ಪದವಿ ಪೂರೈಸಿರಬೇಕು.
ಆಯ್ಕೆ ವಿಧಾನ :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ KSCCF ಅಧಿಕೃತ ಅಧಿಸೂಚನೆಯ ಪ್ರಕಾರ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ KSCCF ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಹಾಗೂ ಎಚ್ಚರಿಕೆಯಿಂದ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ.
  5. ಅರ್ಜಿ ಶುಲ್ಕವನ್ನು ಪಾವತಿಸಿ (ಅವಶ್ಯವಿದ್ದರೆ ಮಾತ್ರ).
  6. ಸಲ್ಲಿಸಿದ ಅರ್ಜಿಯ ಪ್ರಿಂಟ್‌ಔಟ್ (Printout) ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಪ್ರಾರಂಭ ದಿನಾಂಕ : 16 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : 14 ಸೆಪ್ಟೆಂಬರ್ 2025.
Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
ಪ್ರಮುಖ ಲಿಂಕ್‌ಗಳು :

👉 Disclaimer : The above given information is available On online, candidates should check it properly before applying. This is for information only.

Murder :ವಿವಾಹಿತೆ ಮತ್ತು ಆಕೆಯ ಪ್ರೇಮಿಯನ್ನು ಕೊಂದು ಬಾವಿಗೆ ಎಸೆದ ಕುಟುಂಬ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಕೊಲೆ (Murder) ಮಾಡಿ ಬಾವಿಗೆ ಎಸೆದಿರುವ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಕಾರ್ಕಲಾ ಗ್ರಾಮದಲ್ಲಿ ನಡೆದ ಕ್ರೂರ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರೇಮಿಯೊಂದಿಗೆ ಕಂಡುಬಂದ ಹಿನ್ನೆಲೆಯಲ್ಲಿ, ಆಕೆಯ ಕುಟುಂಬವೇ ಇಬ್ಬರನ್ನೂ ಕೊಂದು (Murder) ಬಾವಿಗೆ ಎಸೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ಕುಟುಂಬದ ಮೂವರು ಬಂಧನ :

ಈ ಘಟನೆಯಲ್ಲಿ ಮೃತಪಟ್ಟ ವಿವಾಹಿತ ಮಹಿಳೆಯ ತಂದೆ, ಅಜ್ಜ ಮತ್ತು ಮಾವ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶವಗಳನ್ನು ಹೊರತೆಗೆದಾಗ, ಇಬ್ಬರ ಕೈಕಾಲು ಕಟ್ಟಿ ಬಾವಿಯಲ್ಲಿ ಎಸೆದಿರುವುದು ಪತ್ತೆಯಾಗಿದೆ.

ಘಟನೆ ಹೇಗೆ ನಡೆದಿದೆ?

ಮೃತ ಮಹಿಳೆಯ ಮಾವ (ಗಂಡನ ತಂದೆ) ಮಹಿಳೆಯು ಪ್ರೇಮಿಯೊಂದಿಗೆ ಮನೆಯಲ್ಲೇ ಕಂಡು ಬಂದ ತಕ್ಷಣವೇ ಆಕೆಯ ತವರು ಮನೆಯವರಿಗೆ ಕರೆ ಮಾಡಿದರು. ಬಳಿಕ ಮಹಿಳೆಯ ತಂದೆ, ಅಜ್ಜ ಮತ್ತು ಮಾವ ಕಾರ್ಕಲಾ ಗ್ರಾಮಕ್ಕೆ ಬಂದು, ಇಬ್ಬರನ್ನೂ ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದಾರೆ.

ಹಾದಿಯಲ್ಲೇ, ಇಬ್ಬರನ್ನೂ ಬೊರ್ಜುನಿ ಹತ್ತಿರದ ಕಕ್ರಾಲಾ ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 2.30ರ ಹೊತ್ತಿಗೆ ಹತ್ಯೆ (Murder) ಗೈದು ಬಾವಿಗೆ ಎಸೆದಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.

RRB : ಭಾರತೀಯ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಮಾಸ್ಟರ್ ಸೇರಿ 30,307 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಪೊಲೀಸ್ ಮಾಹಿತಿ :

ಘಟನೆಯ ನಂತರ ಮಹಿಳೆಯ ತಂದೆ ನೇರವಾಗಿ ಉಮ್ರಿ ಪೊಲೀಸ್ ಠಾಣೆಗೆ ಬಂದು, ಇಬ್ಬರನ್ನೂ ತಾನೇ ಕೊಂದಿದ್ದೇನೆ (Murder) ಎಂದು ಒಪ್ಪಿಕೊಂಡಿದ್ದಾನೆ. ಆದರೆ ತನಿಖೆಯಲ್ಲಿ, ಈ ಹತ್ಯೆಯಲ್ಲಿ ಆಕೆಯ ಮಾವ ಮತ್ತು ಅಜ್ಜ ಸಹ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಿದೆ.

ಸದ್ಯ ಈ ಮೂವರನ್ನೂ ಬಂಧಿಸಲಾಗಿದ್ದು, ಪ್ರಕರಣದ ಕುರಿತಂತೆ ತನಿಖೆ ಮುಂದುವರೆದಿದೆ ಎಂದಿದ್ದಾರೆ.


Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!

Fire

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವರದಕ್ಷಿಣೆ ವಿಚಾರವಾಗಿ ಪತಿಯೋರ್ವ ಪತ್ನಿಗೆ ಬೆಂಕಿ (Fire) ಹಚ್ಚಿ ಕೊಲೆ (Murder) ಮಾಡಿರುವ ಘಟನೆಯೋದು ನಡೆದಿರುವ ಬಗ್ಗೆ ವರದಿಯಾಗಿದೆ.

ಗ್ರೇಟರ್ ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಸಿರ್ಸಾ ಗ್ರಾಮದಲ್ಲಿ ನಡೆದ ದಾರುಣ ಘಟನೆಯಲ್ಲಿ, ಬೆಂಕಿ (Fire) ಹಚ್ಚಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ 6 ವರ್ಷದ ಮಗ ನೀಡಿದ ಹೇಳಿಕೆ ಪೊಲೀಸರಿಗೆ ಪ್ರಮುಖ ಸುಳಿವು ಒದಗಿಸಿದೆ.

ಮಗನ ಹೇಳಿಕೆಯ ಪ್ರಕಾರ, ತನ್ನ ಅಪ್ಪನೇ ತಾಯಿಯನ್ನು ತನ್ನ ಮುಂದೆಯೇ ಹಲ್ಲೆ ಮಾಡಿ ಬೆಂಕಿ (Fire) ಹಚ್ಚಿದ್ದಾನೆ. ಆಕೆ ಹಲವು ದಿನಗಳಿಂದ ಹಿಂಸೆಗೆ ಒಳಗಾಗುತ್ತಿದ್ದಾಳೆ ಎಂಬುದನ್ನೂ ಬಾಲಕ ಬಿಚ್ಚಿಟ್ಟಿದ್ದಾನೆ.

Dharmasthala ಪ್ರಕರಣಕ್ಕೆ ಟ್ವಿಸ್ಟ್ : ಸುಜಾತಾ ಭಟ್ ಬಾಯ್ಬಿಟ್ಟ ಸತ್ಯ, ಮಾಸ್ಕ್ ಮ್ಯಾನ್ ಬಂಧನ.!

ಘಟನೆಯ ವಿಡಿಯೋಗಳು ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವುಗಳಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಹಾಗೂ ಬೆಂಕಿ (Fire) ಹೊತ್ತಿಕೊಂಡ ನಂತರ ಆಕೆ ಮೆಟ್ಟಿಲುಳಿದು ಬರುತ್ತಿರುವ ದೃಶ್ಯಗಳು ಕಾಣಿಸಿವೆ.

ಮೃತಳ ಅಕ್ಕ ಕಾಂಚನ್ ಮಾತನಾಡಿ, ತಮ್ಮ ತಂಗಿಯ ಪತಿ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ತಂಗಿ ನಿರಂತರ ಹಿಂಸೆಗೆ ಒಳಗಾಗುತ್ತಿದ್ದರು ಎಂದು ಅವರು ಹೇಳಿದ್ದಾರೆ.

KSCCF : ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕ ಒಕ್ಕೂಟ ನಿಯಮಿತದಲ್ಲಿ ಉದ್ಯೋಗವಕಾಶ.!

ಕಾಂಚನ್ ಅವರ ಪ್ರಕಾರ, ತಂಗಿಯನ್ನು ಹಲ್ಲೆ ಮಾಡಿದ ನಂತರ ಬೆಂಕಿ (Fire) ಹಚ್ಚಲಾಯಿತು. ತಂಗಿಯ ಮಕ್ಕಳೂ ಆ ಸಮಯದಲ್ಲಿ ಅಲ್ಲೇ ಇದ್ದರು. ತಮಗೂ ಹಲ್ಲೆ ನಡೆಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ.

ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೆಪ್ಟೆಂಬರ್ 1 ರಿಂದ ಈ ಆರೋಗ್ಯ ವಿಮಾ (Health Insurance) ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ ಎಂದು ಮುಖ ಆರೋಗ್ಯ ವಿಮಾ ಕಂಪನಿಗಳು ತಿಳಿಸಿವೆ. ಬನ್ನಿ. ಅದರ ಬಗ್ಗೆ ತಿಳಿಯೋಣ.!

ಹೌದು, ಪ್ರಮುಖ ಆರೋಗ್ಯ ವಿಮಾ ಕಂಪನಿಗಳಾದ ಬಜಾಜ್ ಅಲಯನ್ಸ್ ಜನರಲ್ ಇನ್ಶೂರೆನ್ಸ್ ಹಾಗೂ ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಸೇವೆಗಳನ್ನು ಬಳಸುತ್ತಿರುವ ಗ್ರಾಹಕರಿಗೆ ಹೊಸ ಸೂಚನೆ ಜಾರಿಯಾಗಲಿದೆ.

36 ಜನರಿದ್ದ ಇಲಕಲ್‌ ಮಂಗಳೂರ KSRTC ಬಸ್‌ ಅಪಘಾತ.!

ಆರೋಗ್ಯ ವಿಮಾ (Health Insurance) ಸೇವಾದಾರರ ಸಂಸ್ಥೆ (Association of Healthcare Providers of India – AHPI) ತನ್ನ ನೆಟ್‌ವರ್ಕ್‌ನಲ್ಲಿರುವ ದೇಶದ 20,000ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಸೆಪ್ಟೆಂಬರ್ 1ರಿಂದ ಕ್ಯಾಶ್‌ಲೆಸ್ ಸೌಲಭ್ಯ ನಿಲ್ಲಿಸಲು ನಿರ್ಧರಿಸಿದೆ.

ಸೆಪ್ಟೆಂಬರ್ 1 ರಿಂದ ಈ Health Insurance ಕಂಪನಿಗಳ ವಿಮೆ ಕೊಂಡವರಿಗೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್ ಇಲ್ಲ

ಇದರ ಪರಿಣಾಮ ಏನು?

➡️ ಈ ಬದಲಾವಣೆಯಿಂದ ಬಜಾಜ್ ಅಲಯನ್ಸ್ ಮತ್ತು ಕೇರ್ ಹೆಲ್ತ್ ಇನ್ಶೂರೆನ್ಸ್ (Health Insurance) ಪಾಲಿಸೀ ಹೊಂದಿರುವವರಿಗೆ ಕ್ಯಾಶ್‌ಲೆಸ್ ಚಿಕಿತ್ಸೆ ಸಿಗುವುದಿಲ್ಲ.

➡️ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾದಲ್ಲಿ ಮೊದಲು ಸ್ವಂತವಾಗಿ ಹಣ ಪಾವತಿಸಿ, ನಂತರ ವಿಮಾ ಕ್ಲೇಮ್ ಸಲ್ಲಿಸಬೇಕಾಗುತ್ತದೆ.

Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ಯಾವ ಆಸ್ಪತ್ರೆಗಳು ಒಳಗೊಂಡಿವೆ?

AHPI ನೆಟ್‌ವರ್ಕ್‌ನಡಿ ದೇಶದ ಅನೇಕ ಪ್ರಮುಖ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ.

  • ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
  • ಫೋರ್ಟಿಸ್ ಎಸ್ಕಾರ್ಟ್ಸ್ ಆಸ್ಪತ್ರೆ.
  • ಹಲವಾರು ಖಾಸಗಿ ಹಾಗೂ ಸ್ಥಳೀಯ ಆಸ್ಪತ್ರೆಗಳು.

ಇವೆಲ್ಲವೂ ಈ ಆದೇಶದ ವ್ಯಾಪ್ತಿಗೆ ಒಳಪಡುತ್ತವೆ.

Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!
ದಕ್ಷಿಣ ಭಾರತಕ್ಕೂ ಅನ್ವಯವಾಗುತ್ತದೆಯೇ?

ಪ್ರಸ್ತುತ ಮಾಹಿತಿ ಪ್ರಕಾರ, ಈ ನಿಯಮವು ಕೇವಲ ಉತ್ತರ ಭಾರತದಲ್ಲಿ ಮಾತ್ರ ಜಾರಿಯಾಗುತ್ತದೆ. ದಕ್ಷಿಣ ಭಾರತದ ಆಸ್ಪತ್ರೆಗಳ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ನೀಡಲಾಗಿಲ್ಲ.

ವಿದೇಶಗಳಲ್ಲಿ ಭಾರತೀಯರಿಗೆ ಆರೋಗ್ಯ ವಿಮೆ (Health Insurance) ಯ ಮಹತ್ವ :

ಯುಕೆ, ಅಮೆರಿಕಾ ಮತ್ತು ಗಲ್ಫ್ ರಾಷ್ಟ್ರಗಳಲ್ಲಿ ವಾಸಿಸುವ ಅನೇಕ ಭಾರತೀಯರು ಸ್ಥಳೀಯ ಆರೋಗ್ಯ ಸೇವೆಯಿಂದ ಅಸಮಾಧಾನಗೊಂಡಿದ್ದಾರೆ.

ಹೆಚ್ಚಿನ ವೆಚ್ಚ, ಚಿಕಿತ್ಸೆಗಾಗಿ ಉದ್ದವಾದ ನಿರೀಕ್ಷೆ ಹಾಗೂ ಅಪಾಯಿಂಟ್‌ಮೆಂಟ್ ಸಮಸ್ಯೆಯಿಂದ ಬಳಲುವ ಕಾರಣ, ಅನೇಕರು ಭಾರತದಲ್ಲಿ ಚಿಕಿತ್ಸೆ ಪಡೆಯುವುದನ್ನೇ ಆಯ್ಕೆಮಾಡುತ್ತಾರೆ. ಇದರ ಜೊತೆಗೆ, ಎನ್‌ಆರ್‌ಐ ಸಮುದಾಯದಲ್ಲಿ ಭಾರತದಲ್ಲೇ ಆರೋಗ್ಯ ವಿಮೆ ಖರೀದಿಸುವವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.


ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

Vitamin

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.


Udupi : ಲಾಡ್ಜ್ ಮೇಲೆ ಪೊಲೀಸರು ದಾಳಿ ; ಮಹಿಳೆ ರಕ್ಷಣೆ, ಓರ್ವ ವ್ಯಕ್ತಿ ಬಂಧನ.!

0

ಜನಸ್ಪಂದನ ನ್ಯೂಸ್ ಉಡುಪಿ : ಉಡುಪಿ (Udupi) ನಗರದಲ್ಲಿ ಲಾಡ್ಜ್ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸ್‌ ಇಲಾಖೆ ದಾಳಿ ನಡೆಸಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ. ಈ ಘಟನೆ ಭಾನುವಾರ (ಆಗಸ್ಟ್ 24) ನಡೆದಿದೆ.

ಮಾಹಿತಿಯ ಪ್ರಕಾರ, ಉಡುಪಿ (Udupi) ಯ ಮೂಡನಿಡಂಬೂರು ಗ್ರಾಮದಲ್ಲಿರುವ ಲಾಡ್ಜ್‌ನಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಪೊಲೀಸ್‌ ಇನ್ಸ್‌ಪೆಕ್ಟರ್ ಮಂಜುನಾಥ ಬಡಿಗೇರ್ ಅವರ ನೇತೃತ್ವದ ತಂಡ ದಾಳಿ ನಡೆಸಿತು.

LPG : ಹೋಮ್ ಡೆಲಿವರಿ ಮಾಡುವ ಸಿಲಿಂಡರ್‌ಗೆ ಹೆಚ್ಚುವರಿ ಹಣ ಕೊಡಬೇಡಿ ; ಕೇಳಿದರೆ ದೂರು ಕೊಡಿ.!

ಈ ವೇಳೆ ಲಾಡ್ಜ್‌ನ ಎರಡನೇ ಮಹಡಿಯಲ್ಲಿದ್ದ ಕೊಠಡಿಯಲ್ಲಿ ಮಹಿಳೆಯನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ, ಕೆಲಸ ಕೊಡಿಸುವ ನೆಪದಲ್ಲಿ ಶರತ್ ಅಲಿಯಾಸ್ ಮೊಹಮ್ಮದ್ ಫಯಾಜ್ ಎಂಬ ವ್ಯಕ್ತಿ ತಮಗೆ ಉಡುಪಿ (Udupi) ಗೆ ಕರೆದುಕೊಂಡು ಬಂದು, ಲಾಡ್ಜ್‌ನಲ್ಲಿ ಕೊಠಡಿ ಬುಕ್ ಮಾಡಿ ಅಕ್ರಮ ದಂಧೆ ನಡೆಸುತ್ತಿದ್ದರೆಂದು ಮಹಿಳೆ ಹೇಳಿಕೊಟ್ಟಿದ್ದಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಸದ್ಯ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಆರೋಪಿಯ ವಿರುದ್ಧ ಉಡುಪಿ (Udupi) ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣವನ್ನು ಕ್ರಮಾಂಕ 37/2025ರಲ್ಲಿ BNS ಕಲಂ 143, 3(5), ಕಲಂ 3, 4, 5, 6 ಅಡಿ ದಾಖಲಿಸಲಾಗಿದೆ.


ಹೃದಯಾಘಾತದಿಂದ ದೂರ ಇರಲು ತಪ್ಪದೇ ಸೇವಿಸಲೇಬೇಕಾದ Vitamin ಇದು.!

Vitamin

ಜನಸ್ಪಂದನ ನ್ಯೂಸ್‌, ಆರೋಗ್ಯ : ಹೃದ್ರೋಗ ತಡೆಯಲು ಸಹಾಯಕವಾಗುವ ವಿಟಮಿನ್ (Vitamin) ಬಗ್ಗೆ ನಿಮಗೆ ಗೊತ್ತೇ.? ಬನ್ನಿ ಇಂದು ನಾವೂ ಹೃದಯಕ್ಕೆ ರಕ್ಷಕವಾಗಿರುವ ಆ ವಿಟಮಿನ್ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಕಿರಿಯ ವಯಸ್ಸಿನವರಿಗೂ ತೀವ್ರವಾಗಿ ಕಾಣಿಸಿಕೊಳ್ಳುತ್ತಿದೆ. ತಜ್ಞರ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಅನಾರೋಗ್ಯಕರ ಆಹಾರ ಪದ್ಧತಿ, ಜೀವನಶೈಲಿ ಹಾಗೂ ಪರಿಸರದ ಪರಿಣಾಮ. ಇತ್ತೀಚಿನ ಜರ್ನಲ್ ಆಫ್ ಸರ್ಕ್ಯುಲೇಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ವಿಟಮಿನ್ ಕೆ (Vitamin – K) ಹೆಚ್ಚಾಗಿ ಸೇವಿಸುವವರು ಹೃದ್ರೋಗದ ಅಪಾಯದಿಂದ ದೂರ ಇರುತ್ತಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?
ಹೃದಯಕ್ಕೆ ವಿಟಮಿನ್ ಕೆ (Vitamin – K) ನೀಡುವ ಲಾಭಗಳು :
  • ರಕ್ತನಾಳಗಳ ಆರೋಗ್ಯ : ರಕ್ತನಾಳಗಳನ್ನು ಆರೋಗ್ಯಕರವಾಗಿಡುತ್ತದೆ ಮತ್ತು ಅಪಧಮನಿಗಳ ಗಟ್ಟಿಯಾಗುವುದನ್ನು ತಡೆಯುತ್ತದೆ.
  • ರಕ್ತದೊತ್ತಡ ನಿಯಂತ್ರಣ : ರಕ್ತನಾಳಗಳಲ್ಲಿ ಖನಿಜ ಸಂಗ್ರಹ ತಡೆಯುವ ಮೂಲಕ ಹೈ ಬ್ಲಡ್ ಪ್ರೆಷರ್ ಅಪಾಯ ಕಡಿಮೆ ಮಾಡುತ್ತದೆ.
  • ರಕ್ತ ಪರಿಚಲನೆ ಸುಧಾರಣೆ : ರಕ್ತ ಪ್ರವಾಹವನ್ನು ಸುಗಮಗೊಳಿಸಿ ಹೃದಯದ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.
  • ಹೃದಯಾಘಾತದ ಅಪಾಯ ತಗ್ಗು : ವಯಸ್ಸಾದಂತೆ ಹೆಚ್ಚಾಗುವ ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.
ವಿಟಮಿನ್ ಕೆ (Vitamin – K) ದೊರೆಯುವ ಪ್ರಮುಖ ಆಹಾರಗಳು:
  • ಹಸಿರು ತರಕಾರಿಗಳು : ಪಾಲಕ್, ಗೊಂಗುರ, ಮೆಂತ್ಯ.
  • ಹುದುಗಿಸಿದ ಆಹಾರಗಳು : ಮೊಸರು, ಉಪ್ಪಿನಕಾಯಿ.
  • ಮಾಂಸ : ಮೀನು, ಮಾಂಸ, ಮೊಟ್ಟೆಗಳು.
  • ಡೈರಿ ಉತ್ಪನ್ನಗಳು : ಹಾಲು, ಚೀಸ್.
Vicky ತಂಡದಿಂದ ಹೊಸ ಗಾರೆ ಕೆಲ್ಸದ ನಿಂಗಿ ಹಾಡು ಬಿಡುಗಡೆ – ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಶನ್.!
ದಿನನಿತ್ಯದ ಅವಶ್ಯಕತೆ :

ರಾಷ್ಟ್ರೀಯ ಆರೋಗ್ಯ ಸಂಸ್ಥೆಯ ಪ್ರಕಾರ, ವಯಸ್ಕರಿಗೆ ದಿನಕ್ಕೆ 70 ರಿಂದ 90 ಮೈಕ್ರೋಗ್ರಾಂ ವಿಟಮಿನ್ ಕೆ ಅಗತ್ಯವಿದೆ. ಇದು ಹೃದಯದ ಆರೋಗ್ಯಕ್ಕೆ ಮಾತ್ರವಲ್ಲದೆ ಮೂಳೆಗಳನ್ನು ಬಲಪಡಿಸಲು ಸಹ ಸಹಾಯಕ.

ಆದ್ದರಿಂದ, ನಿಮ್ಮ ದೈನಂದಿನ ಆಹಾರದಲ್ಲಿ ವಿಟಮಿನ್ ಕೆ ಇರುವ ಪದಾರ್ಥಗಳನ್ನು ಸೇರಿಸುವುದು ಆರೋಗ್ಯಕ್ಕೆ ಲಾಭಕಾರಿ.

👉 ಈ ಲೇಖನ ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಯಾವುದೇ ರೀತಿಯ ಆಹಾರ ಅಥವಾ ಮನೆಮದ್ದುಗಳನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯರ ಸಲಹೆ ಪಡೆಯುವುದು ಅಗತ್ಯ.

Car ಚಾಲಕನ ಎಡವಟ್ಟಿಗೆ ಯುವ ಕ್ರಿಕೆಟಿಗನ ದುರ್ಮರಣ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕಾರಿ (Car) ನ ಡೋರ್‌ಗೆ ಡಿಕ್ಕಿ ಹೊಡೆದು ಕ್ರಿಕೆಟಿಗ ಸಾವನ್ನಪ್ಪಿರುವ ದಾರುಣ ಘಟನೆಯೊಂದು ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದೆ.

ರಸ್ತೆ ಅಪಘಾತ ಪ್ರಕರಣಗಳಲ್ಲಿ ನಿರಪರಾಧಿಗಳು ಬಲಿಯಾಗುವುದು ಈಗ ಸರ್ವೇ ಸಾಮಾನ್ಯವಾಗಿದೆ. ಇಂತಹದ್ದೇ ಘಟನೆ ಜಮ್ಮು- ಕಾಶ್ಮೀರದ ಪೂಂಛ್‌ನಲ್ಲಿ ಸಂಭವಿಸಿದ್ದು, ಸ್ಥಳೀಯ ಕ್ರಿಕೆಟಿಗ ಫರೀದ್ ಖಾನ್ ಕಾರು (Car) ಚಾಲಕನ ನಿರ್ಲಕ್ಷಕ್ಕೆ ದುರ್ಮರಣ ಹೊಂದಿದ್ದಾರೆ.

Lemon ಫ್ರಿಡ್ಜ್‌ನಲ್ಲಿಡುವುದರಿಂದ ಎಷ್ಟೊಂದು ಅದ್ಭುತ ಪ್ರಯೋಜನಗಳಿವೇ ಗೊತ್ತಾ.?

ಮಾಹಿತಿ ಪ್ರಕಾರ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿ (Car) ನ ಚಾಲಕ ಯಾವುದೇ ಸೂಚನೆ ನೀಡದೇ ಹಠಾತ್ ಆಗಿ ಡೋರ್ ತೆರೆಯುತ್ತಿದ್ದಂತೆಯೇ, ಸ್ಕೂಟರ್‌ನಲ್ಲಿ ಬರುತ್ತಿದ್ದ ಫರೀದ್ ಖಾನ್ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರು ಚಾಲಕನ ನಿರ್ಲಕ್ಷ್ಯವೇ ಕಾರಣ :

ಕಾರಿ (Car) ನ ಬಾಗಿಲು ತೆರೆಯುವ ಮುನ್ನ ಹಿಂದಿನಿಂದ ವಾಹನ ಬರುತ್ತಿದೆಯೇ ಎಂಬುದನ್ನು ಗಮನಿಸ ಬೇಕಾಗಿರುವುದು ಪ್ರತಿಯೊಬ್ಬ ಚಾಲಕನ ಕರ್ತವ್ಯ. ಆದರೆ ಈ ಘಟನೆದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಕ್ರಿಕೆಟಿಗನ ಜೀವ ಹೋದಂತಾಗಿದೆ.

Fire : 36 ಲಕ್ಷ ವರದಕ್ಷಿಣೆ ಬೇಡಿಕೆ : ಪತ್ನಿ ಸುಟ್ಟು ಹಾಕಿದ ಪತಿ ; ಸತ್ಯ ಬಿಚ್ಚಿಟ್ಟ ಮಗ.!
ಸಿಸಿಟಿವಿಯಲ್ಲಿ ದಾಖಲೆ :

ಕಾರಿ (Car) ನ ಬಾಗಿಲಿಗೆ ಸ್ಕೂಟರ್‌ ಡಿಕ್ಕಿಯ ಅಪಘಾತದ ಭಯಾನಕ ದೃಶ್ಯಾವಳಿ ಸಮೀಪದ ಸಿಸಿಟಿವಿಯಲ್ಲಿ ಸೆರೆ ಹಿಡಿಯಲ್ಪಟ್ಟಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸ್ಥಳೀಯ ಸಮುದಾಯದಲ್ಲಿ ಆಕ್ರೋಶ ಹಾಗೂ ದುಃಖವನ್ನು ಉಂಟುಮಾಡಿದೆ.

 ಕಾರು (Car) ಚಾಲಕನ ನಿರ್ಲಕ್ಷ್ಯದ ವಿಡಿಯೋ :

https://twitter.com/i/status/1959277903029715206

ಸಂಪಾದಕೀಯ : ತಜ್ಞರ ಪ್ರಕಾರ, ರಸ್ತೆ ಬದಿ ಕಾರು (Car) ನಿಲ್ಲಿಸಿದಾಗ ಡೋರ್ ತೆರೆಯುವ ಮೊದಲು ಹಿಂದೆ ಮುಂದೆ ವಾಹನಗಳ ಚಲನೆ ಪರಿಶೀಲಿಸುವುದು ಅಗತ್ಯ. ಇಲ್ಲವಾದರೆ ನಿರಪರಾಧ ಜೀವಗಳು ಹೀಗೆಯೇ ಬಲಿಯಾಗುವ ಸಂಭವ ಹೆಚ್ಚಿರುತ್ತದೆ.

Courtesy : Suvarna News


Astrology : ಹೇಗಿದೆ ಗೊತ್ತಾ.? ಅಗಷ್ಟ 24 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 24, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

Astrology : ಹೇಗಿದೆ ಗೊತ್ತಾ.? ಅಗಷ್ಟ 22 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಇಂದು ನೀವು ವೈಯಕ್ತಿಕ ಚಟುವಟಿಕೆಗಳಲ್ಲಿ ಹೆಚ್ಚು ನಿರತರಾಗಿರುವುದರಿಂದ ಕುಟುಂಬದತ್ತ ಗಮನ ಹರಿಸಲು ಸಮಯ ಸಿಗದಿರಬಹುದು. ಇದರಿಂದ ಸ್ವಲ್ಪ ನಿರಾಶೆ ಉಂಟಾಗಬಹುದು. ಹಣಕಾಸಿನ ವಿಷಯಗಳಲ್ಲಿ ಕೆಲವು ಸಣ್ಣ ಸಮಸ್ಯೆಗಳು ಎದುರಾಗಬಹುದು. ಆದರೆ ಒತ್ತಡಕ್ಕೆ ಒಳಗಾಗದೆ ತಾಳ್ಮೆಯಿಂದ ಯೋಚಿಸಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಂಡು ದಿನವನ್ನು ಆರಂಭಿಸಿ, ಏಕೆಂದರೆ ಸಂಜೆಯ ಹೊತ್ತಿಗೆ ಪರಿಸ್ಥಿತಿಗಳು ಸುಧಾರಣೆ ಕಾಣಬಹುದು. ಆರೋಗ್ಯದ ಕಡೆಗೆ ಗಮನ ನೀಡಿ, ವಿಶ್ರಾಂತಿ ಪಡೆಯಿರಿ.

*ವೃಷಭ ರಾಶಿ*

ಯುವಕರು ವೃತ್ತಿ ಸಂಬಂಧಿತ ಯೋಜನೆಗಳನ್ನು ಸ್ವಲ್ಪ ತಪ್ಪಿಸಬೇಕಾಗಬಹುದು. ಏಕೆಂದರೆ ಕೆಲವು ಅನಿರೀಕ್ಷಿತ ಕಾರಣಗಳು ಉಂಟಾಗಬಹುದು. ಇಂದು ಹೆಚ್ಚಿನ ಸಮಯವನ್ನು ಮಾರ್ಕೆಟಿಂಗ್ ಮತ್ತು ಹೊರಗಿನ ಚಟುವಟಿಕೆಗಳಲ್ಲಿ ಕಳೆಯಬಹುದು. ನಿಮ್ಮ ಸಂಗಾತಿಯೊಂದಿಗೆ ಮುಕ್ತ ಸಂಭಾಷಣೆಯ ಮೂಲಕ ಸಮಸ್ಯೆ ಪರಿಹರಿಸಿ. ವ್ಯಾಪಾರದಲ್ಲಿ ಹೊಸ ಅವಕಾಶಗಳು ಬರಬಹುದು. ಆರೋಗ್ಯದಲ್ಲಿ ಸಣ್ಣ ತೊಂದರೆಗಳು ಕಾಣಿಸಬಹುದು, ಆದರೆ ನಿಯಮಿತ ವ್ಯಾಯಾಮದಿಂದ ನಿಯಂತ್ರಣದಲ್ಲಿಡಿ.

*ಮಿಥುನ ರಾಶಿ*

ನಿಮ್ಮ ಕೋಪವು ಕೆಲವೊಮ್ಮೆ ಅನಗತ್ಯ ಹಾನಿಯನ್ನುಂಟುಮಾಡಬಹುದು. ಹಳೆಯ ಆಸ್ತಿಯ ಖರೀದಿ ಅಥವಾ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಗಳು ಸಾಧ್ಯವಾಗಬಹುದು. ಪತಿ-ಪತ್ನಿಯರ ನಡುವಿನ ಬಾಂಧವ್ಯ ನಿಕಟವಾಗಿರುತ್ತದೆ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಮನಸ್ಸಿಗೆ ಆನಂದ ನೀಡುತ್ತದೆ. ವೃತ್ತಿಯಲ್ಲಿ ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ ಸಮಯ.

KSP : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 15000+ ಹುದ್ದೆಗಳ ನೇಮಕಾತಿ.!
*ಕಟಕ ರಾಶಿ*

ವ್ಯಾಪಾರ ವ್ಯವಸ್ಥೆಯಲ್ಲಿ ಸುಧಾರಣೆಗಳು ಕಂಡುಬರಲಿವೆ. ಗೊಂದಲಗಳಿದ್ದರೆ, ಮನೆಯ ಹಿರಿಯರನ್ನು ಸಂಪರ್ಕಿಸಿ. ಸಣ್ಣ ವಿಷಯಗಳಿಗೆ ಒತ್ತಡಕ್ಕೆ ಒಳಗಾಗಬೇಡಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ರಾಜಕೀಯವನ್ನು ಎದುರಿಸಬಹುದು, ಆದರೆ ನಿಮ್ಮ ಕೌಶಲ್ಯದಿಂದ ಅದನ್ನು ನಿಭಾಯಿಸಿ. ಪತಿ-ಪತ್ನಿಯರ ನಡುವೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಉಂಟಾಗಬಹುದು, ಮಾತುಕತೆಯ ಮೂಲಕ ಪರಿಹರಿಸಿ. ಕುಟುಂಬದ ಸಂತೋಷಕ್ಕೆ ಪ್ರಾಧಾನ್ಯ ನೀಡಿ. ಆರೋಗ್ಯದಲ್ಲಿ ಸ್ಥಿರತೆ ಇರುತ್ತದೆ, ಆದರೆ ಆಹಾರದ ಕಡೆಗೆ ಗಮನ ಹರಿಸಿ.

*ಸಿಂಹ ರಾಶಿ*

ಇತರರ ವ್ಯವಹಾರಗಳನ್ನು ಪರಿಹರಿಸುವ ಆತುರದಲ್ಲಿ ನಿಮ್ಮ ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಪ್ರಸ್ತುತ ಸಮಯ ಯಶಸ್ಸಿನದ್ದು. ಸಂಗಾತಿ ಮತ್ತು ಕುಟುಂಬದ ಬೆಂಬಲ ಪೂರ್ಣವಾಗಿರುತ್ತದೆ. ಬದಲಾಗುತ್ತಿರುವ ಪರಿಸರದಿಂದ ರಕ್ಷಣೆ ಪಡೆಯಿರಿ. ಇಂದು ಹೊಸ ಸ್ನೇಹಿತರನ್ನು ಭೇಟಿಯಾಗಬಹುದು, ಅದು ಭವಿಷ್ಯದಲ್ಲಿ ಉಪಯೋಗಕ್ಕೆ ಬರಬಹುದು. ವೃತ್ತಿಯಲ್ಲಿ ಪ್ರಗತಿ ಕಾಣಬಹುದು, ಆದರೆ ಅತಿಯಾದ ಕೆಲಸದಿಂದ ಆಯಾಸವಾಗಬಹುದು. ಧ್ಯಾನ ಅಥವಾ ಯೋಗವನ್ನು ಅಭ್ಯಾಸ ಮಾಡಿ.

*ಕನ್ಯಾ ರಾಶಿ*

ಕೆಲಸದಲ್ಲಿ ಅಡಚಣೆಗಳಿಂದ ಸೋಮಾರಿತನ ಉಂಟಾಗಬಹುದು. ಉಪಸ್ಥಿತಿ ಮತ್ತು ಏಕಾಗ್ರತೆಯನ್ನು ಕಾಪಾಡಿಕೊಳ್ಳಿ. ಹಳೆಯ ಸ್ನೇಹಿತರ ಭೇಟಿ ಸಂತೋಷ ನೀಡುತ್ತದೆ. ಆರೋಗ್ಯ ಅತ್ಯುತ್ತಮವಾಗಿರುತ್ತದೆ. ಇಂದು ಕುಟುಂಬದೊಂದಿಗೆ ಪ್ರಯಾಣ ಅಥವಾ ಮನರಂಜನೆಯನ್ನು ಯೋಜಿಸಿ. ವ್ಯಾಪಾರದಲ್ಲಿ ಹೊಸ ಆದಾಯದ ಮೂಲಗಳು ಕಂಡುಬರಬಹುದು. ಸಂಬಂಧಗಳನ್ನು ಬಲಪಡಿಸಲು ಸಮಯವನ್ನು ಬಳಸಿ.

Tests : 40 ವರ್ಷದ ನಂತರ ಪುರುಷರು ಮಾಡಿಸಿಕೊಳ್ಳಲೇ ಬೇಕಾದ ಪ್ರಮುಖ ಆರೋಗ್ಯ ತಪಾಸಣೆಗಳಿವು.!
*ತುಲಾ ರಾಶಿ*

ಮಕ್ಕಳ ಮೊಂಡುತನ ನಿಮ್ಮನ್ನು ಕಾಡಬಹುದು. ದಿನದ ಆರಂಭದಲ್ಲಿ ವ್ಯಾಪಾರ ಸಮಸ್ಯೆಗಳು ಉಂಟಾಗಬಹುದು. ಗೌಪ್ಯತೆಯನ್ನು ಕಾಪಾಡಿಕೊಳ್ಳಿ. ವಿದೇಶಿ ವ್ಯವಹಾರಗಳು ವೇಗ ಪಡೆಯುತ್ತವೆ. ಇಂದು ಧನಾತ್ಮಕ ಚಿಂತನೆಯೊಂದಿಗೆ ಮುಂದುವರಿಯಿರಿ, ಸಂಜೆಯ ಹೊತ್ತಿಗೆ ಸುಧಾರಣೆ ಕಾಣಬಹುದು. ಕುಟುಂಬದಲ್ಲಿ ಸಂತೋಷದ ವಾತಾವರಣ ಇರುತ್ತದೆ. ಆರೋಗ್ಯದಲ್ಲಿ ಸಣ್ಣ ಏರುಪೇರುಗಳು, ಆದರೆ ನಿಯಂತ್ರಣದಲ್ಲಿಡಿ.

*ವೃಶ್ಚಿಕ ರಾಶಿ*

ವ್ಯವಹಾರದಲ್ಲಿ ಲಾಭದಾಯಕ ಸಮಯ. ಕೌಟುಂಬಿಕ ಜೀವನ ಸುಖಕರ. ಮಾನಸಿಕ ಒತ್ತಡ ಮತ್ತು ರಕ್ತದೊತ್ತಡದ ಸಮಸ್ಯೆಗಳು ಹೆಚ್ಚಾಗಬಹುದು. ಇದನ್ನು ಧ್ಯಾನದ ಮೂಲಕ ನಿಯಂತ್ರಿಸಿ. ಇಂದು ಹೊಸ ಯೋಜನೆಗಳನ್ನು ಆರಂಭಿಸಲು ಉತ್ತಮ. ಸ್ನೇಹಿತರ ಬೆಂಬಲ ಪಡೆಯಿರಿ. ವೃತ್ತಿಯಲ್ಲಿ ಪ್ರಗತಿ ಕಾಣಬಹುದು.

*ಧನುಸ್ಸು ರಾಶಿ*

ಕನಸುಗಳು ನನಸಾಗದಿರುವುದರಿಂದ ನಿರಾಶೆ. ವ್ಯಾಪಾರ ಚಟುವಟಿಕೆಗಳು ಮಂದಗತಿ. ಕುಟುಂಬದೊಂದಿಗೆ ಸಮಯ ಕಳೆಯಿರಿ. ಮಹಿಳೆಯರಿಗೆ ಕೀಲು ನೋವು ಅಥವಾ ಸ್ತ್ರೀ ಸಂಬಂಧಿ ಕಾಯಿಲೆಗಳು. ಆರೋಗ್ಯದ ಕಡೆಗೆ ಗಮನ ನೀಡಿ. ಇಂದು ಧನಾತ್ಮಕ ಚಿಂತನೆಯನ್ನು ಅಳವಡಿಸಿಕೊಳ್ಳಿ.

Women : 25 ವರ್ಷದ ಯುವತಿ ಜೊತೆ ಓಡಿ ಹೋದ 16 ರ ಅಪ್ರಾಪ್ತ ; ಮುಂದೆನಾಯ್ತು.?
*ಮಕರ ರಾಶಿ*

ಮಕ್ಕಳ ಚಟುವಟಿಕೆಗಳ ಬಗ್ಗೆ ಕಾಳಜಿ ವಹಿಸಿ. ಪ್ರಯಾಣವನ್ನು ತಪ್ಪಿಸಿ. ವ್ಯಾಪಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರುತ್ತದೆ. ಕುಟುಂಬದಲ್ಲಿ ಸಾಮರಸ್ಯ. ಇಂದು ಹೊಸ ಅವಕಾಶಗಳನ್ನು ಬಳಸಿಕೊಳ್ಳಿ. ಆರೋಗ್ಯ ಸ್ಥಿರ.

*ಕುಂಭ ರಾಶಿ*

ಮನೆಯ ವ್ಯವಸ್ಥೆಗಳಲ್ಲಿ ಹೆಚ್ಚು ಮಾತನಾಡಬೇಡಿ. ಉದ್ವೇಗವನ್ನು ಕಾಪಾಡಿಕೊಳ್ಳಿ. ಅಡಚಣೆಗಳು ಉಂಟಾಗಬಹುದು. ಪತಿ-ಪತ್ನಿಯರ ನಡುವೆ ಪ್ರಣಯ. ದೈಹಿಕ ಸಮಸ್ಯೆಯಿಂದ ಪರಿಹಾರ. ಇಂದು ಸ್ನೇಹಿತರೊಂದಿಗೆ ಸಮಯ ಕಳೆಯಿರಿ.

*ಮೀನ ರಾಶಿ*

ಸಕಾರಾತ್ಮಕ ಚಿಂತನೆ ಮತ್ತು ನಿಯಮಿತ ದಿನಚರಿಯು ಆರೋಗ್ಯವನ್ನು ಕಾಪಾಡುತ್ತದೆ. ಯೋಜನೆಗಳನ್ನು ಪೂರ್ಣಗೊಳಿಸಿ. ಇಂದು ಕುಟುಂಬದೊಂದಿಗೆ ಸಂತೋಷದ ಕ್ಷಣಗಳು. ವೃತ್ತಿಯಲ್ಲಿ ಯಶಸ್ಸು.

Astrology