Home Blog Page 59

Driver : ಬಸ್ ಚಾಲಕನ ಮೇಲೆ ಹಲ್ಲೆ : ಹೆಡ್‌ ಕಾನ್ಸ್‌ಟೆಬಲ್ ವಿರುದ್ಧ FIR.!

0

ಜನಸ್ಪಂದನ ನ್ಯೂಸ್‌, ಕೂಡ್ಲಿಗಿ : ಬಸ್ ಚಾಲಕ (Driver) ನೋರ್ವನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಹೆಡ್‌ ಕಾನ್ಸ್‌ಟೆಬಲ್ ವಿರುದ್ಧ FIR ದಾಖಲಾಗಿರುವ ಘಟನೆ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹರಿಹರ ಡಿಪೋಗೆ ಸೇರಿದ ಸಾರಿಗೆ ಬಸ್ ಬಳ್ಳಾರಿಗೆ ಹೋಗುತ್ತಿದ್ದ ವೇಳೆ ಕೊಟ್ಟೂರಿನಿಂದ ಕೂಡ್ಲಿಗಿ ಬರುವ ರಸ್ತೆಯಲ್ಲಿನ ಮಲ್ಲನಾಯಕಹಳ್ಳಿ ಬಳಿ ಬಂದಾಗ ಬಸ್ ಚಾಲಕ (Driver) ರಾಮಲಿಂಗಪ್ಪ ಕೂಡ್ಲಿಗಿ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಮಂಜುನಾಥ ಹಾಗೂ ಇನ್ನೊಬ್ಬ ಕಾನ್‌ಸ್ಟೆಬಲ್‌ ಇದ್ದ ಬೈಕ್‌ನ್ನು ಹಿಂದಿಕ್ಕಲು ಪ್ರಯತ್ನಿಸಿದ್ದಾರೆ.

ಇದನ್ನು ಓದಿ : Affair : ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಹತ್ಯೆ : ಬಳಿಕ ಆರೋಪಿ ನೇಣಿಗೆ ಶರಣು.!

ಆಗ ಇನ್ನೇನು ಬೈಕ್ ಹಿಂದಿಕ್ಕಬೇಕು ಅನ್ನುವಷ್ಟರಲ್ಲಿ ಎದುರಿನಿಂದ ಕಾರೊಂದು ಬಂದಿದೆ. ಕೂಡಲೇ ಗಮನಿಸಿದ ಬಸ್ ಚಾಲಕ (Driver) ರಾಮಲಿಂಗಪ್ಪ ಬಸ್‌ನ್ನು ಎಡಕ್ಕೆ ಎಳೆದುಕೊಂಡಿದ್ದಾರೆ. ಈ ವೇಳೆ ಬಸ್‌ನ ಹಿಂಭಾಗ ಬೈಕ್‌ನ ಹ್ಯಾಂಡಲ್‌ಗೆ ಸ್ವಲ್ಪ ತಾಗಿದಂತೆ ಆಯಿತು.

ಆಗ ಚಾಲಕ (Driver) ಮಿರರ್‌ನಲ್ಲಿ ಪರಿಶೀಲಿಸಿದರೂ ಅಂತಹ ಅವಘಡದ ಲಕ್ಷಣ ಕಾಣದೇ ಇದ್ದ ಕಾರಣ ಬಸ್ ಮುಂದುವರಿಸಿದರು. ಕೆಲವೇ ಹೊತ್ತಿನಲ್ಲಿ ಗಜಾಪೂರ ಹತ್ತಿರ ಮಂಜುನಾಥ ಬಸ್ ನಿಲ್ಲಿಸಿ ಒಳಗೆ ಬಂದು, ಚಾಲಕನಿಗೆ ಪ್ರಶ್ನೆ ಮಾಡದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದರು. ನಂತರ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಚಾಲಕ (Driver) ನ ಮೇಲೆ ಹಲ್ಲೆ ನಡೆಸಿ, ಜೇಬಿನಲ್ಲಿದ್ದ ಮೊಬೈಲ್‌ನ್ನು ಕಿತ್ತುಕೊಂಡು “ಸ್ಟೇಷನ್‌ಗೆ ಬಾ” ಎಂದು ಹೇಳಿ ಇಳಿದು ಹೋದರು.

ಇದನ್ನು ಓದಿ : ಬೆಳಗಾವಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ; maulvi ಬಂಧನ.!

ಚಾಲಕ (Driver) ಮೊಬೈಲ್ ಮರಳಿಸುವಂತೆ ವಿನಂತಿಸಿದಾಗ, ಮಂಜುನಾಥ ಮತ್ತಷ್ಟು ಆಕ್ರೋಶಗೊಂಡು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಡ್‌ ಕಾನ್ಸ್‌ಟೆಬಲ್ ಮಂಜುನಾಥ ವಿರುದ್ಧ ಎಫ್‌ಐಆರ್ ನೋಂದಾಯಿಸಲಾಗಿದೆ.

ಮಾಹಿತಿಯ ಪ್ರಕಾರ, ಘಟನೆಯ ಸಮಯದಲ್ಲಿ ಮಂಜುನಾಥ ಕರ್ತವ್ಯದಲ್ಲಿರಲಿಲ್ಲ. ಕರ್ತವ್ಯ ನಿರತ ಸರ್ಕಾರಿ ನೌಕರನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರಿಗೆ ನೌಕರರು, ಆರೋಪಿಯನ್ನು ತಕ್ಷಣ ಬಂಧಿಸಿ ಸೇವೆಯಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.


ಬೆಳಿಗ್ಗೆ 1 ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪ್ರಯೋಜನಗಳು.!

ABC Juice

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.

ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.

ರೋಗನಿರೋಧಕ ಶಕ್ತಿ :

ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!
ಜೀರ್ಣಕ್ರಿಯೆ ಸುಧಾರಣೆ :

ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಲಾಭಕಾರಿ :

ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ದೇಹದ ನಿರ್ವಿಷೀಕರಣ :

ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.

ತೂಕ ನಿಯಂತ್ರಣ :

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.

ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.

ಬೆಳಿಗ್ಗೆ 1 ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪ್ರಯೋಜನಗಳು.!

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಎಷ್ಟೊಂದು ಅದ್ಭುತ ಪ್ರಯೋಜನಗಳು ಸಿಗುತ್ತವೇ ಗೊತ್ತಾ.?. ಬನ್ನಿ ಆ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ.!

ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವವರಿಂದ ABC ಜ್ಯೂಸ್ (Apple, Beetroot, Carrot) ಜನಪ್ರಿಯತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೇಬು, ಬೀಟ್‌ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರಾಗುವ ಈ ಪಾನೀಯವು ರುಚಿಕರವಾಗಿರುವುದರ ಜೊತೆಗೆ ಪೋಷಕಾಂಶಗಳಿಂದ ಕೂಡಿದೆ.

ಇದನ್ನು ಓದಿ : ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ABC ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಹಲವು ರೀತಿಯ ಆರೋಗ್ಯ ಲಾಭಗಳು ದೊರೆಯುತ್ತವೆ ಎಂದು ತಜ್ಞರು ಹೇಳುತ್ತಾರೆ. ಹಾಗಾದ್ರೆ ಯಾವ್ಯಾವ ಪ್ರಯೋಜಗಳು ಸಿಗುತ್ತವೆ ಅಂತ ತಿಳಿಯೋಣ.

ರೋಗನಿರೋಧಕ ಶಕ್ತಿ :

ಸೇಬು ಮತ್ತು ಬೀಟ್‌ರೂಟ್‌ನಲ್ಲಿರುವ ವಿಟಮಿನ್ C ಹಾಗೂ ಕ್ಯಾರೆಟ್‌ನಲ್ಲಿನ ಬೇಟಾ-ಕ್ಯಾರೋಟಿನ್ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದನ್ನು ಓದಿ : ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!
ಜೀರ್ಣಕ್ರಿಯೆ ಸುಧಾರಣೆ :

ABC ಜ್ಯೂಸ್‌ನಲ್ಲಿ ಇರುವ ಹೆಚ್ಚಿನ ಫೈಬರ್ ಜೀರ್ಣಾಂಗದ ಚಟುವಟಿಕೆಯನ್ನು ಉತ್ತೇಜಿಸಿ ಮಲಬದ್ಧತೆ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಿಯಮಿತ ಸೇವನೆ ಕರುಳಿನ ಚಲನೆ ಸುಗಮಗೊಳಿಸುತ್ತದೆ.

ಚರ್ಮದ ಆರೋಗ್ಯಕ್ಕೆ ಲಾಭಕಾರಿ :

ವಿಟಮಿನ್ A ಮತ್ತು C ಜೊತೆಗೆ ಆಂಟಿ-ಆಕ್ಸಿಡೆಂಟ್‌ಗಳು ಚರ್ಮಕ್ಕೆ ಹೊಳಪು ನೀಡುತ್ತವೆ, ವಯಸ್ಸಿನ ಲಕ್ಷಣಗಳನ್ನು ತಗ್ಗಿಸುತ್ತವೆ ಹಾಗೂ ಮೊಡವೆ-ಸುಕ್ಕುಗಳನ್ನು ಕಡಿಮೆ ಮಾಡುತ್ತವೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ದೇಹದ ನಿರ್ವಿಷೀಕರಣ :

ABC ಜ್ಯೂಸ್ ಯಕೃತ್ತಿನ ಕಾರ್ಯವನ್ನು ಬೆಂಬಲಿಸಿ ಜೀರ್ಣಾಂಗ ವ್ಯವಸ್ಥೆಯಿಂದ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಕರಿಸುತ್ತದೆ. ಇದರಿಂದ ದೇಹ ಶುದ್ಧವಾಗಿರಲು ಸಹಾಯವಾಗುತ್ತದೆ.

ತೂಕ ನಿಯಂತ್ರಣ :

ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿರುವುದರಿಂದ ಹೊಟ್ಟೆ ತುಂಬಿದ ಭಾವನೆ ದೀರ್ಘಕಾಲ ಉಳಿಯುತ್ತದೆ. ಇದು ಕ್ಯಾಲೋರಿ ಸೇವನೆಯನ್ನು ಕಡಿಮೆಮಾಡಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಿ ತೂಕ ಇಳಿಕೆಗೆ ನೆರವಾಗುತ್ತದೆ.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಆರೋಗ್ಯ ತಜ್ಞರ ಸಲಹೆ ಪ್ರಕಾರ, ಪ್ರತಿದಿನ ಬೆಳಿಗ್ಗೆ ಒಂದು ಗ್ಲಾಸ್ ABC ಜ್ಯೂಸ್ ಕುಡಿಯುವುದರಿಂದ ದೇಹದ ಸಮಗ್ರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಬಹುದು.

ABC juice : ABC juice is a simple yet effective way to infuse nutrients into your diet. Although it is not new to the market, it has recently gained popularity, mainly because it may help fight cancer.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್‌ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್‌ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.


ISRO (LPSC) ದಲ್ಲಿ 10ನೇ ತರಗತಿಯಿಂದ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗವಕಾಶ.!

ISRO (LPSC)

ಜನಸ್ಪಂದನ ನ್ಯೂಸ್‌, ನೌಕರಿ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯ ಲಿಕ್ವಿಡ್ ಪ್ರಪಲ್ಷನ್ ಸಿಸ್ಟಮ್ಸ್ ಸೆಂಟರ್ (LPSC) ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಇದನ್ನು ಓದಿ : KFD : “ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6,000 ಹೊಸ ಹುದ್ದೆಗಳ ನೇಮಕಾತಿಗೆ ಸಿದ್ಧತೆ”.!
ಖಾಲಿ ಹುದ್ದೆಗಳ ವಿವರ :
  • ವಿಭಾಗ : ISRO – LPSC.
  • ಒಟ್ಟು ಹುದ್ದೆಗಳ ಸಂಖ್ಯೆ : 23.
  • ಉದ್ಯೋಗ ಸ್ಥಳ : ಬೆಂಗಳೂರು ಮತ್ತು ತಿರುವನಂತಪುರಂ.
  • ಅಪ್ಲಿಕೇಶನ್ ವಿಧಾನ : ಆನ್‌ಲೈನ್.
ಹುದ್ದೆಗಳ ಹೆಸರುಗಳು :
    • ತಾಂತ್ರಿಕ ಸಹಾಯಕ.
    • ತಂತ್ರಜ್ಞ.
    • ಚಾಲಕ.
ವೇತನ ಶ್ರೇಣಿ :
  • ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಕಾನೂನುಬದ್ಧ ವೇತನ ಸೌಲಭ್ಯವಿದ್ದು, ಸಂಬಳ ಶ್ರೇಣಿ ರೂ.19,900/- ರಿಂದ ರೂ.1,42,400/- ರ ವರೆಗೆ ಇರುತ್ತದೆ.
ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?
ವಯೋಮಿತಿ (Age Limit) :
  • ಕನಿಷ್ಠ: 18 ವರ್ಷ
  • ಗರಿಷ್ಠ: 35 ವರ್ಷ
  • ಸರ್ಕಾರದ ನಿಯಮಾನುಸಾರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯಿಸಬಹುದು.
ಶೈಕ್ಷಣಿಕ ಅರ್ಹತೆ :

ಅಧಿಕೃತ ISRO (LPSC) ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಐಟಿಐ, ಡಿಪ್ಲೊಮಾ ಅಥವಾ ಬಿ.ಎಸ್ಸಿ ವಿದ್ಯಾರ್ಹತೆ ಪಡೆದಿರಬೇಕು.

ಇದನ್ನು ಓದಿ : Modelಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಯುವಕ ; ಅನಾಚಾರದ ವಿಡಿಯೋ ವೈರಲ್.!
ಅರ್ಜಿ ಶುಲ್ಕ (Application Fee) :
  • ಮಹಿಳಾ, SC/ST, PwBD ಹಾಗೂ ಮಾಜಿ ಸೈನಿಕರು : ಯಾವುದೇ ಶುಲ್ಕವಿಲ್ಲ.
  • ಇತರೆ ಅಭ್ಯರ್ಥಿಗಳು : ರೂ.750/-
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ ISRO (LPSC) ವೆಬ್‌ಸೈಟ್‌ಗೆ ಭೇಟಿ ನೀಡಿ : lpsc.gov.in.
  2. ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಸಂಪೂರ್ಣ ಓದಿಕೊಳ್ಳಿ.
  3. ಆನ್‌ಲೈನ್ ಅರ್ಜಿ ಲಿಂಕ್‌ನಲ್ಲಿ ಹೋಗಿ.
  4. ಅಗತ್ಯ ಮಾಹಿತಿಗಳನ್ನು ನಮೂದಿಸಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ.
  5. ಶುಲ್ಕ ಪಾವತಿ (ಅನ್ವಯಿಸುತ್ತಿದ್ದರೆ) ಮಾಡಿ.
  6. ಅರ್ಜಿಯನ್ನು ಪರಿಶೀಲಿಸಿ ಹಾಗೂ ಸಲ್ಲಿಸಿ.
  7. ಫಾರ್ಮ್‌ನ ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಇದನ್ನು ಓದಿ : ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!
ಮುಖ್ಯ ದಿನಾಂಕಗಳು :
  • ಅರ್ಜಿಯ ಪ್ರಾರಂಭ ದಿನಾಂಕ : 12 ಆಗಸ್ಟ್ 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಆಗಸ್ಟ್ 2025.
ಮಹತ್ವದ ಲಿಂಕ್‌ಗಳು :

Note : ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ISRO (LPSC) ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳುವುದು ಅತ್ಯಗತ್ಯ. ಇದರಲ್ಲಿ ಅರ್ಹತೆ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ ಹಾಗೂ ಇತರೆ ನಿಯಮಗಳು ಸ್ಪಷ್ಟವಾಗಿ ನೀಡಲಾಗಿದೆ.

Disclaimer : The above given information is available On online, candidates should check it properly before applying. This is for information only.

Modelಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದ ಯುವಕ ; ಅನಾಚಾರದ ವಿಡಿಯೋ ವೈರಲ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ದೆಹಲಿಯ ರಾಜೀವ್ ಚೌಕ್‌ನಲ್ಲಿ ಆಗಸ್ಟ್ 2 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಕ್ಯಾಬ್‌ಗಾಗಿ ಕಾಯುತ್ತಿದ್ದ ಮಹಿಳಾ ಮಾಡೆಲ್‌ (model) ಒಬ್ಬರಿಗೆ ಹಾಡಹಗಲೇ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಘೋರ ಘಟನೆ ಬೆಳಕಿಗೆ ಬಂದಿದೆ.

ದೆಹಲಿ-ಜೈಪುರ ಹೆದ್ದಾರಿಯ ಬಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಾಡೆಲ್ (model) ತಾನೇ ಈ ಸಂಬಂಧ ವಿಡಿಯೋವನ್ನು ಸಾಮಾಜಿಕ ಜಾಲತಾಣ ‘X’ ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ : Affair : ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಹತ್ಯೆ : ಬಳಿಕ ಆರೋಪಿ ನೇಣಿಗೆ ಶರಣು.!

ಮಾಡೆಲ್ (model) ಹೇಳುವಂತೆ, “ನಾನು ಕ್ಯಾಬ್‌ಗಾಗಿ ಕಾಯುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ನಿರಂತರವಾಗಿ ನನ್ನ ಕಡೆ ನೋಡುತ್ತಾ, ತನ್ನ ಪ್ಯಾಂಟಿನ ಜಿಪ್‌ನ್ನು ತೆರೆದು ಅಸಭ್ಯವಾಗಿ ನಡೆದುಕೊಂಡ. ಆ ಕ್ಷಣದಲ್ಲಿ ನನಗೆ ಆಘಾತವಾಯಿತು. ನಾನು ತಕ್ಷಣವೆ ನನ್ನ ಫೋನ್‌ನಲ್ಲಿ ಈ ದೃಶ್ಯವನ್ನು ರೆಕಾರ್ಡ್ ಮಾಡಿದೆ.” ಎಂದಿದ್ದಾರೆ.

ಅವರು ಈ ವಿಡಿಯೋವನ್ನು ಪೋಸ್ಟ್ ಮಾಡುವಾಗ ದೆಹಲಿ ಪೊಲೀಸರು, ಸಂಬಂಧಿತ ಅಧಿಕಾರಿಗಳು ಹಾಗೂ ಮಹಿಳಾ ಆಯೋಗದ ಅಧಿಕಾರಿಗಳನ್ನು ಟ್ಯಾಗ್ ಮಾಡಿದರೂ ಯಾವುದೇ ಸ್ಪಂದನೆ ಬಂದಿಲ್ಲ ಎಂದು model ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯು ವಿಡಿಯೋ ಮೂಲಕ ತನ್ನ ಭಾವನೆಗಳನ್ನು ಹಂಚಿಕೊಂಡಿದ್ದು, “ಆ ಕ್ಷಣದಲ್ಲಿ ನಾನು ಬಹಳ ಭಯಗೊಂಡಿದ್ದೆ. ಜನರು ನಾನು ತಕ್ಷಣ ಪ್ರತಿಕ್ರಿಯೆ ನೀಡಬೇಕಿತ್ತು ಎಂದು ಹೇಳುತ್ತಾರೆ. ಆದರೆ, ಅಂಥ ಸಂದರ್ಭಗಳಲ್ಲಿ ಮಹಿಳೆಯೊಬ್ಬಳ ಮನಸ್ಸಿನಲ್ಲಿ ಏನು ನಡೆಯುತ್ತದೆ ಎಂಬುದನ್ನು ಎಲ್ಲರಿಗೂ ಅರ್ಥವಾಗುವುದಿಲ್ಲ. ನಾನು ಸುರಕ್ಷಿತವಾಗಿರಬೇಕು ಎಂಬುದು ನನ್ನ ಪ್ರಾಥಮಿಕ ಗುರಿಯಾಗಿತ್ತು” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿ : ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!

ವಿಡಿಯೋ ವ್ಯಾಪಕವಾಗಿ ವೈರಲ್ ಆದ ನಂತರ, ಗುರ್ಗಾಂವ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ IPC ಸೆಕ್ಷನ್ 78 ಮತ್ತು 75(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೆ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತಾಗಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗಾಗುವ ಅನಾಚಾರ ಘಟನೆಗಳಿಗೆ ಕಾನೂನು ಇಲಾಖೆ ತಕ್ಷಣ ಸ್ಪಂದಿಸುವ ಅಗತ್ಯವಿದೆ ಎಂಬ ಬೇಡಿಕೆ ಕೇಳಿಬರುತ್ತಿದೆ.

Model ವಿಡಿಯೋ : ಇಲ್ಲಿ ಕ್ಲಿಕ್‌ ಮಾಡಿ.

ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!

CCTV

ಜನಸ್ಪಂದನ ನ್ಯೂಸ್‌, ನವದೆಹಲಿ : ಮನೆಯಲ್ಲಿ ಪತಿ ಇಲ್ಲದ ವೇಳೆ ಸೊಸೆಯೋರ್ವಳು ಅತ್ತೆ ಮೇಲೆ ಅಮಾನುಷ ಹಲ್ಲೆ ಮಾಡಿರುವ ಘಟನೆಯ ಸಿಸಿಟಿವಿ (CCTV) ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಈ CCTV ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೊಸೆಯೊಬ್ಬಳು ತನ್ನ ಅತ್ತೆ ಹಲ್ಲೆ ನಡೆಸಿದ ಘಟನೆ ಸಿಸಿಟಿವಿ (CCTV) ಯಲ್ಲಿ ಸೆರೆಯಾಗಿದೆ. ಈ ಘಟನೆ ದೊಡ್ಡ ಚರ್ಚೆಯ ವಿಷಯವಾಗಿದ್ದು, ಪತಿ-ಪತ್ನಿ ನಡುವಿನ ಕೌಟುಂಬಿಕ ಕಲಹದಿಂದ ಸಂಭವಿಸಿದೆ ಎನ್ನಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಅಗಷ್ಟ 07 ರ ದ್ವಾದಶ ರಾಶಿಗಳ ಫಲಾಫಲ.!

ಮಾಹಿತಿಯಂತೆ, ಈ ದಂಪತಿಗೆ ಕಳೆದ ಕೆಲ ಸಮಯದಿಂದ ಪರಸ್ಪರ ಭಿನ್ನಾಭಿಪ್ರಾಯಗಳಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪತಿ ತಾಯಿಯೊಂದಿಗೆ ವಾಸವಿದ್ದರೆ, ಪತ್ನಿ ಬೇರೆ ಬಾಡಿಗೆ ಮನೆಯಲ್ಲಿ ಬದುಕುತ್ತಿದ್ದಳು. ಪತ್ನಿಗೆ ಸಾಸು ತನ್ನ ಗಂಡನಿಗೆ ತನ್ನ ವಿರುದ್ಧ ಕಿವಿಮಾತು ಹೇಳುತ್ತಿದ್ದಾಳೆ ಎಂಬ ಅನುಮಾನವಿದ್ದುದರಿಂದ, ಈ ಘಟನೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಅತ್ತೆ ಮನೆಯೊಳಗೆ ನುಗ್ಗಿದ ಸೊಸೆ :

ಪತಿ ಮನೆಯಲ್ಲಿಲ್ಲದಿದ್ದ ಸಂದರ್ಭದಲ್ಲಿ ಸೊಸೆ ತಕ್ಷಣವೇ ಅತ್ತೆ ಮನೆಗೆ ತೆರಳಿ ಬಾಗಿಲು ತಟ್ಟಿದ್ದಳು. ಅತ್ತೆ ಬಾಗಿಲು ತೆರೆದ ಕೂಡಲೇ ಸೊಸೆ ಗಾಬರಿಯಾಗಿ ಮನೆಯೊಳಗೆ ನುಗ್ಗಿದ್ದಳು. ಬಳಿಕ ಮಾತಿನ ಚಕಮಕಿ ಆರಂಭವಾಗಿ, ಅದೇ ಕ್ಷಣದಲ್ಲಿ ವಿಷಯ ಕೈಮೀರಿ ಸೊಸೆ ಹಲ್ಲೆಗೆ ಮುಂದಾಗಿದ್ದಳು.

ಇದನ್ನು ಓದಿ : Affair : ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಹತ್ಯೆ : ಬಳಿಕ ಆರೋಪಿ ನೇಣಿಗೆ ಶರಣು.!

ಅತ್ತೆಯನ್ನು ನೆಲಕ್ಕೆ ತಳ್ಳಿ ತೀವ್ರ ಗಾಯಗಳಾಗುವಂತೆ ಹಲ್ಲೆ ನಡೆಸಿದ್ದಾಳೆ. ಅತ್ತೆಯ ತಲೆಯ ಕೂದಲನ್ನು ಹಿಡಿದು ಎಳೆದು ಎಳೆದು ನೆಲದ ಮೇಲೆ ತಳ್ಳುತ್ತಿರುವ ದೃಶ್ಯಗಳು ಮನೆಯಲ್ಲಿನ ಸಿಸಿ ಟಿವಿ (CCTV) ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ.

ಪ್ರಕರಣ ದಾಖಲಿಸಿ ತನಿಖೆ ಆರಂಭ :

ಶಬ್ದ ಕೇಳಿ ಪಕ್ಕದ ಮನೆಯವರು ಓಡಿ ಬರುತ್ತಿದಂತೆಯೇ ಸೊಸೆ ಸ್ಥಳದಿಂದ ಓಡಿ ಹೋಗಿದ್ದಾಳೆ. ಗಾಯಗೊಂಡ ಅತ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯ ನಿವಾಸಿಗಳಿಂದ ದೊರೆತ ಮಾಹಿತಿ ಹಾಗು CCTV ಯ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?

ಸದ್ಯ, ಆರೋಪಿ ಸೊಸೆಯನ್ನು ಬಂಧಿಸಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಅತ್ತೆ ನೀಡಿದ ದೂರಿನ ಪ್ರಕಾರ, ಇತರೆ ಸಂದರ್ಭದಲ್ಲಿಯೂ ಸಹ ಸೊಸೆ ಹಲವಾರು ಬಾರಿ ಚುಚ್ಚುಮಾತು ಮತ್ತು ಶಾರೀರಿಕ ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ.

CCTV ದೃಶ್ಯಾವಳಿಯ ವಿಡಿಯೋ :

https://twitter.com/i/status/1952717991453372456

ಪತಿ ಇಲ್ಲದ ವೇಳೆ ಅತ್ತೆ ಮೇಲೆ ಅಮಾನುಷ ಹಲ್ಲೆ ನಡೆಸಿದ ಸೊಸೆ : CCTV ದೃಶ್ಯ ವೈರಲ್.!

0

ಜನಸ್ಪಂದನ ನ್ಯೂಸ್‌, ನವದೆಹಲಿ : ಮನೆಯಲ್ಲಿ ಪತಿ ಇಲ್ಲದ ವೇಳೆ ಸೊಸೆಯೋರ್ವಳು ಅತ್ತೆ ಮೇಲೆ ಅಮಾನುಷ ಹಲ್ಲೆ ಮಾಡಿರುವ ಘಟನೆಯ ಸಿಸಿಟಿವಿ (CCTV) ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹೌದು, ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಈ CCTV ವಿಡಿಯೋ ಭಾರೀ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಪತಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ಸೊಸೆಯೊಬ್ಬಳು ತನ್ನ ಅತ್ತೆ ಹಲ್ಲೆ ನಡೆಸಿದ ಘಟನೆ ಸಿಸಿಟಿವಿ (CCTV) ಯಲ್ಲಿ ಸೆರೆಯಾಗಿದೆ. ಈ ಘಟನೆ ದೊಡ್ಡ ಚರ್ಚೆಯ ವಿಷಯವಾಗಿದ್ದು, ಪತಿ-ಪತ್ನಿ ನಡುವಿನ ಕೌಟುಂಬಿಕ ಕಲಹದಿಂದ ಸಂಭವಿಸಿದೆ ಎನ್ನಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಅಗಷ್ಟ 07 ರ ದ್ವಾದಶ ರಾಶಿಗಳ ಫಲಾಫಲ.!

ಮಾಹಿತಿಯಂತೆ, ಈ ದಂಪತಿಗೆ ಕಳೆದ ಕೆಲ ಸಮಯದಿಂದ ಪರಸ್ಪರ ಭಿನ್ನಾಭಿಪ್ರಾಯಗಳಿದ್ದು, ಇಬ್ಬರೂ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪತಿ ತಾಯಿಯೊಂದಿಗೆ ವಾಸವಿದ್ದರೆ, ಪತ್ನಿ ಬೇರೆ ಬಾಡಿಗೆ ಮನೆಯಲ್ಲಿ ಬದುಕುತ್ತಿದ್ದಳು. ಪತ್ನಿಗೆ ಸಾಸು ತನ್ನ ಗಂಡನಿಗೆ ತನ್ನ ವಿರುದ್ಧ ಕಿವಿಮಾತು ಹೇಳುತ್ತಿದ್ದಾಳೆ ಎಂಬ ಅನುಮಾನವಿದ್ದುದರಿಂದ, ಈ ಘಟನೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಅತ್ತೆ ಮನೆಯೊಳಗೆ ನುಗ್ಗಿದ ಸೊಸೆ :

ಪತಿ ಮನೆಯಲ್ಲಿಲ್ಲದಿದ್ದ ಸಂದರ್ಭದಲ್ಲಿ ಸೊಸೆ ತಕ್ಷಣವೇ ಅತ್ತೆ ಮನೆಗೆ ತೆರಳಿ ಬಾಗಿಲು ತಟ್ಟಿದ್ದಳು. ಅತ್ತೆ ಬಾಗಿಲು ತೆರೆದ ಕೂಡಲೇ ಸೊಸೆ ಗಾಬರಿಯಾಗಿ ಮನೆಯೊಳಗೆ ನುಗ್ಗಿದ್ದಳು. ಬಳಿಕ ಮಾತಿನ ಚಕಮಕಿ ಆರಂಭವಾಗಿ, ಅದೇ ಕ್ಷಣದಲ್ಲಿ ವಿಷಯ ಕೈಮೀರಿ ಸೊಸೆ ಹಲ್ಲೆಗೆ ಮುಂದಾಗಿದ್ದಳು.

ಇದನ್ನು ಓದಿ : Affair : ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಹತ್ಯೆ : ಬಳಿಕ ಆರೋಪಿ ನೇಣಿಗೆ ಶರಣು.!

ಅತ್ತೆಯನ್ನು ನೆಲಕ್ಕೆ ತಳ್ಳಿ ತೀವ್ರ ಗಾಯಗಳಾಗುವಂತೆ ಹಲ್ಲೆ ನಡೆಸಿದ್ದಾಳೆ. ಅತ್ತೆಯ ತಲೆಯ ಕೂದಲನ್ನು ಹಿಡಿದು ಎಳೆದು ಎಳೆದು ನೆಲದ ಮೇಲೆ ತಳ್ಳುತ್ತಿರುವ ದೃಶ್ಯಗಳು ಮನೆಯಲ್ಲಿನ ಸಿಸಿ ಟಿವಿ (CCTV) ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ.

ಪ್ರಕರಣ ದಾಖಲಿಸಿ ತನಿಖೆ ಆರಂಭ :

ಶಬ್ದ ಕೇಳಿ ಪಕ್ಕದ ಮನೆಯವರು ಓಡಿ ಬರುತ್ತಿದಂತೆಯೇ ಸೊಸೆ ಸ್ಥಳದಿಂದ ಓಡಿ ಹೋಗಿದ್ದಾಳೆ. ಗಾಯಗೊಂಡ ಅತ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯ ನಿವಾಸಿಗಳಿಂದ ದೊರೆತ ಮಾಹಿತಿ ಹಾಗು CCTV ಯ ಆಧಾರದಲ್ಲಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?

ಸದ್ಯ, ಆರೋಪಿ ಸೊಸೆಯನ್ನು ಬಂಧಿಸಲು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಅತ್ತೆ ನೀಡಿದ ದೂರಿನ ಪ್ರಕಾರ, ಇತರೆ ಸಂದರ್ಭದಲ್ಲಿಯೂ ಸಹ ಸೊಸೆ ಹಲವಾರು ಬಾರಿ ಚುಚ್ಚುಮಾತು ಮತ್ತು ಶಾರೀರಿಕ ಕಿರುಕುಳ ನೀಡಿದ್ದಾಳೆ ಎಂದು ಆರೋಪಿಸಿದ್ದಾರೆ.

CCTV ದೃಶ್ಯಾವಳಿಯ ವಿಡಿಯೋ :

https://twitter.com/i/status/1952717991453372456


Affair : ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಹತ್ಯೆ : ಬಳಿಕ ಆರೋಪಿ ನೇಣಿಗೆ ಶರಣು.!

Affair

ಜನಸ್ಪಂದನ ನ್ಯೂಸ್‌, ಬೆಂಗಳೂರು : ವ್ಯಕ್ತಿಯೋರ್ವ ಅಕ್ರಮ ಸಂಬಂಧ (Affair) ಕ್ಕೆ ಒಪ್ಪದ ಮಹಿಳೆಯ ಕುತ್ತಿಗೆಯನ್ನು ತರಕಾರಿ ಕತ್ತರಿಸುವ ಚಾಕುವಿನಿಂದ ಸೀಳಿ ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆಂಬ ಸಂಶಯದ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಪ್ರದೇಶದಲ್ಲಿ ಈ ದಾರುಣ ಘಟನೆ ನಡೆದಿದೆ. ಅಕ್ರಮ ಸಂಬಂಧ (Affair) ನಿರಾಕರಿಸಿದ ಮಹಿಳೆಯೊಬ್ಬರು ಹತ್ಯೆಯಾಗಿದ್ದು, ಆರೋಪಿ ನಂತರ ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?

ಮೃತ ಮಹಿಳೆಯನ್ನು ಪಶ್ಚಿಮ ಬಂಗಾಳ (WB) ಮೂಲದ ಮಂದಿರಾ ಮಂಡಲ್ (27) ಎಂದು ಗುರುತಿಸಲಾಗಿದೆ. ಹತ್ಯೆಯ ಶಂಕಿತ ವ್ಯಕ್ತಿ ಗಂಡನ ಸ್ನೇಹಿತ ಸುಮನ್ ಮಂಡಲ್ (28) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಪತಿ ಮತ್ತು ಆರೋಪಿತ ವ್ಯಕ್ತಿ ಇಬ್ಬರೂ ಈ ಹಿಂದೆ ಒಟ್ಟಾಗಿ ಅಂಡಮಾನ್‌ (Andaman) ನಲ್ಲಿ ಕೆಲಸ ಮಾಡುತ್ತಿದ್ದರೆಂದು ಹೇಳಲಾಗುತ್ತದೆ.

ಘಟನೆಯ ವಿವರ :

ಮಂದಿರಾ ಮಂಡಲ್ ಅವರು ಗಂಡನಿಂದ ಬೇರ್ಪಟ್ಟು ಕಳೆದ ಎರಡು ವರ್ಷಗಳಿಂದ ತಿರುಪಾಳ್ಯದಲ್ಲಿ ತಮ್ಮ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನಿನ್ನೆ ಸಂಜೆಯ ವೇಳೆ ಅವರು ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದರು. ಈ ವೇಳೆ ಆರೋಪಿ ಸುಮನ್ ಅವರು ಆಕೆಯ ಮನೆಗೆ ಬಂದು ಬಾಗಿಲು ಲಾಕ್ ಮಾಡಿ ಒಳಗೆ ನುಗ್ಗಿ ಅಕ್ರಮ ಸಂಬಂಧ (Affair) ಕ್ಕೆ ನಿರಾಕರಿಸಿದ ಹಿನ್ನಲೆಯಲ್ಲಿ ಹತ್ಯೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಕೆಲ ಸಮಯದ ನಂತರ ಹೊರಗಡೆ ಆಟವಾಡುತ್ತಿದ್ದ ಮಗು ಮನೆಯ ಬಾಗಿಲು ತಟ್ಟಿದೆ. ಬಾಗಿಲು ತೆಗೆಯದ ಹಿನ್ನಲೆಯಲ್ಲಿ ಅಜ್ಜಿಯೋರ್ವಳು ಕಿಟಕಿ ಮೂಲಕ ಒಳಗೆ ನೋಡಿದಾಗ, ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಪೊಲೀಸರ ಪರಿಶೀಲನೆ ವೇಳೆ, ಮಂದಿರಾ ಮಂಡಲ್ ಅವರು ಚಾಕುವಿನಿಂದ ಕತ್ತು ಸೀಳಿ ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹತ್ಯೆಗೆ ಶಂಕಿತ (Affair) ಹಿನ್ನೆಲೆ :

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿ ಸುಮನ್ ಅವರು ಅಕ್ರಮ ಸಂಬಂಧಕ್ಕೆ (Affair) ಒಪ್ಪದ ಹಿನ್ನೆಲೆಯಲ್ಲಿ ಕೋಪಗೊಂಡು ಮನೆಯಲ್ಲೇ ಇದ್ದ ಚಾಕುವಿನಿಂದ ಮಂದಿರಾ ಅವರನ್ನು ಬರ್ಬರವಾಗಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಇದನ್ನು ಓದಿ : ಬೆಳಗಾವಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ; maulvi ಬಂಧನ.!

ಎಂಟು ವರ್ಷದ ಹಿಂದೆ ಬಿಜೋನ್ ಮಂಡಲ್ ಜೊತೆ ಮೃತ ಮಂದಿರಾ ಮದುವೆ ಆಗಿದ್ದು 6 ವರ್ಷದ ಗಂಡು ಮಗು ಇದೆ. ಆದರೆ ಎರಡು ವರ್ಷದ ಹಿಂದೆ ಗಂಡನಿಂದ ದೂರವಾಗಿ ಇಲ್ಲಿನ ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು.

ಪೊಲೀಸರು ತನಿಖೆ ಮುಂದುವರಿಸಿದ್ದಾರೆ :

ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಅಕ್ರಮ (Affair) ಕ್ಕೆ ನಡೆದಿದೆಯೋ ಅಥವಾ ಇನ್ಯಾವುದರ ಕಾರಣಕ್ಕೆ ನಡೆದಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ತನಿಖೆ ಮುಂದುವರಿದಿದೆ. ಸದ್ಯಕ್ಕೆ ಘಟನೆಯ ಇತರೆ ಅಂಶಗಳನ್ನು ಸ್ಪಷ್ಟಪಡಿಸಲು ಪೊಲೀಸರು ಸಾಕ್ಷ್ಯ ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದಾರೆ.

Affair : ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆ ಹತ್ಯೆ : ಬಳಿಕ ಆರೋಪಿ ನೇಣಿಗೆ ಶರಣು.!

0

ಜನಸ್ಪಂದನ ನ್ಯೂಸ್‌, ಬೆಂಗಳೂರು : ವ್ಯಕ್ತಿಯೋರ್ವ ಅಕ್ರಮ ಸಂಬಂಧ (Affair) ಕ್ಕೆ ಒಪ್ಪದ ಮಹಿಳೆಯ ಕುತ್ತಿಗೆಯನ್ನು ತರಕಾರಿ ಕತ್ತರಿಸುವ ಚಾಕುವಿನಿಂದ ಸೀಳಿ ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆಂಬ ಸಂಶಯದ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಪ್ರದೇಶದಲ್ಲಿ ಈ ದಾರುಣ ಘಟನೆ ನಡೆದಿದೆ. ಅಕ್ರಮ ಸಂಬಂಧ (Affair) ನಿರಾಕರಿಸಿದ ಮಹಿಳೆಯೊಬ್ಬರು ಹತ್ಯೆಯಾಗಿದ್ದು, ಆರೋಪಿ ನಂತರ ಆತ್ಮಹತ್ಯೆಗೆ ಶರಣಾದ ಘಟನೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನು ಓದಿ : Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?

ಮೃತ ಮಹಿಳೆಯನ್ನು ಪಶ್ಚಿಮ ಬಂಗಾಳ (WB) ಮೂಲದ ಮಂದಿರಾ ಮಂಡಲ್ (27) ಎಂದು ಗುರುತಿಸಲಾಗಿದೆ. ಹತ್ಯೆಯ ಶಂಕಿತ ವ್ಯಕ್ತಿ ಗಂಡನ ಸ್ನೇಹಿತ ಸುಮನ್ ಮಂಡಲ್ (28) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಪತಿ ಮತ್ತು ಆರೋಪಿತ ವ್ಯಕ್ತಿ ಇಬ್ಬರೂ ಈ ಹಿಂದೆ ಒಟ್ಟಾಗಿ ಅಂಡಮಾನ್‌ (Andaman) ನಲ್ಲಿ ಕೆಲಸ ಮಾಡುತ್ತಿದ್ದರೆಂದು ಹೇಳಲಾಗುತ್ತದೆ.

ಘಟನೆಯ ವಿವರ :

ಮಂದಿರಾ ಮಂಡಲ್ ಅವರು ಗಂಡನಿಂದ ಬೇರ್ಪಟ್ಟು ಕಳೆದ ಎರಡು ವರ್ಷಗಳಿಂದ ತಿರುಪಾಳ್ಯದಲ್ಲಿ ತಮ್ಮ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನಿನ್ನೆ ಸಂಜೆಯ ವೇಳೆ ಅವರು ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದರು. ಈ ವೇಳೆ ಆರೋಪಿ ಸುಮನ್ ಅವರು ಆಕೆಯ ಮನೆಗೆ ಬಂದು ಬಾಗಿಲು ಲಾಕ್ ಮಾಡಿ ಒಳಗೆ ನುಗ್ಗಿ ಅಕ್ರಮ ಸಂಬಂಧ (Affair) ಕ್ಕೆ ನಿರಾಕರಿಸಿದ ಹಿನ್ನಲೆಯಲ್ಲಿ ಹತ್ಯೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ.

ಕೆಲ ಸಮಯದ ನಂತರ ಹೊರಗಡೆ ಆಟವಾಡುತ್ತಿದ್ದ ಮಗು ಮನೆಯ ಬಾಗಿಲು ತಟ್ಟಿದೆ. ಬಾಗಿಲು ತೆಗೆಯದ ಹಿನ್ನಲೆಯಲ್ಲಿ ಅಜ್ಜಿಯೋರ್ವಳು ಕಿಟಕಿ ಮೂಲಕ ಒಳಗೆ ನೋಡಿದಾಗ, ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಪೊಲೀಸರ ಪರಿಶೀಲನೆ ವೇಳೆ, ಮಂದಿರಾ ಮಂಡಲ್ ಅವರು ಚಾಕುವಿನಿಂದ ಕತ್ತು ಸೀಳಿ ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಹತ್ಯೆಗೆ ಶಂಕಿತ (Affair) ಹಿನ್ನೆಲೆ :

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಆರೋಪಿ ಸುಮನ್ ಅವರು ಅಕ್ರಮ ಸಂಬಂಧಕ್ಕೆ (Affair) ಒಪ್ಪದ ಹಿನ್ನೆಲೆಯಲ್ಲಿ ಕೋಪಗೊಂಡು ಮನೆಯಲ್ಲೇ ಇದ್ದ ಚಾಕುವಿನಿಂದ ಮಂದಿರಾ ಅವರನ್ನು ಬರ್ಬರವಾಗಿ ಹತ್ಯೆಗೈದು, ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಇದನ್ನು ಓದಿ : ಬೆಳಗಾವಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ; maulvi ಬಂಧನ.!

ಎಂಟು ವರ್ಷದ ಹಿಂದೆ ಬಿಜೋನ್ ಮಂಡಲ್ ಜೊತೆ ಮೃತ ಮಂದಿರಾ ಮದುವೆ ಆಗಿದ್ದು 6 ವರ್ಷದ ಗಂಡು ಮಗು ಇದೆ. ಆದರೆ ಎರಡು ವರ್ಷದ ಹಿಂದೆ ಗಂಡನಿಂದ ದೂರವಾಗಿ ಇಲ್ಲಿನ ತಿರುಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು.

ಪೊಲೀಸರು ತನಿಖೆ ಮುಂದುವರಿಸಿದ್ದಾರೆ :

ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಅಕ್ರಮ (Affair) ಕ್ಕೆ ನಡೆದಿದೆಯೋ ಅಥವಾ ಇನ್ಯಾವುದರ ಕಾರಣಕ್ಕೆ ನಡೆದಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲು ತನಿಖೆ ಮುಂದುವರಿದಿದೆ. ಸದ್ಯಕ್ಕೆ ಘಟನೆಯ ಇತರೆ ಅಂಶಗಳನ್ನು ಸ್ಪಷ್ಟಪಡಿಸಲು ಪೊಲೀಸರು ಸಾಕ್ಷ್ಯ ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದಾರೆ.


Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

Leg cramp

ಜನಸ್ಪಂದನ ನ್ಯೂಸ್‌, ಆರೋಗ್ಯ : ರಾತ್ರಿ ಮಲಗುವಾಗ ಕಾಲು ಸೆಳೆತ (Leg cramp) ಮತ್ತು ಸ್ನಾಯು ಬಿಗಿತ ಅನುಭವಿಸುವುದು ಹಲವರಿಗೆ ಸಾಮಾನ್ಯ ಅನುಭವ. ಇದು ತೊಡೆ ಮತ್ತು ಕಾಲುಗಳ ಕೆಳ ಭಾಗದ ಸ್ನಾಯುಗಳಲ್ಲಿ ಹೆಚ್ಚು ಕಂಡುಬರುವ ನೋವಾಗಿದ್ದು, 50 ವರ್ಷಕ್ಕಿಂತ ಮೇಲ್ಪಟ್ಟ ಜನರಲ್ಲಿ ಶೇ.40ರಷ್ಟು ಮಂದಿಗೆ ಈ ರೀತಿಯ ಅಸ್ವಸ್ಥತೆ ತೀವ್ರವಾಗಿ ಅನುಭವವಾಗುತ್ತದೆ.

ಈ ಕುರಿತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಕನ್ಸಲ್ಟೆಂಟ್ ಡಾ. ರೋಹಿತ್ ಪೈ ಮಾಹಿತಿ ನೀಡಿದ್ದು, ಸ್ನಾಯು ಸೆಳೆತ ಅಥವಾ ಕ್ರ್ಯಾಂಪ್ ಅನ್ನು ಲಘುವಾಗಿ ಕಾಣಬಾರದು ಎಂದು ಎಚ್ಚರಿಸಿದ್ದಾರೆ.

ಇದನ್ನು ಓದಿ : Luteri Dulhan : 8 ಮದುವೆ, ರೂ.50 ಲಕ್ಷ ವಂಚನೆ : 9ನೇ ಶಿಕಾರಕ್ಕೂ ಮುನ್ನ ಬಂಧನ”.!
ಸ್ನಾಯು ಸೆಳೆತ/ಕಾಲು ಸೆಳೆತ (Leg cramp) ಕ್ಕೆ ಕಾರಣಗಳು :
  • ದೈನಂದಿನ ಹೆಚ್ಚು ನಡೆಯುವುದು ಅಥವಾ ಓಡುವುದು.
  • ಔಷಧಿಗಳಾದ ಬಿಟಾ ಎಗೊನಿಸ್ಟ್ಸ್ ಬಳಕೆಯಾದ ಆಸ್ತಮಾ ಅಥವಾ ಡ್ಯುರೆಟಿಕ್ಸ್ ಚಿಕಿತ್ಸೆಯ ಭಾಗವಾಗಿ.
  • ನಿದ್ರಾಹೀನತೆ.
  • ದೇಹದಲ್ಲಿ ನೀರಿನ ಅಸಮತೋಲನ.
  • ಹೈಪೊಥೈರಾಯ್ಡಿಸಮ್ ಅಥವಾ ಹೈಪೊಕೆಲ್ಸೇಮಿಯಾ.
  • ಸ್ಲಿಪ್ಡ್ ಡಿಸ್ಕ್ ಸಮಸ್ಯೆ.
  • ಗರ್ಭಾವಸ್ಥೆ.
ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ವಾರದಲ್ಲಿ ಮೂರಕ್ಕಿಂತ ಹೆಚ್ಚು ಬಾರಿ ಅಥವಾ ಪ್ರತಿದಿನ ಕಾಲು ಸೆಳೆತ (Leg cramp) ದ ಈ ಸಮಸ್ಯೆ ಕಾಡುತ್ತಿದರೆ, ಸರಿಯಾದ ಚಿಕಿತ್ಸೆ ಅಗತ್ಯವಿದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ.

ಯಾವಾಗ ವೈದ್ಯರ ಸಲಹೆ ಅಗತ್ಯ?

ಸಾಮಾನ್ಯವಾಗಿ ಈ ಕಾಲು ಸೆಳೆತ (Leg cramp) ಸಮಸ್ಯೆ ಗಂಭೀರವಾಗಿಲ್ಲ. ಆದರೆ, ರಾತ್ರಿಯ ಕಾಲಿನಲ್ಲಿ ಇರುವ ಕಾಲು ನೋವು, ಮೊಟಾರ್ ನ್ಯೂರೋನ್ ರೋಗಗಳು ಅಥವಾ ಪೆರಿಫೆರಲ್ ನ್ಯೂರೋಪಥಿಯ ಮೊದಲ ಸೂಚನೆಯಾಗಿರುವ ಸಾಧ್ಯತೆಯೂ ಇರುತ್ತದೆ. ಕೆಲವೊಮ್ಮೆ, ನಿದ್ರಾ ಸಂಬಂಧಿತ ಪಿಎಲ್‌ಎಮ್‌ಎಸ್ ಸಮಸ್ಯೆಯಲ್ಲೂ ಇದೇ ರೀತಿಯ ತೊಂದರೆ ಉಂಟಾಗಬಹುದು. ಹೀಗಾಗಿ ನಿಖರವಾದ ನಿರ್ಧಾರಕ್ಕಾಗಿ ವೈದ್ಯರ ಸಲಹೆ ಅಗತ್ಯ.

ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಪರಿಶೋಧನೆಗಳು ಮತ್ತು ಪರೀಕ್ಷೆಗಳು :
  • ನಿದ್ರೆಯ ಗುಣಮಟ್ಟ ವಿಶ್ಲೇಷಣೆ.
  • ಕ್ಯಾಲ್ಷಿಯಮ್ ಮತ್ತು ಮ್ಯಾಗ್ನೇಶಿಯಮ್ ಮಟ್ಟ ಪರೀಕ್ಷೆ.
  • ಥೈರಾಯ್ಡ್ ಹಾರ್ಮೋನ್ ತಪಾಸಣೆ.
ಕಾಲು ಸೆಳೆತ (Leg cramp) ದ ಚಿಕಿತ್ಸೆಯು ಹೇಗೆ ಇರಬಹುದು?
  • ನಿದ್ರೆಗೂ ಮುನ್ನ ತೂಕ ಹಾಕದ ಸ್ಟ್ರೆಚಿಂಗ್ ವ್ಯಾಯಾಮಗಳು.
  • ಆಲ್ಕೋಹಾಲ್ ಮತ್ತು ಕೆಫೆನ್ ಸೇವನೆ ತಗ್ಗಿಸುವುದು.
  • ಕೆಲವೊಂದು ಔಷಧಗಳು : ವಿಟಮಿನ್ E, ಗಬಾಪೆಂಟಿನ್, ಕಾರ್ಬಾಮಜೆಪೈನ್, ಹಾಗೂ ಕಠಿಣ ಸಂದರ್ಭಗಳಲ್ಲಿ ಲಿಯೋಫೆನ್.
ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಕಾಲು ಸೆಳೆತ (Leg cramp) ದ ಚಿಕಿತ್ಸೆಯ ಆಯ್ಕೆ ರೋಗಿಯ ನರವೈಜ್ಞಾನಿಕ ಸ್ಥಿತಿಗತಿಯನ್ನು ಅವಲಂಬಿಸಿರುತ್ತದೆ. ಬದಲಾಗದ ಕಾಯಿಲೆ ಅಥವಾ ನಿರಂತರ ಕಾಲು ಸೆಳೆತದಿಂದ ಬಳಲುತ್ತಿರುವವರು ಕಳಪೆ ನಿದ್ರೆಯಿಂದ ಬಳಲಬಹುದು. ಆದ್ದರಿಂದ, ಈ ಸಮಸ್ಯೆ ನಿರಂತರವಾಗಿದ್ದರೆ ವೈದ್ಯರನ್ನು ಭೇಟಿಯಾಗಿ ತಪಾಸಣೆ ಮಾಡಿಸಿಕೊಳ್ಳುವುದು ಬಹುಮುಖ್ಯ.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

Saliva : ಮೊಡವೆ ಸಮಸ್ಯೆಗೆ ನೈಸರ್ಗಿಕ ಪರಿಹಾರ ; ಬೆಳಗಿನ ಎಂಜಲಿನಿಂದ ನಿಜವಾಗಿಯೂ ಪರಿಹಾರ ಸಿಗುತ್ತಾ.?

0

ಜನಸ್ಪಂದನ ನ್ಯೂಸ್‌, ಆರೋಗ್ಯ : ಪಿಂಪಲ್ ಸಮಸ್ಯೆಗೆ ಬೆಳಗಿನ ಎಂಜಲು (Saliva) ಪರಿಹಾರವೇ? ನಟಿ ತಮನ್ನಾ ಭಾಟಿಯಾದ ಟಿಪ್‌ ಮೇಲೆ ತಜ್ಞರ ಅಭಿಪ್ರಾಯವೇನು? ಬನ್ನಿ ಈ ಬಗ್ಗೆ ತಿಳಿಯೋಣ.!

ಚರ್ಮದ ಮೆರುಗು ಕಾಪಾಡಿಕೊಳ್ಳುವುದು ಎಲ್ಲರಿಗೂ ಮುಖ್ಯ. ಆದರೆ ಮುಖದ ಮೇಲೆ ಮೊಡವೆಗಳು (Pimples) ಕಾಣಿಸಿಕೊಳ್ಳುವುದು ಸಾಮಾನ್ಯವಾದ ಸಮಸ್ಯೆ. ಇವು ವ್ಯಕ್ತಿಯ ಮುಖದ ಆಕರ್ಷಕತೆಯನ್ನೇ ಹಾಳುಮಾಡಬಹುದು.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಮೊಡವೆ ಮತ್ತು ಅದರಿಂದ ಉಂಟಾಗುವ ಕಲೆಗಳನ್ನು ನಿವಾರಿಸಲು ಜನರು ದುಬಾರಿ ಕ್ರೀಮ್‌, ಫೇಸ್ ಪ್ಯಾಕ್‌ಗಳ ಕಡೆಗೆ ಮುಖ ಮಾಡುತ್ತಿದ್ದರು. ಆದರೆ ನಟಿ ತಮನ್ನಾ ಭಾಟಿಯಾ ಬಳಸುವ ಸರಳ ಮನೆಮದ್ದು ಇದೀಗ ಎಲ್ಲರ ಗಮನ ಸೆಳೆದಿದೆ.

ಮೊಡವೆಗೆ ತಮನ್ನಾ ಭಾಟಿಯಾ ಉಪಯೋಗಿಸುವ ಮನೆಮದ್ದು ಯಾವುದು?

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ತಮನ್ನಾ ಭಾಟಿಯಾ ಅವರು ತಮ್ಮ ಮೊಡವೆಯ ಸಮಸ್ಯೆಯನ್ನು ನಿಯಂತ್ರಿಸಲು ಬಳಸುವ ಮನೆಮದ್ದು ಹಂಚಿಕೊಂಡಿದ್ದಾರೆ. ಅವರ ಪ್ರಕಾರ, ಬೆಳಗ್ಗೆ ಎದ್ದ ತಕ್ಷಣ ಹಲ್ಲು ಜಜ್ಜಿ ಮುಗಿಸುವ ಮೊದಲು ಮುಖದಲ್ಲಿರುವ ಮೊಡವೆಗಳ ಮೇಲೆ ತಮ್ಮ ಬಾಯಿಯ ಎಂಜಲ (Saliva) ನ್ನು ಹಚ್ಚುವ ಅಭ್ಯಾಸವಿದೆ. ಈ ವಿಧಾನದಿಂದ ಅವರಿಗೆ ಉತ್ತಮ ಫಲಿತಾಂಶಗಳು ಸಿಕ್ಕಿವೆ ಎಂದು ಅವರು ಹೇಳಿದ್ದಾರೆ.

 

View this post on Instagram

 

A post shared by Simple🌷 (@simplee.girl_01)

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!
ಬೆಳಗಿನ ಎಂಜಲಿ (Saliva) ನಲ್ಲಿ ಇರುವ ವಿಶೇಷತೆ ಏನು?

ಆಯುರ್ವೇದದ ಪ್ರಕಾರ ಬೆಳಗಿನ ಎಂಜಲಿ (Saliva) ನಲ್ಲಿ ಬ್ಯಾಕ್ಟೀರಿಯಾ ವಿರೋಧಿ (Antibacterial) ಹಾಗೂ ಶಿಲೀಂಧ್ರ ವಿರೋಧಿ (Antifungal) ಗುಣಗಳು ಇರುತ್ತವೆ. ರಾತ್ರಿ ನಿದ್ರೆ ಸಮಯದಲ್ಲಿ ಬಾಯಿಯಲ್ಲಿ ರೂಪುಗೊಳ್ಳುವ ಲಾಲಾರಸ (Saliva) ದಲ್ಲಿ ಲೈಸೋಜೈಮ್ (Lysozyme), ಇಮ್ಯುನೊಗ್ಲಾಬುಲಿನ್ (Immunoglobulin) ಮತ್ತು ಪೆಪ್ಟೈಡ್‌ಗಳಂತಹ ರಾಸಾಯನಿಕ ಘಟಕಗಳು ಇರುತ್ತವೆ. ಇವು ಚರ್ಮದ ಮೇಲೆ ಇರುವ ಹಾನಿಕರ ಬ್ಯಾಕ್ಟೀರಿಯಾದೊಂದಿಗೆ ಹೋರಾಡುವ ಶಕ್ತಿಯನ್ನು ಹೊಂದಿವೆ ಎಂದು ಕೆಲವು ಸಂಶೋಧನೆಗಳು ಸೂಚಿಸುತ್ತವೆ.

ಚರ್ಮ ತಜ್ಞರ ಅಭಿಪ್ರಾಯ ಏನು?

ಚರ್ಮ ತಜ್ಞರ ಪ್ರಕಾರ, ಬೆಳಗಿನ ಎಂಜಲಿ (Saliva) ನಲ್ಲಿರುವ ಕೆಲವು ಕಿಣ್ವಗಳು ಸೌಮ್ಯವಾದ ಮೊಡವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ ಪ್ರತಿಯೊಬ್ಬರ ಚರ್ಮದ ಧರ್ಮ ವಿಭಿನ್ನವಾಗಿರುವುದರಿಂದ ಈ ಪರಿಹಾರ ವಿಧಾನ ಎಲ್ಲರಿಗೂ ಸರಿಹೊಂದುತ್ತದೆಯೆಂಬುದಕ್ಕೆ ಸ್ಪಷ್ಟವಾದ ವೈಜ್ಞಾನಿಕ ಪ್ರಮಾಣವಿಲ್ಲ. ಕೆಲವರಲ್ಲಿ ಲಾಲಾರಸದ ಬಳಕೆ ಚರ್ಮದ ಅಲರ್ಜಿ, ರೆಡ್‌ನೆಸ್ ಅಥವಾ ಉರಿ ಉಂಟುಮಾಡುವ ಸಾಧ್ಯತೆ ಇದೆ. ಆದ್ದರಿಂದ, ತೀವ್ರ ಮೊಡವೆ ಸಮಸ್ಯೆ ಎದುರಿಸುತ್ತಿರುವವರು ವೈದ್ಯರ ಸಲಹೆ ಪಡೆಯುವುದು ಉತ್ತಮವಾಗಿದೆ.

ಇದನ್ನು ಓದಿ : ಬೆಳಗಾವಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ; maulvi ಬಂಧನ.!
ಸಂಪಾದಕೀಯ :

ತಮನ್ನಾ ಭಾಟಿಯಾ ಅವರ ಈ ನೈಸರ್ಗಿಕ ಮನೆಮದ್ದು ಕೆಲವರಿಗೆ ಉಪಯೋಗವಾಗಬಹುದು. ಆದರೆ ಎಲ್ಲರ ಚರ್ಮ ಒಂದೇ ರೀತಿ ಪ್ರತಿಕ್ರಿಯೆ ನೀಡುವುದಿಲ್ಲ ಎಂಬುದು ಗಮನದಲ್ಲಿರಲಿ. ನಿಮ್ಮ ಚರ್ಮದ ಧರ್ಮವನ್ನು ತಿಳಿದು, ಹೊಸ ರೀತಿಯ ಪರಿಹಾರಗಳನ್ನು ಬಳಸುವ ಮೊದಲು ತಜ್ಞರ ಸಲಹೆ ಪಡೆಯುವುದು ಉತ್ತಮವಾಗಿದೆ.

Disclaimer : ಈ ಲೇಖನದಲ್ಲಿ ನೀಡಲಾದ ಮಾಹಿತಿ ಸಾರ್ವಜನಿಕ ಮೂಲಗಳ ಆಧಾರಿತವಾಗಿದ್ದು, ವೈದ್ಯಕೀಯ ಸಲಹೆಯ ಸ್ಥಾನದಲ್ಲ. ಯಾವುದೇ ಚರ್ಮ ಸಮಸ್ಯೆಗೆ ನಿಖರ ಪರಿಹಾರ ಬೇಕಾದರೆ ತಜ್ಞರನ್ನು ಸಂಪರ್ಕಿಸುವುದು ಸೂಕ್ತ.


ಬೆಳಗಾವಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ; maulvi ಬಂಧನ.!

belagavi-maulvi-arrested-child-rape-case

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ ಮಸೀದಿಯಲ್ಲಿ ನಡೆದಿದ್ದ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮೌಲ್ವಿ (maulvi) ಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸುಮಾರು ಎರಡು ವರ್ಷಗಳ ಹಿಂದೆ ನಡೆದಿದ್ದರೂ, ಇದೀಗ ಸಿಸಿಟಿವಿ ದೃಶ್ಯ ಮತ್ತು ಆಡಿಯೋ ಸಾಕ್ಷಿಗಳ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ (maulvi) ನನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ತುಫೇಲ್ ಅಹ್ಮದ್ ದಾದಾಫೀರ್ ನಗರ್ಚಿ (22) ಎಂದು ಗುರುತಿಸಲಾಗಿದೆ. 2023ರ ಅಕ್ಟೋಬರ್ 5ರಂದು, ಮಸೀದಿ ಪಕ್ಕದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುಷ್ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಪ್ರಕರಣ ನಡೆದ ಬಳಿಕ ಆರೋಪಿ, ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕಿ ದೂರು ನೀಡದಂತೆ ಮೌಲ್ವಿ (maulvi) ತಡೆಗಟ್ಟಿದ್ದ. ಮಸೀದಿಯ ಕೆಲವು ಸದಸ್ಯರು ಸಹ ರಾಜಿ ಪಂಚಾಯಿತಿ ಮೂಲಕ ಪ್ರಕರಣ ಮುಚ್ಚಲು ಯತ್ನಿಸಿದ್ದರಿಂದ, ಘಟನೆ ತಡವಾಗಿ ಬಹಿರಂಗವಾಯಿತು.

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋ ತುಣುಕು ಹರಿದಾಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಇದನ್ನು ಹಂಚಿಕೊಂಡು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ವಿಷಯ ತಿಳಿದ ಕೂಡಲೇ ಮುರಗೋಡ ಠಾಣೆ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಳೇದ ಅವರು, “ಆಡಿಯೋ ಮತ್ತು ಸಿಸಿಟಿವಿ ದೃಶ್ಯಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ತನಿಖೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿಯವರ ನೇರ ಕೈವಾಡ ಪತ್ತೆಯಾಗಿಲ್ಲ, ಆದರೆ ಸಂಧಾನ ಯತ್ನಿಸಿದವರ ವಿಚಾರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಪ್ರಾರಂಭದಲ್ಲಿ ದೂರು ನೀಡಲು ನಿರಾಕರಿಸಿದರೂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಅಂಗನವಾಡಿ ಕಾರ್ಯಕರ್ತೆಯ ಸಹಕಾರದಿಂದ ಪ್ರಕರಣವನ್ನು ದಾಖಲಿಸಲಾಗಿದೆ. ಐಪಿಸಿ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಯುತ್ತಿದೆ.

ಬೆಳಗಾವಿಯಲ್ಲಿ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ; maulvi ಬಂಧನ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ ಮಸೀದಿಯಲ್ಲಿ ನಡೆದಿದ್ದ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮೌಲ್ವಿ (maulvi) ಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸುಮಾರು ಎರಡು ವರ್ಷಗಳ ಹಿಂದೆ ನಡೆದಿದ್ದರೂ, ಇದೀಗ ಸಿಸಿಟಿವಿ ದೃಶ್ಯ ಮತ್ತು ಆಡಿಯೋ ಸಾಕ್ಷಿಗಳ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತ (maulvi) ನನ್ನು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದ ತುಫೇಲ್ ಅಹ್ಮದ್ ದಾದಾಫೀರ್ ನಗರ್ಚಿ (22) ಎಂದು ಗುರುತಿಸಲಾಗಿದೆ. 2023ರ ಅಕ್ಟೋಬರ್ 5ರಂದು, ಮಸೀದಿ ಪಕ್ಕದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದುಷ್ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

ಪ್ರಕರಣ ನಡೆದ ಬಳಿಕ ಆರೋಪಿ, ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕಿ ದೂರು ನೀಡದಂತೆ ಮೌಲ್ವಿ (maulvi) ತಡೆಗಟ್ಟಿದ್ದ. ಮಸೀದಿಯ ಕೆಲವು ಸದಸ್ಯರು ಸಹ ರಾಜಿ ಪಂಚಾಯಿತಿ ಮೂಲಕ ಪ್ರಕರಣ ಮುಚ್ಚಲು ಯತ್ನಿಸಿದ್ದರಿಂದ, ಘಟನೆ ತಡವಾಗಿ ಬಹಿರಂಗವಾಯಿತು.

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಮತ್ತು ಆಡಿಯೋ ತುಣುಕು ಹರಿದಾಡಿದ್ದು, ಹಿಂದೂ ಸಂಘಟನೆಯ ಕಾರ್ಯಕರ್ತರು ಇದನ್ನು ಹಂಚಿಕೊಂಡು ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ವಿಷಯ ತಿಳಿದ ಕೂಡಲೇ ಮುರಗೋಡ ಠಾಣೆ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಯನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಳೇದ ಅವರು, “ಆಡಿಯೋ ಮತ್ತು ಸಿಸಿಟಿವಿ ದೃಶ್ಯಗಳನ್ನು ಸಾಕ್ಷಿಯಾಗಿ ಬಳಸಿಕೊಂಡು ತನಿಖೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿಯವರ ನೇರ ಕೈವಾಡ ಪತ್ತೆಯಾಗಿಲ್ಲ, ಆದರೆ ಸಂಧಾನ ಯತ್ನಿಸಿದವರ ವಿಚಾರಣೆ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಪ್ರಾರಂಭದಲ್ಲಿ ದೂರು ನೀಡಲು ನಿರಾಕರಿಸಿದರೂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಅಂಗನವಾಡಿ ಕಾರ್ಯಕರ್ತೆಯ ಸಹಕಾರದಿಂದ ಪ್ರಕರಣವನ್ನು ದಾಖಲಿಸಲಾಗಿದೆ. ಐಪಿಸಿ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಯುತ್ತಿದೆ.


Dog : ಇದು ನಿಜವೇ.? ಮಧ್ಯರಾತ್ರಿ ಮನುಷ್ಯನಾಗಿ ಬದಲಾದ ನಾಯಿ ; ವಿಡಿಯೋ ವೈರಲ್.!

Dog

ಜನಸ್ಪಂದನ ನ್ಯೂಸ್, ಡೆಸ್ಕ್ : ಮಧ್ಯರಾತ್ರಿ ಸಮಯದಲ್ಲಿ ನಾಯಿ (Dog) ಯೊಂದು ಮನುಷ್ಯನಾಗಿ ಬದಲಾಗುವ ಭಯಾನಕ ವಿಡಿಯೋ ಒಂದು ಸದ್ಯ ಸಾಲಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆತ್ಮ, ಪ್ರೇತ (Ghost), ಭೂತಗಳು ನಿಜವಾಗಿಯೂ ಇವೆಯೆ? ಈ ಪ್ರಶ್ನೆಗೆ ಉತ್ತರ ಒಂದೇ ರೀತಿಯಲ್ಲಿಲ್ಲ. ಕೆಲವರು ತಮ್ಮ ಅನುಭವ ಆಧರಿಸಿ ಆತ್ಮಗಳ ಅಸ್ತಿತ್ವವನ್ನು ಒಪ್ಪಿಕೊಳ್ಳುತ್ತಾರೆ, ಇನ್ನು ಕೆಲವರು ಅದು ಕೇವಲ ಭ್ರಮೆ ಎಂಬುದಾಗಿ ಹೇಳುತ್ತಾರೆ.

ದೇವರು, ಭೂತ ಇತ್ಯಾದಿ ವಿಷಯಗಳು ನಂಬಿಕೆ ಮತ್ತು ವಿಶ್ವಾಸದ ಮೇಲೆ ಆಧಾರಿತವಾಗಿವೆ. ಆದರೆ ಕೆಲ ಅಲೌಕಿಕ ಘಟನೆಗಳು ವೈಜ್ಞಾನಿಕವಾಗಿ ವಿವರಿಸಲಾಗದಂತಿರುತ್ತವೆ ಎಂಬುದು ಹಲವರ ಅನುಭವ.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!

ಸೋಶಿಯಲ್ ಮೀಡಿಯಾದಲ್ಲಿ ಪ್ರೇತಾತ್ಮಗಳು, ಅಜ್ಞಾತ ಶಕ್ತಿಗಳು ಮತ್ತು ಭಯಾನಕ ಘಟನೆಗಳ ವಿಡಿಯೋಗಳು ಹೆಚ್ಚಾಗಿ ವೈರಲ್ ಆಗುತ್ತಲೇ ಇವೆ. ಇತ್ತೀಚೆಗೆ, ಇಂತಹದ್ದೇ ಒಂದು ವಿಚಿತ್ರ ಹಾಗೂ ಭಯಾನಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಲಾಗುತ್ತಿದೆ.

ಈ ವಿಡಿಯೋದಲ್ಲಿ ಮಧ್ಯರಾತ್ರಿಯಲ್ಲಿ ವ್ಯಕ್ತಿಯೊಬ್ಬನು ನೆಲಕ್ಕೆ ಕುಳಿತುಕೊಂಡಿದ್ದಾನೆ. ಅದೇ ವೇಳೆ ಅವನ ಹಿಂದೆ ಬರುವ ನಾಯಿ (Dod) ಯೊಂದು ಹಠಾತ್ ಮನುಷ್ಯನಾಗಿ ಪರಿವರ್ತಿತವಾಗುತ್ತಿದೆ. ಇನ್ನೊಂದು ನಾಯಿ (Dog) ಅಲ್ಲಿಯೇ ಹಾದು ಹೋಗುತ್ತದೆ. ಈ ದೃಶ್ಯವನ್ನು ಕೇವಲ ಒಬ್ಬರೇ ನೋಡಿದರೆ, ಅದು ಭಯ ಹುಟ್ಟಿಸುವಂತಾಗುತ್ತದೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಈ ನಾಯಿ (Dog) ಮನುಷ್ಯನಾಗುವ ವಿಡಿಯೋ ನಿಜವೇ ಎಂಬುದರ ಬಗ್ಗೆ ಹಲವರು ಪ್ರಶ್ನೆ ಎತ್ತಿದರೂ, ಕೆಲವರು ಇದನ್ನು ನಿಜವಾದದ್ದು ಎಂದು ಪಸರಿಸುತ್ತಿದ್ದಾರೆ. ಆದರೆ AI (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದಿಂದಾಗಿ ಹೀಗೆ ನಾಯಿ (Dog) ಮನುಷ್ಯನಾಗುವ ನಕಲಿ ವಿಡಿಯೋಗಳನ್ನು ಬಹಳ ನೈಜವಾಗಿ ತಯಾರಿಸಲಾಗುತ್ತಿರುವುದು ನಿಜ.

ಈ ಕಾರಣದಿಂದ, ಇದೂ ಕೂಡ deepfake ಅಥವಾ ಎಡಿಟೆಡ್ ವಿಡಿಯೋ ಆಗಿರುವ ಸಾಧ್ಯತೆ ಉಂಟು.

ಈ ವಿಡಿಯೋ ಸಂಬಂಧಿಸಿದಂತೆ ಹಲವರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೆಲವರು ತಾವು ಭೂತ ಪ್ರೇತಗಳನ್ನು ನೋಡಿದ್ದಾಗಿ ಹೇಳಿದ್ದಾರೆ. ಇತ್ತೀಚೆಗೆ ಅಮೆರಿಕದ ಓಕ್‌ಬ್ರಿಡ್ಜ್ ಮಕ್ಕಳ ಆಸ್ಪತ್ರೆಗೆ ಸಂಬಂಧಿಸಿದ ಒಂದು ಘಟನೆ ಸುದ್ದಿಯಾದ್ದು. 9 ವರ್ಷದ ಬಾಲಕಿ ಎಮಿಲಿ ಹಾಲೋವೇ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವೇಳೆ ಹೃದಯಾಘಾತದಿಂದ ಮೃತಳಾಗಿದ್ದಳು.

ಇದನ್ನು ಓದಿ : Leg cramp : ರಾತ್ರಿ ವೇಳೆಯಲ್ಲಿ ಕಾಲು ಸೆಳೆತವೇ.? ಇಲ್ಲಿದೆ ನುರಿತ ನರವೈದ್ಯ ಮಾಹಿತಿ.!

ಆದರೆ ಹೃದಯ ನಿಲ್ಲಿಸಿದ ನಂತರವೂ, ಆಕೆಗೆ ಅಳವಡಿಸಿದ ಯಂತ್ರದಿಂದ ಬೀಪ್ ಶಬ್ದ ಮುಂದುವರಿದಿತ್ತು. ವಿಶೇಷವೆಂದರೆ, ಪ್ರತಿವರ್ಷ ಆಕೆಯ ಹುಟ್ಟುಹಬ್ಬದಂದು ಅದೇ ಶಬ್ದ ಕೇಳಿಸುತ್ತಿದೆ ಎಂದು ವೈದ್ಯರೇ ಸ್ಪಷ್ಟಪಡಿಸಿದ್ದಾರೆ.

ಈ ಎಲ್ಲ ಘಟನೆಗಳು, ವಿಡಿಯೋಗಳು ಮತ್ತು ವರದಿಗಳು ಭೂತ ಪ್ರೇತಗಳ ಕುರಿತಂತೆ ನಾನಾ ಚರ್ಚೆಗಳಿಗೆ ಕಾರಣವಾಗಿವೆ. ವೈಜ್ಞಾನಿಕವಾಗಿ ಎಷ್ಟು ವಿಷಯಗಳು ನಕಾರಾತ್ಮಕವಾಗಿ ನಿರೂಪಿಸಲಾದರೂ, ಹಲವರು ತಮ್ಮ ನಂಬಿಕೆಯಿಂದಾಗಿ ಇವುಗಳ ಅಸ್ತಿತ್ವವನ್ನೇ ನಂಬುತ್ತಾರೆ.

ಮಧ್ಯರಾತ್ರಿ ಮನುಷ್ಯನಾಗಿ ಬದಲಾದ ನಾಯಿ (Dog) ಯ ವಿಡಿಯೋ :

 

View this post on Instagram

 

A post shared by @brightlife_brightlife

Bride : ಮದುವೆ ದಿನದ ರಾತ್ರಿಯೇ 22 ವರ್ಷದ ವಧು ಆತ್ಮಹತ್ಯೆ.!

0

ಜನಸ್ಪಂದನ ನನ್ಯೂಸ್‌, ಡೆಸ್ಕ್‌ : ಮದುವೆ ದಿನದ ರಾತ್ರಿಯೇ 22 ವರ್ಷದ ವಧು (Bride) ವೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆಯೊಂದು ನಡೆದಿರುವ ಬಗ್ಗೆ ವರದಿಯಾಗಿದೆ.

ಆಂಧ್ರಪ್ರದೇಶದ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿ ಗ್ರಾಮದಲ್ಲಿ ಮದುವೆ ದಿನದ ರಾತ್ರಿಯೇ ವಧು (Bride) ವೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹೀಗೆ ಮದುವೆ ದಿನದ ರಾತ್ರಿಯೇ ಆತ್ಮಹತ್ಯೆಗೆ ಶರಣಾದ ವಧುವನ್ನು ಹರ್ಷಿತಾ (22) ಎಂಬ ಗುರುತಿಸಲಾಗಿದೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಕರ್ನಾಟಕದ ನಾಗೇಂದ್ರ ಎಂಬುವವರನ್ನು ಹರ್ಷಿತಾ (22) ಮದುವೆಯಾಗಿದ್ದರು. ಅದ್ಧೂರಿಯಾಗಿ ನಡೆದ ಮದುವೆ ಸಮಾರಂಭದ ಕೆಲವೇ ಗಂಟೆಗಳ ಬಳಿಕ, ರಾತ್ರಿ ಈ ಘಟನೆ ನಡೆದಿದ್ದು, ಎರಡೂ ಕುಟುಂಬಗಳು ತೀವ್ರ ಆಘಾತಕ್ಕೆ ಒಳಗಾಗಿವೆ.

ಮದುವೆಯ ನಂತರ ವಧು-ವರರು ವಧುವಿನ ಮನೆಯಲ್ಲಿ ಮೊದಲ ರಾತ್ರಿ ಕಳೆಯಲು ಸಿದ್ಧರಾಗಿದ್ದರು. ಈ ವೇಳೆ ವರ ನಾಗೇಂದ್ರ ಸಿಹಿತಿಂಡಿಗಳನ್ನು ತರಲು ಹೊರಗೆ ಹೋಗಿದ್ದಾಗ, ವಧು (Bride) ಹರ್ಷಿತಾ ಕೋಣೆಯೊಳಗೆ ಒಬ್ಬರೇ ಇದ್ದರು.

ನಾಗೇಂದ್ರ ಹಿಂದಿರುಗಿದಾಗ ಕೋಣೆ ಒಳಗಿನಿಂದ ಲಾಕ್ ಆಗಿದ್ದು, ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ದೊರಕಲಿಲ್ಲ. ತಕ್ಷಣ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಬಾಗಿಲು ಒಡೆದು ನೋಡಿದಾಗ, ವಧು (Bride) ಹರ್ಷಿತಾ (Bride) ಪ್ರಜ್ಷಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದರು. ತಕ್ಷಣ ಅವರನ್ನು ಪೆನುಕೊಂಡ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ವೈದ್ಯರು ಮೃತರಾಗಿರುವುದಾಗ ಘೋಷಿಸಿದರು.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಈ ಆಕಸ್ಮಿಕ ಸಾವು ಎರಡೂ ಕುಟುಂಬಗಳಿಗೆ ಭಾರೀ ಆಘಾತವನ್ನು ತಂದಿದ್ದು, ಸಾವಿನ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಮದುವೆ ವೇಳೆ ವಧು (Bride) ಹರ್ಷಿತಾ ಸಂತೋಷದಿಂದಿರುವಂತೆ ಕಂಡುಬಂದಿದ್ದರು ಎಂದು ಕುಟುಂಬ ಮೂಲಗಳು ಹೇಳಿವೆ.

ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಧು (Bride) ವಿನ ಸಾವಿನ ಕುರಿತು ತನಿಖೆ ಪ್ರಾರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆಗೆ ಕಾರಣವಾದ ಸಾಧ್ಯತೆಗಳ ಕುರಿತು ಎರಡೂ ಕುಟುಂಬಗಳಿಂದ ವಿಚಾರಣೆ ನಡೆಸಲಾಗುತ್ತಿದೆ.


“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

Bride : ಮದುವೆ ದಿನದ ರಾತ್ರಿಯೇ 22 ವರ್ಷದ ವಧು ಆತ್ಮಹತ್ಯೆ.!

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation̤They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.

“ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ನಿರ್ಲಕ್ಷಿಸಬೇಡಿ ; ಅದು Kidney ಫೆಲ್ಯೂರ್‌ನ ಸೂಚನೆ ಆಗಿರಬಹುದು”

0

ಜನಸ್ಪಂದನ ನ್ಯೂಸ್‌, ಆರೋಗ್ಯ : “ಕಾಲಿನ ನೋವಿನ ಜೊತೆ ಈ 5 ಲಕ್ಷಣಗಳು ಕಂಡುಬಂದರೆ ಖಂಡಿತ ನಿರ್ಲಕ್ಷಿಸಬೇಡಿ, ಅದು ಕಿಡ್ನಿ (Kidney) ಫೆಲ್ಯೂರ್‌ನ ಸೂಚನೆ ಆಗಿರಬಹುದು”.! ಬನ್ನಿ ಈ ಬಗ್ಗೆ ತಿಳಿಯೋಣ.!

ಮೂತ್ರಪಿಂಡಗಳು (Kidney) ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ರಕ್ತವನ್ನು ಶುದ್ಧೀಕರಿಸುವ ಫಿಲ್ಟರ್‌ನಂತಿವೆ. ಇವು ದೇಹದಿಂದ ಟಾಕ್ಸಿನ್ ಹಾಗೂ ಹೆಚ್ಚುವರಿ ದ್ರವವನ್ನು ತೆಗೆದುಹಾಕಿ, ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಮತ್ತು ಮೂಳೆಗಳಿಗೆ ಅಗತ್ಯವಾದ ಹಾರ್ಮೋನುಗಳನ್ನು ಉತ್ಪಾದಿಸುತ್ತವೆ.

ಇದನ್ನು ಓದಿ : ಬೆಳಗಾವಿಯಲ್ಲಿ ಹೈಟೆಕ್ Black-magic : ಜಮೀನಿನಲ್ಲಿ ಸ್ಮಾರ್ಟ್‌ಫೋನ್ ಸಹಿತ ವಾಮಾಚಾರದ ವಸ್ತುಗಳು ಪತ್ತೆ!

ಆದರೆ, ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ದೇಹದಲ್ಲಿ ವಿಷಕಾರಿ ವಸ್ತುಗಳು ಮತ್ತು ದ್ರವ ಸಂಗ್ರಹವಾಗಿ ಕಿಡ್ನಿ ಫೆಲ್ಯೂರ್ ಎಂಬ ಗಂಭೀರ ಸ್ಥಿತಿಗೆ ಕಾರಣವಾಗಬಹುದು.

ಈ ಕಾಯಿಲೆಯ ಆರಂಭಿಕ ಲಕ್ಷಣಗಳು ಸಾಮಾನ್ಯವಾಗಿ ಆಯಾಸ ಅಥವಾ ದೌರ್ಬಲ್ಯದಂತೆ ಕಾಣುವ ಕಾರಣ. ಅನೇಕರು ಅದನ್ನು ನಿರ್ಲಕ್ಷಿಸುತ್ತಾರೆ ಆದರೆ, ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಪರಿಸ್ಥಿತಿ ಮಾರಕವಾಗಬಹುದು. ಆದ್ದರಿಂದ ದೇಹದಲ್ಲಿ ಕಾಣುವ ಕೆಳಗಿನ ಬದಲಾವಣೆಗಳಿಗೆ ತಕ್ಷಣ ಗಮನ ನೀಡುವುದು ಅತ್ಯಗತ್ಯ.!

ಇದನ್ನು ಓದಿ : Girlfriend ಜೊತೆ ಪತಿಯನ್ನು ರೆಸ್ಟೋರೆಂಟ್‌ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪತ್ನಿ : ಮುಂದೆ ಏನಾಯಿತು.?
ಕಿಡ್ನಿ (Kidney) ವೈಪಲ್ಯದ ಲಕ್ಷಣಗಳು :
1. ಕಾಲುಗಳಲ್ಲಿ ನೋವು ಮತ್ತು ಊತ :

ಪಾದಗಳು ಹಾಗೂ ಕಣಕಾಲುಗಳಲ್ಲಿ ಊತ ಉಂಟಾಗುವುದು ಮೂತ್ರಪಿಂಡ ವೈಫಲ್ಯದ ಪ್ರಮುಖ ಸೂಚನೆ. ಮೂತ್ರಪಿಂಡಗಳು ಹೆಚ್ಚುವರಿ ನೀರು ಮತ್ತು ಸೋಡಿಯಂ ಅನ್ನು ಹೊರಹಾಕಲು ಅಸಮರ್ಥವಾಗುವಾಗ, ದ್ರವವು ದೇಹದ ಕೆಳಭಾಗದಲ್ಲಿ ಸಂಗ್ರಹವಾಗಿ ಊತ ಮತ್ತು ನೋವಿಗೆ ಕಾರಣವಾಗುತ್ತದೆ.

2. ನಿರಂತರ ಆಯಾಸ :

ಮೂತ್ರಪಿಂಡಗಳು ಸರಿಯಾಗಿ ಕೆಲಸ ಮಾಡದಿದ್ದರೆ, ಎರಿಥ್ರೋಪೊಯೆಟಿನ್ ಎಂಬ ಹಾರ್ಮೋನ್ ಉತ್ಪಾದನೆ ಕಡಿಮೆಯಾಗುತ್ತದೆ. ಇದರ ಕೊರತೆಯಿಂದ ರಕ್ತಹೀನತೆ (Anemia) ಉಂಟಾಗಿ, ಅಂಗಾಂಶಗಳು ಮತ್ತು ಸ್ನಾಯುಗಳಿಗೆ ಆಮ್ಲಜನಕ ಸರಿಯಾಗಿ ತಲುಪದೆ, ವ್ಯಕ್ತಿ ಯಾವಾಗಲೂ ದಣಿದ ಹಾಗೆ ಅನುಭವಿಸುತ್ತಾರೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!
3. ಚರ್ಮದಲ್ಲಿ ತುರಿಕೆ ಮತ್ತು ಬಣ್ಣ ಬದಲಾವಣೆ :

ರಕ್ತದಲ್ಲಿ ವಿಷಕಾರಿ ವಸ್ತುಗಳು ಹೆಚ್ಚಾಗಿ ಸಂಗ್ರಹವಾಗುವ ಕಾರಣ ಚರ್ಮದಲ್ಲಿ ನಿರಂತರ ತುರಿಕೆ ಉಂಟಾಗಬಹುದು. ಕೆಲವೊಮ್ಮೆ ಚರ್ಮ ಒಣಗುವುದು, ಹಳದಿ ಅಥವಾ ಕಂದು ಬಣ್ಣಕ್ಕೆ ತಿರುಗುವುದು ಸಹ ಕಿಡ್ನಿ ಸಮಸ್ಯೆಯ ಸೂಚನೆ ಆಗಬಹುದು.

4. ಮೂತ್ರ ವಿಸರ್ಜನೆಯಲ್ಲಿ ಬದಲಾವಣೆ :

ರಾತ್ರಿ ಆಗಾಗ್ಗೆ ಮೂತ್ರ ವಿಸರ್ಜನೆ, ಮೂತ್ರದ ಪ್ರಮಾಣದಲ್ಲಿ ಏರಿಕೆ ಅಥವಾ ಇಳಿಕೆ, ನೊರೆ ಮೂತ್ರ (ಪ್ರೋಟೀನ್ ಇರುವಿಕೆ), ಗಾಢ ಬಣ್ಣ ಅಥವಾ ರಕ್ತದ ಅಂಶ ಇರುವಿಕೆ. ಇವೆಲ್ಲವೂ ಮೂತ್ರಪಿಂಡಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಾಸವನ್ನು ಸೂಚಿಸುತ್ತವೆ.

5. ಉಸಿರಾಟದ ತೊಂದರೆ :

ಮೂತ್ರಪಿಂಡ (Kidney) ವೈಫಲ್ಯದಿಂದ ಹೆಚ್ಚುವರಿ ದ್ರವವು ಶ್ವಾಸಕೋಶದ ಸುತ್ತಲೂ ಸಂಗ್ರಹವಾಗಿ ಉಸಿರಾಟ ಕಷ್ಟವಾಗಬಹುದು. ಜೊತೆಗೆ ರಕ್ತಹೀನತೆಯಿಂದಾಗಿ ದೇಹಕ್ಕೆ ಆಮ್ಲಜನಕ ಕಡಿಮೆಯಾಗುವುದರಿಂದ, ಕಡಿಮೆ ಶಾರೀರಿಕ ಚಟುವಟಿಕೆಯಲ್ಲಿಯೂ ಉಸಿರಾಟ ತೊಂದರೆ ಉಂಟಾಗುತ್ತದೆ.

ಇದನ್ನು ಓದಿ : Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

ಸಂಪಾದಕೀಯ :

ಈ ಲಕ್ಷಣಗಳಲ್ಲಿ ಯಾವುದಾದರೂ ಕಂಡುಬಂದರೆ, ತಕ್ಷಣ ವೈದ್ಯಕೀಯ ಸಲಹೆ ಪಡೆಯುವುದು ಬಹಳ ಮುಖ್ಯ. ಸಮಯಕ್ಕೆ ಚಿಕಿತ್ಸೆ ಪಡೆದರೆ ಮೂತ್ರಪಿಂಡ (Kidney) ಗಳ ಆರೋಗ್ಯವನ್ನು ಕಾಪಾಡಬಹುದು ಮತ್ತು ಗಂಭೀರ ಸಮಸ್ಯೆಗಳನ್ನು ತಪ್ಪಿಸಬಹುದು.

Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation̤They are located on the left and right in the retroperitoneal space, and in adult humans are about 12 centimetres (4+1⁄2 inches) in length. They receive blood from the paired renal arteries; blood exits into the paired renal veins. Each kidney is attached to a ureter, a tube that carries excreted urine to the bladder.

> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ಅಥವಾ ತಾವೇ ಸ್ವತಃ ಪರೀಕ್ಷಿಸಿ ತಿರ್ಮಾನಿಸುವ ಪೂರ್ವದಲ್ಲಿ ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್‌ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.


Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

vande-bharat

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕೊನೆಗೂ ಬೆಳಗಾವಿ – ಬೆಂಗಳೂರು ವಂದೇ ಭಾರತ್ (Vande-Bharat) ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ ದೊರೆಯುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಬೆಳಗಾವಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ (Vande-Bharat) ರೈಲು ಆರಂಭಿಸಲು ಶತ ಪ್ರಯತ್ನ ನಡೆಸಿದ್ದರು. ಕೊನೆಗೂ ಅದಕ್ಕೆ ದಿನ ನಿಗದಿಯಾಗಿದೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಹಾಗೂ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನು ಓದಿ : ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ.

ಕರ್ನಾಟಕ ಪ್ರವಾಸದಂದು ಮೋದಿ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ (Vande-Bharat) ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬೆಳಗಾವಿ – ಬೆಂಗಳೂರು Vande-Bharat ರೈಲಿನ ವೇಳಾ ಪಟ್ಟಿ :

ಸಂಸದರ ಕೋರಿಕೆಯ ಮೇರೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ (Vande-Bharat) ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ’ ಎಂದು ಜೋಶಿ ತಿಳಿಸಿದ್ದಾರೆ.

ರೈಲು ಯೋಜನೆ ಜಾರಿಗೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ಎಂದು ಜೋಶಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

Vande-Bharat : ಬೆಳಗಾವಿ – ಬೆಂಗಳೂರು ವಂದೇ ಭಾರತ್ ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ಕೊನೆಗೂ ಬೆಳಗಾವಿ – ಬೆಂಗಳೂರು ವಂದೇ ಭಾರತ್ (Vande-Bharat) ರೈಲಿಗೆ ಆ.10 ರಂದು ಪ್ರಧಾನಿಯಿಂದ ಚಾಲನೆ ದೊರೆಯುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಬೆಳಗಾವಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ (Vande-Bharat) ರೈಲು ಆರಂಭಿಸಲು ಶತ ಪ್ರಯತ್ನ ನಡೆಸಿದ್ದರು. ಕೊನೆಗೂ ಅದಕ್ಕೆ ದಿನ ನಿಗದಿಯಾಗಿದೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಹಾಗೂ ಈರಣ್ಣ ಕಡಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನು ಓದಿ : ನಿಯಂತ್ರಣ ತಪ್ಪಿದ bolero ಕಾರು : ರಸ್ತೆಯ ಬದಿ ನಿಂತಿದ್ದ ಜನರಿಗೆ ಡಿಕ್ಕಿ ; 5 ಜನರಿಗೆ ಗಾಯ.!

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಬೆಂಗಳೂರನ್ನು (ಎಲೆಕ್ಟ್ರಾನಿಕ್ ಸಿಟಿ) ನಗರದ ಕೇಂದ್ರಕ್ಕೆ ಸಂಪರ್ಕಿಸುವ ನಮ್ಮ ಮೆಟ್ರೊ ಹಳದಿ ಮಾರ್ಗಕ್ಕೆ (ಆ‌ರ್.ವಿ. ರಸ್ತೆ-ಬೊಮ್ಮಸಂದ್ರ) ಚಾಲನೆ ನೀಡಲಿದ್ದಾರೆ. ಇದೇ ವೇಳೆ ಮೂರು ವಂದೇ ಭಾರತ್ ರೈಲುಗಳಿಗೂ ಹಸಿರು ನಿಶಾನೆ ತೋರಲಿದ್ದಾರೆ.

ಕರ್ನಾಟಕ ಪ್ರವಾಸದಂದು ಮೋದಿ ಅವರು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ಸಂಚರಿಸಲಿರುವ ನೂತನ ವಂದೇ ಭಾರತ್ (Vande-Bharat) ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಬೆಳಗಾವಿ – ಬೆಂಗಳೂರು Vande-Bharat ರೈಲಿನ ವೇಳಾ ಪಟ್ಟಿ :

ಸಂಸದರ ಕೋರಿಕೆಯ ಮೇರೆಗೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ (Vande-Bharat) ರೈಲಿಗೆ ಅನುಮೋದನೆ ನೀಡಲಾಗಿತ್ತು. ಬೆಳಗಾವಿಯಿಂದ ಬೆಳಗ್ಗೆ 5.20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1.50ಕ್ಕೆ ಆಗಮಿಸಲಿದೆ.

ಇದನ್ನು ಓದಿ : Rape ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು ಹಾರಿಸಿದ ಬೇಲ್ ಮೇಲೆ ಹೊರ ಬಂದ ಆರೋಪಿ.!

ಬೆಂಗಳೂರಿನಿಂದ ವಾಪಸ್ಸು ಮಧ್ಯಾಹ್ನ 2.20ಕ್ಕೆ ಹೊರಟು ರಾತ್ರಿ 10.40ಕ್ಕೆ ಬೆಳಗಾವಿಗೆ ತಲುಪಲಿದೆ. ಈ ಮೂಲಕ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯ ನಡುವೆ ಸಂಪರ್ಕ ಹೆಚ್ಚಿಸಲಿದೆ’ ಎಂದು ಜೋಶಿ ತಿಳಿಸಿದ್ದಾರೆ.

ರೈಲು ಯೋಜನೆ ಜಾರಿಗೆ ಸಹಕರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದ ಎಂದು ಜೋಶಿ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.


CCRAS ನಲ್ಲಿ 394 ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ.!

CCRAS

ಜನಸ್ಪಂದನ ನ್ಯೂಸ್‌,ನೌಕರಿ : ಕೇಂದ್ರೀಯ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿ (CCRAS) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ದೇಶದಾದ್ಯಂತ ಒಟ್ಟು 394 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ CCRAS ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕಕ್ಕೊಳಗಾಗಿ ಅರ್ಜಿ ಸಲ್ಲಿಸುವುದು ಮುಖ್ಯವಾಗಿದೆ.

ಇದನ್ನು ಓದಿ : Love-Case : ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ murder.!
CCRAS ನಲ್ಲಿ ಲಭ್ಯವಿರುವ ಹುದ್ದೆಗಳು :

ಅನುವಾದಕ (ಹಿಂದಿ ಸಹಾಯಕ), ಸಂಶೋಧನಾ ಸಹಾಯಕ (ಸಸ್ಯಶಾಸ್ತ್ರ, ಔಷಧಶಾಸ್ತ್ರ, ಫಾರ್ಮಸಿ, ರಸಾಯನಶಾಸ್ತ್ರ), ಲೋವರ್ ಡಿವಿಷನ್ ಕ್ಲರ್ಕ್ (LDC), ಸ್ಟೆನೋಗ್ರಾಫರ್ ಗ್ರೇಡ್-I ಮತ್ತು II, ಸ್ಟಾಫ್ ನರ್ಸ್, ಗ್ರಂಥಾಲಯ ಗುಮಾಸ್ತ, ಭದ್ರತಾ ಅಧಿಕಾರಿ, ಸಂಶೋಧನಾ ಅಧಿಕಾರಿ (ಆಯುರ್ವೇದ, ರೋಗಶಾಸ್ತ್ರ), ಸಹಾಯಕ ಸಂಶೋಧನಾ ಅಧಿಕಾರಿ, ಬಹು ಕಾರ್ಯ ಸಿಬ್ಬಂದಿ (MTS), ಅಪ್ಪರ್ ಡಿವಿಷನ್ ಕ್ಲರ್ಕ್ (UDC), ಸಹಾಯಕ, ಔಷಧಿಕಾರ, ಪ್ರಯೋಗಾಲಯದ ಪರಿಚಾರಕ, ಸಾಮಾನ್ಯ ದರ್ಜೆಯ ಚಾಲಕ, ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞ, ಸಂಖ್ಯಾಶಾಸ್ತ್ರೀಯ ಸಹಾಯಕ, ಆಫ್ಸೆಟ್ ಮೆಷಿನ್ ಆಪರೇಟರ್ ಸೇರಿದಂತೆ ಹಲವು ಹುದ್ದೆಗಳು ಒಳಗೊಂಡಿವೆ.

ವೇತನ ಶ್ರೇಣಿ :
  • ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,000 ರಿಂದ ರೂ.42,000 ವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ  :
  • ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ ಮೀರಬಾರದು.
ವಿದ್ಯಾರ್ಹತೆ :
  • ಶೈಕ್ಷಣಿಕ ಅರ್ಹತೆಯಾಗಿ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಐಟಿಐ, ಪದವಿ, ಎಂಡಿ/ಎಂಎಸ್, ಎಂ. ಫಾರ್ಮ್ ಅಥವಾ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಇದನ್ನು ಓದಿ : Itching : ಗುಪ್ತಾಂಗದಲ್ಲಿ ತುರಿಕೆಯೇ? ಇಲ್ಲಿದೆ ಪ್ರಮುಖ ಕಾರಣಗಳು ಮತ್ತು ಮನೆಮದ್ದುಗಳು.!
ಅರ್ಜಿ ಸಲ್ಲಿಸುವ ವಿಧಾನ :
  1. ಅಧಿಕೃತ CCRAS ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಅಧಿಸೂಚನೆಯನ್ನು ಓದಿ, ಅರ್ಹತೆ ಪರಿಶೀಲಿಸಿ.
  3. ಆನ್‌ಲೈನ್ ಅರ್ಜಿ ಫಾರ್ಮ್ ಭರ್ತಿ ಮಾಡಿ.
  4. ಅಗತ್ಯವಿದ್ದರೆ ಅರ್ಜಿ ಶುಲ್ಕ ಪಾವತಿಸಿ.
  5. ಫೋಟೋ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.
  6. ವಿವರಗಳನ್ನು ಪರಿಶೀಲಿಸಿ, ಫಾರ್ಮ್ ಸಲ್ಲಿಸಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಕೆ ಪ್ರಾರಂಭ : 01 ಜುಲೈ 2025.
  • ಅರ್ಜಿ ಸಲ್ಲಿಕೆ ಕೊನೆ : 31 ಆಗಸ್ಟ್ 2025.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಅಧಿಕೃತ CCRAS ವೆಬ್‌ಸೈಟ್‌ಗೆ ಭೇಟಿ ನೀಡಿ.

Disclaimer : The above given information is available On online, candidates should check it properly before applying. This is for information only.