ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 49

ಪತ್ನಿ ಕೊಲೆ ಪ್ರಕರಣ : BJP ನಾಯಕ ಹಾಗೂ ಪ್ರೇಯಸಿ ಬಂಧನ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಪತ್ನಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಬಿಜೆಪಿ (BJP) ನಾಯಕ ರೋಹಿತ್ ಸೈನಿ ಮತ್ತು ಅವರ ಪ್ರೇಯಸಿ ರಿತು ಸೈನಿ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಘಟನೆ ಆಗಸ್ಟ್ 10ರಂದು ನಡೆದಿದ್ದು, ಆರಂಭದಲ್ಲಿ ಕೆಲವು ಕಳ್ಳರು ಮನೆಗೆ ನುಗ್ಗಿ ಆಭರಣಗಳನ್ನು ದೋಚಿ, ಪತ್ನಿ ಸಂಜುವನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿತ BJP ನಾಯಕ ಹೇಳಿಕೆ ನೀಡಿದ್ದ.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

ಆದರೆ ವಿಚಾರಣೆ ವೇಳೆ BJP ನಾಯಕ ರೋಹಿತ್ ಸೈನಿ ಪದೇಪದೇ ಹೇಳಿಕೆ ಬದಲಾಯಿಸಿದ್ದರಿಂದ ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ನಡೆಸಿದರು. ಕೊನೆಗೆ, ಪತ್ನಿಯನ್ನು ಕೊಲೆ ಮಾಡಿರುವುದನ್ನು ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಯಸಿಯ ಒತ್ತಾಯಕ್ಕೆ ತುತ್ತಾದ BJP ನಾಯಕ :

ತನಿಖೆಯಿಂದ ಬಹಿರಂಗವಾದ ಮಾಹಿತಿ ಪ್ರಕಾರ, BJP ನಾಯಕ ರೋಹಿತ್ ಸೈನಿ ದೀರ್ಘಕಾಲದಿಂದ ರಿತು ಸೈನಿಯೊಂದಿಗೆ ಸಂಬಂಧ ಹೊಂದಿದ್ದ. ಒಟ್ಟಿಗೆ ಬಾಳಲು ಪತ್ನಿ ಅಡ್ಡಿಯಾಗುತ್ತಿದ್ದ ಕಾರಣ, ಪ್ರೇಯಸಿಯ ಒತ್ತಡದಲ್ಲಿ BJP ನಾಯಕ ರೋಹಿತ್ ತನ್ನ ಪತ್ನಿ ಸಂಜುವನ್ನು ಕೊಲೆಗೈದಿದ್ದಾನೆ. ಬಳಿಕ ಕಳ್ಳತನವೆಂದು ತೋರಿಸಲು ಸುಳ್ಳು ಕಥೆ ಹೆಣೆದಿದ್ದಾನೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಪ್ರಸ್ತುತ BJP ನಾಯಕ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.


Astrology : ಹೇಗಿದೆ ಗೊತ್ತಾ.? ಅಗಷ್ಟ 17 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 17, ರವಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬ ಸದಸ್ಯರ ಆರೋಗ್ಯದ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಇರುತ್ತವೆ. ಹೊಸ ಸಾಲದ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ದೂರ ಪ್ರಯಾಣ ಸೂಚನೆಗಳಿವೆ. ಮನೆ ವಾತಾವರಣ ಗೊಂದಲಮಯವಾಗಿರುತ್ತದೆ. ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ವೃತ್ತಿ ವ್ಯಾಪಾರಗಳು ಸಾಮಾನ್ಯವಾಗಿ ಸಾಗುತ್ತವೆ.

*ವೃಷಭ ರಾಶಿ*

ಆರ್ಥಿಕ ವ್ಯವಹಾರಗಳು ನಿರುತ್ಸಾಹಗೊಳ್ಳುತ್ತವೆ. ಗೆಳೆಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪ್ರಯಾಣಗಳಲ್ಲಿ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಪ್ರಮುಖ ಕೆಲಸಗಳಲ್ಲಿ ಶ್ರಮ ವಹಿಸಿದರೂ ಕೆಲಸಗಳು ಮುಂದೆ ಸಾಗುವುದಿಲ್ಲ. ದೈವ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ . ವ್ಯಾಪಾರಗಳಲ್ಲಿ ಅಲ್ಪ ಲಾಭ ದೊರೆಯುತ್ತದೆ, ಉದ್ಯೋಗಗಳಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ.

*ಮಿಥುನ ರಾಶಿ*

ಆತ್ಮೀಯರಿಂದ ಶುಭಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ಹಠಾತ್ ಧನಪ್ರಾಪ್ತಿ ಉಂಟಾಗುತ್ತದೆ. ಮನೆಯ ಹೊರಗೆ ಒಳ್ಳೆಯ ಮಾತಿನ ನಡತೆಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಹೊಸ ಉತ್ಸಾಹದಿಂದ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ವ್ಯಾಪಾರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮಾನ್ಯತೆ ದೊರೆಯುತ್ತದೆ.

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
*ಕಟಕ ರಾಶಿ*

ಪ್ರಮುಖ ಪರಿಚಯಗಳು ವಿಸ್ತಾರಗೊಳ್ಳುತ್ತವೆ. ನೂತನ ವಾಹನ ಖರೀದಿಸುತ್ತೀರಿ. ಕೆಲವು ವ್ಯವಹಾರಗಳಲ್ಲಿ ಅಕಸ್ಮಿಕವಾಗಿ ನಿರ್ಧಾರಗಳು ಬದಲಾಗುತ್ತವೆ. ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ನೂತನ ಕಾರ್ಯಕ್ರಮಗಳಿಗೆ ಚಾಲನೆ ದೊರೆಯುತ್ತದೆ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ. ವ್ಯಾಪಾರಗಳು, ಉದ್ಯೋಗಗಳಲ್ಲಿ ನಿಮ್ಮ ನಿರೀಕ್ಷೆಗಳು ನಿಜವಾಗುತ್ತವೆ.

*ಸಿಂಹ ರಾಶಿ*

ಖರ್ಚುಗಳ ವಿಷಯದಲ್ಲಿ ಮರು ಚಿಂತನೆ ಮಾಡುವುದು ಒಳ್ಳೆಯದು. ಅಲ್ಪ ಅನಾರೋಗ್ಯ ಸಮಸ್ಯೆಗಳಿವೆ. ಮನೆ ವಾತಾವರಣ ಕಿರಿ ಕಿರಿ ಉಂಟುಮಾಡುತ್ತದೆ. ಆಧ್ಯಾತ್ಮಿಕ ಚಿಂತನ ಹೆಚ್ಚಾಗುತ್ತದೆ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಸಮಸ್ಯೆಗಳು ಇರುತ್ತವೆ. ವೃತ್ತಿ ಉದ್ಯೋಗಗಳಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ.

*ಕನ್ಯಾ ರಾಶಿ*

ಆರ್ಥಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಕಠಿಣ ಪರಿಶ್ರಮವು ಫಲ ನೀಡುವುದಿಲ್ಲ. ಮನೆಯಲ್ಲಿ ಸದಸ್ಯರ ವರ್ತನೆಯು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಬಂಧುಮಿತ್ರರೊಡನೆ ವಿವಾದ ಉಂಟಾಗುತ್ತದೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
*ತುಲಾ ರಾಶಿ*

ಹಣಕಾಸಿನ ತೊಂದರೆಗಳು ನಿವಾರಣೆಯಾಗುತ್ತವೆ. ಒಂದು ವ್ಯವಹಾರದಲ್ಲಿ ಎಲ್ಲರನ್ನೂ ಮೆಚ್ಚಿಸುತ್ತೀರಿ. ಹೊಸ ವಾಹನ ಯೋಗವಿದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳು ಸ್ವಲ್ಪಮಟ್ಟಿಗೆ ಸಾಮಾನ್ಯವಾಗಿ ಸಾಗುತ್ತವೆ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ ಇರುತ್ತದೆ.

*ವೃಶ್ಚಿಕ ರಾಶಿ*

ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಗೊಂದಲ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಧನದ ವಿಷಯದಲ್ಲಿ ಸಮಸ್ಯೆ ಉಂಟಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುವುದು ಉತ್ತಮ. ವ್ಯಾಪಾರದಲ್ಲಿ ಅಲ್ಪ ಲಾಭ ದೊರೆಯುತ್ತದೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ*

ನಿರುದ್ಯೋಗಿಗಳ ಶ್ರಮದಿಂದ ಹೊಸ ಅವಕಾಶಗಳು ದೊರೆಯುತ್ತವೆ. ಸ್ಥಿರಾಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ. ಹೊಸ ಸ್ನೇಹಿತರ ಪರಿಚಯಗಳು ಹೆಚ್ಚಾಗುತ್ತವೆ. ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
*ಮಕರ ರಾಶಿ*

ಹಣದ ವಿಚಾರದಲ್ಲಿ ಏರುಪೇರು ಹೆಚ್ಚಾಗುತ್ತದೆ. ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

*ಕುಂಭ ರಾಶಿ*

ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಉದ್ಯಮಿಗಳು ಹೊಸ ಹೂಡಿಕೆಗಳನ್ನು ಪಡೆಯುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಅಧಿಕಾರಿಗಳು ಉದ್ಯೋಗದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತಾರೆ.

*ಮೀನ ರಾಶಿ*

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಭೇಟಿ ಸಂತೋಷವನ್ನು ತರುತ್ತದೆ. ವಾಹನ ಅನುಕೂಲತೆ ಉಂಟಾಗುತ್ತದೆ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ವಿವಾದಗಳು ಬಗೆಹರಿಯುತ್ತವೆ. ಕೈಗೆತ್ತಿಕೊಂಡ ಕೆಲಸಗಳು ವಿಳಂಬವಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಉದ್ಯೋಗಗಳು ಮೊದಲಿಗಿಂತ ಉತ್ತಮ ವಾತಾವರಣವನ್ನು ಹೊಂದಿರುತ್ತವೆ.

Astrology

ಈ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು Blocked ಆಗಿರುವ ಎಚ್ಚರಿಕೆ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : “ನಿಮ್ಮ ದೇಹದಲ್ಲಿ ಈ ರೀತಿಯ ಲಕ್ಷಣಗಳು ಕಾಣಿಸಿಕೊಂಡರೆ ಅದು ರಕ್ತನಾಳಗಳು ಬ್ಲಾಕ್ (Blocked) ಆಗಿರುವ ಎಚ್ಚರಿಕೆ.! ಮಾನವನ ದೇಹದಲ್ಲಿ ಪ್ರತಿಯೊಂದು ಹನಿ ರಕ್ತವು ರಕ್ತನಾಳಗಳ ಮೂಲಕ ಅಂಗಾಂಗಗಳಿಗೆ ತಲುಪುತ್ತದೆ. ಆದರೆ ರಕ್ತನಾಳಗಳಲ್ಲಿ ಅಡಚಣೆ (Blockage) ಉಂಟಾದಾಗ ರಕ್ತದ ಹರಿವು ಅಡ್ಡಿಯಾಗುತ್ತದೆ.

ರಕ್ತನಾಳಗಳು ಬ್ಲಾಕ್ (Blocked) ಆಗುವುದರಿಂದ ಹೃದಯಾಘಾತ, ಪಾರ್ಶ್ವವಾಯು, ಉಸಿರಾಟದ ತೊಂದರೆ, ಆಯಾಸ ಮುಂತಾದ ಅನೇಕ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯಕೀಯ ತಜ್ಞರ ಪ್ರಕಾರ, ಈ ಸಂದರ್ಭಗಳಲ್ಲಿ ಕೆಲವು ಆರಂಭಿಕ ಲಕ್ಷಣಗಳನ್ನು ಗಂಭೀರವಾಗಿ ಪರಿಗಣಿಸಬೇಕು.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!
ರಕ್ತನಾಳಗಳಲ್ಲಿ ಅಡಚಣೆ (Blocked) ಆದಾಗ ಕಾಣುವ ಲಕ್ಷಣಗಳು :
1. ಕೈಕಾಲುಗಳಲ್ಲಿ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವಿಕೆ :

ರಕ್ತದ ಸರಿಯಾದ ಹರಿವು ಕಡಿಮೆ (Blocked) ಯಾದಾಗ ಕೈ ಅಥವಾ ಪಾದಗಳಲ್ಲಿ ಮರಗಟ್ಟುವಿಕೆ ಕಂಡುಬರುತ್ತದೆ. ಇದು ವಿಶೇಷವಾಗಿ ಹೆಚ್ಚು ಸಮಯ ಕುಳಿತಿದ್ದಾಗ ಅಥವಾ ನಡೆದಾಡಿದಾಗ ಸ್ಪಷ್ಟವಾಗುತ್ತದೆ.

2. ತಲೆತಿರುಗುವಿಕೆ ಮತ್ತು ಕೇಂದ್ರೀಕರಣದ ತೊಂದರೆ :

ರಕ್ತನಾಳಗಳಲ್ಲಿ ಅಡಚಣೆ (Blocked) ಮೆದುಳಿಗೆ ರಕ್ತದ ಪೂರೈಕೆಯನ್ನು ತಗ್ಗಿಸುತ್ತದೆ. ಇದರಿಂದ ತಲೆತಿರುಗುವಿಕೆ, ಗಾಬರಿಯಾಗುವಿಕೆ ಅಥವಾ ಗಮನ ಕೇಂದ್ರೀಕರಿಸಲು ಕಷ್ಟವಾಗುವುದು ಸಾಮಾನ್ಯ.

3. ಎದೆ ನೋವು ಅಥವಾ ಒತ್ತಡ :

ಹಠಾತ್ ಎದೆ ನೋವು, ಒತ್ತಡ ಅಥವಾ ಭಾರವಾಗಿರುವ ಅನುಭವವು ಹೃದಯ ಸಂಬಂಧಿತ ಸಮಸ್ಯೆಯ ಸೂಚನೆ ಆಗಿರಬಹುದು. ಈ ಲಕ್ಷಣವನ್ನು ನಿರ್ಲಕ್ಷಿಸುವುದು ಅಪಾಯಕಾರಿ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
4. ಉಸಿರಾಟದ ತೊಂದರೆ :

ರಕ್ತನಾಳಗಳಲ್ಲಿ ಅಡಚಣೆ ಉಂಟಾದಾಗ ಹೃದಯ ಹೆಚ್ಚು ಶ್ರಮಿಸಬೇಕಾಗುತ್ತದೆ. ಇದರಿಂದ ಶ್ವಾಸಕೋಶಗಳ ಮೇಲೆ ಒತ್ತಡ ಬಿದ್ದು ಉಸಿರಾಟದ ತೊಂದರೆ ಎದುರಾಗಬಹುದು.

5. ಶರೀರದಲ್ಲಿ ಆಯಾಸ ಮತ್ತು ದೌರ್ಬಲ್ಯ :

ಸಣ್ಣ ಚಟುವಟಿಕೆಗಳ ಬಳಿಕವೇ ದಣಿವು, ಶಕ್ತಿಯ ಕೊರತೆ ಅಥವಾ ಶರೀರ ಸುಸ್ತಾಗಿರುವುದು ರಕ್ತನಾಳಗಳಲ್ಲಿ ಬ್ಲಾಕ್ (Blocked) ಇರುವ ಸೂಚನೆ ಆಗಿರಬಹುದು.

6. ಪಾದಗಳಲ್ಲಿ ಊತ :

ಅಡಚಣೆಯ ಕಾರಣದಿಂದ ರಕ್ತ ಮತ್ತು ದ್ರವಗಳು ಪಾದಗಳಲ್ಲಿ ಸಂಗ್ರಹವಾಗುತ್ತವೆ. ಇದರಿಂದ ಪಾದಗಳು ಊದಿಕೊಳ್ಳುತ್ತವೆ ಮತ್ತು ಭಾರವಾಗಿರುವ ಅನುಭವ ಬರುತ್ತದೆ.

KSRTC Bus ಲಾರಿಗೆ ಡಿಕ್ಕಿ : ಮೂವರಿಗೆ ದುರ್ಮರಣ, 7 ಮಂದಿ ಗಂಭೀರ ಗಾಯ.!

ಸಂಪಾದಕೀಯ : ಈ ಲಕ್ಷಣಗಳು (blocked blood-vessels) ಕಂಡುಬಂದರೆ ತಕ್ಷಣವೇ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಅತ್ಯಂತ ಮುಖ್ಯ. ಸರಿಯಾದ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿ ಅನುಸರಿಸುವುದರಿಂದ ಹೃದಯ ಹಾಗೂ ರಕ್ತನಾಳಗಳನ್ನು ರಕ್ಷಿಸಬಹುದು.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


 

LIC Recruitment 2025 : 841 ಹುದ್ದೆಗಳಿಗೆ ಅರ್ಜಿ ಆಹ್ವಾನ.!

LIC

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಜೀವ ವಿಮಾ ನಿಗಮ (LIC) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಈ ನೇಮಕಾತಿ ಮೂಲಕ ಸಹಾಯಕ ಎಂಜಿನಿಯರ್‌ಗಳು ಹಾಗೂ ಸಹಾಯಕ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ ಹಾಗೂ ಇತರ ಮುಖ್ಯ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ :
  • ಸಹಾಯಕ ಆಡಳಿತ ಅಧಿಕಾರಿ – 350
  • ಸಹಾಯಕ ಎಂಜಿನಿಯರ್ (ಸಿವಿಲ್) – 50
  • ಸಹಾಯಕ ಎಂಜಿನಿಯರ್ (ವಿದ್ಯುತ್) – 31
  • ಸಹಾಯಕ ಆಡಳಿತ ಅಧಿಕಾರಿ (CA) – 30
  • ಸಹಾಯಕ ಆಡಳಿತ ಅಧಿಕಾರಿ (CS) – 10
  • ಸಹಾಯಕ ಆಡಳಿತ ಅಧಿಕಾರಿ (ವಿಮಾಗಣಕ) – 30
  • ಸಹಾಯಕ ಆಡಳಿತ ಅಧಿಕಾರಿ (ವಿಮಾ ತಜ್ಞರು) – 310
  • ಸಹಾಯಕ ಆಡಳಿತ ಅಧಿಕಾರಿ (ಕಾನೂನು) – 30

ಒಟ್ಟು ಹುದ್ದೆಗಳು : 841

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!
ವೇತನ (Salary) :

ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.88,635/- ರಿಂದ ರೂ.1,69,025/- ರವರೆಗೆ ಪ್ರತಿ ತಿಂಗಳು ವೇತನ ನೀಡಲಾಗುತ್ತದೆ.

ವಯೋಮಿತಿ (Age Limit) :
  • ಕನಿಷ್ಠ ವಯಸ್ಸು: 21 ವರ್ಷ
  • ಗರಿಷ್ಠ ವಯಸ್ಸು: 32 ವರ್ಷ

ವಯೋಮಿತಿ ಸಡಿಲಿಕೆ (Age Relaxation):

  • OBC ಅಭ್ಯರ್ಥಿಗಳು : 3 ವರ್ಷಗಳು.
  • SC/ST ಅಭ್ಯರ್ಥಿಗಳು : 5 ವರ್ಷಗಳು.
  • PwBD (ಸಾಮಾನ್ಯ) : 10 ವರ್ಷಗಳು.
  • PwBD (OBC) : 13 ವರ್ಷಗಳು.
  • PwBD (SC/ST) : 15 ವರ್ಷಗಳು.
ಶೈಕ್ಷಣಿಕ ಅರ್ಹತೆ (Education Qualification) :

ಅಭ್ಯರ್ಥಿಗಳು ಕೆಳಗಿನ ಪೈಕಿ ಯಾವುದಾದರೂ ಅರ್ಹತೆ ಹೊಂದಿರಬೇಕು,

  • ಯಾವುದೇ ಪದವಿ (Any Degree).
  • B.Tech / BE.
  • LLB.
  • CA, ICSI.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಅರ್ಜಿ ಶುಲ್ಕ (Application Fees) :
  • SC/ST/PwBD ಅಭ್ಯರ್ಥಿಗಳಿಗೆ : ರೂ.85 + GST.
  • ಇತರ ಅಭ್ಯರ್ಥಿಗಳಿಗೆ : ರೂ.700 + GST.
ಆಯ್ಕೆ ಪ್ರಕ್ರಿಯೆ (Selection Process) :
  • LIC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಆಧಾರಿತವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ (How to Apply) :
  1. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿ.
  3. ಆನ್‌ಲೈನ್ ಅರ್ಜಿ ಲಿಂಕ್ ಕ್ಲಿಕ್ ಮಾಡಿ.
  4. ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
  5. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  6. ಫೋಟೋ ಮತ್ತು ಸಹಿ ಅಪ್ಲೋಡ್ ಮಾಡಿ.
  7. ಫಾರ್ಮ್ ಸಲ್ಲಿಸುವ ಮೊದಲು ಪರಿಶೀಲಿಸಿ.
  8. ಕೊನೆಯಲ್ಲಿ ಪ್ರಿಂಟ್ ತೆಗೆದುಕೊಳ್ಳಿ.
Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
ಪ್ರಮುಖ ದಿನಾಂಕಗಳು (Important Dates) :
  • ಅರ್ಜಿ ಆರಂಭ ದಿನಾಂಕ: 16 ಆಗಸ್ಟ್ 2025
  • ಅರ್ಜಿ ಕೊನೆಯ ದಿನಾಂಕ: 08 ಸೆಪ್ಟೆಂಬರ್ 2025
ಪ್ರಮುಖ ಲಿಂಕ್‌ಗಳು (Important Links) :

Disclaimer : The above given information is available On online, candidates should check it properly before applying. This is for information only.

Exclusive photo reveal : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ನೋಡಿ.!

0

ಜನಸ್ಪಂದನ ನ್ಯೂಸ್‌, ಸಿನೆಮಾ : ಅರೆಸ್ಟ್ ಆದ್ಮೇಲೆ ದರ್ಶನ್-ಪವಿತ್ರಾಗೌಡ ಹೇಗಿದ್ದಾರೆ ಎಂಬ ಪೋಟೋ (Exclusive photo reveal) ಒಂದು ಸದ್ಯ ವೈರಲ್‌ ಆಗಿದೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರರನ್ನು ಮತ್ತೆ ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

ಬಂಧನದ ಪ್ರಕ್ರಿಯೆ :

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯವರು ಆರೋಪಿಗಳನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಬಳಿಕ ಎಲ್ಲರನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.
ನ್ಯಾಯಾಂಗ ಬಂಧನಕ್ಕೆ ಕಳಿಸುವ ಮುನ್ನ, ನಿಯಮದಂತೆ ಆರೋಪಿಗಳ ಫೋಟೋ (Photo), ಬೆರಳಚ್ಚು ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!
ವೈರಲ್ ಆದ ಚಿತ್ರಗಳು :

ಬಂಧನಕ್ಕೂ ಮುನ್ನ ತೆಗೆದ ಕೆಲವು ಚಿತ್ರ (Photo) ಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

  • ನಟ ದರ್ಶನ್ ತಮ್ಮ ತಲೆಗೂದಲು ಸಂಪೂರ್ಣ ಬೋಳಿಸಿಕೊಂಡು ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಅವರು ಮಾದೇಶ್ವರ ಬೆಟ್ಟಕ್ಕೆ ತೆರಳಿ ದೇವರಿಗೆ ಮುಡಿ ಕೊಟ್ಟು ಬಂದ ನಂತರ ಪೊಲೀಸರಿಗೆ ಶರಣಾಗಿದ್ದರು.
  • ಪವಿತ್ರಾ ಗೌಡ ಅವರ ಚಿತ್ರ (Photo) ವೂ ವೈರಲ್ ಆಗಿದ್ದು, ಇನ್‌ಸ್ಟಾಗ್ರಾಂ ಶೈಲಿಯ ಫೋಟೋಗಳಿಗಿಂತ ವಿಭಿನ್ನವಾಗಿದೆ. ಒಂದು ಚಿತ್ರದಲ್ಲಿ ಅವರು ನಗುತ್ತಿರುವುದು ಮತ್ತು ಲಿಪ್‌ಸ್ಟಿಕ್ ಸ್ಪಷ್ಟವಾಗಿ ಕಾಣುವುದು ಗಮನ ಸೆಳೆದಿದೆ.
ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಸುಪ್ರೀಂಕೋರ್ಟ್ ತೀರ್ಪು :

ಇದಕ್ಕೂ ಮೊದಲು ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಹೈಕೋರ್ಟ್ ಜಾಮೀನು ನೀಡುವ ವೇಳೆ ಸರಿಯಾದ ನಿಯಮಗಳನ್ನು ಪಾಲಿಸಿಲ್ಲವೆಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಒಟ್ಟು ಏಳು ಮಂದಿ ಆರೋಪಿಗಳ ಜಾಮೀನು ರದ್ದುಗೊಂಡಿದೆ.

ದರ್ಶನ್, ಪವಿತ್ರಾ ಗೌಡ ಜೈಲು ಸೇರುವ ಮೊದಲಿನ ಪೋಟೋ (Photo) :

Darshan-Pavitra


Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬಳು ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪಗೊಂಡು ಆಕೆಯನ್ನೇ ಕೊಲೆ (Kill /Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಘಟನೆಯಲ್ಲಿ ಕೊಲೆಯಾದ (Kill) ವಿವಾಹಿತೆynfnu ರೇಶ್ಮಾ (29) ಎಂದು, ಆನಂದ ಸುತಾರ (31) ಆತ್ಮಹತ್ಯೆಗೆ ಶರಣಾದ ಕೊಲೆ ಆರೋಪಿ ವ್ಯಕ್ತಿ ಎಂದು ಗುರುತಿಸಲಾಗಿದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ಘಟನೆ ಹೇಗೆ ನಡೆದಿದೆ?

ಆನಂದ-ರೇಶ್ಮಾ ಇವರಿಬ್ಬರು ಒಂದೇ ಗ್ರಾಮದವರಾಗಿದ್ದು ಇಬ್ಬರ ನಡುವೆ ಮೊದಲಿನಿಂದಲೂ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ ಇವರಿಬ್ಬರೂ ವಿವಾಹಿತರಾಗಿದ್ದು, ಇಬ್ಬರಿಗೂ ಮಕ್ಕಳಿದ್ದಾರೆ. ರೇಶ್ಮಾ ವಿವಾಹಿತೆ ಎಂದು ಗೊತ್ತಿದ್ದರೂ ಆನಂದ ಅವಳ ಜೊತೆ ಸಂಬಂಧವನ್ನು ಮುಂದುವರೆಸಿದ್ದ.

ಇವರಿಬ್ಬರೂ ಮೇಲಿಂದ ಮೇಲೆ ಭೇಟಿಯಾಗುತ್ತಿದ್ದರು ಮತ್ತು ಮೊಬೈಲ್ ನಲ್ಲಿ ದಿನನಿತ್ಯ ಮಾತಾಡುತ್ತಿದ್ದರು. ರೇಶ್ಮಾಳ ಮನೆಗೆ ಆನಂದ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ರೇಶ್ಮಾ ಮತ್ತು ಆನಂದ ಅವರ ಸಂಬಂಧದ ವಿಷಯ ರೇಶ್ಮಾಳ ಪತಿಗೆ ಕೆಲ ದಿನಗಳ ಹಿಂದೆ ತಿಳಿದಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ರೇಶ್ಮಾಳ ಪತಿ ಈ ಸಂಬಂಧದ ಬಗ್ಗೆ ಹಿರಿಯರ ಮೂಲಕ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ಆನಂದನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ, ರೇಶ್ಮಾಳ ಜೀವನದಲ್ಲಿ ತೊಂದರೆ ಮಾಡಬಾರದೆಂದು ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಡಿಸಿದ್ದರು. ಈ ಘಟನೆ ಬಳಿಕ ರೇಶ್ಮಾ ಮತ್ತು ಆನಂದ ಹಲವಾರು ದಿನಗಳ ಕಾಲ ಪರಸ್ಪರ ಸಂಪರ್ಕದಲ್ಲಿರಲಿಲ್ಲ.

ಇದರಿಂದ ಅಸಮಾಧಾನಗೊಂಡ ಆನಂದ, ಶುಕ್ರವಾರ ರೇಶ್ಮಾಳ ಮನೆಯಲ್ಲಿ ನುಗ್ಗಿ ಚಾಕುವಿನಿಂದ ಹೊಟ್ಟೆ ಮತ್ತು ಎದೆಗೆ  9 ಬಾರಿ ಇರಿದು ಹತ್ಯೆ (Kill /Murder)ಗೈದಿದ್ದಾನೆ.

ಸ್ವಾತಂತ್ರ್ಯೋತ್ಸವ ದಿನವೇ PSI ಪತ್ನಿ ಆತ್ಮಹತ್ಯೆ.!
ಆತ್ಮಹತ್ಯೆಗೆ ಶರಣಾದ ಆನಂದ :

ಪ್ರೇಯಸಿಯನ್ನು ಹತ್ಯೆ (Kill /Murder) ಗೈದ ನಂತರ ಆನಂದ ತಾನೂ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದನು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ನಂದಗಡ ಪೊಲೀಸ್ ಠಾಣೆ ಮಾಹಿತಿ ನೀಡಿದೆ.

ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.

ಮಳೆಗಾಲದಲ್ಲಿ ಬಟ್ಟೆಗಳಿಂದ bad-smell ಬರುತ್ತಿದೆಯೇ? ಈ 3 ಮನೆಮದ್ದುಗಳಿಂದ 5 ನಿಮಿಷದಲ್ಲಿ ಪರಿಹಾರ.!

0

ಜನಸ್ಪಂದನ ನ್ಯೂಸ್.‌ ಡೆಸ್ಕ್‌ : ಮಳೆಗಾಲ ಬಂದಾಗ ಬಟ್ಟೆ ಸರಿಯಾಗಿ ಒಣಗದ ಸಮಸ್ಯೆ ಸಾಮಾನ್ಯ. ತೇವ ಹೆಚ್ಚಿರುವುದರಿಂದ ಬಟ್ಟೆಗಳಲ್ಲಿ ವಿಚಿತ್ರ ವಾಸನೆ (bad-smell) ಉಂಟಾಗುತ್ತದೆ. ಇದರಿಂದ ಕೆಲವೊಮ್ಮೆ ಶಿಲೀಂಧ್ರ ಹಾಗೂ ಬ್ಯಾಕ್ಟೀರಿಯಾ ಕೂಡ ಬೆಳೆಯುತ್ತವೆ.

ಆದರೆ ಚಿಂತೆ ಬೇಡ, ಕೇವಲ 5 ನಿಮಿಷದಲ್ಲಿ ಬಟ್ಟೆಗಳಿಂದ ಕೆಟ್ಟ ವಾಸನೆಯನ್ನು ತೊಡೆದುಹಾಕುವ ಮೂರು ಸುಲಭ ಮನೆಮದ್ದುಗಳಿವೆ. ಇವುಗಳನ್ನು ಮನೆಯಲ್ಲೇ ತಯಾರಿಸಿ ಬಳಸಬಹುದು ಮತ್ತು ವಾಷಿಂಗ್ ಮಷಿನ್‌ನಲ್ಲೂ ಸುಲಭವಾಗಿ ಅಳವಡಿಸಬಹುದು.

KSRTC Bus ಲಾರಿಗೆ ಡಿಕ್ಕಿ : ಮೂವರಿಗೆ ದುರ್ಮರಣ, 7 ಮಂದಿ ಗಂಭೀರ ಗಾಯ.!
ಕೆಟ್ಟ ವಾಸನೆ/ವಿಚಿತ್ರ ವಾಸನೆ (bad-smell) ತೆಗೆಯಲು ಸರಳ ಉಪಾಯ :
1. ನಿಂಬೆ ರಸ :

ಒಂದು ಬಕೆಟ್ ನೀರಿಗೆ ಒಂದು ಚಮಚ ನಿಂಬೆ ರಸ ಹಾಕಿ, ಬಟ್ಟೆಗಳನ್ನು ಅದರಲ್ಲಿ ತೊಳೆದು ಒಣಗಿಸಿ. ನಿಂಬೆ ನೈಸರ್ಗಿಕ ಡಿಯೋಡರೆಂಟ್ ಆಗಿ ಕೆಲಸಮಾಡಿ ಬಟ್ಟೆಯ ಕೆಟ್ಟ ವಾಸನೆ (bad-smell) ಯನ್ನು ತಕ್ಷಣವೇ ನಿವಾರಿಸುತ್ತದೆ. ನಿಂಬೆ ಲಭ್ಯವಿಲ್ಲದಿದ್ದರೆ ಅಡುಗೆ ಸೋಡಾ ಬಳಸಬಹುದು.

2. ಅಡುಗೆ ಸೋಡಾ :

ಒಂದು ಬಕೆಟ್ ನೀರಿಗೆ ಅಡುಗೆ ಸೋಡಾ ಸೇರಿಸಿ, ಬಟ್ಟೆಗಳನ್ನು ಅದರಲ್ಲಿ ತೊಳೆದು ಒಣಗಿಸಿದರೆ ಕೆಟ್ಟ ವಾಸನೆ (bad-smell) ತಡೆಯಲು ಸಹಾಯಕ. ಜೊತೆಗೆ ಬಟ್ಟೆಗಳು ಸಾಫ್ಟ್ ಆಗಿ ಮೃದುವಾಗುತ್ತವೆ.

3. ಬಿಳಿ ವಿನೆಗರ್ :

ಒಂದು ಬಕೆಟ್ ನೀರಿಗೆ ಒಂದು ಚಮಚ ಬಿಳಿ ವಿನೆಗರ್ ಸೇರಿಸಿ. ಇದು ಬಟ್ಟೆಗಳಲ್ಲಿ ಹುಳು ಮತ್ತು ಬ್ಯಾಕ್ಟೀರಿಯಾಗಳನ್ನು ನಾಶಮಾಡಿ ವಾಸನೆ (bad-smell) ತಡೆಯುತ್ತದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ವಾಷಿಂಗ್ ಮಷಿನ್‌ನಲ್ಲಿ bad-smell ತೆಗೆಯಲು ಹೇಗೆ ಬಳಸಬೇಕು?

ಮಷಿನ್‌ನಲ್ಲಿ ಬಟ್ಟೆ ಒಗೆಯುವಾಗ ಕೊನೆಯ ರೌಂಡ್‌ಗೆ ಒಂದು ಟೀ ಚಮಚ ನಿಂಬೆ ರಸ ಅಥವಾ ಒಂದು ಕಪ್ ಅಡುಗೆ ಸೋಡಾ ಅಥವಾ ಅರ್ಧ ಕಪ್ ಬಿಳಿ ವಿನೆಗರ್ ಸೇರಿಸಿದರೆ ಬಟ್ಟೆಗಳು ತಾಜಾ ಮತ್ತು ಪರಿಮಳಯುಕ್ತವಾಗುತ್ತವೆ. ಹವಾಮಾನ ಎಷ್ಟೇ ತೇವಯುಕ್ತವಾಗಿದ್ದರೂ ಈ ವಿಧಾನಗಳು ಬಟ್ಟೆಯಿಂದ ದುರ್ವಾಸನೆ (bad-smell) ಬಾರದಂತೆ ನೋಡಿಕೊಳ್ಳುತ್ತವೆ.


Astrology : ಹೇಗಿದೆ ಗೊತ್ತಾ.? ಅಗಷ್ಟ 16 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಅಗಷ್ಟ 16, ಶನಿವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 15 ರ ದ್ವಾದಶ ರಾಶಿಗಳ ಫಲಾಫಲ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಶುಭ ಸುದ್ದಿ ಸಿಗುತ್ತದೆ. ಸಹೋದರರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ಸಮಾಜದಲ್ಲಿ ಖ್ಯಾತಿ ಹೆಚ್ಚಾಗುತ್ತದೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ದೇವರ ದಯೆಯಿಂದ ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಉದ್ಯೋಗದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ.

*ವೃಷಭ ರಾಶಿ*

ವಾಹನ ಪ್ರಯಾಣದಲ್ಲಿ ಜಾಗ್ರತೆ ವಹಿಸಬೇಕು. ನೀವು ಕೈಗೊಂಡ ಕೆಲಸದಲ್ಲಿ ಹೆಚ್ಚಿನ ಪ್ರಯತ್ನದಿಂದ ಕಡಿಮೆ ಫಲಿತಾಂಶಗಳನ್ನು ಪಡೆಯುತ್ತೀರಿ. ಸೋದರ ಸಂಬಂಧಿಗಳೊಂದಿಗೆ ಆಸ್ತಿ ವಿವಾದವಿರುತ್ತದೆ. ಬಾಲ್ಯದ ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳಿರುತ್ತವೆ. ವೃತ್ತಿಪರ ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಉದ್ಯೋಗ ಪ್ರಯತ್ನಗಳು ಹೆಚ್ಚು ಅನುಕೂಲಕರವಾಗಿರುವುದಿಲ್ಲ.

*ಮಿಥುನ ರಾಶಿ*

ಪ್ರಮುಖ ವಿಷಯಗಳಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಮನೆಯ ಹೊರಗೆ ಅನಿರೀಕ್ಷಿತ ಕಿರಿಕಿರಿಗಳು ಹೆಚ್ಚಾಗುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ವೃತ್ತಿಪರ ವ್ಯವಹಾರಗಳು ನಿಧಾನವಾಗುತ್ತವೆ. ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳು ಉಂಟಾಗುತ್ತವೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”
*ಕಟಕ ರಾಶಿ*

ಪ್ರಯಾಣದಲ್ಲಿ ಹೊಸ ವ್ಯಕ್ತಿಗಳ ಭೇಟಿ ಭವಿಷ್ಯಕ್ಕೆ ಉಪಯುಕ್ತವಾಗುತ್ತವೆ. ಬಂಧು ಮಿತ್ರರಿಂದ ಶುಭ ಸುದ್ದಿ ದೊರೆಯುತ್ತದೆ. ವೃತ್ತಿಪರ ವ್ಯಾಪಾರಗಳು ಅನುಕೂಲಕರವಾಗಿರುತ್ತದೆ. ಕೈಗೊಂಡ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ . ಹಣಕಾಸಿನ ವ್ಯವಹಾರಗಳು ತೃಪ್ತಿಕರವಾಗಿರುತ್ತವೆ. ಉದ್ಯೋಗ ಪ್ರಯತ್ನಗಳ ಫಲವಾಗಿ ಹೊಸ ಅವಕಾಶಗಳು ದೊರೆಯುತ್ತವೆ.

*ಸಿಂಹ ರಾಶಿ*

ಸಮಾಜದಲ್ಲಿ ಹಿರಿಯರಿಂದ ಮೆಚ್ಚುಗೆ ದೊರೆಯುತ್ತದೆ. ಮಕ್ಕಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ ಮತ್ತು ಬೆಲೆಬಾಳುವ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಬಾಲ್ಯದ ಗೆಳೆಯರ ಮಿಲನ ಸಂತಸ ತರುತ್ತದೆ. ವೃತ್ತಿ ವ್ಯವಹಾರ ಸುಗಮವಾಗಿ ಸಾಗುತ್ತದೆ. ಉದ್ಯೋಗದ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ.

*ಕನ್ಯಾ ರಾಶಿ*

ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ದೂರ ಪ್ರಯಾಣಗಳು ಇದ್ದಕ್ಕಿದ್ದಂತೆ ಮುಂದೂಡಲ್ಪಡುತ್ತವೆ. ಕೌಟುಂಬಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ದೇಗುಲಗಳಿಗೆ ಭೇಟಿ ನೀಡುತ್ತೀರಿ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ವ್ಯಾಪಾರಗಳು ನಿಧಾನವಾಗುತ್ತವೆ. ಉದ್ಯೋಗಗಲಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುತ್ತದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
*ತುಲಾ ರಾಶಿ*

ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತದೆ. ಹಣಕಾಸಿನ ಸಮಸ್ಯೆಗಳಿಂದಾಗಿ ಹೊಸ ಸಾಲದ ಪ್ರಯತ್ನಗಳನ್ನು ಮಾಡಲಾಗುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಪ್ರಯತ್ನ ಹೆಚ್ಚಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ.

*ವೃಶ್ಚಿಕ ರಾಶಿ*

ನಿರುದ್ಯೋಗಿಗಳಿಗೆ ಹೊಸ ಉದ್ಯೋಗವಿದೆ. ಯೋಜಿತ ಕಾರ್ಯಗಳನ್ನು ಪೂರ್ಣಗೊಳಿಸುತ್ತೀರಿ ಮತ್ತು ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ವ್ಯಾಪಾರದಲ್ಲಿ ಉತ್ಸಾಹದಿಂದ ಮುನ್ನಡೆಯುತ್ತೀರಿ. ಒಂದು ವ್ಯವಹಾರದಲ್ಲಿ, ದೂರದ ಸಂಬಂಧಿಕರಿಂದ ಪ್ರಮುಖ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹ ದೊರೆಯುತ್ತದೆ.

*ಧನುಸ್ಸು ರಾಶಿ*

ವ್ಯರ್ಥ ಪ್ರಯಾಣ ಮಾಡಬೇಕಾಗುತ್ತದೆ. ಬಂಧುಗಳೊಂದಿಗೆ ಆತುರದಲ್ಲಿ ಮಾತನಾಡುವುದು ಒಳ್ಳೆಯದಲ್ಲ. ಪ್ರಮುಖ ವಿಷಯಗಳಲ್ಲಿ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ಕೆಲವು ವ್ಯವಹಾರಗಳು ಮುಂದೆ ಸಾಗದೆ ಹತಾಶೆ ಉಂಟಾಗುತ್ತದೆ. ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಹೆಚ್ಚು ಅನುಕೂಲಕರವಾಗಿರುವುದಿಲ್ಲ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!
*ಮಕರ ರಾಶಿ*

ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ. ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತಾರೆ. ಕುಟುಂಬ ಸದಸ್ಯರಿಂದ ಶುಭ ಸುದ್ದಿ ದೊರೆಯುತ್ತದೆ. ಪ್ರಮುಖ ಕಾರ್ಯಗಳು ನಿರಾಯಾಸವಾಗಿ ಪೂರ್ಣಗೊಳ್ಳುತ್ತವೆ. ವ್ಯವಹಾರಗಳಲ್ಲಿ ನಿರೀಕ್ಷೆಗಳು ಈಡೇರುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ಅವಧಿ.

*ಕುಂಭ ರಾಶಿ*

ಮನೆಯ ಹೊರಗೆ ಕಿರಿಕಿರಿಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಪ್ರಮುಖ ಕಾರ್ಯಗಳನ್ನು ಮುಂದೂಡುವುದು ಉತ್ತಮ. ಸಹೋದರರೊಂದಿಗೆ ಸ್ಥಿರಾಸ್ತಿಯ ವಿವಾದಗಳಿರುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ವೃತ್ತಿಪರ ಉದ್ಯೋಗಗಳು ಸಾಮಾನ್ಯವಾಗಿ ಸಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ನಿಧಾನವಾಗುತ್ತವೆ.

*ಮೀನ ರಾಶಿ*

ಆತ್ಮೀಯ ಸ್ನೇಹಿತರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ವ್ಯಾಪಾರಗಳಿಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ದೀರ್ಘಾವಧಿ ಸಾಲವನ್ನು ಇತ್ಯರ್ಥಗೊಳಿಸುತ್ತೀರಿ. ಹಣಕಾಸಿನ ವ್ಯವಹಾರಗಳು ಮೊದಲಿಗಿಂತ ಉತ್ತಮವಾಗಿರುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲದಿಂದ ಸ್ಥಾನಮಾನ ಹೆಚ್ಚಾಗುತ್ತದೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Kills : ಬೆಳಗಾವಿ ; ವಿವಾಹಿತ ಪ್ರೇಯಸಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ವಿವಾಹಿತ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಪಟ್ಟಣದಲ್ಲಿ ಆಘಾತಕಾರಿ ಘಟನೆ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬಳು ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪಗೊಂಡು ಆಕೆಯನ್ನೇ ಕೊಲೆ (Kill /Murder) ಮಾಡಿ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈ ಘಟನೆಯಲ್ಲಿ ಕೊಲೆಯಾದ (Kill) ವಿವಾಹಿತೆynfnu ರೇಶ್ಮಾ (29) ಎಂದು, ಆನಂದ ಸುತಾರ (31) ಆತ್ಮಹತ್ಯೆಗೆ ಶರಣಾದ ಕೊಲೆ ಆರೋಪಿ ವ್ಯಕ್ತಿ ಎಂದು ಗುರುತಿಸಲಾಗಿದೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!
ಘಟನೆ ಹೇಗೆ ನಡೆದಿದೆ?

ಆನಂದ-ರೇಶ್ಮಾ ಇವರಿಬ್ಬರು ಒಂದೇ ಗ್ರಾಮದವರಾಗಿದ್ದು ಇಬ್ಬರ ನಡುವೆ ಮೊದಲಿನಿಂದಲೂ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ ಇವರಿಬ್ಬರೂ ವಿವಾಹಿತರಾಗಿದ್ದು, ಇಬ್ಬರಿಗೂ ಮಕ್ಕಳಿದ್ದಾರೆ. ರೇಶ್ಮಾ ವಿವಾಹಿತೆ ಎಂದು ಗೊತ್ತಿದ್ದರೂ ಆನಂದ ಅವಳ ಜೊತೆ ಸಂಬಂಧವನ್ನು ಮುಂದುವರೆಸಿದ್ದ.

ಇವರಿಬ್ಬರೂ ಮೇಲಿಂದ ಮೇಲೆ ಭೇಟಿಯಾಗುತ್ತಿದ್ದರು ಮತ್ತು ಮೊಬೈಲ್ ನಲ್ಲಿ ದಿನನಿತ್ಯ ಮಾತಾಡುತ್ತಿದ್ದರು. ರೇಶ್ಮಾಳ ಮನೆಗೆ ಆನಂದ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ರೇಶ್ಮಾ ಮತ್ತು ಆನಂದ ಅವರ ಸಂಬಂಧದ ವಿಷಯ ರೇಶ್ಮಾಳ ಪತಿಗೆ ಕೆಲ ದಿನಗಳ ಹಿಂದೆ ತಿಳಿದಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ರೇಶ್ಮಾಳ ಪತಿ ಈ ಸಂಬಂಧದ ಬಗ್ಗೆ ಹಿರಿಯರ ಮೂಲಕ ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಸ್ವೀಕರಿಸಿದ ಪೊಲೀಸರು ಆನಂದನನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿ, ರೇಶ್ಮಾಳ ಜೀವನದಲ್ಲಿ ತೊಂದರೆ ಮಾಡಬಾರದೆಂದು ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಬಿಡಿಸಿದ್ದರು. ಈ ಘಟನೆ ಬಳಿಕ ರೇಶ್ಮಾ ಮತ್ತು ಆನಂದ ಹಲವಾರು ದಿನಗಳ ಕಾಲ ಪರಸ್ಪರ ಸಂಪರ್ಕದಲ್ಲಿರಲಿಲ್ಲ.

ಇದರಿಂದ ಅಸಮಾಧಾನಗೊಂಡ ಆನಂದ, ಶುಕ್ರವಾರ ರೇಶ್ಮಾಳ ಮನೆಯಲ್ಲಿ ನುಗ್ಗಿ ಚಾಕುವಿನಿಂದ ಹೊಟ್ಟೆ ಮತ್ತು ಎದೆಗೆ  9 ಬಾರಿ ಇರಿದು ಹತ್ಯೆ (Kill /Murder)ಗೈದಿದ್ದಾನೆ.

ಸ್ವಾತಂತ್ರ್ಯೋತ್ಸವ ದಿನವೇ PSI ಪತ್ನಿ ಆತ್ಮಹತ್ಯೆ.!
ಆತ್ಮಹತ್ಯೆಗೆ ಶರಣಾದ ಆನಂದ :

ಪ್ರೇಯಸಿಯನ್ನು ಹತ್ಯೆ (Kill /Murder) ಗೈದ ನಂತರ ಆನಂದ ತಾನೂ ಚಾಕುವಿನಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದನು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿದ್ದಾನೆ ಎಂದು ನಂದಗಡ ಪೊಲೀಸ್ ಠಾಣೆ ಮಾಹಿತಿ ನೀಡಿದೆ.

ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಕೈಗೊಂಡಿದ್ದಾರೆ.


Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!

coaching

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದ ಮಧುಬನಿ ಜಿಲ್ಲೆಯ ಜೈನಗರ ಪ್ರದೇಶದಲ್ಲಿ ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಕೋಚಿಂಗ್ (Coaching) ಸೆಂಟರ್‌ನೊಬ್ಬ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಾಣಿಸಿಕೊಂಡಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಈ ಘಟನೆ ಜೈನಗರದ ಭೇಲ್ವಾ ಚೌಕ್ ಸಮೀಪದ ಕೋಚಿಂಗ್ (Coaching) ಸಂಸ್ಥೆಯಲ್ಲಿ ನಡೆದಿದ್ದು, ಆರೋಪಿಯ ಹೆಸರನ್ನು ರಾಕೇಶ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇದೇ ವ್ಯಕ್ತಿಯ ಮೇಲೆ ಇದೇ ರೀತಿಯ ಆರೋಪ ಮೊದಲು ಕೂಡ ಕೇಳಿಬಂದಿದೆ.

ಸ್ಥಳೀಯರು ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಸಂಬಂಧಿಸಿದ ತರಬೇತಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಪೋಷಕರು ಮಕ್ಕಳಿಗೆ ಜಾಗೃತಿ ಮೂಡಿಸಿ, ಅವರ ಸುರಕ್ಷತೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡುತ್ತಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಪೊಲೀಸರು ಪ್ರಕರಣದ ಕುರಿತು ತನಿಖೆ ಪ್ರಾರಂಭಿಸಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಸ್ತುತ ಆರೋಪಿಯು ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದ್ದು, ಸಂಬಂಧಿತ ಕೋಚಿಂಗ್ (Coaching) ಸೆಂಟರ್ ತನ್ನ ಸ್ಥಳವನ್ನು ಬದಲಾಯಿಸಿರುವುದಾಗಿ ತಿಳಿದುಬಂದಿದೆ.

ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ವಿಡಿಯೋ :

KSRTC Bus ಲಾರಿಗೆ ಡಿಕ್ಕಿ : ಮೂವರಿಗೆ ದುರ್ಮರಣ, 7 ಮಂದಿ ಗಂಭೀರ ಗಾಯ.!

0

ಜನಸ್ಪಂದನ ನ್ಯೂಸ್‌, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಾಗಲಕೋಟೆಯಿಂದ ಮಂಗಳೂರು ಕಡೆಗೆ ಹೊರಟಿದ್ದ KA 19 F 3470 ನಂಬರ್‌ನ ಕೆಎಸ್‌ಆರ್‌ಟಿಸಿ ಬಸ್ (Bus) ಓವರ್‌ಟೇಕ್ ಮಾಡುವ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅವಘಡ ಸಂಭವಿಸಿದೆ.

ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಾಳುಗಳಲ್ಲಿ ಸಣ್ಣ ಮಕ್ಕಳೂ ಸೇರಿದ್ದಾರೆ.

ಮೃತರು ಬಾಗಲಕೋಟೆ ಮೂಲದವರು :

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರು,

  • ನಿಲವ್ವ ಹರದೊಳ್ಳಿ (40) – ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮ.
  • ಗಿರಿಜವ್ವಾ ಬೂದನ್ನವರ (30) – ಜಾಲಿಹಾಳ ಗ್ರಾಮ.
  • ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಇನ್ನಷ್ಟೇ ಪತ್ತೆಯಾಗಬೇಕು).

ಮೃತರು ಎಲ್ಲರೂ ಬಾಗಲಕೋಟೆ ಮೂಲದವರಾಗಿದ್ದು, ಕೆಲಸದ ನಿಮಿತ್ತ ಮಂಗಳೂರಿಗೆ ಹೊರಟಿದ್ದರು ಎಂದು ತಿಳಿದುಬಂದಿದೆ.

ಪ್ರಕರಣ ದಾಖಲು :

ಅಪಘಾತಕ್ಕೆ ಕಾರಣವಾದ ಬಸ್ (Bus) ಚಾಲಕ ಯಮನಪ್ಪ ಮಾಗಿ (ಆಲಮಟ್ಟಿ ಗ್ರಾಮ) ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ (Bus) ಚಾಲಕ ಮತ್ತು ನಿರ್ವಾಹಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಸ್‌ (Bus) ಅಪಘಾತದ ಹಿನ್ನೆಲೆ :

ಯಲ್ಲಾಪುರ–ಅಂಕೋಲಾ ರಸ್ತೆಯು ದಟ್ಟ ಕಾಡು ಮತ್ತು ಘಟ್ಟ ಪ್ರದೇಶ ಹೊಂದಿದ್ದು ಅಪಾಯಕರ ಹೆದ್ದಾರಿಯಾಗಿ ಪರಿಗಣಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇರಳ ಮೂಲದ ಲಾರಿ ಚಾಲಕ ರಾತ್ರಿ ಇಂಡಿಕೇಟರ್ ಹಾಕದೆ ಕತ್ತಲೆಯಲ್ಲೇ ವಾಹನ ನಿಲ್ಲಿಸಿದ್ದರಿಂದ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಯಿಂದ ಬಸ್‌ (Bus) ನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಪೊಲೀಸ್ ಪರಿಶೀಲನೆ :

ಯಲ್ಲಾಪುರ ಸಿಪಿಐ ರಮೇಶ್ ಹಾನಾಪುರ, ಪಿಎಸ್‌ಐ ಯಲ್ಲಾಲಿಂಗ ಕುನ್ನೂರು ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಯಲ್ಲಾಪುರ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.


ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!

beauty-parlour

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ನಗರದಲ್ಲಿ ನಿಯಮ ಉಲ್ಲಂಘನೆ ನಡೆಸುತ್ತಿದ್ದ ಬ್ಯೂಟಿ ಪಾರ್ಲರ್‌ (beauty-parlour) ಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ದಾಳಿ ನಡೆಸಿದ್ದು, ಶುಕ್ರವಾರ (ಆ.15) ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ನಿರ್ದೇಶನದಂತೆ, ಡಿಎಚ್‌ಒ ಡಾ. ಈಶ್ವರ ಗಡಾದಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 30 ಬ್ಯೂಟಿ ಪಾರ್ಲರ್‌ಗಳನ್ನು ಪರಿಶೀಲಿಸಲಾಯಿತು.

ದಾಳಿಯ ವೇಳೆ ಕೆಲವು ಪಾರ್ಲರ್‌ (beauty-parlour) ಗಳಲ್ಲಿ ಮೇಕಪ್, ಟ್ರೆಡಿಂಗ್, ವ್ಯಾಕ್ಸಿಂಗ್ ಸೇವೆಗಳ ಬದಲು ಕೂದಲು ಕಸಿ, ಚರ್ಮರೋಗ ಚಿಕಿತ್ಸೆ, ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಹಾನಿಕಾರಕ ಕೆಮಿಕಲ್ ಹಾಗೂ ಸಿರೈಡ್‌ಗಳಂತಹ ಔಷಧಿಗಳನ್ನು ಬಳಸುತ್ತಿರುವುದು ಪತ್ತೆಯಾಯಿತು.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಪರಿಶೀಲನೆಯ ನಂತರ, 10 ಪಾರ್ಲರ್‌ (beauty-parlour) ಗಳನ್ನು ತಕ್ಷಣ ಸೀಜ್ ಮಾಡಲಾಗಿದ್ದು, 20 ಪಾರ್ಲರ್‌ಗಳಿಗೆ ನೋಟಿಸ್‌ ನೀಡಲಾಗಿದೆ. ಅಧಿಕಾರಿಗಳ ಪ್ರಕಾರ, ಕೂದಲು ಕಸಿ ಹಾಗೂ ಚರ್ಮ ಚಿಕಿತ್ಸೆಯನ್ನು ಮಾತ್ರ ನುರಿತ ತಜ್ಞ ವೈದ್ಯರು ನಡೆಸಬೇಕು ಎಂಬ ನಿಯಮಗಳಿದ್ದರೂ, ಅನರ್ಹ ಸಿಬ್ಬಂದಿ ಈ ಸೇವೆಗಳನ್ನು ನೀಡುತ್ತಿರುವುದು ಗಂಭೀರ ಆರೋಗ್ಯ ಅಪಾಯವನ್ನು ಉಂಟುಮಾಡುತ್ತಿದೆ.

ಸಾರ್ವಜನಿಕರು ಕೂಡ, “ಅಮಾಯಕ ಮಹಿಳೆಯರು ಮತ್ತು ಯುವತಿಯರ ಮೇಲೆ ಪಾರ್ಲರ್ ಸಿಬ್ಬಂದಿ ಮೋಸ ಮಾಡುತ್ತಿದ್ದಾರೆ. ಹಾನಿಕಾರಕ ಕೆಮಿಕಲ್‌ಗಳಿಂದ ಬ್ಲೀಚಿಂಗ್ ಮತ್ತು ಫೇಸ್‌ವಾಶ್ ಮಾಡುವುದರಿಂದ ಚರ್ಮರೋಗ ತಗುಲುವ ಸಾಧ್ಯತೆ ಹೆಚ್ಚು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಜಿಲ್ಲಾಧಿಕಾರಿ ಅವರ ನಿರ್ಧಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರು, “ನಿಯಮ ಉಲ್ಲಂಘಿಸಿದ ಪಾರ್ಲರ್ (beauty-parlour) ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಸಾರ್ವಜನಿಕರೂ ಪಾರ್ಲರ್ ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಹಣ ಕಳೆದುಕೊಳ್ಳುವುದರ ಜೊತೆಗೆ, ಚರ್ಮದ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ” ಎಂದು ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.

Coaching ಸೆಂಟರ್‌ನಲ್ಲಿ ವಿದ್ಯಾರ್ಥಿನಿ ಜೊತೆ ಶಿಕ್ಷಕನ ಅಸಭ್ಯ ವರ್ತನೆ ; ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಿಹಾರದ ಮಧುಬನಿ ಜಿಲ್ಲೆಯ ಜೈನಗರ ಪ್ರದೇಶದಲ್ಲಿ ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ಪ್ರಕರಣ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, ಕೋಚಿಂಗ್ (Coaching) ಸೆಂಟರ್‌ನೊಬ್ಬ ಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಾಣಿಸಿಕೊಂಡಿದೆ.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಈ ಘಟನೆ ಜೈನಗರದ ಭೇಲ್ವಾ ಚೌಕ್ ಸಮೀಪದ ಕೋಚಿಂಗ್ (Coaching) ಸಂಸ್ಥೆಯಲ್ಲಿ ನಡೆದಿದ್ದು, ಆರೋಪಿಯ ಹೆಸರನ್ನು ರಾಕೇಶ್ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಇದೇ ವ್ಯಕ್ತಿಯ ಮೇಲೆ ಇದೇ ರೀತಿಯ ಆರೋಪ ಮೊದಲು ಕೂಡ ಕೇಳಿಬಂದಿದೆ.

ಸ್ಥಳೀಯರು ಆರೋಪಿಯನ್ನು ತಕ್ಷಣ ಬಂಧಿಸುವಂತೆ ಹಾಗೂ ಸಂಬಂಧಿಸಿದ ತರಬೇತಿ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಪೋಷಕರು ಮಕ್ಕಳಿಗೆ ಜಾಗೃತಿ ಮೂಡಿಸಿ, ಅವರ ಸುರಕ್ಷತೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡುತ್ತಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಪೊಲೀಸರು ಪ್ರಕರಣದ ಕುರಿತು ತನಿಖೆ ಪ್ರಾರಂಭಿಸಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪ್ರಸ್ತುತ ಆರೋಪಿಯು ಪರಾರಿಯಾಗಿರುವ ಮಾಹಿತಿ ಲಭ್ಯವಾಗಿದ್ದು, ಸಂಬಂಧಿತ ಕೋಚಿಂಗ್ (Coaching) ಸೆಂಟರ್ ತನ್ನ ಸ್ಥಳವನ್ನು ಬದಲಾಯಿಸಿರುವುದಾಗಿ ತಿಳಿದುಬಂದಿದೆ.

ಕೋಚಿಂಗ್ (Coaching) ಸೆಂಟರ್‌ನಲ್ಲಿ ನಡೆದ ಅಸಭ್ಯ ವರ್ತನೆಯ ವಿಡಿಯೋ :


ಬೆಳಿಗ್ಗೆ 1 ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪ್ರಯೋಜನಗಳು.!

ABC Juice

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.

ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.

ರೋಗನಿರೋಧಕ ಶಕ್ತಿ :

ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!
ಜೀರ್ಣಕ್ರಿಯೆ ಸುಧಾರಣೆ :

ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಲಾಭಕಾರಿ :

ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ದೇಹದ ನಿರ್ವಿಷೀಕರಣ :

ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.

ತೂಕ ನಿಯಂತ್ರಣ :

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.

ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೆಳಗಾವಿ : 30 beauty-parlour ಗಳ ಮೇಲೆ ಆರೋಗ್ಯ ಇಲಾಖೆಯ ದಾಳಿ ; 10 ಸೀಜ್, 20ಕ್ಕೆ ನೋಟಿಸ್.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ನಗರದಲ್ಲಿ ನಿಯಮ ಉಲ್ಲಂಘನೆ ನಡೆಸುತ್ತಿದ್ದ ಬ್ಯೂಟಿ ಪಾರ್ಲರ್‌ (beauty-parlour) ಗಳ ವಿರುದ್ಧ ಆರೋಗ್ಯ ಇಲಾಖೆ ಬೃಹತ್ ದಾಳಿ ನಡೆಸಿದ್ದು, ಶುಕ್ರವಾರ (ಆ.15) ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ನಿರ್ದೇಶನದಂತೆ, ಡಿಎಚ್‌ಒ ಡಾ. ಈಶ್ವರ ಗಡಾದಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ 30 ಬ್ಯೂಟಿ ಪಾರ್ಲರ್‌ಗಳನ್ನು ಪರಿಶೀಲಿಸಲಾಯಿತು.

ದಾಳಿಯ ವೇಳೆ ಕೆಲವು ಪಾರ್ಲರ್‌ (beauty-parlour) ಗಳಲ್ಲಿ ಮೇಕಪ್, ಟ್ರೆಡಿಂಗ್, ವ್ಯಾಕ್ಸಿಂಗ್ ಸೇವೆಗಳ ಬದಲು ಕೂದಲು ಕಸಿ, ಚರ್ಮರೋಗ ಚಿಕಿತ್ಸೆ, ಮತ್ತು ಚರ್ಮದ ಕಾಂತಿ ಹೆಚ್ಚಿಸಲು ಹಾನಿಕಾರಕ ಕೆಮಿಕಲ್ ಹಾಗೂ ಸಿರೈಡ್‌ಗಳಂತಹ ಔಷಧಿಗಳನ್ನು ಬಳಸುತ್ತಿರುವುದು ಪತ್ತೆಯಾಯಿತು.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

ಪರಿಶೀಲನೆಯ ನಂತರ, 10 ಪಾರ್ಲರ್‌ (beauty-parlour) ಗಳನ್ನು ತಕ್ಷಣ ಸೀಜ್ ಮಾಡಲಾಗಿದ್ದು, 20 ಪಾರ್ಲರ್‌ಗಳಿಗೆ ನೋಟಿಸ್‌ ನೀಡಲಾಗಿದೆ. ಅಧಿಕಾರಿಗಳ ಪ್ರಕಾರ, ಕೂದಲು ಕಸಿ ಹಾಗೂ ಚರ್ಮ ಚಿಕಿತ್ಸೆಯನ್ನು ಮಾತ್ರ ನುರಿತ ತಜ್ಞ ವೈದ್ಯರು ನಡೆಸಬೇಕು ಎಂಬ ನಿಯಮಗಳಿದ್ದರೂ, ಅನರ್ಹ ಸಿಬ್ಬಂದಿ ಈ ಸೇವೆಗಳನ್ನು ನೀಡುತ್ತಿರುವುದು ಗಂಭೀರ ಆರೋಗ್ಯ ಅಪಾಯವನ್ನು ಉಂಟುಮಾಡುತ್ತಿದೆ.

ಸಾರ್ವಜನಿಕರು ಕೂಡ, “ಅಮಾಯಕ ಮಹಿಳೆಯರು ಮತ್ತು ಯುವತಿಯರ ಮೇಲೆ ಪಾರ್ಲರ್ ಸಿಬ್ಬಂದಿ ಮೋಸ ಮಾಡುತ್ತಿದ್ದಾರೆ. ಹಾನಿಕಾರಕ ಕೆಮಿಕಲ್‌ಗಳಿಂದ ಬ್ಲೀಚಿಂಗ್ ಮತ್ತು ಫೇಸ್‌ವಾಶ್ ಮಾಡುವುದರಿಂದ ಚರ್ಮರೋಗ ತಗುಲುವ ಸಾಧ್ಯತೆ ಹೆಚ್ಚು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಜಿಲ್ಲಾಧಿಕಾರಿ ಅವರ ನಿರ್ಧಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅವರು, “ನಿಯಮ ಉಲ್ಲಂಘಿಸಿದ ಪಾರ್ಲರ್ (beauty-parlour) ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ಸಾರ್ವಜನಿಕರೂ ಪಾರ್ಲರ್ ಆಯ್ಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು. ಇಲ್ಲವಾದರೆ ಹಣ ಕಳೆದುಕೊಳ್ಳುವುದರ ಜೊತೆಗೆ, ಚರ್ಮದ ಆರೋಗ್ಯಕ್ಕೂ ಹಾನಿಯಾಗುವ ಸಾಧ್ಯತೆ ಇದೆ” ಎಂದು ಅಧಿಕಾರಿಗಳ ಎಚ್ಚರಿಕೆ ನೀಡಿದ್ದಾರೆ.


ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ Man : ತಪ್ಪಿಸಿಕೊಳ್ಳಲು ಹರಸಾಹಸ ; ವಿಡಿಯೋ ವೈರಲ್.!

Man

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ವ್ಯಕ್ತಿ (A Man) ಯೋರ್ವ ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದಿದ್ದು, ಅಲ್ಲಿಂದ ತಪ್ಪಿಸಕೊಳ್ಳಲು ಹರ ಸಾಹಸ ಪಡುತ್ತಿರುವ ವಿಡಿಯೋ ಒಂದು ಸದ್ಯ ಸಾಮಾಜಿಕ ಜಾಲತಣದಲ್ಲಿ ವೈರಲ್‌ ಆಗುತ್ತಿದೆ.

ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ಹಾಸ್ಯಾಸ್ಪದ ಘಟನೆಗೆ ಸಂಬಂಧಿಸಿದ ವಿಡಿಯೋ ವೇಗವಾಗಿ ಹರಿದಾಡುತ್ತಿದೆ. ಇದರಲ್ಲಿ ವ್ಯಕ್ತಿ (A Man) ಯೊಬ್ಬನು ಅರೆನಗ್ನ ಸ್ಥಿತಿಯಲ್ಲಿ ಕಟ್ಟಡದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ದೃಶ್ಯಗಳು ದಾಖಲಾಗಿವೆ.

Yallamma : ಸವದತ್ತಿ ಯಲ್ಲಮ್ಮದೇವಿ ಗುಡಿಗೆ ನುಗ್ಗಿದ್ದ ಮಳೆನೀರು ; ಹುಂಡಿಯಲ್ಲಿದ್ದ ತೊಯ್ದ ನೋಟುಗಳನ್ನು ಒಣ ಹಾಕಿದ ಸಿಬ್ಬಂದಿ.!

ಮಾಹಿತಿಯ ಪ್ರಕಾರ, ಆ ವ್ಯಕ್ತಿ (A Man) ತನ್ನ ಪರಿಚಿತ ಮಹಿಳೆಯನ್ನು ಭೇಟಿ ಮಾಡಲು ಆಕೆಯ ಮನೆಯಲ್ಲಿ ಹೋದಾಗ, ಆಕೆಯ ಗಂಡ ಅಕಸ್ಮಾತ್ ಮನೆಗೆ ಬಂದಿದ್ದಾನೆ. ಗಂಡನನ್ನು ಕಂಡ ವ್ಯಕ್ತಿ ತಡಬಡಾಯಿಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟುಕೊಂಡಿದ್ದಾನೆ. ಈ ಸಂದರ್ಭದಲ್ಲಿ, ಮಹಿಳೆಯ ಗಂಡನು ಆತನ ಬೆನ್ನಟ್ಟುತ್ತಿರುವುದೂ ವಿಡಿಯೋದಲ್ಲಿ ಸ್ಪಷ್ಟವಾಗಿದೆ.

ಕಟ್ಟಡದ ಹೊರಗೆ ಜಮಾಯಿಸಿದ ಕೆಲವರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ಆ ದೃಶ್ಯಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಘಟನೆ ಕೆಲಕಾಲ ಸ್ಥಳೀಯರಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

Astrology : ಹೇಗಿದೆ ಗೊತ್ತಾ.? ಅಗಷ್ಟ 12 ರ ದ್ವಾದಶ ರಾಶಿಗಳ ಫಲಾಫಲ.!

ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಕುರಿತು ಹಲವರು ಪ್ರತಿಕ್ರಿಯಿಸಿದ್ದು, “ಯಾವುದೇ ಕೆಲಸವನ್ನು ಮುಚ್ಚುಮರೆ ಮಾಡಿ ಮಾಡಿದರೆ, ಒಂದು ದಿನ ಸತ್ಯ ಹೊರಬರುತ್ತದೆ” ಎಂಬುದಾಗಿ ಟೀಕೆ ಮಾಡಿದ್ದಾರೆ.

ಪ್ರೇಯಸಿಯ ಮನೆಯಲ್ಲಿ ಅರೆನಗ್ನನಾಗಿ ಸಿಕ್ಕಿಬಿದ್ದ ವ್ಯಕ್ತಿ (Man) ಯ ವಿಡಿಯೋ :

https://twitter.com/i/status/1955096768506425535

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಸ್ವಾತಂತ್ರ್ಯೋತ್ಸವ ದಿನವೇ PSI ಪತ್ನಿ ಆತ್ಮಹತ್ಯೆ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬಳ್ಳಾರಿ ಜಿಲ್ಲೆಯ ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ (PSI) ಕಾಳಿಂಗ ಅವರ ಪತ್ನಿ ಚೈತ್ರಾ (36) ಅವರು ಸ್ವಾತಂತ್ರ್ಯ ದಿನದ ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದುಕೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಚೈತ್ರಾ ಅವರ ಪತಿ (PSI) ಹಾಗೂ ಮಕ್ಕಳನ್ನು ಧ್ವಜಾರೋಹಣ ಕಾರ್ಯಕ್ರಮಕ್ಕೆ ಕಳುಹಿಸಿದ ಬಳಿಕ ಈ ದುರ್ಘಟನೆ ನಡೆದಿದೆ. ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲದಿದ್ದರೂ, ಅವರು ಇತ್ತೀಚೆಗೆ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಮಾಹಿತಿ ಕುಟುಂಬ ಮೂಲಗಳಿಂದ ಲಭ್ಯವಾಗಿದೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

ಎರಡು ದಿನಗಳ ಹಿಂದೆ ತವರು ಮನೆಗೆ ಹೋಗಿದ್ದ PSI ಪತ್ನಿ ಚೈತ್ರಾ, ಮನೆಗೆ ಮರಳಿದ ನಂತರವೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಂತ್ರ್ಯೋತ್ಸವದ ದಿನವೇ ಸಂಭವಿಸಿದ ಈ ಘಟನೆಯಿಂದ ಕುಟುಂಬಸ್ಥರು, PSI ಬಂಧು-ಬಳಗ ತೀವ್ರ ದುಃಖಕ್ಕೆ ಒಳಗಾಗಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Courtesy : Suvarna News


IBPS : ದೇಶದಾದ್ಯಂತ 10,377 ಹುದ್ದೆಗಳ ಭರ್ತಿ ; ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನ.!

IBPS

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ದೇಶದಾದ್ಯಂತ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 10,377 ಹುದ್ದೆಗಳಿಗಾಗಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಕರ್ನಾಟಕಕ್ಕೆ ಮಾತ್ರ 1,170 ಹುದ್ದೆಗಳು ಲಭ್ಯವಿವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ IBPS ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

Astrology : ಹೇಗಿದೆ ಗೊತ್ತಾ.? ಅಗಷ್ಟ 13 ರ ದ್ವಾದಶ ರಾಶಿಗಳ ಫಲಾಫಲ.!
ವೇತನ ಶ್ರೇಣಿ :
  • ಮೂಲ ವೇತನ ರೂ. 24,050/- ರಿಂದ ರೂ. 64,480/- ವರೆಗೆ ಇರುತ್ತದೆ.
  • ಇದರ ಜೊತೆಗೆ ಮನೆ ಬಾಡಿಗೆ ಭತ್ಯೆ, ತುಟ್ಟಿಭತ್ಯೆ ಹಾಗೂ ಇತರೆ ಸೌಲಭ್ಯಗಳೂ ಲಭ್ಯ.
ವಯೋಮಿತಿ :
  • 01 ಆಗಸ್ಟ್ 2025ಕ್ಕೆ ಕನಿಷ್ಠ 20 ವರ್ಷ ಹಾಗೂ
  • ಗರಿಷ್ಠ 28 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ ಸಡಿಲಿಕೆ :
  • ಪಜಾ ಮತ್ತು ಪಪಂ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
  • ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಸಡಿಲಿಕೆ ಇದೆ.
 IBPS ಶೈಕ್ಷಣಿಕ ಅರ್ಹತೆ :
  • ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!
ಅರ್ಜಿ ಶುಲ್ಕ :
  • GM, OBC ಮತ್ತು EWS ಅಭ್ಯರ್ಥಿಗಳಿಗೆ : ರೂ.850/-
  • SC, ST, PwD ಮತ್ತು ಮಾಜಿ ಸೈನಿಕರಿಗೆ : ರೂ.150/-
ಆಯ್ಕೆ ಪ್ರಕ್ರಿಯೆ :

IBPS ನೇಮಕಾತಿ ಮೂರು ಹಂತಗಳಲ್ಲಿ ನಡೆಯಲಿದೆ.

  • ಪ್ರಾಥಮಿಕ ಆನ್‌ಲೈನ್ ಪರೀಕ್ಷೆ.
  • ವಸ್ತುನಿಷ್ಠ ಪರೀಕ್ಷೆ ಮತ್ತು
  • ವಿವರಣಾತ್ಮಕ ಪರೀಕ್ಷೆ.
ಅರ್ಜಿ ಸಲ್ಲಿಸುವ ವಿಧಾನ :
  • ಅಭ್ಯರ್ಥಿಗಳು ಮೊದಲು ತಮ್ಮ ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿಯನ್ನು ಸಕ್ರಿಯವಾಗಿಟ್ಟುಕೊಳ್ಳಬೇಕು.
  • ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಿದ್ದಪಡಿಸಿ.
  • ನಂತರ www.ibps.in ಗೆ ಭೇಟಿ ನೀಡಿ, ‘Apply Online’ ಲಿಂಕ್ ಮೂಲಕ ನೋಂದಣಿ ಮಾಡಿ, ಅರ್ಜಿ ಭರ್ತಿ ಮಾಡಿ,
  • ದಾಖಲೆಗಳನ್ನು ಅಪ್‌ಲೋಡ್ ಮಾಡಿ ಹಾಗೂ
  • ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬೇಕು.
  • ಅರ್ಜಿ ಸಲ್ಲಿಸಿದ ನಂತರ ಅದರ ಪ್ರತಿಯನ್ನು ಮುದ್ರಿಸಿಟ್ಟುಕೊಳ್ಳುವುದು ಅಗತ್ಯ.
Astrology : ಹೇಗಿದೆ ಗೊತ್ತಾ.? ಅಗಷ್ಟ 14 ರ ದ್ವಾದಶ ರಾಶಿಗಳ ಫಲಾಫಲ.!
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ : 01 ಆಗಸ್ಟ್ 2025.
  • ಅರ್ಜಿ ಸಲ್ಲಿಕೆ ಕೊನೆ : 21 ಆಗಸ್ಟ್ 2025.
  • ಪ್ರಾಥಮಿಕ ಪರೀಕ್ಷೆ : ಅಕ್ಟೋಬರ್ 2025.
  • ಮುಖ್ಯ ಪರೀಕ್ಷೆ : ಅಕ್ಟೋಬರ್/ನವೆಂಬರ್ 2025.
ಪ್ರಮುಖ ಲಿಂಕ್‌ :
  • ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ www.ibps.in ಗೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.

ಬೆಂಗಳೂರು : ನಿಗೂಢ blast ; 8 ವರ್ಷದ ಬಾಲಕನ ಸಾವು, ಹಲವರಿಗೆ ಗಾಯ.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ಬೆಂಗಳೂರು ನಗರದ ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಅನುಮಾನಾಸ್ಪದ ವಸ್ತುವಿನಿಂದ ಸಂಭವಿಸಿದ ಭಾರೀ ಸ್ಫೋಟ (blast) ದಲ್ಲಿ 8 ವರ್ಷದ ಬಾಲಕ ಮುಬಾರಕ್ ಎಂಬ ಬಾಲಕ ದುರ್ಮರಣಕ್ಕೀಡಾಗಿದ್ದಾನೆ.

ಈ ದುರ್ಘಟನೆಯಲ್ಲಿ 6 ಮಂದಿಗೆ ಗಂಭೀರ ಗಾಯಗಳಾಗಿದ್ದು, ಇನ್ನೂ ಹಲವು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”
ಸ್ಪೋಟ (blast) :

ಸ್ಪೋಟ (blast) ದಲ್ಲಿ ಗಾಯಗೊಂಡವರು ಕಸ್ತೂರಮ್ಮ (35), ಸರಸಮ್ಮ (50), ಶಬೀರನಾ ಬಾನು (35), ಸುಬ್ರಮಣಿ (62), ಶೇಖ್ ನಜೀದ್ ಉಲ್ಲಾ (37) ಹಾಗೂ 8 ವರ್ಷದ ಫಾತಿಮಾ ಸೇರಿದ್ದಾರೆ. ಗಾಯಗೊಂಡವರನ್ನು ತಕ್ಷಣ ಸಂಜಯ್ ಗಾಂಧಿ ಆಸ್ಪತ್ರೆ ಹಾಗೂ ಜಯನಗರ ಆಸ್ಪತ್ರೆಗೆ ಸಾಗಿಸಲಾಗಿದೆ.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಸ್ಪೋಟ (blast) ದ ಘಟನೆ ಕಸ್ತೂರಿಯ ಮನೆಯಲ್ಲೇ ಸಂಭವಿಸಿದ್ದು, ಸ್ಫೋಟದ ತೀವ್ರತೆಯಿಂದ ಮೊದಲ ಮಹಡಿಯ ಗೋಡೆ ಹಾಗೂ ಛಾವಣಿ ಕುಸಿದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

Medicine : ಮಾತ್ರೆ ತೆಗೆದುಕೊಂಡ ನಂತರ ಖಂಡಿತ ಈ ತಪ್ಪುಗಳನ್ನು ಮಾಡಬೇಡಿ ; ಮಾಡಿದರೆ ಜೀವಕ್ಕೆ ಅಪಾಯ.!

ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಸಿಲಿಂಡರ್ ಸ್ಪೋಟ (blast) ದ ಸಾಧ್ಯತೆಯನ್ನು ಸೂಚಿಸಿದ್ದರೂ, ಸ್ಥಳೀಯರು ಸಿಲಿಂಡರ್ ಬ್ಲಾಸ್ಟ್ (blast) ಆಗಿರುವ ಸಾಧ್ಯತೆ ಕಡಿಮೆ ಎಂದು ಹೇಳುತ್ತಿದ್ದಾರೆ. ಸ್ಫೋಟದ ಶಕ್ತಿಯಿಂದ ಹಲವರ ಕೈ, ತಲೆಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಲಭ್ಯವಾಗಿದೆ.

ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದ್ದು, ಪೊಲೀಸರು ಸ್ಫೋಟದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.

Courtesy : TV9


Sandeepa-Virk : ಮನಿ ಲಾಂಡರಿಂಗ್ ಆರೋಪ : ಬ್ಯೂಟಿ ಇನ್‌ಫ್ಲುಯೆನ್ಸರ್ ಸಂದೀಪಾ ವಿರ್ಕ್ ಅರೆಸ್ಟ್.!

sandeepa-virk

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸೋಶಿಯಲ್ ಮೀಡಿಯಾದಲ್ಲಿ ಬ್ಯೂಟಿ ಇನ್‌ಫ್ಲುಯೆನ್ಸರ್ ಆಗಿ ಜನಪ್ರಿಯತೆ ಪಡೆದಿದ್ದ ಹಾಗೂ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಎನ್ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ಬಂಧಿಸಿದೆ.

ತಮ್ಮ ಆಕರ್ಷಕ ಫೋಟೋಗಳು ಹಾಗೂ ಬ್ಯೂಟಿ ಸಲಹೆಗಳಿಂದ ಅಪಾರ ಫಾಲೋವರ್ಸ್ ಗಳಿಸಿದ್ದ ಸಂದೀಪಾ (Sandeepa), ಆನ್‌ಲೈನ್ ಮೂಲಕ ಬ್ಯೂಟಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದರು.

Student : ಕೇವಲ 2 ಅಂಕ ಕಡಿಮೆ ನೀಡಿದಕ್ಕೆ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ ; ಸಿಸಿಟಿವಿ ದೃಶ್ಯ ವೈರಲ್!”

ಸಂದೀಪಾ ವಿರ್ಕ್ (Sandeepa-Virk) :

ತನಿಖೆಯ ಪ್ರಾಥಮಿಕ ವರದಿಗಳ ಪ್ರಕಾರ, ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ, ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಶನ್ (FDA) ಅನುಮೋದಿತ ಉತ್ಪನ್ನ ಎಂದು ಹೇಳಿ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ, ಅಕ್ರಮ ಹಣ ವರ್ಗಾವಣೆ ಹಾಗೂ ವಂಚನೆ ಮೂಲಕ ಆಸ್ತಿ ಹೊಂದಿರುವುದಾಗಿ ಆರೋಪಿಸಲಾಗಿದೆ.

ಮನಿ ಲಾಂಡರಿಂಗ್ ಅನುಮಾನ ವ್ಯಕ್ತವಾದ ಬಳಿಕ, ಇಡಿ ಅಧಿಕಾರಿಗಳು ಸಂದೀಪಾ (Sandeepa) ವಿರ್ಕ್ ಅವರ ವೆಬ್‌ಸೈಟ್, ಹಣಕಾಸು ವ್ಯವಹಾರಗಳು ಹಾಗೂ ಉತ್ಪನ್ನ ಮಾರಾಟದ ದಾಖಲಾತಿಗಳ ಕುರಿತು ತನಿಖೆ ನಡೆಸಿದರು. ಸಂಗ್ರಹಿಸಿದ ಸಾಕ್ಷಿಗಳ ಆಧಾರದಲ್ಲಿ Sandeepa-Virk ಅವರನ್ನು ಬಂಧನ ಮಾಡಲಾಗಿದ್ದು, ಪ್ರಸ್ತುತ ಇಡಿ ಕಸ್ಟಡಿಯಲ್ಲಿ ವಿಚಾರಣೆ ನಡೆಯುತ್ತಿದೆ.

Wild boarಗಳ ಹಿಂಡಿಗೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ ಸವಾರ್ತಿಗೆ ಗಂಭೀರ ಗಾಯ : ದೃಶ್ಯ ಸಿಸಿಟಿವಿಯಲ್ಲಿ ಸೆರೆ.!

ಇದೇ ವೇಳೆ, ತನಿಖೆಯಲ್ಲಿ ಮತ್ತೊಂದು ಮಹತ್ವದ ಮಾಹಿತಿ ಹೊರಬಂದಿದೆ — ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್‌ನ ಮಾಜಿ ನಿರ್ದೇಶಕ ಅಂಗಾರೈ ನಟರಾಜನ್ ಸೇತುರಾಮನ್ ಜೊತೆ ಸಂಪರ್ಕವಿರುವುದು ಪತ್ತೆಯಾಗಿದೆ. ಆದರೆ, ಸೇತುರಾಮನ್ ಅವರು ತಮ್ಮ ಮೇಲೆ ಇರುವ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಅಕ್ರಮ ಹಣ ವರ್ಗಾವಣೆ ಹಾಗೂ ಉತ್ಪನ್ನ ಮಾರಾಟದಲ್ಲಿ ವಂಚನೆ ಪ್ರಕರಣದಲ್ಲಿ, ನಾಳೆ ಸಂದೀಪಾ ವಿರ್ಕ್ (Sandeepa-Virk) ಅವರನ್ನು ಮತ್ತೆ ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Courtesy : Suvarna New