ಬುಧವಾರ, ಫೆಬ್ರವರಿ 4, 2026

Janaspandhan News

Home Blog Page 56

ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೈವೇಯಲ್ಲಿ ಬಿದ್ದ Plane ; ರಸ್ತೆಯಲ್ಲಿದ್ದ 2 ಕಾರುಗಳಿಗೆ ಬೆಂಕಿ, ಇಬ್ಬರ ದುರ್ಮರಣ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಹೈವೇಯಲ್ಲಿ ಲಘು ವಿಮಾನ (Plane) ಯೊಂದು ಬಿದ್ದ ಪರಿಣಾಮವಾಗಿ ರಸ್ತೆಯಲ್ಲಿದ್ದ ಸಂಚರಿಸುತ್ತಿದ್ದ 2 ಕಾರುಗಳು ಬೆಂಕಿಗೆ ಆಹುತಿಯಾಗಿದ್ದಲ್ಲದೇ ಇಬ್ಬರ ದುರ್ಮರಣ ಸಂಭವಿದ ಘಟನೆಯೊಂದು ನಡೆದಿದೆ.

ಹೌದು, ಮಧ್ಯ ಇಟಲಿಯಲ್ಲಿ ಜನನಿಬಿಡ ಹೈವೇ ಮೇಲೆಯೇ ಸಂಭವಿಸಿದ ಲಘು ವಿಮಾನ (Plane) ದುರಂತವು ಮತ್ತೊಮ್ಮೆ ವಿಮಾನಯಾನ ಸುರಕ್ಷತೆ ಕುರಿತು ಆತಂಕವನ್ನು ಮೂಡಿಸಿದೆ. ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನ (Plane) ವು ನಿಯಂತ್ರಣ ತಪ್ಪಿ ನೇರವಾಗಿ ರಸ್ತೆಯತ್ತ ಸಾಗಿ ಬಂದು ಪತನಗೊಂಡಿದೆ.

ವಿಮಾನ ಅಪಘಾತದ ವೇಳೆ ಬ್ರೆಸಿಯಾ ಬಳಿಯ A21 ಕಾರ್ಡಮೊಲ್ಲೆ-ಆಸ್ಪಿಟೇಲ್ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಕಾರುಗಳು ಈ ದುರಂತದಲ್ಲಿ ಸುಟ್ಟು ಕರಗಲಾಗಿದ್ದು, ಸ್ಥಳದಲ್ಲಿ ಭಾರೀ ಬಿಕ್ಕಟ್ಟು ಉಂಟಾಯಿತು. ಸದ್ಯ ಅದರ ವಿಮಾನ (Plane) ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಬೆಂಕಿ ನಂದಿಸಲು ಶ್ರಮಿಸಿದರು. ಈ ದುರಂತದಲ್ಲಿ ಗಾಯಗೊಂಡಿದ್ದ ಕಾರು ಚಾಲಕರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಾರುಗಳಲ್ಲಿ ಇದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಅಪಘಾತದ ಪರಿಣಾಮ ವಿಮಾನ (Plane) ದಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು 75 ವರ್ಷದ ವಕೀಲ ಸೆರ್ಗಿಯೊ ರಾವಗ್ಲಿಯಾ ಮತ್ತು ಅವರ 55 ವರ್ಷದ ಪತ್ನಿ ಅನ್ನಾ ಮಾರಿಯಾ ಡಿ ಸ್ಟೆಫಾನೊ ಎನ್ನಲಾಗಿದೆ. ವಿಮಾನವು ನಿಯಂತ್ರಣ ತಪ್ಪಿ ಜನನಿಬಿಡ ಹೆದ್ದಾರಿಗೆ ಡಿಕ್ಕಿ ಹೊಡೆಯುವ ಮೊದಲು ಕೆಲವೇ ಕ್ಷಣಗಳ ಮೊದಲು ಟೇಕ್ ಆಫ್ ಆಗಿತ್ತು ಎಂದು ವರದಿಯಾಗಿದೆ.

ಅಪಘಾತಕ್ಕೀಡಾದ ವಿಮಾನ (Plane) ದ ವಿಡಿಯೋ :

https://twitter.com/i/status/1948012354052243829

ಸಾರ್ವಜನಿಕರ ಆತಂಕ :

ಈ ಮಾದರಿಯ ಘಟನೆಗಳು ಪುನಃಪುನಃ ನಡೆಯುತ್ತಿರುವುದರಿಂದ, ಖಾಸಗಿ ವಿಮಾನ (Plane) ಸಂಸ್ಥೆಗಳ ತಾಂತ್ರಿಕ ಪರಿಶೀಲನೆ ಕುರಿತು ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. “ವಿಮಾನ (Plane)ಗಳ ಶ್ರೇಣಿತ ಪರಿಶೀಲನೆ ಮತ್ತು ಸುರಕ್ಷಾ ಪ್ರಮಾಣೀಕರಣವನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದರೆ ಇಂಥ ದುರ್ಘಟನೆಗಳು ಮುಂದೆಯೂ ಸಂಭವಿಸಬಹುದೆಂಬ ಭೀತಿಯಿದೆ” ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


Astrology : ಹೇಗಿದೆ ಗೊತ್ತಾ.? ಜುಲೈ 24 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜುಲೈ 23, ಗುರುವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :

results of the twelve zodiac signs

*ಮೇಷ ರಾಶಿ*

ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಕೈಗೊಂಡ ವ್ಯವಹಾರಗಳಲ್ಲಿ ತೊಂದರೆಗಳು ಉಂಟಾಗುತ್ತದೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ದೂರ ಪ್ರಯಾಣದ ಸೂಚನೆಗಳಿವೆ. ಮನೆಯ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಖರ್ಚು ಹೆಚ್ಚಾಗಲಿದೆ. ವೃತ್ತಿಪರ ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ.

*ವೃಷಭ ರಾಶಿ*

ಹಣಕಾಸಿನ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ. ಮಿತ್ರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಪ್ರಯಾಣ ಮಾಡುವಾಗ ಜಾಗರೂಕರಾಗಿರಿ. ಪ್ರಮುಖ ಕೆಲಸಗಳಲ್ಲಿ ನೀವು ಹೆಚ್ಚು ಶ್ರಮ ಪಟ್ಟರೂ ಕೆಲಸಗಳು ಮುಂದಕ್ಕೆ ಸಾಗುವುದಿಲ್ಲ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗರುತ್ತವೆ. ಉದ್ಯೋಗಗಳಲ್ಲಿ ನಿಮ್ಮ ಮೌಲ್ಯವು ಹೆಚ್ಚಾಗುತ್ತದೆ.

*ಮಿಥುನ ರಾಶಿ*

ಆತ್ಮೀಯರಿಂದ ಶುಭಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಆಕಸ್ಮಿಕ ಧನ ಲಾಭ ಪಡೆಯುತ್ತೀರಿ.ಮನೆಯ ಹೊರಗೆ ನಿಮ್ಮ ಉತ್ತಮ ಮಾತಿನಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ. ಕೆಲಸಗಳು ಹೊಸ ಉತ್ಸಾಹದಿಂದ ಪೂರ್ಣಗೊಳ್ಳುತ್ತವೆ. ವ್ಯಾಪಾರ ಉದ್ಯೋಗಗಳಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯುತ್ತದೆ.

*ಕಟಕ ರಾಶಿ*

ಪ್ರಮುಕ ವ್ಯಕ್ತಿಗಳೊಂದಿಗಿನ ಸಂಪರ್ಕಗಳು ವಿಸ್ತಾರಗೊಳ್ಳುತ್ತವೆ. ಹೊಸ ವಾಹನ ಯೋಗವಿದೆ. ಕೆಲವು ವ್ಯವಹಾರಗಳಲ್ಲಿ ನಿರ್ಧಾರಗಳು ಇದ್ದಕ್ಕಿದ್ದಂತೆ ಬದಲಾಗುತ್ತವೆ. ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ.ಹೊಸ ಕಾರ್ಯಕ್ರಮಗಳನ್ನು ಆರಂಭಿಸುತ್ತೀರಿ.ಆರ್ಥಿಕವಾಗಿ ಅನುಕೂಲಕರ ವಾತಾವರಣವಿರುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ನಿಮ್ಮ ಭವಿಷ್ಯವಾಣಿಗಳು ನಿಜವಾಗುತ್ತವೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
*ಸಿಂಹ ರಾಶಿ*

ಖರ್ಚುವೆಚ್ಚಗಳ ವಿಷಯದಲ್ಲಿ ಮರುಪರಿಶೀಲನೆ ಮಾಡುವುದು ಒಳ್ಳೆಯದು. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಮನೆಯ ವಾತಾವರಣ ಸಮಸ್ಯಾತ್ಮಕವಾಗಿರುತ್ತದೆ . ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಮನೆಯ ಹೊರಗಿನ ಪರಿಸ್ಥಿತಿಗಳು ಅನುಕೂಲಕರವಾಗಿರುವುದಿಲ್ಲ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಕಿರಿಕಿರಿಗಳು ಹೆಚ್ಚಾಗುತ್ತವೆ.

*ಕನ್ಯಾ ರಾಶಿ*

ಆರ್ಥಿಕ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ವೃತ್ತಿಪರ ವ್ಯವಹಾರದಲ್ಲಿ ಕಠಿಣ ಪರಿಶ್ರಮವು ಫಲ ನೀಡುವುದಿಲ್ಲ. ಮನೆಯಲ್ಲಿ ಕೆಲವು ಜನರ ವರ್ತನೆಯು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಬಂಧುಮಿತ್ರರೊಡನೆ ವಿವಾದ ಉಂಟಾಗುತ್ತದೆ. ದೂರ ಪ್ರಯಾಣಗಳು ಮುಂದೂಡಲ್ಪಡುತ್ತವೆ. ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

*ತುಲಾ ರಾಶಿ*

ಹಣಕಾಸಿನ ತೊಂದರೆಗಳು ನಿವಾರಣೆಯಾಗುತ್ತವೆ. ಒಂದು ವ್ಯವಹಾರದಲ್ಲಿ ಎಲ್ಲರನ್ನೂ ಒಂದು ಮಾತಿನಲ್ಲಿ ನಿಲ್ಲುವಂತೆ ಮಾಡುತ್ತೀರಿ. ಹೊಸ ವಾಹನ ಖರೀದಿ ಯೋಗವಿದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರಗಳು ಸ್ವಲ್ಪಮಟ್ಟಿಗೆ ಸಾಮಾನ್ಯವಾಗಿ ಸಾಗುತ್ತವೆ, ಉದ್ಯೋಗಗಳು ಅನುಕೂಲಕರ ವಾತಾವರಣವನ್ನು ಹೊಂದಿರುತ್ತವೆ.

*ವೃಶ್ಚಿಕ ರಾಶಿ*

ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಗೊಂದಲ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಇವರ ಪರವಾಗಿ ಕಷ್ಟಗಳು ಅನಿವಾರ್ಯ. ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುವುದು ಉತ್ತಮ. ವ್ಯಾಪಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಕೆಲಸದ ಒತ್ತಡ ಅಧಿಕವಾಗಿರುತ್ತದೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
*ಧನುಸ್ಸು ರಾಶಿ*

ನಿರುದ್ಯೋಗಿಗಳ ಶ್ರಮಕ್ಕೆ ಫಲವಾಗಿ ಹೊಸ ಅವಕಾಶಗಳು ದೊರೆಯುತ್ತವೆ .ಸ್ಥಿರಾಸ್ತಿ ಮಾರಾಟ ಲಾಭದಾಯಕವಾಗಿರುತ್ತದೆ.ಹೊಸ ಸ್ನೇಹಿತರು ಪರಿಚಯಗಳು ಹೆಚ್ಚಾಗುತ್ತವೆ.ಮಕ್ಕಳಿಗೆ ಶೈಕ್ಷಣಿಕ ವಿಷಯಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ.

*ಮಕರ ರಾಶಿ*

ಹಣದ ವಿಚಾರದಲ್ಲಿ ಏರುಪೇರು ಹೆಚ್ಚಾಗಲಿದೆ. ಅನಿರೀಕ್ಷಿತ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರಿಂದ ಒತ್ತಡ ಹೆಚ್ಚಾಗುತ್ತದೆ. ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಲಾಗುತ್ತದೆ.ಪ್ರಮುಖ ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ ಮತ್ತು ವೃತ್ತಿಪರ ಉದ್ಯೋಗಗಳು ಹೆಚ್ಚುವರಿ ಕೆಲಸದ ಹೊರೆಯನ್ನು ಹೊಂದಿರುತ್ತವೆ.

*ಕುಂಭ ರಾಶಿ*

ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ ಮತ್ತು ವ್ಯವಹಾರಗಳು ನಿರೀಕ್ಷಿತ ಲಾಭವನ್ನು ಪಡೆಯುತ್ತವೆ. ಉದ್ಯಮಿಗಳಿಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸಲಾಗುತ್ತದೆ. ಅಧಿಕಾರಿಗಳ ಸಹಾಯದಿಂದ ಉದ್ಯೋಗದಲ್ಲಿ ಹೊಸ ಅವಕಾಶಗಳನ್ನು ಪಡೆಯುತ್ತೀರಿ.

*ಮೀನ ರಾಶಿ*

ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ಬಾಲ್ಯದ ಗೆಳೆಯರ ಭೇಟಿ ಸಂತೋಷವನ್ನು ತರುತ್ತದೆ. ವ್ಯಾಪಾರದಲ್ಲಿ ಪಾಲುದಾರರೊಂದಿಗೆ ವಿವಾದಗಳು ಬಗೆಹರಿಯುತ್ತವೆ. ಕೈಗೆತ್ತಿಕೊಂಡ ಕೆಲಸ ವಿಳಂಬವಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ಉದ್ಯೋಗಗಳು ಮೊದಲಿಗಿಂತ ಉತ್ತಮ ವಾತಾವರಣವನ್ನು ಹೊಂದಿರುತ್ತವೆ.

Astrology

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Papaya : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ 1 ಹಣ್ಣು ತಿನ್ನಿ ; ಲಿವರ್ ಡಿಟಾಕ್ಸ್, ಜೀರ್ಣಕ್ರಿಯೆ, ತೂಕ ನಿಯಂತ್ರಣ, ಮತ್ತು ರೋಗನಿರೋಧಕ ಶಕ್ತಿ ಪಡೆಯಿರಿ.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣು (Papaya) ತಿನ್ನುವುದರಿಂದ ಲಿವರ್ ಡಿಟಾಕ್ಸ್, ಜೀರ್ಣಕ್ರಿಯೆ, ತೂಕ ನಿಯಂತ್ರಣ, ಮತ್ತು ರೋಗನಿರೋಧಕ ಶಕ್ತಿಯನ್ನು ಪಡೆಯಬಹುದು. ಹಾಗಾದ್ರೆ ಈಗ ಆ ಹಣ್ಣಿನ ಬಗ್ಗೆ ತಿಳಿಯೋಣ ಬನ್ನಿ.!

ಆರೋಗ್ಯವಂತರಾಗಿ ಬಾಳಬೇಕೆಂದರೆ, ನಮ್ಮ ದೈನಂದಿನ ಆಹಾರದಲ್ಲಿ ಪೋಷಕಾಂಶಗಳ ಸಮತೋಲನ ಅತೀ ಅತ್ಯವಶ್ಯಕ. ವಿಶೇಷವಾಗಿ ಹಣ್ಣುಗಳನ್ನು ತಿನ್ನುವ ಮೂಲಕ ದಿನದ ಪ್ರಾರಂಭ ಉತ್ತಮ ಆಯ್ಕೆ. ಇಂತಹ ಆರೋಗ್ಯಕರ ಹಣ್ಣುಗಳಲ್ಲಿ ಪಪ್ಪಾಯಿ (Papaya) ಒಂದು ಪ್ರಮುಖ ಸ್ಥಾನ ಹೊಂದಿದೆ. ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಈ ಹಣ್ಣು, ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕೆ ಅನೇಕ ರೀತಿಯಲ್ಲಿ ಲಾಭ ನೀಡುತ್ತದೆ.

ಫ್ಯಾಟಿ ಲಿವರ್‌ಗೆ ಪಪ್ಪಾಯಿ (Papaya) ರಕ್ಷಕ :

ಪಪ್ಪಾಯಿಯಲ್ಲಿರುವ ಪಪೈನ್ ಎನ್‌ಜೈಮ್ ಮತ್ತು ಉತ್ಕೃಷ್ಟ ಆಂಟಿಆಕ್ಸಿಡೆಂಟ್‌ಗಳು ಲಿವರ್‌ನಲ್ಲಿರುವ ಅತಿರೇಕ ಕೊಳೆಯನ್ನು ಹೊರಹಾಕಲು ಸಹಾಯಕ. ಇದು ಲಿವರ್‌ಗೆ ಡಿಟಾಕ್ಸ್ (Detox) ಆಗಿ ಕೆಲಸವನ್ನು ಮಾಡುತ್ತಿದ್ದು, ಫ್ಯಾಟಿ ಲಿವರ್‌ನಂತಹ ಸಮಸ್ಯೆಗಳಿಂದ ಮುಕ್ತಗೊಳ್ಳಲು ಸಹಾಯ ಮಾಡುತ್ತದೆ.

ಜೀರ್ಣಕ್ರಿಯೆಗೆ ಪಪ್ಪಾಯಿ ಸಹಾಯಕ :

ಪಪ್ಪಾಯಿಯಲ್ಲಿರುವ ನಾರು ಮತ್ತು ಎಂಜೈಮ್‌ಗಳು ಜೀರ್ಣಕ್ರಿಯೆಯನ್ನು ಶೀಘ್ರಗೊಳಿಸುತ್ತವೆ. ವಿಶೇಷವಾಗಿ ಮಲಬದ್ಧತೆ ಅಥವಾ ಬೊಜ್ಜು ಸಂಬಂಧಿತ ಸಮಸ್ಯೆಗಳಿಂದ ಬಳಲುವವರಿಗೆ ಇದೊಂದು ಉಪಯುಕ್ತ ಪರಿಹಾರ.

ತೂಕ ನಿಯಂತ್ರಣದಲ್ಲಿ ಸಹಾಯ :

ಫೈಬರ್ ಅಂಶ ಹೆಚ್ಚು ಇರುವುದರಿಂದ, ಪಪ್ಪಾಯಿ (Papaya) ಹೆಚ್ಚು ಹೊತ್ತಿನವರೆಗೂ ತೃಪ್ತಿ ನೀಡುತ್ತದೆ. ಇದರಿಂದ ಹಸಿವಿನ ಕಡಿಮೆಯಾಗುತ್ತದೆ. ಇದನ್ನು ನಿತ್ಯ ಸೇವಿಸುವುದರಿಂದ ತೂಕ ನಿಯಂತ್ರಣ ಸಾಧ್ಯವಾಗುತ್ತದೆ.

ರೋಗನಿರೋಧಕ ಶಕ್ತಿ ಬಲಪಡಿಸಲು ಸಹಾಯ :

ಪಪ್ಪಾಯಿಯಲ್ಲಿ ವಿಟಮಿನ್ ‘ಸಿ’ ಅಧಿಕವಿದ್ದು, ಅದು ದೇಹದ ರೋಗನಿರೋಧಕ ಶಕ್ತಿಯನ್ನು ಉತ್ಕೃಷ್ಟಪಡಿಸುತ್ತದೆ. ವಿಶೇಷವಾಗಿ ಮಳೆಗಾಲದಲ್ಲಿ ಶೀತ, ಕೆಮ್ಮು ಮುಂತಾದ ಸೋಂಕುಗಳಿಂದ ದೇಹವನ್ನು ರಕ್ಷಿಸಲು ಪಪ್ಪಾಯಿ ತುಂಬಾ ಪರಿಣಾಮಕಾರಿ.

ಪಪ್ಪಾಯಿ ತಿನ್ನುವುದು ಹೇಗೆ ಉತ್ತಮ?

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಬಟ್ಟಲು ಮಾಗಿದ ಪಪ್ಪಾಯಿ (Papaya) ತಿನ್ನುವುದು ಅತ್ಯುತ್ತಮ. ಇದಕ್ಕೆ ಸ್ವಲ್ಪ ನಿಂಬೆ ರಸವನ್ನು ಸೇರಿಸಿದರೆ ಇನ್ನಷ್ಟು ಲಾಭ ಪಡೆಯಬಹುದು.

ಸಂಪಾದಕೀಯ : ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಲಿವರ್ ಡಿಟಾಕ್ಸ್, ಜೀರ್ಣಕ್ರಿಯೆ ಸುಧಾರಣೆ, ತೂಕ ನಿಯಂತ್ರಣ, ಮತ್ತು ರೋಗನಿರೋಧಕ ಶಕ್ತಿ (Liver detox, improved digestion, weight control, and immunity) ಬಲಪಡಿಸುವಂತಹ ಹಲವಾರು ಆರೋಗ್ಯ ಲಾಭಗಳನ್ನು ಪಡೆಯಬಹುದು.


Yawning : ನೀವೂ ಹಾವೂಗಳು ಆಕಳಿಸುವುದನ್ನು ನೋಡಿದಿರಾ.? ಇಲ್ವಾ, ಹಾಗಾದ್ರೆ ಈ ವಿಡಿಯೋ ನೋಡಿ.!

Snake yawning

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನೀವೂ ಹಾವೂಗಳು ಆಕಳಿಸುವು (yawning) ದನ್ನು ನೋಡಿದಿರಾ.? ಇಲ್ವಾ, ಹಾಗಾದ್ರೆ ಇಲ್ಲಿದೆ ನೋಡಿ ಹಾವೂ ಆಕಳಿಸುವ ವಿಡಿಯೋ. ಇಲ್ಲಿ ನಿಮಗೆ ಕೆಲ ಪ್ರಶ್ನೆಗಳು ಉದ್ಭವಿಸಿಬಹುದು.

ಹಾವುಗಳು ಮನುಷ್ಯರಂತೆ ಆಕಳಿಸುತ್ತವೆಯಾ? ಈ ಪ್ರಶ್ನೆಗೆ ನೇರ ಉತ್ತರ ಇಲ್ಲದಿದ್ದರೂ, ಇತ್ತೀಚೆಗೆ ವೈರಲ್ ಆದ ಒಂದು ವೀಕ್ಷಣೀಯ ದೃಶ್ಯವು ಎಲ್ಲರ ದೃಷ್ಠಿಯನ್ನು ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಿರುವ ಈ ವಿಡಿಯೋದಲ್ಲಿ, ಒಂದು ದೈತ್ಯ ಹೆಬ್ಬಾವು ಬಾಯಿಯನ್ನು ತುಂಬಾ ಅಗಲವಾಗಿ ತೆರೆದು ಆಕಳಿಸು (yawning) ತ್ತಿರುವಂತೆ ಕಾಣಿಸುತ್ತದೆ.

ಹಾಗಾದ್ರೆ ವೈರಲ್ ವಿಡಿಯೋದಲ್ಲಿ ಏನಿದೆ?

ಈ ಅಪರೂಪದ ದೃಶ್ಯವನ್ನು @lauraisabelaleon ಎಂಬ Instagram ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ವೈರಲ್‌ ಆಗಿರುವ ವಿಡಿಯೋದಲ್ಲಿ ದೈತ್ಯ ಹೆಬ್ಬಾವು ಬಾಯಿಯನ್ನು ವಿಶಾಲವಾಗಿ ತೆರೆದು ನಿಟ್ಟುಸಿರೆ ಬಿಟ್ಟಂತೆ ಕಾಣಿಸುತ್ತಿರುವುದು ವಿಡಿಯೋ ಸ್ಪಷ್ಟವಾಗಿದೆ. ಈ ದೃಶ್ಯ ಮನುಷ್ಯರ ಆಕಳಿಸುವ ಹಾವಭಾವಕ್ಕೆ ಹತ್ತಿರವಾಗಿದ್ದು, ಹಲವಾರು ಬಳಕೆದಾರರು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ವೈರಲ್‌ ವಿಡಿಯೋವನ್ನು ಈವರೆಗೆ 34 ಸಾವಿರಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದು, ಸಾವಿರಾರು ಜನರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಓರ್ವರು, “ನಾನು ಹಾವುಗಳು ಹೀಗೆ ಆಕಳಿಸುತ್ತವೆ ಎಂದು ಇದೇ ಮೊದಲು ನೋಡಿದ್ದೇನೆ” ಎಂದಿದ್ದಾರೆ. ಮತ್ತೋಬ್ಬ ಬಳಕೆದಾರರು, “ಇದು ನಿಜವೋ ಅಥವಾ AI ಕ್ರಿಯೇಷನ್ನಾ?” ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಹೀಗೆ ಹಲವಾರು ಬಾಳಕೆದಾರರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಹಾವುಗಳು ನಿಜವಾಗಿಯೂ ಆಕಳಿಸು (yawning) ತ್ತವೆಯೇ?

ಜೀವಶಾಸ್ತ್ರಜ್ಞರ ಪ್ರಕಾರ, ಹಾವುಗಳು ದೊಡ್ಡ ಆಹಾರವನ್ನು ನುಂಗಿದ ನಂತರ ತಮ್ಮ ದವಡೆಗಳ ಜೋಡಣೆಯನ್ನು ಮತ್ತೆ ಸರಿಹೊಂದಿಸಲು ಬಾಯಿಯನ್ನು ಅಗಲವಾಗಿ ತೆರೆದು ನಿರ್ವಹಣೆಯ ಕ್ರಿಯೆಯನ್ನು ನಡೆಸುತ್ತವೆ. ಈ ಸಂದರ್ಭ ಮನುಷ್ಯನಂತೆ “ಆಕಳಿಸುತ್ತಿರುವ (yawning)” ಭಾವನೆ ಉಂಟಾಗಬಹುದು.

ಹಾಗಾದರೆ, ಇದು ನಿಜವಾದ ಆಕಳಿಕೆ (yawning) ಯಲ್ಲ. ಆದರೆ ಈ “Snake Yawning” ಎಂಬ ದೃಶ್ಯ ಮಾನವ ಕಣ್ಣಿಗೆ ಆಕರ್ಷಕವಾಗಿ ಕಾಣಿಸುತ್ತದೆ.

ವೈರಲ್‌ ವಿಡಿಯೋ :

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

Yawning : ನೀವೂ ಹಾವೂಗಳು ಆಕಳಿಸುವುದನ್ನು ನೋಡಿದಿರಾ.? ಇಲ್ವಾ, ಹಾಗಾದ್ರೆ ಈ ವಿಡಿಯೋ ನೋಡಿ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನೀವೂ ಹಾವೂಗಳು ಆಕಳಿಸುವು (yawning) ದನ್ನು ನೋಡಿದಿರಾ.? ಇಲ್ವಾ, ಹಾಗಾದ್ರೆ ಇಲ್ಲಿದೆ ನೋಡಿ ಹಾವೂ ಆಕಳಿಸುವ ವಿಡಿಯೋ. ಇಲ್ಲಿ ನಿಮಗೆ ಕೆಲ ಪ್ರಶ್ನೆಗಳು ಉದ್ಭವಿಸಿಬಹುದು.

ಹಾವುಗಳು ಮನುಷ್ಯರಂತೆ ಆಕಳಿಸುತ್ತವೆಯಾ? ಈ ಪ್ರಶ್ನೆಗೆ ನೇರ ಉತ್ತರ ಇಲ್ಲದಿದ್ದರೂ, ಇತ್ತೀಚೆಗೆ ವೈರಲ್ ಆದ ಒಂದು ವೀಕ್ಷಣೀಯ ದೃಶ್ಯವು ಎಲ್ಲರ ದೃಷ್ಠಿಯನ್ನು ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಿರುವ ಈ ವಿಡಿಯೋದಲ್ಲಿ, ಒಂದು ದೈತ್ಯ ಹೆಬ್ಬಾವು ಬಾಯಿಯನ್ನು ತುಂಬಾ ಅಗಲವಾಗಿ ತೆರೆದು ಆಕಳಿಸು (yawning) ತ್ತಿರುವಂತೆ ಕಾಣಿಸುತ್ತದೆ.

ಹಾಗಾದ್ರೆ ವೈರಲ್ ವಿಡಿಯೋದಲ್ಲಿ ಏನಿದೆ?

ಈ ಅಪರೂಪದ ದೃಶ್ಯವನ್ನು @lauraisabelaleon ಎಂಬ Instagram ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ವೈರಲ್‌ ಆಗಿರುವ ವಿಡಿಯೋದಲ್ಲಿ ದೈತ್ಯ ಹೆಬ್ಬಾವು ಬಾಯಿಯನ್ನು ವಿಶಾಲವಾಗಿ ತೆರೆದು ನಿಟ್ಟುಸಿರೆ ಬಿಟ್ಟಂತೆ ಕಾಣಿಸುತ್ತಿರುವುದು ವಿಡಿಯೋ ಸ್ಪಷ್ಟವಾಗಿದೆ. ಈ ದೃಶ್ಯ ಮನುಷ್ಯರ ಆಕಳಿಸುವ ಹಾವಭಾವಕ್ಕೆ ಹತ್ತಿರವಾಗಿದ್ದು, ಹಲವಾರು ಬಳಕೆದಾರರು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ವೈರಲ್‌ ವಿಡಿಯೋವನ್ನು ಈವರೆಗೆ 34 ಸಾವಿರಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದು, ಸಾವಿರಾರು ಜನರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್‌ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಓರ್ವರು, “ನಾನು ಹಾವುಗಳು ಹೀಗೆ ಆಕಳಿಸುತ್ತವೆ ಎಂದು ಇದೇ ಮೊದಲು ನೋಡಿದ್ದೇನೆ” ಎಂದಿದ್ದಾರೆ. ಮತ್ತೋಬ್ಬ ಬಳಕೆದಾರರು, “ಇದು ನಿಜವೋ ಅಥವಾ AI ಕ್ರಿಯೇಷನ್ನಾ?” ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಹೀಗೆ ಹಲವಾರು ಬಾಳಕೆದಾರರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಹಾವುಗಳು ನಿಜವಾಗಿಯೂ ಆಕಳಿಸು (yawning) ತ್ತವೆಯೇ?

ಜೀವಶಾಸ್ತ್ರಜ್ಞರ ಪ್ರಕಾರ, ಹಾವುಗಳು ದೊಡ್ಡ ಆಹಾರವನ್ನು ನುಂಗಿದ ನಂತರ ತಮ್ಮ ದವಡೆಗಳ ಜೋಡಣೆಯನ್ನು ಮತ್ತೆ ಸರಿಹೊಂದಿಸಲು ಬಾಯಿಯನ್ನು ಅಗಲವಾಗಿ ತೆರೆದು ನಿರ್ವಹಣೆಯ ಕ್ರಿಯೆಯನ್ನು ನಡೆಸುತ್ತವೆ. ಈ ಸಂದರ್ಭ ಮನುಷ್ಯನಂತೆ “ಆಕಳಿಸುತ್ತಿರುವ (yawning)” ಭಾವನೆ ಉಂಟಾಗಬಹುದು.

ಹಾಗಾದರೆ, ಇದು ನಿಜವಾದ ಆಕಳಿಕೆ (yawning) ಯಲ್ಲ. ಆದರೆ ಈ “Snake Yawning” ಎಂಬ ದೃಶ್ಯ ಮಾನವ ಕಣ್ಣಿಗೆ ಆಕರ್ಷಕವಾಗಿ ಕಾಣಿಸುತ್ತದೆ.

ವೈರಲ್‌ ವಿಡಿಯೋ :

Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

Kidney

ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.

ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.

ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
  • ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
  • ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
  • ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
  • ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
  • ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
  • ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
  • ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
  • ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
  • ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
  • ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
  • ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
  • ಊಟದ ಮೇಲೆ ಆಸೆ ಕಡಿಮೆಯಾಗುವುದು.
  • ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
  • ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Husband : ಹಣಕ್ಕಾಗಿ ಪತ್ನಿಯ ಖಾಸಗಿ ಕ್ಷಣಗಳನ್ನೇ ಕ್ಯಾಮೆರಾದಲ್ಲಿ ಸೆರೆಹಿಡಿದ ಪತಿ.!

0

ಜನಸ್ಫಂದನ ನ್ಯೂಸ್‌, ಡೆಸ್ಕ್‌ : ಪತ್ನಿಯ ಖಾಸಗಿ ದೃಶ್ಯಗಳನ್ನು ರಹಸ್ಯ ಕ್ಯಾಮೆರಾದಲ್ಲಿ ದಾಖಲಿಸಿ, ಅವುಗಳನ್ನು ತೋರಿಸಿ ಬ್ಲಾಕ್​ಮೇಲ್​ ಮಾಡಿದ್ದಾನೆ ಎಂಬ ಗಂಭೀರ ಆರೋಪ ಒಂದು ಪತಿ (Husband) ವಿರುದ್ಧ ಕೇಳಿ ಬಂದಿದೆ.

ಸದ್ಯ ಈ ಘಟನೆ ಪುಣೆಯಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದಂತೆ ಪತಿ (Husband) ಈ ರೀತಿಯ ವರ್ತಿಸಿದ್ದಾನೆಂದು ಪತ್ನಿಯೋರ್ವಳು ಗಂಭೀರ ಆರೋಪಗಳು ಮಾಡಿದ್ದಾರೆ. ಈ ಪ್ರಕರಣವು ಸಾರ್ವಜನಿಕರಲ್ಲಿ ಆಘಾತ ಮೂಡಿಸಿದ್ದು, ಈ ಪತಿ-ಪತ್ನಿ (Husband and wife) ಇಬ್ಬರೂ ಉನ್ನತ ಸರ್ಕಾರಿ ಅಧಿಕಾರಿಗಳೇ ಆಗಿರುವುದರಿಂದ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.

ಹಿನ್ನೆಲೆ :

2020ರಲ್ಲಿ ವಿವಾಹವಾದ ಈ ದಂಪತಿ, ಸದ್ಯ ಪುಣೆಯ ಪ್ರಮುಖ ಸರ್ಕಾರಿ ಇಲಾಖೆಯಲ್ಲಿ ಹುದ್ದೆ ಹೊಂದಿದ್ದಾರೆ. ಆದರೆ, ಪತಿ-ಪತ್ನಿ ನಡುವೆ ಹಣಕಾಸು ಸಂಬಂಧಿತ ವಿಚಾರಗಳಲ್ಲಿ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಪತಿ ತನ್ನ ಪತ್ನಿಗೆ ಕಾರು ಮತ್ತು ಮನೆ ಸಾಲಗಳ ಇಎಂಐ ಪಾವತಿಸಲು ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇದರ ಜೊತೆಗೆ ತವರು ಮನೆಯಿಂದಲೂ ರೂ.1.5 ಲಕ್ಷ ತರಬೇಕೆಂದು ಪತ್ನಿಯ ಮೇಲೆ ಒತ್ತಡ ಹಾಕಿದ್ದರು ಎಂದು ಪತ್ನಿ ಆರೋಪಿಸಿದ್ದಾರೆ.

ಆದರೆ ಪತ್ನಿ ಈ ಎಲ್ಲಾ ಬೇಡಿಕೆಗಳಿಗೆ ನಿರಾಕರಿಸಿದ್ದಾರೆ. ಇನ್ನು ಪತಿ (Husband)ತನ್ನ ನಂಬಿಕೆಯ ವ್ಯಕ್ತಿಯಲ್ಲ ಎಂಬುದು ಸಾಬೀತು ಪಡಿಸುವ ಕೃತ್ಯ ಮಾಡಿದ್ದಾನೆ ಎಂದು 30 ವರ್ಷದ ಸಂತ್ರಸ್ತೆ ಪತ್ನಿ ಆರೋಪಿಸಿದ್ದಾರೆ.

ಸ್ನಾನಗೃಹದಲ್ಲಿ ರಹಸ್ಯ ಕ್ಯಾಮೆರಾ ಇಟ್ಟ ಪತಿ (Husband) :

ಮನೆಯ ಬಾತ್‌ರೂಮಿನಲ್ಲಿ ಗುಪ್ತವಾಗಿ ಕ್ಯಾಮೆರಾ ಅಳವಡಿಸಿ, ಪತ್ನಿಯ ಸ್ನಾನದ ವಿಡಿಯೋಗಳನ್ನು ಪತಿ ಚಿತ್ರೀಕರಿಸಿದ್ದಾನೆ. ನಂತರ ಆ ದೃಶ್ಯಗಳನ್ನು ತೋರಿಸಿ, ಒಂದು ವೇಳೆ ನೀನು ಹಣ ನೀಡದಿದ್ದರೆ ಈ ವಿಡಿಯೋವನ್ನು ಬೇರೆಯವರಿಗೆ ತೋರಿಸುವುದಾಗಿ ಬೆದರಿಕೆ ಹಾಕಿದ್ದಾನೆ.

ಪತಿ (Husband) ಯ ಈ ರೀತಿಯ ವರ್ತನೆಯಿಂದ ಆಘಾತಕ್ಕೊಳಗಾದ ಪತ್ನಿ, ಮಾನಸಿಕವಾಗಿ ಹಾಗೂ ದೈಹಿಕ ಹಿಂಸೆಗೂ ಒಳಗಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

ತನ್ನ ಪತಿ ಹಾಗೂ ಆತನ ಕುಟುಂಬದ ಸದಸ್ಯರು ತನ್ನ ಮೇಲೆ ಹಣಕ್ಕಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಸಂತ್ರಸ್ತೆ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ IPC ನ ಅನೇಕ ಗಂಭೀರ ಸೆಕ್ಷನ್‌ಗಳಡಿ ಕೇಸು ದಾಖಲಿಸಲಾಗಿದೆ.

ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ವ್ಯಕ್ತಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪತಿ ಹಾಗೂ ಇತರ ಆರು ಜನರ ವಿರುದ್ಧ ಕೇಸು ದಾಖಲಾಗಿದೆ. ಹಾಗೂ ಆರೋಪಿ ಪತಿ (Husband) ಬಳಿ ಇದ್ದ ತಾಂತ್ರಿಕ ಸಾಕ್ಷ್ಯಗಳು, ವಿಡಿಯೋ ದೃಶ್ಯಾವಳಿಗಳನ್ನು ಪರೀಕ್ಷೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಗೌಪ್ಯತೆ ಮತ್ತು ನ್ಯಾಯಕ್ಕೆ ಒತ್ತಾಯ :

ಈ ಪ್ರಕರಣವು ಮಹಿಳೆಯರು ತಮ್ಮದೇ ಮನೆಯೊಳಗೆಯೂ ಸುರಕ್ಷಿತವಾಗಿಲ್ಲವೋ ಎಂಬ ಭಾವನೆ ಮೂಡಿಸುತ್ತದೆ. ತಕ್ಷಣದ ಪೊಲೀಸ್ ಕ್ರಮಕ್ಕೆ ನಿಗದಿತ ಮಹಿಳಾ ಸಂಘಟನೆಗಳು ಧ್ವನಿ ಎತ್ತಿದ್ದು, ಮಹಿಳೆಯ ಗೌಪ್ಯತೆ ಉಲ್ಲಂಘನೆಗೆ ಗಂಭೀರ ಶಿಕ್ಷೆಯಾಗಬೇಕು ಎಂದು ಒತ್ತಾಯಿಸುತ್ತಿವೆ.


Honor-killing : ಪ್ರೇಮ ವಿವಾಹವಾಗಿದ್ದ ನವಜೋಡಿಯನ್ನು ಗುಂಡಿಕ್ಕಿ ಹತ್ಯೆ ; 13 ಜನರ ಬಂಧ..!

Honor-killing

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮುದ್ದಾದ ಸಂಸಾರ ಆರಂಭಿಸಬೇಕು ಎಂಬ ಆಸೆ ಹೊತ್ತು ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಗಳು ತಮ್ಮ ಅಂತ್ಯ ಇಷ್ಟು ಭೀಕರವಾಗಿರುತ್ತೇ ಅಂತ ಅಂದುಕೊಂಡಿರದೇ ಇರಬಹುದು. ಆದರೆ ಮರ್ಯಾದ ಹತ್ಯೆ (honor-killing) ಅಥವಾ ಕುಟುಂಬದ ಗೌರವ  ಎಂಬ ಹೆಸರಿನಲ್ಲಿ ಈ ನವ ಜೋಡಿಯ ಅಂತ್ಯ ಮಾತ್ರ ಭೀಕರವಾಗಿತ್ತು.

ಮದುವೆ ಬೇಡ ಎಂದವರನ್ನೆಲ್ಲ ದಿಕ್ಕರಿಸಿ, ಪ್ರೀತಿಸಿ ತಮ್ಮದೇ ಆದ ನಿಯಮಗಳ ಮೂಲಕ ಮದುವೆಯಾಗಿ ಸಂಸಾರ ಕಟ್ಟಿಕೊಳ್ಳಲು ಮುಂದಾಗಿದ್ದರು. ಆದರೆ ಮರ್ಯಾದ ಹತ್ಯೆ (honor-killing) ಎಂಬ ಹೆಸರಿನಲ್ಲಿ ಪ್ರಾಣ ಕಳೆದುಕೊಳ್ಳುವ ಅಂದಾಜೆ ಆ ಜೋಡಿಗೆ ಇರಲಿಲ್ಲ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಹೌದು, ಪಾಕಿಸ್ತಾನದಲ್ಲೊಂದು ಇಂತಹ ಮರ್ಯಾದ ಹತ್ಯೆ (honor-killing) ಎಂಬ ಘಟನೆ ನಡೆದಿರುವುದು ‌ಅಘಾತವನ್ನುಂಟು ಮಾಡಿದೆ. ಅವಮಾನ ಎಂಬ ಹೆಸರಲ್ಲಿ ಇತ್ತೀಚೆಗೆ ಮದುವೆಯಾಗಿದ್ದ ನವದಂಪತಿಗಳನ್ನು ಆಕೆಯ ಕುಟುಂಬಸ್ಥರು ಬಲೂಚಿಸ್ತಾನ್ ಪ್ರಾಂತ್ಯದ ದೇಘರಿ (Deghari, Balochistan Province) ಜಿಲ್ಲೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್‌ ಆಗುತ್ತಿದೆ.

ಮರ್ಯಾದ ಹತ್ಯೆ (honor-killing) ಎಂಬ ಹೆಸರಿನಲ್ಲಿ ನಡೆದ ಈ ಘಟನೆಯು ಈದ್-ಉಲ್-ಅಝ್ಹಾ ಹಬ್ಬದ ಮೂರು ದಿನಗಳ ಮೊದಲು ನಡೆದಿದೆ ಎನ್ನಲಾಗಿದ್ದು, ಹೀಗೆ ಮರ್ಯಾದ ಹತ್ಯೆ ಎಂಬ ಹೆಸರಿನಲ್ಲಿ ಹತ್ಯೆಗೊಳಗಾದ ನವಜೋಡಿಯನ್ನು ಬಾನೋ ಬಿಬಿ ಮತ್ತು ಅಹ್ಸಾನ್ ಉಲ್ಲಾ ಎಂದು ಗುರುತಿಸಲಾಗಿದೆ.

ಬಾನೋ ಬಿಬಿಯ ಕುಟುಂಬಕ್ಕೆ ಅಹ್ಸಾನ್ ಉಲ್ಲಾನನ್ನು ಮದುವೆಯಾಗಲು ಸ್ವಲ್ಪವೂ ಇಷ್ಟವಿರಲಿಲ್ಲ. ಹೀಗಾಗಿ ಆಕೆಯ ಮದುವೆಯನ್ನು ವಿರೋಧಿಸುತ್ತಲೇ ಬಂದಿದ್ದರು.ಆದರೆ, ಯಾರಿಗೂ ಹೆದರದ ಬಾನೋ ಬಿಬಿ, ಅಹ್ಸಾನ್ ಉಲ್ಲಾನನ್ನು ಮದುವೆಯಾಗೆ ಬಿಟ್ಟಿದ್ದಳು.

ಇದನ್ನು ಓದಿ : Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!

ಬಾನೋ ಬಿಬಿ, ಅಹ್ಸಾನ್ ಉಲ್ಲಾನನ್ನು ಮದುವೆ ಪರಿಣಾಮವಾಗಿ ಸಿಟ್ಟಾಗಿದ್ದ ಯುವತಿಯ ಕುಟುಂಬವೂ ಆಕೆ (ಬಾನೋ ಬಿಬಿ) ಯನ್ನು ಮರ್ಯಾದ ಹತ್ಯೆ (honor-killing) ಹೆಸರಲ್ಲಿ ಗುಂಡೇಟಿನಿಂದ ಹತ್ಯೆ ಮಾಡಿ ಸಂಭ್ರಮಿಸಿರುವ ವಿಡಿಯೋ ಸದ್ಯ ಸದ್ದು ಮಾಡುತ್ತಿದೆ.

ಕುಟುಂಬದ ವಿರೋಧದ ನಡುವೆಯೂ ಜೀವನವನ್ನು ಕಟ್ಟಿಕೊಳ್ಳಲು ಯತ್ನಿಸಿದ ಬಾನೋ ಬಿಬಿ ಮತ್ತು ಅಹ್ಸಾನ್ ಉಲ್ಲಾ ಎಂಬ ನವದಂಪತಿಗಳನ್ನು, ಬಾನೋ ಬಿಬಿ ಕುಟುಂಬದವರು ಮರ್ಯಾದೆ ಹೆಸರಿನಲ್ಲಿ ಹತ್ಯೆ ಮಾಡಿರುವ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಈ ಭಯಾನಕ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಾನವ ಹಕ್ಕು ಸಂಘಟನೆಗಳಿಂದ ಖಂಡನೆ ವ್ಯಕ್ತವಾಗಿದೆ.

ಇದನ್ನು ಓದಿ : IBPS ನಲ್ಲಿ ಖಾಲಿ ಇರುವ 1,007 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಭೀಕರ ಹತ್ಯೆ (honor-killing) ನಡೆದದ್ದು ಹೇಗೆ.?

ವೈರಲ್ ವಿಡಿಯೋದಲ್ಲಿ ನವದಂಪತಿಗಳನ್ನು ವಾಹನಗಳಲ್ಲಿ ಮರುಭೂಮಿ ಪ್ರದೇಶಕ್ಕೆ ಕರೆತರಲಾಗಿದೆ. ಈ ವೇಳೆ ಬಾನೋ ಬಿಬಿ ತನ್ನ ಮದುವೆ ಕಾನೂನುಬದ್ಧವಾಗಿದೆ ಎಂದು ಕುಟುಂಬಸ್ಥರ ಎದುರು ಹೇಳುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಆದರೆ ಅವರು ಮಹಿಳೆಗೆ ಶಾಲು ಹೊದಿಸಿ, ಕೈಯಲ್ಲಿ ಕುರಾನ್ ಹಿಡಿಸಿ, ಗುಂಡು ಹಾರಿಸುತ್ತಾರೆ. ಆಕೆ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆಯೇ ಆಕೆಯ ಪತಿಯನ್ನೂ ಗುಂಡಿಕ್ಕಿ ಕೊಲ್ಲುತ್ತಾರೆ.

ಸ್ಥಳೀಯ ಭಾಷೆ ಬ್ರಾಹ್ವಿಯಲ್ಲಿ ಬಾನೋ ಕೊನೆ ಕ್ಷಣದಲ್ಲಿ ಹೇಳಿದ್ದ ಮಾತು, “ನೀವು ನನ್ನ ಮೇಲೆ ಮಾತ್ರ ಗುಂಡು ಹಾರಿಸಲು ಅನುಮತಿ ಇದೆ, ಬೇರೆ ಏನು ಇಲ್ಲ” ಎಂದಿದ್ದಾರೆ. ಈ ವಿಡಿಯೋ ಅಂತ್ಯದಲ್ಲಿ ಇಬ್ಬರೂ ರಕ್ತಸಿಕ್ತವಾಗಿ ನೆಲದ ಮೇಲೆ ಬಿದ್ದಿರುವ ಭೀಕರ ದೃಶ್ಯವಿದೆ.

13 ಜನರ ಬಂಧನ :

ಈ ಮಧ್ಯ ಬಾನೋ ಬಿಬಿಯ ಸಹೋದರ ತನ್ನ ಅನುಮತಿಯಿಲ್ಲದೇ ಆಕೆ ಮದುವೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಪೊಲೀಸರು ಈ ದೂರಿನ ಆಧಾರದ ಮೇಲೆ ತನಿಖೆ ನಡೆಸಿ, ಬುಡಕಟ್ಟು ಮುಖಂಡ, ಆಕೆಯ ಸಹೋದರ ಸೇರಿದಂತೆ 13 ಜನರನ್ನು ಬಂಧಿಸಿದ್ದಾರೆ. ಕ್ವೆಟ್ಟಾದ ಹನ್ನಾ-ಉರಾಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ವಿಡಿಯೋ :

https://twitter.com/i/status/1946975064676852170

Honor-killing : ಪ್ರೇಮ ವಿವಾಹವಾಗಿದ್ದ ನವಜೋಡಿಯನ್ನು ಗುಂಡಿಕ್ಕಿ ಹತ್ಯೆ ; 13 ಜನರ ಬಂಧ..!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಮುದ್ದಾದ ಸಂಸಾರ ಆರಂಭಿಸಬೇಕು ಎಂಬ ಆಸೆ ಹೊತ್ತು ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಗಳು ತಮ್ಮ ಅಂತ್ಯ ಇಷ್ಟು ಭೀಕರವಾಗಿರುತ್ತೇ ಅಂತ ಅಂದುಕೊಂಡಿರದೇ ಇರಬಹುದು. ಆದರೆ ಮರ್ಯಾದ ಹತ್ಯೆ (honor-killing) ಅಥವಾ ಕುಟುಂಬದ ಗೌರವ  ಎಂಬ ಹೆಸರಿನಲ್ಲಿ ಈ ನವ ಜೋಡಿಯ ಅಂತ್ಯ ಮಾತ್ರ ಭೀಕರವಾಗಿತ್ತು.

ಮದುವೆ ಬೇಡ ಎಂದವರನ್ನೆಲ್ಲ ದಿಕ್ಕರಿಸಿ, ಪ್ರೀತಿಸಿ ತಮ್ಮದೇ ಆದ ನಿಯಮಗಳ ಮೂಲಕ ಮದುವೆಯಾಗಿ ಸಂಸಾರ ಕಟ್ಟಿಕೊಳ್ಳಲು ಮುಂದಾಗಿದ್ದರು. ಆದರೆ ಮರ್ಯಾದ ಹತ್ಯೆ (honor-killing) ಎಂಬ ಹೆಸರಿನಲ್ಲಿ ಪ್ರಾಣ ಕಳೆದುಕೊಳ್ಳುವ ಅಂದಾಜೆ ಆ ಜೋಡಿಗೆ ಇರಲಿಲ್ಲ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಹೌದು, ಪಾಕಿಸ್ತಾನದಲ್ಲೊಂದು ಇಂತಹ ಮರ್ಯಾದ ಹತ್ಯೆ (honor-killing) ಎಂಬ ಘಟನೆ ನಡೆದಿರುವುದು ‌ಅಘಾತವನ್ನುಂಟು ಮಾಡಿದೆ. ಅವಮಾನ ಎಂಬ ಹೆಸರಲ್ಲಿ ಇತ್ತೀಚೆಗೆ ಮದುವೆಯಾಗಿದ್ದ ನವದಂಪತಿಗಳನ್ನು ಆಕೆಯ ಕುಟುಂಬಸ್ಥರು ಬಲೂಚಿಸ್ತಾನ್ ಪ್ರಾಂತ್ಯದ ದೇಘರಿ (Deghari, Balochistan Province) ಜಿಲ್ಲೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್‌ ಆಗುತ್ತಿದೆ.

ಮರ್ಯಾದ ಹತ್ಯೆ (honor-killing) ಎಂಬ ಹೆಸರಿನಲ್ಲಿ ನಡೆದ ಈ ಘಟನೆಯು ಈದ್-ಉಲ್-ಅಝ್ಹಾ ಹಬ್ಬದ ಮೂರು ದಿನಗಳ ಮೊದಲು ನಡೆದಿದೆ ಎನ್ನಲಾಗಿದ್ದು, ಹೀಗೆ ಮರ್ಯಾದ ಹತ್ಯೆ ಎಂಬ ಹೆಸರಿನಲ್ಲಿ ಹತ್ಯೆಗೊಳಗಾದ ನವಜೋಡಿಯನ್ನು ಬಾನೋ ಬಿಬಿ ಮತ್ತು ಅಹ್ಸಾನ್ ಉಲ್ಲಾ ಎಂದು ಗುರುತಿಸಲಾಗಿದೆ.

ಬಾನೋ ಬಿಬಿಯ ಕುಟುಂಬಕ್ಕೆ ಅಹ್ಸಾನ್ ಉಲ್ಲಾನನ್ನು ಮದುವೆಯಾಗಲು ಸ್ವಲ್ಪವೂ ಇಷ್ಟವಿರಲಿಲ್ಲ. ಹೀಗಾಗಿ ಆಕೆಯ ಮದುವೆಯನ್ನು ವಿರೋಧಿಸುತ್ತಲೇ ಬಂದಿದ್ದರು.ಆದರೆ, ಯಾರಿಗೂ ಹೆದರದ ಬಾನೋ ಬಿಬಿ, ಅಹ್ಸಾನ್ ಉಲ್ಲಾನನ್ನು ಮದುವೆಯಾಗೆ ಬಿಟ್ಟಿದ್ದಳು.

ಇದನ್ನು ಓದಿ : Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!

ಬಾನೋ ಬಿಬಿ, ಅಹ್ಸಾನ್ ಉಲ್ಲಾನನ್ನು ಮದುವೆ ಪರಿಣಾಮವಾಗಿ ಸಿಟ್ಟಾಗಿದ್ದ ಯುವತಿಯ ಕುಟುಂಬವೂ ಆಕೆ (ಬಾನೋ ಬಿಬಿ) ಯನ್ನು ಮರ್ಯಾದ ಹತ್ಯೆ (honor-killing) ಹೆಸರಲ್ಲಿ ಗುಂಡೇಟಿನಿಂದ ಹತ್ಯೆ ಮಾಡಿ ಸಂಭ್ರಮಿಸಿರುವ ವಿಡಿಯೋ ಸದ್ಯ ಸದ್ದು ಮಾಡುತ್ತಿದೆ.

ಕುಟುಂಬದ ವಿರೋಧದ ನಡುವೆಯೂ ಜೀವನವನ್ನು ಕಟ್ಟಿಕೊಳ್ಳಲು ಯತ್ನಿಸಿದ ಬಾನೋ ಬಿಬಿ ಮತ್ತು ಅಹ್ಸಾನ್ ಉಲ್ಲಾ ಎಂಬ ನವದಂಪತಿಗಳನ್ನು, ಬಾನೋ ಬಿಬಿ ಕುಟುಂಬದವರು ಮರ್ಯಾದೆ ಹೆಸರಿನಲ್ಲಿ ಹತ್ಯೆ ಮಾಡಿರುವ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಇದೀಗ ಈ ಭಯಾನಕ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಾನವ ಹಕ್ಕು ಸಂಘಟನೆಗಳಿಂದ ಖಂಡನೆ ವ್ಯಕ್ತವಾಗಿದೆ.

ಇದನ್ನು ಓದಿ : IBPS ನಲ್ಲಿ ಖಾಲಿ ಇರುವ 1,007 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಭೀಕರ ಹತ್ಯೆ (honor-killing) ನಡೆದದ್ದು ಹೇಗೆ.?

ವೈರಲ್ ವಿಡಿಯೋದಲ್ಲಿ ನವದಂಪತಿಗಳನ್ನು ವಾಹನಗಳಲ್ಲಿ ಮರುಭೂಮಿ ಪ್ರದೇಶಕ್ಕೆ ಕರೆತರಲಾಗಿದೆ. ಈ ವೇಳೆ ಬಾನೋ ಬಿಬಿ ತನ್ನ ಮದುವೆ ಕಾನೂನುಬದ್ಧವಾಗಿದೆ ಎಂದು ಕುಟುಂಬಸ್ಥರ ಎದುರು ಹೇಳುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಆದರೆ ಅವರು ಮಹಿಳೆಗೆ ಶಾಲು ಹೊದಿಸಿ, ಕೈಯಲ್ಲಿ ಕುರಾನ್ ಹಿಡಿಸಿ, ಗುಂಡು ಹಾರಿಸುತ್ತಾರೆ. ಆಕೆ ನೆಲಕ್ಕೆ ಕುಸಿದು ಬೀಳುತ್ತಿದ್ದಂತೆಯೇ ಆಕೆಯ ಪತಿಯನ್ನೂ ಗುಂಡಿಕ್ಕಿ ಕೊಲ್ಲುತ್ತಾರೆ.

ಸ್ಥಳೀಯ ಭಾಷೆ ಬ್ರಾಹ್ವಿಯಲ್ಲಿ ಬಾನೋ ಕೊನೆ ಕ್ಷಣದಲ್ಲಿ ಹೇಳಿದ್ದ ಮಾತು, “ನೀವು ನನ್ನ ಮೇಲೆ ಮಾತ್ರ ಗುಂಡು ಹಾರಿಸಲು ಅನುಮತಿ ಇದೆ, ಬೇರೆ ಏನು ಇಲ್ಲ” ಎಂದಿದ್ದಾರೆ. ಈ ವಿಡಿಯೋ ಅಂತ್ಯದಲ್ಲಿ ಇಬ್ಬರೂ ರಕ್ತಸಿಕ್ತವಾಗಿ ನೆಲದ ಮೇಲೆ ಬಿದ್ದಿರುವ ಭೀಕರ ದೃಶ್ಯವಿದೆ.

13 ಜನರ ಬಂಧನ :

ಈ ಮಧ್ಯ ಬಾನೋ ಬಿಬಿಯ ಸಹೋದರ ತನ್ನ ಅನುಮತಿಯಿಲ್ಲದೇ ಆಕೆ ಮದುವೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಪೊಲೀಸರು ಈ ದೂರಿನ ಆಧಾರದ ಮೇಲೆ ತನಿಖೆ ನಡೆಸಿ, ಬುಡಕಟ್ಟು ಮುಖಂಡ, ಆಕೆಯ ಸಹೋದರ ಸೇರಿದಂತೆ 13 ಜನರನ್ನು ಬಂಧಿಸಿದ್ದಾರೆ. ಕ್ವೆಟ್ಟಾದ ಹನ್ನಾ-ಉರಾಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ವಿಡಿಯೋ :

https://twitter.com/i/status/1946975064676852170

ಪಾಕಿಸ್ತಾನದಲ್ಲಿ ಮರ್ಯಾದಾ ಹತ್ಯೆಗಳ ಭಯಾನಕ ಅಂಕಿ :

ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗ (HRCP) ಪ್ರಕಾರ, ಕೇವಲ 2024ರಲ್ಲಿಯೇ 405 ಮರ್ಯಾದಾ ಹತ್ಯೆಗಳ (honor-killing) ಪ್ರಕರಣಗಳು ದಾಖಲಾಗಿವೆ. ಈ ಸಂಖ್ಯೆ ಲಿಂಗಸಮತೆ ಮತ್ತು ವ್ಯಕ್ತಿ ಸ್ವಾತಂತ್ರ್ಯಕ್ಕೆ ಎದುರಾಗುತ್ತಿರುವ ಗಂಭೀರ ಸವಾಲನ್ನು ತೋರಿಸುತ್ತದೆ.


 

Underage girl : ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿದ ಯುವಕ ; ಮುಂದೆನಾಯ್ತು.?

Underage girl

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಪ್ರಾಪ್ತ ಬಾಲಕಿ (Underage girl) ಯೊಬ್ಬಳಿಗೆ ಯುವಕನೊಬ್ಬ ಕತ್ತಿಗೆ ಚಾಕು ಹಿಡಿದು ಬೆದರಿಕೆ ಹಾಕುತ್ತಿರುವ ಭಯಾನಕ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಬಸಪ್ಪ ಪೇಠ ಕರಂಜೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಿಂದ ಈ ಪ್ರದೇಶದ ಜನತೆ ಬೆಚ್ಚಿಬಿದ್ದುಿದ್ದಾರೆ. ಸದ್ಯ ಅದರ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದನ್ನು ಓದಿ : Schoolgirl : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ಧರ್ಮದೇಟು ಕೊಟ್ಟ ಶಾಲಾ ವಿದ್ಯಾರ್ಥಿನಿ.!

ಸಂಜೆ 4 ಗಂಟೆಯ ಸುಮಾರಿಗೆ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕಿ (Underage girl) ಯನ್ನು ಈ ಯುವಕ ರಸ್ತೆಮಧ್ಯೆ ಅಡ್ಡಗಟ್ಟಿದ್ದಾನೆ. ವಿಡಿಯೋ ದೃಶ್ಯಗಳಲ್ಲಿ ಕಾಣಿಸುತ್ತಿರುವಂತೆ, ಆತ ಆಕೆಯ (Underage girl) ಕುತ್ತಿಗೆಗೆ ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದು, ಸುತ್ತಮುತ್ತ ಜನರು ಆತಂಕದಿಂದ ಕೂಗುತ್ತಿದ್ದರೂ ಕೂಡ ಯುವಕ ಯಾರ ಮಾತಿಗೂ ಕಿವಿಗೊಡದೆ ಬಾಲಕಿ (Underage girl) ಗೆ ಬೆದರಿಕೆ ಮುಂದುವರೆಸಿದ್ದಾನೆ.

ಘಟನೆಯ ಸಂದರ್ಭದಲ್ಲಿಯೇ ಸ್ಥಳೀಯ ಯುವಕನೋರ್ವ ಧೈರ್ಯ ತೋರಿ, ಸಮೀಪದ ಗೋಡೆಯೊಂದರ ಮೇಲೇರಿ ಹಿಂದಿನಿಂದ ಬಂದು ಆರೋಪಿಯನ್ನು ಹಿಡಿದು ಆಗಬಹುದಾದ ದುರ್ಘಟನೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.

ತಕ್ಷಣ ಸ್ಥಳದಲ್ಲಿದ್ದ ಜನರು ಆತನ ಕೈಯಿಂದ ಚಾಕು ಕಿತ್ತುಕೊಂಡು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಗೆ ಯಾವುದೇ ದೈಹಿಕ ಗಾಯವಾಗದಿರುವುದು ಸಹ ಶ್ಲಾಘನೀಯ.

ಆರೋಪಿ ಹಾಗೂ ಬಾಲಕಿ (Underage girl) ಒಂದೇ ಪ್ರದೇಶದವರು :

ಪ್ರಾಥಮಿಕ ವರದಿಗಳ ಪ್ರಕಾರ, ಆರೋಪಿ ಹಾಗೂ ಬಾಲಕಿ ಒಂದೇ ಪ್ರದೇಶದವರಾಗಿದ್ದು, ಈ ಘಟನೆಯ ಹಿಂದೆ ಏನು ಕಾರಣ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನು ಓದಿ :SWR : ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಖಾಲಿ ಇರುವ 904 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಈ ಬಾಲಕಿ (Underage girl) ಯನ್ನು ಕಳೆದ ಕೆಲವು ದಿನಗಳಿಂದ ಬೆನ್ನಟ್ಟುವುದು, ಬೆದರಿಕೆ ಹಾಗೂ ಕಿರುಕುಳ ನೀಡುತ್ತಾ ಬಂದಿದ್ದಾನೆ ಎನ್ನಲಾಗುತ್ತಿದೆ. ಈ ನಡುವೆ ಆರೋಪಿಯೂ ಸಹ ಅಪ್ರಾಪ್ತ ಎಂದು ಹೇಳಲಾಗುತ್ತಿದೆ.

ವಿಡಿಯೋ :

https://twitter.com/i/status/1947308672461492552


Female PSI : ಬಿ ರಿಪೋರ್ಟ್‌

Health : 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ವರ್ಷಕ್ಕೊಮ್ಮೆ ಈ ಆರೋಗ್ಯ ತಪಾಸಣೆಗಳನ್ನು ಮಾಡಿಸಲೇಬೇಕು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ವಯಸ್ಸು ಹೆಚ್ಚಾಗುತ್ತಿದ್ದಂತೆ ದೇಹದಲ್ಲಿ ವಿವಿಧ ರೀತಿಯ ಆರೋಗ್ಯ (Health) ಸಮಸ್ಯೆಗಳು ಮೂಡುತ್ತವೆ ಎಂಬುದು ವೈದ್ಯರ ಅಭಿಪ್ರಾಯ. ಯಾವುದೇ ಕಾಯಿಲೆ ಬಂದ ನಂತರ ಚಿಕಿತ್ಸೆ ಮಾಡುವದಕ್ಕಿಂತ ಅದನ್ನು ತಡೆಗಟ್ಟುವುದು ಉತ್ತಮ. ಈ ಕಾರಣದಿಂದಲೇ ನಿಯಮಿತ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ.

ವಿಶೇಷವಾಗಿ 40 ವರ್ಷಕ್ಕಿಂತ ಮೇಲ್ಪಟ್ಟ ಪುರುಷರು ತಮ್ಮ ಆರೋಗ್ಯ (Health) ದ ಮೇಲೆ ಇನ್ನೂ ಹೆಚ್ಚು ಗಮನಹರಿಸಬೇಕು. ಕೆಲವೊಂದು ಪರೀಕ್ಷೆಗಳು ವರ್ಷಕ್ಕೆ ಒಮ್ಮೆ ಮಾಡಿಸಿಕೊಂಡರೆ, ಹಲವಾರು ಗಂಭೀರ ರೋಗಗಳನ್ನು ಆರಂಭದಲ್ಲಿಯೇ ಪತ್ತೆಹಚ್ಚಿ ತಡೆಗಟ್ಟಬಹುದಾಗಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
ವರ್ಷಕ್ಕೆ ಒಮ್ಮೆ ಮಾಡಿಸಬೇಕಾದ ಮುಖ್ಯ ವೈದ್ಯಕೀಯ (Health) ತಪಾಸಣೆಗಳ ಪಟ್ಟಿಯು ಇಲ್ಲಿದೆ :
1. ರಕ್ತದೊತ್ತಡ ಪರೀಕ್ಷೆ (Blood Pressure Check) :

ಅಧಿಕ ರಕ್ತದೊತ್ತಡ (Hypertension) ಸಾಮಾನ್ಯವಾಗಿ ಯಾವುದೇ ಲಕ್ಷಣಗಳಿಲ್ಲದೆ ಬರುತ್ತದೆ. ಇದು ಹೃದಯಾಘಾತ, ಪಾರ್ಶ್ವವಾಯು ಹಾಗೂ ಮೂತ್ರಪಿಂಡದ ವೈಫಲ್ಯಕ್ಕೆ ಕಾರಣವಾಗಬಹುದು. ಪ್ರತಿ ಪುರುಷನು ವರ್ಷಕ್ಕೆ ಒಂದುವಾರಿ ರಕ್ತದೊತ್ತಡವನ್ನು ಪರೀಕ್ಷಿಸಿಸಿಕೊಳ್ಳುವುದು ಅತ್ಯಂತ ಅಗತ್ಯ.

2. ಕೊಲೆಸ್ಟ್ರಾಲ್ ತಪಾಸಣೆ (Lipid Profile) :

ಈ ಪರೀಕ್ಷೆಯು LDL (ಕೆಟ್ಟ ಕೊಲೆಸ್ಟ್ರಾಲ್), HDL (ಉತ್ತಮ ಕೊಲೆಸ್ಟ್ರಾಲ್) ಹಾಗೂ ಟ್ರೈಗ್ಲಿಸರೈಡ್ ಮಟ್ಟವನ್ನು ತೋರಿಸುತ್ತದೆ. ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಇದೊಂದು ಪ್ರಮುಖ Health ತಪಾಸಣೆ. ಆಹಾರ ಹಾಗೂ ಜೀವನಶೈಲಿ ಬದಲಾವಣೆ ಮೂಲಕ ಈ ಮಟ್ಟವನ್ನು ನಿಯಂತ್ರಿಸಬಹುದು.

3. ಮಧುಮೇಹ ತಪಾಸಣೆ (Blood Sugar Test / HbA1c) :

ಟೈಪ್ 2 ಡಯಾಬಿಟಿಸ್ ಮೌನಘಾತಿಯಂತೆ ಬೆಳೆಯುತ್ತದೆ. ಉಪವಾಸದ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಥವಾ HbA1c ಪರೀಕ್ಷೆ ಮೂಲಕ ಶೀಘ್ರ ಪತ್ತೆಹಚ್ಚಬಹುದಾಗಿದೆ. ಸಮಯಕ್ಕೆ ಚಿಕಿತ್ಸೆ ನೀಡಿದರೆ ಗಂಭೀರ ತೊಂದರೆಗಳನ್ನು ತಡೆಯಬಹುದು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
4. ಪ್ರಾಸ್ಟೇಟ್ ಕ್ಯಾನ್ಸರ್ ತಪಾಸಣೆ (PSA Test) :

ವಯಸ್ಸಾದ ಪುರುಷರಲ್ಲಿ ಕಂಡುಬರುವ ಪ್ರಮುಖ ಕ್ಯಾನ್ಸರ್‌ಗಳಲ್ಲಿ ಪ್ರಾಸ್ಟೇಟ್ ಕ್ಯಾನ್ಸರ್ ಕೂಡ ಒಂದು. PSA ರಕ್ತ ಪರೀಕ್ಷೆ ಮೂಲಕ ಇದರ ಆರಂಭಿಕ ಹಂತದಲ್ಲಿ ಪತ್ತೆ ಮಾಡಬಹುದು. ಕುಟುಂಬ ಇತಿಹಾಸವಿರುವವರಿಗೆ ಈ ತಪಾಸಣೆ ಹೆಚ್ಚು ಅಗತ್ಯ.

5. ಲಿವರ್ ಫಂಕ್ಷನ್ ಟೆಸ್ಟ್ (LFT) :

ಯಕೃತ್ತಿನ ಕಾರ್ಯಕ್ಷಮತೆಯನ್ನು ಅಳೆಯುವ ಈ ಪರೀಕ್ಷೆ, ಫ್ಯಾಟಿ ಲಿವರ್, ಮದ್ಯಪಾನದಿಂದ ಉಂಟಾಗುವ ಹಾನಿ ಅಥವಾ ಔಷಧ ಪ್ರಭಾವದಿಂದ ದೇಹದಲ್ಲಿ ಏನೇನಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ. ಆರಂಭದಲ್ಲಿಯೇ ತೊಂದರೆ ಪತ್ತೆ ಹಚ್ಚಲು ಇದು ನೆರವಾಗುತ್ತದೆ.

6. ಕೊಲೊನ್ ಕ್ಯಾನ್ಸರ್ ತಪಾಸಣೆ (Colon Cancer Screening) :

ಪುರುಷರಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಇನ್ನೊಂದು ಕ್ಯಾನ್ಸರ್ ಈದು. ವಾರ್ಷಿಕ ಮಲದ ಪರೀಕ್ಷೆ (FIT / gFOBT) ಅಥವಾ 10 ವರ್ಷಕ್ಕೊಮ್ಮೆ ಮಾಡಿಸಬಹುದಾದ ಕೊಲೊನೋಸ್ಕೋಪಿ ಮೂಲಕ ಪತ್ತೆಹಚ್ಚಬಹುದು. ಯಾವುದೇ ಗುಪ್ತ ರಕ್ತವಿದ್ದರೂ ಇದರಿಂದಲೇ ಪತ್ತೆ ಮಾಡಬಹುದು.

7. ಕಣ್ಣಿನ ಪರೀಕ್ಷೆ (Eye Checkup) :

ವಯಸ್ಸಿನ ಜೊತೆಗೆ ದೃಷ್ಟಿದೋಷಗಳು, ಗ್ಲುಕೋಮಾ, ಕ್ಯಾಟರಾಕ್ಟ್ ಮೊದಲಾದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಸ್ಪಷ್ಟ ದೃಷ್ಟಿಗಾಗಿ ವರ್ಷಕ್ಕೊಮ್ಮೆ ಕಣ್ಣಿನ ಆರೋಗ್ಯ (Health) ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಉಪಯುಕ್ತ.

ಸಂಪಾದಕೀಯ :

ಆರೋಗ್ಯ (Health) ದ ಕುರಿತು ಮುಂಚಿತ ಜಾಗ್ರತೆ ಮುಖ್ಯ. ಯಾವುದೇ ರೋಗ ತೀವ್ರಗೊಂಡ ನಂತರ ಚಿಕಿತ್ಸೆ ಮಾಡುವ ಬದಲು ಆರಂಭದಲ್ಲಿಯೇ ಪತ್ತೆಹಚ್ಚಿ ತಡೆಗಟ್ಟುವುದು ಹೆಚ್ಚು ಪರಿಣಾಮಕಾರಿ. ಆದ್ದರಿಂದ 40 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರು ಈ ಪರೀಕ್ಷೆಗಳನ್ನು ವರ್ಷಕ್ಕೊಮ್ಮೆ ಮಾಡಿಸಿಕೊಂಡು ಆರೋಗ್ಯ (Health) ವನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯವಾಗಿದೆ.


“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”

Kidney

ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.

ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.

ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!

ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.

ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.

ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
  • ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
  • ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
  • ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
  • ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
  • ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
  • ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
  • ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
  • ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
  • ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
  • ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
  • ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
  • ಊಟದ ಮೇಲೆ ಆಸೆ ಕಡಿಮೆಯಾಗುವುದು.
  • ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
  • ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!

ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Underage girl : ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿದ ಯುವಕ ; ಮುಂದೆನಾಯ್ತು.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಅಪ್ರಾಪ್ತ ಬಾಲಕಿ (Underage girl) ಯೊಬ್ಬಳಿಗೆ ಯುವಕನೊಬ್ಬ ಕತ್ತಿಗೆ ಚಾಕು ಹಿಡಿದು ಬೆದರಿಕೆ ಹಾಕುತ್ತಿರುವ ಭಯಾನಕ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಬಸಪ್ಪ ಪೇಠ ಕರಂಜೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಘಟನೆಯಿಂದ ಈ ಪ್ರದೇಶದ ಜನತೆ ಬೆಚ್ಚಿಬಿದ್ದುಿದ್ದಾರೆ. ಸದ್ಯ ಅದರ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸಂಜೆ 4 ಗಂಟೆಯ ಸುಮಾರಿಗೆ, ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕಿ (Underage girl) ಯನ್ನು ಈ ಯುವಕ ರಸ್ತೆಮಧ್ಯೆ ಅಡ್ಡಗಟ್ಟಿದ್ದಾನೆ. ವಿಡಿಯೋ ದೃಶ್ಯಗಳಲ್ಲಿ ಕಾಣಿಸುತ್ತಿರುವಂತೆ, ಆತ ಆಕೆಯ (Underage girl) ಕುತ್ತಿಗೆಗೆ ಚಾಕು ತೋರಿಸಿ ಬೆದರಿಕೆ ಹಾಕುತ್ತಿದ್ದು, ಸುತ್ತಮುತ್ತ ಜನರು ಆತಂಕದಿಂದ ಕೂಗುತ್ತಿದ್ದರೂ ಕೂಡ ಯುವಕ ಯಾರ ಮಾತಿಗೂ ಕಿವಿಗೊಡದೆ ಬಾಲಕಿ (Underage girl) ಗೆ ಬೆದರಿಕೆ ಮುಂದುವರೆಸಿದ್ದಾನೆ.

ಘಟನೆಯ ಸಂದರ್ಭದಲ್ಲಿಯೇ ಸ್ಥಳೀಯ ಯುವಕನೋರ್ವ ಧೈರ್ಯ ತೋರಿ, ಸಮೀಪದ ಗೋಡೆಯೊಂದರ ಮೇಲೇರಿ ಹಿಂದಿನಿಂದ ಬಂದು ಆರೋಪಿಯನ್ನು ಹಿಡಿದು ಆಗಬಹುದಾದ ದುರ್ಘಟನೆಯಿಂದ ಬಾಲಕಿಯನ್ನು ರಕ್ಷಿಸಿದ್ದಾರೆ.

ತಕ್ಷಣ ಸ್ಥಳದಲ್ಲಿದ್ದ ಜನರು ಆತನ ಕೈಯಿಂದ ಚಾಕು ಕಿತ್ತುಕೊಂಡು ಆರೋಪಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಗೆ ಯಾವುದೇ ದೈಹಿಕ ಗಾಯವಾಗದಿರುವುದು ಸಹ ಶ್ಲಾಘನೀಯ.

ಆರೋಪಿ ಹಾಗೂ ಬಾಲಕಿ (Underage girl) ಒಂದೇ ಪ್ರದೇಶದವರು :

ಪ್ರಾಥಮಿಕ ವರದಿಗಳ ಪ್ರಕಾರ, ಆರೋಪಿ ಹಾಗೂ ಬಾಲಕಿ ಒಂದೇ ಪ್ರದೇಶದವರಾಗಿದ್ದು, ಈ ಘಟನೆಯ ಹಿಂದೆ ಏನು ಕಾರಣ ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕನ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಈ ಬಾಲಕಿ (Underage girl) ಯನ್ನು ಕಳೆದ ಕೆಲವು ದಿನಗಳಿಂದ ಬೆನ್ನಟ್ಟುವುದು, ಬೆದರಿಕೆ ಹಾಗೂ ಕಿರುಕುಳ ನೀಡುತ್ತಾ ಬಂದಿದ್ದಾನೆ ಎನ್ನಲಾಗುತ್ತಿದೆ. ಈ ನಡುವೆ ಆರೋಪಿಯೂ ಸಹ ಅಪ್ರಾಪ್ತ ಎಂದು ಹೇಳಲಾಗುತ್ತಿದೆ.

ವಿಡಿಯೋ :

https://twitter.com/i/status/1947308672461492552


Female PSI : ಬಿ ರಿಪೋರ್ಟ್‌ಗಾಗಿ ಲಂಚ : ಮಹಿಳಾ ಪಿಎಸ್‌ಐ ಲೋಕಾಯುಕ್ತ ಬಲೆಗೆ.!

Female PSI

ಜನಸ್ಪಂದನ ನ್ಯೂಸ್, ಬೆಂಗಳೂರು : ಗೋವಿಂದಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (Female PSI) ಸಾವಿತ್ರಿ ಬಾಯಿ ಅವರು ಬಿ ರಿಪೋರ್ಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ರೂ.1.25 ಲಕ್ಷಕ್ಕೆ ಬೇಡಿಕೆ ; ಹಣದೊಂದಿಗೆ ಬಂಧನ :

ಹೆಚ್‌ಬಿಆರ್ ಲೇಔಟ್ ನಿವಾಸಿ ಮೊಹಮದ್ ಯೂನಸ್ ವಿರುದ್ಧ ದಾಖಲಾದ ಪ್ರಕರಣದಲ್ಲಿ B ರಿಪೋರ್ಟ್ ಸಲ್ಲಿಸುವ ಸಲುವಾಗಿ ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಅವರು ರೂ.1.25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ದೂರುದಾರನಿಂದ ಹಣ ಸ್ವೀಕರಿಸುತ್ತಿದ್ದ ವೇಳೆ, DSP ಪೂವಯ್ಯ ನೇತೃತ್ವದ ಲೋಕಾಯುಕ್ತ ತಂಡ ಮಹಿಳಾ ಪಿಎಸ್‌ಐ (Female PSI) ಅವರನ್ನು ಹಣದ ಸಮೇತ ಬಂಧಿಸಿದೆ. ಪ್ರಸ್ತುತ ಅಧಿಕಾರಿಯ ವಿಚಾರಣೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣದ ಹಿಂದಿನ ಹಿನ್ನೆಲೆ ಏನು?

ಮದುವೆಯಾದರೂ ಕೂಡ ವಿಷಯ ತಿಳಿಸದೇ ಆರೋಪಿ ಮೊಹಮದ್ ಯೂನಸ್ ಮತ್ತೊಬ್ಬ ಯುವತಿಯ ಜೊತೆ ಸಹಜೀವನ ನಡೆಸುತ್ತಿದ್ದರು. ವಿಷಯ ಬೆಳಕಿಗೆ ಬಂದಾಗ ಯುವತಿ ಅವರನ್ನು ಪ್ರಶ್ನಿಸಲು ಹೋಗಿದ್ದಾಗ ಗಲಾಟೆ ಉಂಟಾಗಿ ಆಕೆಯ ಮೇಲೆ ಹಲ್ಲೆ ನಡೆದಿತ್ತು.

ಮೇ 5ರಂದು ಆರೋಪಿಯು ಯುವತಿಯನ್ನು ಮತ್ತೆ ಭೇಟಿಯಾಗಿ ದೂರು ವಾಪಸ್ ಪಡೆಯುವಂತೆ ಒತ್ತಡ ಹೇರಿದ್ದ. ಆಕೆ ನಿರಾಕರಿಸಿದಾಗ ಮತ್ತೊಮ್ಮೆ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಲೋಕಾಯುಕ್ತದಿಂದ ಕಟ್ಟುನಿಟ್ಟಿನ ಕ್ರಮ :

ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಹಣ (ಲಂಚ) ಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತವು ಕೈಚಳಕ ತೋರಿಸಿದ್ದು, ಇದೀಗ ಹಣದೊಂದಿಗೆ ಅಧಿಕಾರಿ (Female PSI) ಯನ್ನು ಬಂಧಿಸಿದೆ. ಸಲ್ಲದೆ ಆರೋಪದ ಬಗ್ಗೆ ಮುಂದಿನ ತನಿಖೆ ಮುಂದುವರೆದಿದೆ.

Female PSI : ಬಿ ರಿಪೋರ್ಟ್‌ಗಾಗಿ ಲಂಚ : ಮಹಿಳಾ ಪಿಎಸ್‌ಐ ಲೋಕಾಯುಕ್ತ ಬಲೆಗೆ.!

0

ಜನಸ್ಪಂದನ ನ್ಯೂಸ್, ಬೆಂಗಳೂರು : ಗೋವಿಂದಪುರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (Female PSI) ಸಾವಿತ್ರಿ ಬಾಯಿ ಅವರು ಬಿ ರಿಪೋರ್ಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ರೂ.1.25 ಲಕ್ಷಕ್ಕೆ ಬೇಡಿಕೆ ; ಹಣದೊಂದಿಗೆ ಬಂಧನ :

ಹೆಚ್‌ಬಿಆರ್ ಲೇಔಟ್ ನಿವಾಸಿ ಮೊಹಮದ್ ಯೂನಸ್ ವಿರುದ್ಧ ದಾಖಲಾದ ಪ್ರಕರಣದಲ್ಲಿ B ರಿಪೋರ್ಟ್ ಸಲ್ಲಿಸುವ ಸಲುವಾಗಿ ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಅವರು ರೂ.1.25 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ದೂರುದಾರನಿಂದ ಹಣ ಸ್ವೀಕರಿಸುತ್ತಿದ್ದ ವೇಳೆ, DSP ಪೂವಯ್ಯ ನೇತೃತ್ವದ ಲೋಕಾಯುಕ್ತ ತಂಡ ಮಹಿಳಾ ಪಿಎಸ್‌ಐ (Female PSI) ಅವರನ್ನು ಹಣದ ಸಮೇತ ಬಂಧಿಸಿದೆ. ಪ್ರಸ್ತುತ ಅಧಿಕಾರಿಯ ವಿಚಾರಣೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ಮಾಹಿತಿ ನೀಡಿವೆ.

ಪ್ರಕರಣದ ಹಿಂದಿನ ಹಿನ್ನೆಲೆ ಏನು?

ಮದುವೆಯಾದರೂ ಕೂಡ ವಿಷಯ ತಿಳಿಸದೇ ಆರೋಪಿ ಮೊಹಮದ್ ಯೂನಸ್ ಮತ್ತೊಬ್ಬ ಯುವತಿಯ ಜೊತೆ ಸಹಜೀವನ ನಡೆಸುತ್ತಿದ್ದರು. ವಿಷಯ ಬೆಳಕಿಗೆ ಬಂದಾಗ ಯುವತಿ ಅವರನ್ನು ಪ್ರಶ್ನಿಸಲು ಹೋಗಿದ್ದಾಗ ಗಲಾಟೆ ಉಂಟಾಗಿ ಆಕೆಯ ಮೇಲೆ ಹಲ್ಲೆ ನಡೆದಿತ್ತು.

ಮೇ 5ರಂದು ಆರೋಪಿಯು ಯುವತಿಯನ್ನು ಮತ್ತೆ ಭೇಟಿಯಾಗಿ ದೂರು ವಾಪಸ್ ಪಡೆಯುವಂತೆ ಒತ್ತಡ ಹೇರಿದ್ದ. ಆಕೆ ನಿರಾಕರಿಸಿದಾಗ ಮತ್ತೊಮ್ಮೆ ಹಲ್ಲೆ ನಡೆಸಿದ್ದಾನೆ. ಈ ಹಿನ್ನೆಲೆಯಲ್ಲಿ ಯುವತಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಲೋಕಾಯುಕ್ತದಿಂದ ಕಟ್ಟುನಿಟ್ಟಿನ ಕ್ರಮ :

ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಲು ಮಹಿಳಾ ಪಿಎಸ್‌ಐ (Female PSI) ಸಾವಿತ್ರಿ ಬಾಯಿ ಹಣ (ಲಂಚ) ಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಮಾಹಿತಿ ಮೇರೆಗೆ ಲೋಕಾಯುಕ್ತವು ಕೈಚಳಕ ತೋರಿಸಿದ್ದು, ಇದೀಗ ಹಣದೊಂದಿಗೆ ಅಧಿಕಾರಿ (Female PSI) ಯನ್ನು ಬಂಧಿಸಿದೆ. ಸಲ್ಲದೆ ಆರೋಪದ ಬಗ್ಗೆ ಮುಂದಿನ ತನಿಖೆ ಮುಂದುವರೆದಿದೆ.


“ಹಳ್ಳಕ್ಕೆ ಬಿದ್ದ ಬೆಳಗಾವಿ–ಮಂಗಳೂರು Bus : ಓರ್ವ ಸಾವು, 18 ಪ್ರಯಾಣಿಕರಿಗೆ ಗಾಯ”

Bus

ಜನಸ್ಪಂದನ ನ್ಯೂಸ್, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ ವೇಳೆಯಲ್ಲಿ ಬಸ್ (Bus) ಅಪಘಾತಕ್ಕಿಡಾಗಿದೆ.

ಈ ದುರ್ಘಟನೆಯಲ್ಲಿ (Bus accident) ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಅಪಘಾತಕ್ಕೆ ಒಳಗಾದ ವಾಹನ ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ (Bus) ಆಗಿದೆ.

ಬಸ್ (Bus) ಅಗಸೂರು ಬಳಿ ಇರುವ ಜಗದೀಶ ಡಾಬಾ ಎದುರುದಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಸೋಮವಾರ ಬೆಳಗಿನ 3 ಗಂಟೆ ಸುಮಾರಿಗೆ ಸಂಭವಿಸಿದೆ.

ಅಪಘಾತ ಸಂಭವಿಸುವ ವೇಳೆಗೆ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬಸ್ (Bus) ಉರುಳಿದ ಶಬ್ದದಿಂದ ಪ್ರಯಾಣಿಕರು ಬೆಚ್ಚಿಬಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಹಾಗೂ ಅಂಕೋಲಾ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ (Bus) ಮೇಲಕ್ಕೆತ್ತುವ ಸಂದರ್ಭದಲ್ಲಿ ಅದರೊಳಗೆ ಸಿಲುಕಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಯಿತು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಗಾಯಾಳುಗಳನ್ನು ತಕ್ಷಣವೇ ಅಂಕೋಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. Bus ಅಪಘಾತದ ದೃಶ್ಯವನ್ನು ನೋಡಿದರೆ ಇನ್ನು ಹೆಚ್ಚಿನ ಪ್ರಾಣಾಪಾಯ ಸಂಭವಿಸಿರಬಹುದೆಂಬ ಭಾವನೆ ಬರುತ್ತಿದೆ. ಆದರೆ ಅದೃಷ್ಟವಶಾತ್ ಅಂತ ಘಟನೆ ಸಂಭವಿಸಿಲ್ಲ ಎನ್ನಲಾಗುತ್ತಿದೆ.

Bus ಅಪಘಾತದ ವಿಡಿಯೋ :

https://twitter.com/i/status/1947154439535812776

ರೈಲು ಚಲಿಸುತ್ತಿರುವಾಗಲೇ ಕುಸಿದು ಬಿದ್ದ Bridge.!

0

ಜನಸ್ಪಂದನ ನ್ಯೂಸ್, ಡೆಸ್ಕ್ : ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಿಂದಾಗಿ ಧಂಗು ಬಳಿಯ ಚಕ್ಕಿ ನದಿಯ ಮೇಲಿರುವ ರೈಲ್ವೆ ಸೇತುವೆ (Bridge) ಯ ತಡೆಗೋಡೆ ಕುಸಿದು ಬಿದ್ದ ಘಟನೆ ಸೋಮವಾರ ಸಂಭವಿಸಿದೆ.

ಈ ಅಪಾಯಕರ ಸಂದರ್ಭದಲ್ಲಿ ರೈಲು ಸೇತುವೆ (Bridge) ಯ ಮೇಲೆ ಚಲಿಸುತ್ತಿತ್ತು, ಆದರೆ ಸುದೈವಶಾತ್ ರೈಲಿನ ಪ್ರಯಾಣಿಕರು ಯಾವುದೇ ತೊಂದರೆಯಾಗದೆ ಪವಾಡಸದೃಶವಾಗಿ ಪಾರಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಈ ಸೇತುವೆ (Bridge) ಯು ಧಂಗು ಪ್ರದೇಶವು ಹಿಮಾಚಲ ಮತ್ತು ಪಂಜಾಬ್ ರಾಜ್ಯಗಳ ಗಡಿಭಾಗದಲ್ಲಿ ನೆಲೆಸಿದೆ. ಈ ಸೇತುವೆ ಪಠಾಣ್ಕೋಟ್ ಮೂಲಕ ಸಾಗುವ ದೆಹಲಿ–ಜಮ್ಮು ರೈಲು ಮಾರ್ಗದ ಮುಖ್ಯ ಭಾಗವಾಗಿದೆ.

ಸೇತುವೆ (Bridge) ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಕಣ್ಣಾರೆ ಕಂಡಂತಿರುವ ಈ ಭಯಾನಕ ಕ್ಷಣಗಳು ಹಲವರಲ್ಲಿ ಆತಂಕ ಮೂಡಿಸಿದ್ದಿವೆ.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಾಂಗ್ರಾ ಜಿಲ್ಲೆಯ ನೂರ್ಪುರದ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ರತನ್ ಅವರು, “ಅತಿವೃಷ್ಟಿಯಿಂದ ಸೇತುವೆ (Bridge) ಯ ತಡೆಗೋಡೆ ಕುಸಿದಿದೆ. ಮುನ್ನೆಚ್ಚರಿಕೆಯ ಭಾಗವಾಗಿ ಧಂಗು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಮತ್ತು ಸಂಬಂಧಿತ ರೈಲ್ವೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ,” ಎಂದು ತಿಳಿಸಿದರು.

Bridge ವಿಡಿಯೋ :

https://twitter.com/i/status/1947223945918177684


“ಹಳ್ಳಕ್ಕೆ ಬಿದ್ದ ಬೆಳಗಾವಿ–ಮಂಗಳೂರು Bus : ಓರ್ವ ಸಾವು, 18 ಪ್ರಯಾಣಿಕರಿಗೆ ಗಾಯ”

Bus

ಜನಸ್ಪಂದನ ನ್ಯೂಸ್, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ ವೇಳೆಯಲ್ಲಿ ಬಸ್ (Bus) ಅಪಘಾತಕ್ಕಿಡಾಗಿದೆ.

ಈ ದುರ್ಘಟನೆಯಲ್ಲಿ (Bus accident) ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!

ಅಪಘಾತಕ್ಕೆ ಒಳಗಾದ ವಾಹನ ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ (Bus) ಆಗಿದೆ.

ಬಸ್ (Bus) ಅಗಸೂರು ಬಳಿ ಇರುವ ಜಗದೀಶ ಡಾಬಾ ಎದುರುದಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಸೋಮವಾರ ಬೆಳಗಿನ 3 ಗಂಟೆ ಸುಮಾರಿಗೆ ಸಂಭವಿಸಿದೆ.

ಅಪಘಾತ ಸಂಭವಿಸುವ ವೇಳೆಗೆ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬಸ್ (Bus) ಉರುಳಿದ ಶಬ್ದದಿಂದ ಪ್ರಯಾಣಿಕರು ಬೆಚ್ಚಿಬಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಹಾಗೂ ಅಂಕೋಲಾ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ (Bus) ಮೇಲಕ್ಕೆತ್ತುವ ಸಂದರ್ಭದಲ್ಲಿ ಅದರೊಳಗೆ ಸಿಲುಕಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಯಿತು.

ಇದನ್ನು ಓದಿ : IB ACIO II ನೇಮಕಾತಿ 2025 : 3,717 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಗಾಯಾಳುಗಳನ್ನು ತಕ್ಷಣವೇ ಅಂಕೋಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. Bus ಅಪಘಾತದ ದೃಶ್ಯವನ್ನು ನೋಡಿದರೆ ಇನ್ನು ಹೆಚ್ಚಿನ ಪ್ರಾಣಾಪಾಯ ಸಂಭವಿಸಿರಬಹುದೆಂಬ ಭಾವನೆ ಬರುತ್ತಿದೆ. ಆದರೆ ಅದೃಷ್ಟವಶಾತ್ ಅಂತ ಘಟನೆ ಸಂಭವಿಸಿಲ್ಲ ಎನ್ನಲಾಗುತ್ತಿದೆ.

Bus ಅಪಘಾತದ ವಿಡಿಯೋ :

https://twitter.com/i/status/1947154439535812776

“ಹಳ್ಳಕ್ಕೆ ಬಿದ್ದ ಬೆಳಗಾವಿ–ಮಂಗಳೂರು Bus : ಓರ್ವ ಸಾವು, 18 ಪ್ರಯಾಣಿಕರಿಗೆ ಗಾಯ”

0

ಜನಸ್ಪಂದನ ನ್ಯೂಸ್, ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ ವೇಳೆಯಲ್ಲಿ ಬಸ್ (Bus) ಅಪಘಾತಕ್ಕಿಡಾಗಿದೆ.

ಈ ದುರ್ಘಟನೆಯಲ್ಲಿ (Bus accident) ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 18 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿ : brain tumor : ಯಾರಿಗೆ ಬರುವ ಸಾಧ್ಯತೆ? ಈ ಲಕ್ಷಣಗಳಿದ್ದರೆ ಎಚ್ಚರಿಕೆಯಾಗಿರಿ.!

ಅಪಘಾತಕ್ಕೆ ಒಳಗಾದ ವಾಹನ ಬೆಳಗಾವಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ (Bus) ಆಗಿದೆ.

ಬಸ್ (Bus) ಅಗಸೂರು ಬಳಿ ಇರುವ ಜಗದೀಶ ಡಾಬಾ ಎದುರುದಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಘಟನೆ ಸೋಮವಾರ ಬೆಳಗಿನ 3 ಗಂಟೆ ಸುಮಾರಿಗೆ ಸಂಭವಿಸಿದೆ.

ಅಪಘಾತ ಸಂಭವಿಸುವ ವೇಳೆಗೆ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಬಸ್ (Bus) ಉರುಳಿದ ಶಬ್ದದಿಂದ ಪ್ರಯಾಣಿಕರು ಬೆಚ್ಚಿಬಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಸ್ಥಳೀಯರು ಹಾಗೂ ಅಂಕೋಲಾ ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಸ್ (Bus) ಮೇಲಕ್ಕೆತ್ತುವ ಸಂದರ್ಭದಲ್ಲಿ ಅದರೊಳಗೆ ಸಿಲುಕಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಯಿತು.

ಇದನ್ನು ಓದಿ : Schoolgirl : ಚುಡಾಯಿಸಿದಾತನಿಗೆ ನಡು ರಸ್ತೆಯಲ್ಲಿ ಧರ್ಮದೇಟು ಕೊಟ್ಟ ಶಾಲಾ ವಿದ್ಯಾರ್ಥಿನಿ.!

ಗಾಯಾಳುಗಳನ್ನು ತಕ್ಷಣವೇ ಅಂಕೋಲಾ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿರುವವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. Bus ಅಪಘಾತದ ದೃಶ್ಯವನ್ನು ನೋಡಿದರೆ ಇನ್ನು ಹೆಚ್ಚಿನ ಪ್ರಾಣಾಪಾಯ ಸಂಭವಿಸಿರಬಹುದೆಂಬ ಭಾವನೆ ಬರುತ್ತಿದೆ. ಆದರೆ ಅದೃಷ್ಟವಶಾತ್ ಅಂತ ಘಟನೆ ಸಂಭವಿಸಿಲ್ಲ ಎನ್ನಲಾಗುತ್ತಿದೆ.

Bus ಅಪಘಾತದ ವಿಡಿಯೋ :

https://twitter.com/i/status/1947154439535812776

brain tumor : ಯಾರಿಗೆ ಬರುವ ಸಾಧ್ಯತೆ? ಈ ಲಕ್ಷಣಗಳಿದ್ದರೆ ಎಚ್ಚರಿಕೆಯಾಗಿರಿ.!

brain tumor

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಬ್ರೈನ್ ಟ್ಯೂಮರ್ (brain tumor) ಅಥವಾ ಮೆದುಳಿನ ಗೆಡ್ಡೆ ಎಂದು ಕರೆಯುವ ಈ ರೋಗ ಯಾರಿಗೆ ಬರುವ ಸಾಧ್ಯತೆ ಹೆಚ್ಚು.! ಒಂದು ವೇಳೆ ಈ ಲಕ್ಷಣಗಳಿದ್ದರೆ ಎಚ್ಚರಿಕೆಯಾಗಿರಿ, ಏಕೆಂದರೆ ಇದು ಬ್ರೈನ್ ಟ್ಯೂಮರ್ (brain tumor)  ಆಗಿರಬಹುದು.

ವಿಶ್ವದಾದ್ಯಂತ ಆರೋಗ್ಯ ಸಮಸ್ಯೆಗಳ ಪೈಕಿ ಅತ್ಯಂತ ಗಂಭೀರ ಮತ್ತು ಜೀವಘಾತಕವಾದವುಗಳಲ್ಲಿ ಮೆದುಳಿನ ಗೆಡ್ಡೆ (brain tumor) ನ್ನು  ಒಂದು ಎಂದು ಪರಿಗಣಿಸಲಾಗಿದೆ. ಮೆದುಳಿನ ಜೀವಕೋಶಗಳು ನಿಯಂತ್ರಣವಿಲ್ಲದಂತೆ ಬೆಳೆಯಲು ಪ್ರಾರಂಭವಾದಾಗ ಈ ರೋಗ ರೂಪುಗೊಳ್ಳುತ್ತದೆ. ತಕ್ಷಣ ಪತ್ತೆಯಾಗದಿದ್ದರೆ ಇದು ಜೀವಕ್ಕೆ ತುಂಬಾ ಅಪಾಯಕಾರಿ. ಆದುದ್ದರಿಂದ ಸರಿಯಾದ ಸಮಯದಲ್ಲಿ ಚಿಕಿತ್ಸೆ ಅತ್ಯಾವಶ್ಯಕ.

ಹೆಚ್ಚುತ್ತಿರುವ ನರ ರೋಗಗಳ ಪ್ರಮಾಣ :

ಇತ್ತೀಚಿನ ವರ್ಷಗಳಲ್ಲಿ ಬ್ರೈನ್ ಟ್ಯೂಮರ್, ಬ್ರೈನ್ ಸ್ಟ್ರೋಕ್, ಡಿಮೆಂಚಿಯಾ, ಆಲ್ಝೈಮರ್ (Brain tumor, brain stroke, dementia, Alzheimer’s) ನಂತಹ ಮುಂತಾದ ನರವೈಜ್ಞಾನಿಕ (Neurological) ಕಾಯಿಲೆಗಳ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಮೆದುಳು (brain) ನಮ್ಮ ದೇಹದ ಕಂಟ್ರೋಲ್ ಸೆಂಟರ್ (Control Center) ಆಗಿರುವುದರಿಂದ, ಇದಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡುವುದು ಖಂಡಿತಾ ತಪ್ಪು.

ಬ್ರೈನ್ ಟ್ಯೂಮರ್ (brain tumor) ಲಕ್ಷಣಗಳೆವು? 
ಹೆಚ್ಚಾಗಿ ಕಂಡುಬರುವ ಪ್ರಮುಖ ಲಕ್ಷಣಗಳು ಇಂತಿವೆ :
  • ನಿರಂತರ ತಲೆನೋವು.
  • ತೀವ್ರವಾದ ಸ್ಮರಣಶಕ್ತಿ ನಷ್ಟ.
  • ತಲೆಯ ಗಾತ್ರದಲ್ಲಿ ಅನಿಯಮಿತ ಬದಲಾವಣೆ.
  • ಅಪಘಾತದಿಂದ ತಲೆಗೆ ಗಾಯ ಅಥವಾ ಗೊಂದಲ.
  • ವಾಕ್ ತೊಂದರೆ, ದೃಷ್ಟಿದೋಷಗಳು.

ಈ ರೀತಿಯ ಲಕ್ಷಣಗಳು ಕಂಡುಬಂದಾಗ ವೈದ್ಯಕೀಯ ತಪಾಸಣೆ ಮತ್ತು ಸಕಾಲಿಕ ಚಿಕಿತ್ಸೆ ಅತ್ಯಗತ್ಯ.

ಯಾರಿಗೆ ಹೆಚ್ಚು ಬರಬಹುದು.?
  • ಆನುವಂಶಿಕತೆಯ ಪ್ರಭಾವ : ಕುಟುಂಬದಲ್ಲಿ ಯಾರಿಗಾದರೂ ಈ ಕಾಯಿಲೆ ಇದ್ದಿದ್ದರೆ, ಇತರ ಸದಸ್ಯರಿಗೂ ಇದರ ಅಪಾಯ ಹೆಚ್ಚಿರುತ್ತದೆ.

  • ವಿಕಿರಣ ಚಿಕಿತ್ಸೆಯ ಇತಿಹಾಸ : ದೀರ್ಘಕಾಲದವರೆಗೆ ರೇಡಿಯೇಶನ್ ಅಥವಾ ಕ್ಯಾನ್ಸರ್ ಚಿಕಿತ್ಸೆಗೆ ಒಳಪಟ್ಟವರು ಅಪಾಯಕ್ಕೆ ಗುರಿಯಾಗಬಹುದು.

  • ರಾಸಾಯನಿಕದ ಒಡಕು : ಕೈಗಾರಿಕಾ ಪ್ರದೇಶಗಳಲ್ಲಿ ಕೆಲಸಮಾಡುವವರು, ಅದರಲ್ಲೂ ವಿಶೇಷವಾಗಿ ಕೀಟನಾಶಕ, ರಬ್ಬರ್, ತೈಲ ಉತ್ಪನ್ನಗಳ ಸಂಪರ್ಕದಲ್ಲಿರುವವರು ಈ ರೋಗದ ಅಪಾಯದ ವಲಯದಲ್ಲಿರುತ್ತಾರೆ.

  • ಅನಾರೋಗ್ಯಕರ ಜೀವನಶೈಲಿ : ಹೆಚ್ಚು ಕೊಬ್ಬಿರುವ ಆಹಾರ, ವ್ಯಾಯಾಮದ ಕೊರತೆ, ಧೂಮಪಾನ, ನಿಯಮಿತ ಆಹಾರಪದ್ಧತಿಯ ಕೊರತೆ.

  • ಆನುವಂಶಿಕ ಅಸ್ವಸ್ಥತೆಗಳು : ಲಿ-ಫ್ರಾಮಿನಿ ಸಿಂಡ್ರೋಮ್, ನ್ಯೂರೋಫೈಬ್ರೊಮಾಟೋಸಿಸ್, ಟ್ಯೂಬರ್ ಸ್ಕ್ಲೆರೋಸಿಸ್ (Li-Framini syndrome, neurofibromatosis, tuberous sclerosis) ಮುಂತಾದ ಜನನಪೂರ್ವ ಸ್ಥಿತಿಗಳು ಕೂಡ ಕಾರಣವಾಗಬಹುದು.

ವಯಸ್ಸು ಮತ್ತು ಲಿಂಗದ ಪ್ರಭಾವ :

ಸಂಶೋಧನೆಗಳ ಪ್ರಕಾರ, ಪುರುಷರಲ್ಲಿ ಮಹಿಳೆಯರಿಗಿಂತ ಈ ಕಾಯಿಲೆಯ ಸಂಭವನೀಯತೆ ಸ್ವಲ್ಪ ಹೆಚ್ಚಾಗಿದೆ. ಹೆಚ್ಚಾಗಿ 15 ರಿಂದ 39 ವರ್ಷದ ನಡುವೆ ಈ ರೋಗ (brain tumor) ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚು. ವಯಸ್ಸು ಹೆಚ್ಚಾದಂತೆ ಅಪಾಯವೂ ಅಧಿಕವಾಗುತ್ತದೆ.

ರಕ್ಷಣೆ ಸಾಧ್ಯ :

ಆರೋಗ್ಯಕರ ಆಹಾರ ಸೇವನೆ, ನಿತ್ಯ ವ್ಯಾಯಾಮ, ಪರಿಸರದ ಮೇಲೆ ಎಚ್ಚರಿಕೆ ಮತ್ತು ಸಮಯಕ್ಕೆ ತಕ್ಕ ವೈದ್ಯಕೀಯ ತಪಾಸಣೆಗಳ ಮೂಲಕ ಮೆದುಳಿನ ಗೆಡ್ಡೆ (brain tumor) ಯ ಅಪಾಯವನ್ನು ತಡೆಯಬಹುದಾಗಿದೆ. ಕುಟುಂಬದ ಇತಿಹಾಸವಿದ್ದರೆ ನಿಯಮಿತವಾಗಿ ತಜ್ಞರ ಬಳಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.