ಮಂಗಳವಾರ, ಫೆಬ್ರವರಿ 3, 2026

Janaspandhan News

Home Blog Page 64

ನೀರು ಮಿಶ್ರಿತ ಡಿಸೇಲ್‌ ; ರಸ್ತೆಯಲ್ಲಿಯೇ ನಿಂತ 19 CM ಬೆಂಗಾವಲು ವಾಹನ.!

0

 

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ನೀರು ಮಿಶ್ರಿತ ಡಿಸೇಲ್‌ ಹಾಕಿದ ಪರಿಣಾಮ ಸಿಎಂ (CM) ಬೆಂಗಾವಲು ವಾಹನಗಳು ರಸ್ತೆಯಲ್ಲಿಯೇ ಕೆಟ್ಟು ನಿಂತ ಘಟನೆಯೊಂದು ಶುಕ್ರವಾರ ನಡೆದಿದೆ. ಸಿಎಂ ಬೆಂಗಾವಲು ಪಡೆಯ 19 ಕಾರುಗಳಿಗೆ ಡಿಸೇಲ್ ಬದಲು ನೀರು ಮಿಶ್ರಿತ ಡಿಸೇಲ್ ಹಾಕಲಾಗಿದೆ. ಪರಿಣಾಮವಾಗಿ ಬೆಂಗಾವಲು ವಾಹನ ಇದ್ದಕ್ಕಿದ್ದಂತೆ ಒಂದರ ನಂತರ ಒಂದರಂತೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.

ಹೌದು, ಮಧ್ಯಪ್ರದೇಶ ಮುಖ್ಯಮಂತ್ರಿ (CM) ಡಾ. ಮೋಹನ್ ಯಾದವ್ ರತ್ಲಂನಲ್ಲಿ ಅವರ ಕಾರ್ಯಕ್ರಮಕ್ಕೆ ಒಂದು ದಿನ ಮೊದಲು, ಭೋಪಾಲ್‌ನಿಂದ ಇಂದೋರ್ ತಲುಪಿದ ವಾಹನಗಳ ಬೆಂಗಾವಲು ವಾಹನಗಳಲ್ಲಿ ಡೀಸೆಲ್ (diesel) ತುಂಬಿಸಲಾಯಿತು. ಡಿಸೇಲ್‌ ತುಂಬಿಸಿಕೊಂಡು ಸ್ವಲ್ಪ ಮುಂದೆ ಸಾಗುತ್ತಿದಂತೆಯೇ 19 ಬೆಂಗಾವಲು ವಾಹನಗಳು ಕೆಟ್ಟು ನಿಲ್ಲಲು (Starting Truble) ಬೀಳಲು ಪ್ರಾರಂಬಿಸಿದವು.

ಇದನ್ನು ಓದಿ : Plane : ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನದಲ್ಲಿ ಬೆಂಕಿ ; ವಿಡಿಯೋ.!

ಹೀಗೆ ಕೆಟ್ಟು ನಿಂತ ವಾಹನಗಳನ್ನು ಆರಾಮವಾಗಿ ಒಳಗೆ ಕುಳಿತಿದ್ದ ಸಿಬ್ಬಂದಿ ಅನಿವಾರ್ಯಾವಾಗಿ ಕೆಳಗಿಳಿದು ರಸ್ತೆಯಲ್ಲಿ ಕೆಟ್ಟು ನಿಂತ ವಾಹನಗಳನ್ನು ಪಕ್ಕಕ್ಕೆ ತಳ್ಳಬೇಕಾಯಿತು. ಇದ್ಯ ಇದರ ವಿಡಿಯೋ ಸಾಮಾಜಿಕ ಜಳತಾಣದಲ್ಲಿ ವೈರಲ್‌ ಆಗಿದೆ.

ಶುಕ್ರವಾರ ರತ್ಲಂನಲ್ಲಿ ಪ್ರಾದೇಶಿಕ ಕೈಗಾರಿಕಾ ಸಮಾವೇಶ ನಡೆಯುತ್ತಿರುವ ಹಿನ್ನಲೆಯಲ್ಲಿ CM ಡಾ. ಮೋಹನ್ ಯಾದವ್ ಈ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಈ ಭೇಟಿಯ ಹಿನ್ನಲೆಯಲ್ಲಿ ಮುಖ್ಯಮಂತ್ರಿಯ ಬೆಂಗಾವಲು ಸೇರಲು ಗುರುವಾರ ಭೋಪಾಲ್‌ನಿಂದ ಸುಮಾರು 19 ವಾಹನಗಳು ಇಂದೋರ್ ತಲುಪಿದವು. ಮುಖ್ಯಮಂತ್ರಿ (CM) ಯ ಭೇಟಿಗೆ ಮೊದಲು, ಕಾರ್ಕೇಡ್‌ನ ಪೂರ್ವಾಭ್ಯಾಸ ಮಾಡಲಾಗುವ ಹಿನ್ನಲೆಯಲ್ಲಿ ಈ ಬೆಂಗಾವಲು ವಾಹನಗಳನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ದೋಸಿಗಾಂವ್‌ನಲ್ಲಿರುವ ಪೆಟ್ರೋಲ್ ಪಂಪ್‌ಗೆ ಡೀಸೆಲ್ ತುಂಬಿಸಲು ವಾಹನಗಳು ಬಂದವು. ಇಲ್ಲಿನ ಎಲ್ಲಾ ವಾಹನಗಳಲ್ಲಿ ನೀರಿನೊಂದಿಗೆ ಬೆರೆಸಿದ ಡೀಸೆಲ್ ತುಂಬಿಸಲಾಗಿತ್ತು ಎಂದು ಶಂಕಿಸಲಾಗಿದೆ. ಡೆಸೇಲ್‌ ತುಂಬಿದ ನಂತರ ಬೆಂಗಾವಲು ಪಡೆ ಮುಂದೆ ಸಾಗಿದ ತಕ್ಷಣ, ಎಲ್ಲಾ ವಾಹನಗಳು ಒಂದರಿಂದೇ ಮತ್ತೊಂದು ಎಂಬಂತೆ ಕೆಟ್ಟು ನಿಲ್ಲತೊಡಗಿದವು.

ಈ ಬೆಂಗಾವಲು ವಾಹನಗಳು ಸ್ವಲ್ಪ ಮುಂದೆ ಸಾಗಿ ರಸ್ತೆಯಲ್ಲಿ ಕೆಟ್ಟು ನಿಂತರೆ, ಇನ್ನು ಕೆಲವು ವಾಹನಗಳು ಪೆಟ್ರೋಲ್ ಪಂಪ್‌ನಲ್ಲಿಯೇ ಸ್ಟಾರ್ಟ್ ಆಗದೇ ನಿಂತು ಬಿಟ್ಟಿವೇ. ಈ ವಾಹನಗಳಲ್ಲಿ ಸಂಚರಿಸುತ್ತಿದ್ದ ಭದ್ರತಾ ಸಿಬ್ಬಂದಿ ಮತ್ತು ಆಡಳಿತ ಅಧಿಕಾರಿಗಳು ಕೆಟ್ಟು ನಿಂತಿ ವಾಹನಗಳನ್ನು ತಳ್ಳಿ ಪಕ್ಕಕ್ಕೆ ಸಾಗಿಸಿದರು.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 27 ರ ದ್ವಾದಶ ರಾಶಿಗಳ ಫಲಾಫಲ.!

ವಿಷಯ ತಿಳಿಯುತ್ತಿದಂತೆಯೇ ನಯಬ್ ತಹಶೀಲ್ದಾರ್ ಆಶಿಶ್ ಉಪಾಧ್ಯಾಯ ಮತ್ತು ಆಹಾರ ಮತ್ತು ಸರಬರಾಜು ಅಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತಲುಪಿದರು. ಅವರು ವಾಹನಗಳ ಡೀಸೆಲ್ ಟ್ಯಾಂಕ್‌ಗಳನ್ನು ತೆರೆದು ಪರಿಶೀಲಿಸಿದರು. 20 ಲೀಟರ್ ಡೀಸೆಲ್‌ನಲ್ಲಿ ಸುಮಾರು 10 ಲೀಟರ್ ನೀರು ಇತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಎಲ್ಲಾ ಕಾರುಗಳಲ್ಲಿಯೂ ಇದೇ ಸ್ಥಿತಿ ಇತ್ತು.

ಬೆಂಗಾವಲು ವಾಹನಕ್ಕಷ್ಟೆ ಈ ಬಿಸಿ ತಟ್ಟಿಲ್ಲ, ಈ ಪೆಟ್ರೋಲ್ ಪಂಪ್‌ನಿಂದ ಒಂದು ಟ್ರಕ್ ಕೂಡ ಸುಮಾರು 200 ಲೀಟರ್ ಡೀಸೆಲ್ ತುಂಬಿಸಿತ್ತು. ಸ್ವಲ್ಪ ದೂರ ಹೋದ ನಂತರ ಆ ಟ್ರಕ್ ಕೂಡ ನಿಂತಿತು. ಅಧಿಕಾರಿಗಳು ತಕ್ಷಣ ಭಾರತ್ ಪೆಟ್ರೋಲಿಯಂನ ಪ್ರದೇಶ ವ್ಯವಸ್ಥಾಪಕರಿಗೆ ಕರೆ ಮಾಡಿದ್ದಾರೆ. ಮಳೆಯಿಂದಾಗಿ ಟ್ಯಾಂಕ್‌ನಲ್ಲಿ ನೀರು ಸೋರಿಕೆಯಾಗುವ ಸಾಧ್ಯತೆಯಿದೆ ಎಂದು ಪ್ರದೇಶ ವ್ಯವಸ್ಥಾಪಕರು ಹೇಳಿದರು.

ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!

ವಾಹನಗಳು ಕೈ ಕೊಟ್ಟ ಪರಿಣಾಮವಾಗಿ ಅಧಿಕಾರಿಗಳು ಬೆಳಗಿನ ಜಾವ 1 ಗಂಟೆಯವರೆಗೆ ಪೆಟ್ರೋಲ್ ಪಂಪ್‌ನಲ್ಲಿಯೇ ಇದ್ದರು. ಆಹಾರ ಮತ್ತು ಸರಬರಾಜು ಇಲಾಖೆ ತಕ್ಷಣವೇ ಪೆಟ್ರೋಲ್ ಪಂಪ್ ಅನ್ನು ಸೀಲ್ ಮಾಡಿತು.

ಇನ್ನು ಮುಖ್ಯಮಂತ್ರಿಗಳ (CM) ಬೆಂಗಾವಲು ಪಡೆಗಾಗಿ ಇಂದೋರ್‌ನಿಂದ ಇತರ ವಾಹನಗಳನ್ನು ಕರೆಯಿಸಿ ಸಿಎಂ ಕಾರ್ಯಕ್ರಮಕ್ಕೆ ಅನಿವು ಮಾಡಿಕೊಡಲಾಯಿತು. ಮುಖ್ಯಮಂತ್ರಿ (CM) ಗಳೊಂದಿಗೆ ಅನೇಕ ಹಿರಿಯ ಅಧಿಕಾರಿಗಳು ಮತ್ತು ನಾಯಕರು ಸಹ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ಕೆಟ್ಟು ನಿಂತ ಸಿಎಂ (CM) ಬೆಂಗಾವಲು ವಾಹನಗಳ ವಿಡಿಯೋ :

https://twitter.com/i/status/1938490529693729199

First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : “ನನ್ನನ್ನು ಮುಟ್ಟಿದ್ರೆ 35 ಪೀಸ್‌ ಮಾಡತಿನಿ” ಎಂದು ಕೈಯಲ್ಲಿ ಚಾಕು ಹಿಡಿದು ನವ ವಧುವೋರ್ವಳು ಫಸ್ಟ್‌ ನೈಟ್ (First Night) ಶಾಸ್ತ್ರಕ್ಕೆ ಕೋಣೆಗೆ ಬಂದ ಪತಿಗೆ ಬೆದರಿಕೆ ಹಾಕಿದ ರೀತಿ ಇದು. ಕೇಳಲು ಸಿನೆಮಾ ಡೈಲಾಗ್‌ ರೀತಿ ಕಂಡರು ಸಹ ಇಂತಹ ವಿಚಿತ್ರ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಹಿರಿಯರ ಸಮ್ಮುಖದಲ್ಲಿ ಖುಷಿ ಖುಷಿಯಾಗಿ ಏಪ್ರಿಲ್ 29 ರಂದು ಮದುವೆ ಸಮಾರಂಭ ಮುಗಿದೆ. ಪ್ರಯಾಗ್‌ರಾಜ್‌ನ ಎಡಿಎ ಕಾಲೋನಿಯ 26 ವರ್ಷದ ನಿಶಾದ್ ಎಂಬುವವರು ಕರ್ಚನಾ ದೇಹ್‌ನ ಲಕ್ಷ್ಮಿ ನಾರಾಯಣ್ ನಿಶಾದ್ ಅವರ ಪುತ್ರಿ ಸಿತಾರಾ ಎಂಬಾಕೆಯನ್ನು ವಿವಾಹವಾಗಿದ್ದರು.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಮದುವೆಯಾದ ವರ ಫಸ್ಟ್‌ ನೈಟ್ (First Night) ಶಾಸ್ತ್ರಕ್ಕೆ ಎಂದು ವಧುವಿನ ಕೋಣೆಗೆ ಬರುವವರೆಗೆ ಎಲ್ಲವೂ ಚನ್ನಾಗಿಯೇ ಇತ್ತು. ಯಾವಾಗ ನವವಿವಾಹಿತ ನಿಶಾದ್ (First Night) ಕೋಣೆಗೆ ಪ್ರವೇಶಿಸಿದನೋ ಆಗ ವಿಚಿತ್ರ ಎಂಬಂತೆ ಇದ್ದಕ್ಕಿದಂತೆ ನವ ವಧು “ಕೈಯಲ್ಲಿ ಚಾಕು ಹಿಡಿದು ಫಸ್ಟ್‌ ನೈಟ್ (First Night) ಶಾಸ್ತ್ರಕ್ಕೆ ಕೋಣೆಗೆ ಬಂದ ಪತಿಗೆ ನನ್ನನ್ನು ಮುಟ್ಟಿದ್ರೆ 35 ಪೀಸ್‌ ಮಾಡತಿನಿ” ಎಂದು ಬೆದರಿಕೆ ಹಾಕಿದ್ದಾಳೆ.

ತನ್ನ ಪತ್ನಿಯ ಈ ರೀತಿಯ ನಡುವಳಿಕೆ ಕಂಡ ಪತಿ ಗಾಬರಿಯಾಗಿದ್ದು, ಆ ರಾತ್ರಿ ವಧು ಸಿತಾರ ಹಾಸಿಗೆಯ ಮೇಲೆ ಮಲಗಿದರೆ, ವರ ನಿಶಾದ್ ಸೋಫಾದ ಮೇಲೆ ಅಂಜಿಕೆಯಿಂದಲೇ ಎಚ್ಚರವಾಗಿ ಮಲಗಿದ್ದಾರೆ.

ಇದನ್ನು ಓದಿ : SSC ಯಲ್ಲಿ ಭರ್ಜರಿ ಉದ್ಯೋಗವಕಾಶ ; 2,423 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಏತನ್ಮಧ್ಯೆ, ವರನು ಮೂರು ದಿನ ನಿದ್ದೆಯಿಲ್ಲದ, ಭಯಭೀತನಾಗಿ ರಾತ್ರಿಗಳನ್ನು ಕಳೆದಿದ್ದಾನೆ. ಹೀಗಿರುವಾಗ ಅಣ್ಣನ ವರ್ತನೆಯನ್ನು ಗಮನಿಸಿದ ಸಹೋದರಿಯರು ಎಲ್ಲೋ ಏನೋ ಮಿಸ್ ಹೊಡಿತ್ತಾ ಇದೇಯಲ್ಲಾ ಅಂತ ಈ ಕುರಿತು ಅಣ್ಣನ ಬಳಿ ವಿಚಾರಿಸಿದಾಗ ನಿಶಾದ್, ಈ ವಿಷಯವನ್ನು ಬಹಿರಂಗಪಡಿಸಿದರು ಎಂದು ತಿಳಿದು ಬಂದಿದೆ.

ಎರಡು ಕುಟುಂಬದ ಹಿರಿಯರೆಲ್ಲರೂ ಸೇರಿ ವಧುವನ್ನು ವಿಚಾರಿಸಿದಾಗ, ಅವಳು ಅಮನ್‌ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ನಾನು ಬಲವಂತವಾಗಿ ಈ ಮದುವೆಯಾಗಿದ್ದೇನೆ. ನಾನು ಅಮನ್‌ ಆಸ್ತಿ, ಅವನು ಮಾತ್ರ ನನ್ನನ್ನು ಮುಟ್ಟಲು ಸಾಧ್ಯ ಎಂದು ಕಡಿಮುರಿದ ಹಾಗೆ ಹೇಳಿದ್ದಾಳೆ.

ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!

ಎರಡೂ ಕುಟುಂಬಗಳು ಮೇ 25 ರಂದು ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ. ಆದರೆ ಸಿತಾರಾ ಇಷ್ಟವಿಲ್ಲದೆ ತನ್ನ ಪತಿಯೊಂದಿಗೆ ಇರಲು ಲಿಖಿತವಾಗಿ ಒಪ್ಪಿಕೊಂಡರು, ಆದರೆ ಬೆದರಿಕೆಗಳು ಮುಂದುವರೆಯುತ್ತವೆ ಎಂದಿದ್ದಾಳೆ.

ಕೊನೆಗೆ ಮೇ 30 ರಂದು ಮಧ್ಯರಾತ್ರಿಯ ಸುಮಾರಿಗೆ ಸಿತಾರಾ ಮನೆಯ ಹಿಂದಿನ ಗೋಡೆಯನ್ನು ಹಾರಿ ಮನೆಯಿಂದ ತಪ್ಪಿಸಿಕೊಂಡಿದ್ದು, ಅವಳು ಕುಂಟುತ್ತಾ ಓಡಿ ಹೋಗುವುದು ಸಿಸಿಟಿವಿ ದೃಶ್ಯದಲ್ಲಿ ಕಾಣಿಸುತ್ತದೆ.

ಎಫ್‌ಐಆರ್ ದಾಖಲಾಗಿಲ್ಲ :

ಎರಡೂ ಕುಟುಂಬಗಳು ಪ್ರಕರಣದ ಕುರಿತು ಪರಸ್ಪರ ಲಿಖಿತ ಇತ್ಯರ್ಥವನ್ನು ಮಾಡಿಕೊಂಡ ಕಾರಣ ಈ ಕುರಿತು ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!

0

ಜನಸ್ಪಂದನ ನ್ಯೂಸ್‌, ಬೆಳಗಾವಿ : ದಕ್ಷಿಣ ಭಾರತದ ಅತ್ಯಂತ ಸುಪ್ರಸಿದ್ಧ ಹಾಗೂ ಅತ್ಯಂತ ಜಾಗೃತ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಸವದತ್ತಿ (Savadatti) ಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಗಳ ಎಣಿಕೆ ಕಾರ್ಯ ಗುರುವಾರ ಮುಕ್ತಾಯಗೊಂಡಿದೆ. ಈ ಸಲ ರೂ. 1.04 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ಈ ಬಗ್ಗೆ ಸವದತ್ತಿ (Savadatti) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ರೂ.5.22 ಲಕ್ಷ ಮೌಲ್ಯದ 53 ಗ್ರಾಂ ಚಿನ್ನಾಭರಣ, ರೂ.1.27 ಲಕ್ಷ ಮೌಲ್ಯದ 1,276 ಗ್ರಾಂ ಬೆಳ್ಳಿ ಸಾಮಗ್ರಿ, ರೂ.98.23 ಲಕ್ಷ ನಗದು ಸವದತ್ತಿ (Savadatti) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ ದೊರೆತಿದೆ ಎಂದು ಕಾರ್ಯದರ್ಶಿ ತಿಳಿಸಿದರು.

ಸವದತ್ತಿ (Savadatti) ಶ್ರೀ ರೇಣುಕಾ ಯಲ್ಲಮ್ಮನ ಸನ್ನಿಧಿಗೆ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಿಸುವ ನಿಟ್ಟಿನಲ್ಲಿ ದೇವಸ್ಥಾನದ ಹುಂಡಿಯಲ್ಲಿ, ನಗದು ಮಾತ್ರವಲ್ಲದೆ ಚಿನ್ನಾಭರಣ, ಬೆಳ್ಳಿ ಆಭರಣ ಹಾಕಿ ಭಕ್ತಿ ಸಮರ್ಪಿಸುತ್ತಾರೆ.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಸವದತ್ತಿ (Savadatti) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಪ್ರಾಧಿಕಾರದ ಕಾರ್ಯಧರ್ಶಿ, ದೇವಸ್ಥಾನ ಅಧಿಕಾರಿಗಳು, ಧಾರ್ಮಿಕ ದತ್ತಿ ಇಲಾಖೆಯ ಸಿಬ್ಬಂದಿ, ಸವದತ್ತಿಯ ತಹಶೀಲ್ದಾರ, ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಹುಂಡಿಗಳನ್ನು ಒಡೆಯಲಾಯಿತು.

ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿ ಬಾಳೇಶ ಅಬ್ಬಾಯಿ, ಎಂ.ಪಿ. ದ್ಯಾಮನಗೌಡ್ರ, ಅಲ್ಲಮಪ್ರಭು ಪ್ರಭುನವರ, ಆ‌ರ್.ಎಚ್‌. ಸವದತ್ತಿ, ಎನ್.ಎಂ. ಮುದಿಗೌಡರ, ಕೆನರಾ ಬ್ಯಾಂಕ್ ಮ್ಯಾನೇಜ‌ರ್ ಚಾನಾಕ್ಷೀ, ಮಾಂತೇಶ ಕೋಡಳ್ಳಿ, ಪ್ರಭು ಹಂಜಗಿ, ಶಿವಾನಂದ ನೇಸರಗಿ, ಅನಿಲ ತೇರದಾಳ, ಜಗದೀಶ ರೇವಣ್ಣವರ, ಎಎಸ್‌ಐ ಬಿ.ಆರ್. ಸಣ್ಣಮಾಳಗೆ, ಆನಂದ ಗೊರವನಕೊಳ್ಳ, ಡಿ.ಡಿ. ನಾಗನಗೌಡರ್ ಹಾಗೂ ದೇವಸ್ಥಾನದ ಅಧಿಕಾರಿ ಮತ್ತು ಸಿಬ್ಬಂದಿ ಇದ್ದರು.

Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರೀಲ್ಸ್‌ ಹುಚ್ಚಿಗಾಗಿ ಕುಡಿದ ಅಮಲಿನಲ್ಲಿ ಯುವತಿ (Lady) ಯೋರ್ವಳು ರೈಲು ಹಳಿಯ ಮೇಲೆ ಕಾರು ಚಲಾಯಿಸಿದ ಘಟನೆಯೊಂದು ಗುರುವಾರ (ಜೂ. 26) ಹೈದರಾಬಾದ್ ಬಳಿ ನಡೆದಿದೆ. ಯುವತಿಯ ಈ ಹುಚ್ಚಾಟದಿಂದ ರೈಲು ಸಂಚಾರದಲ್ಲಿ ಸುಮಾರು ಗಂಟೆಗಳ ಕಾಲ ವ್ಯತ್ಯಯ ಉಂಟಾಗಿದೆ.

ರಂಗಾರೆಡ್ಡಿ ಜಿಲ್ಲೆಯಲ್ಲಿ ಮಹಿಳೆ (Lady) ಸುಮಾರು ಏಳು ಕಿಲೋಮೀಟರ್‌ ನಷ್ಟು ದೂರನ್ನು ರೈಲು ಹಳಿಗಳ ಮೇಲೆ ಕಾರನ್ನು ಚಲಾಯಿಸಿದ್ದಾಳೆ. ಪರಿಣಾಮವಾಗಿ ಬೆಳಿಗ್ಗೆ ಸುಮಾರು ಎರಡು ಗಂಟೆಗಳ ಕಾಲ ರೈಲ್ವೆ ಸಂಚಾರಕ್ಕೆ ಅಡ್ಡಿಯಾಯಿತು.

ಕೊಂಡಕಲ್‌ನಲ್ಲಿರುವ ಲೆವೆಲ್ ಕ್ರಾಸಿಂಗ್‌ನಲ್ಲಿ, ಅವಳು ಕಾರನ್ನು ಹಳಿಗೆ ಮೇಲೆ ಹತ್ತಿಸಿದ್ದಾಳೆ. ಇದನ್ನು ಕಂಡ ದಾರಿಹೋಕರಲ್ಲಿ ಭಯ ಹುಟ್ಟಿಸಿದ್ದು, ಸ್ಥಳೀಯರು ನಾಗುಲಪಲ್ಲಿಯಲ್ಲಿ ಅವಳನ್ನು ತಡೆಯಲು ಪ್ರಯತ್ನಿಸಿದ್ದಾರೆ.

ಇದನ್ನು ಓದಿ : Belagavi : ಮೂಡಲಗಿ ತಾಲೂಕಿನ 4 ಸೇತುವೆಗಳು ಜಲಾವೃತ ; ಸಂಚಾರ ಸ್ಥಗಿತ.

ಆದರೆ ಯುವತಿ (Lady) ಅವರನ್ನು ಬೆದರಿಸಿ ವೇಗವಾಗಿ ಕಾರು ಚಲಾಯಿಸಿಕೊಂಡು ಹೋದಳು ಎನ್ನಲಾಗಿದೆ. ಈ ವೇಳೆ ರೈಲು ಸಿಬ್ಬಂದಿ ಅವಳನ್ನು ಸುದೀರ್ಘವಾಗಿ ಬೆನ್ನಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ರೈಲ್ವೆ ನೌಕರರು ಕಾರನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು.

ನಾಗುಲಪಲ್ಲಿ ಮತ್ತು ಶಂಕರಪಲ್ಲಿ ನಡುವೆ ಸುಮಾರು ಏಳು ಕಿಲೋಮೀಟರ್ ದೂರ ಅವಳು ಕಾರನ್ನು ಓಡಿಸಿದ್ದಾಳೆ. ಇದೇ ಸಮಯಕ್ಕೆ ಅದೇ ಹಳಿಯಲ್ಲಿ ಬರುತ್ತಿದ್ದ ರೈಲಿನ ಲೋಕೋ ಪೈಲಟ್ ಕಾರನ್ನು ಗುರುತಿಸಿದ ತಕ್ಷಣ ಬ್ರೇಕ್ ಹಾಕಿ ರೈಲನ್ನು ನಿಲ್ಲಸಿದ ಪರಿಣಾಮ ಸಂಭವಿಸಬಹುದಾದ ದೊಡ್ಡ ಘಟನೆಯೊಂದು ತಪ್ಪಿದಂತಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಕಾರು ಚಲಾಯಿಸಿದ ಯುವತಿ (Lady) ಯನ್ನು ಉತ್ತರ ಪ್ರದೇಶದ ಲಕ್ನೋ ಮೂಲದ ರವಿಕಾ ಸೋನಿ ಎಂದು ಗುರುತಿಸಲಾಗಿದೆ.

ಇದನ್ನು ಓದಿ : Plane : ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನದಲ್ಲಿ ಬೆಂಕಿ ; ವಿಡಿಯೋ.!

ಆಕೆ ಹೈದರಾಬಾದ್‌ನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಇತ್ತೀಚೆಗೆ ಆಕೆ (Lady) ಯನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ವರದಿಯಾಗಿದೆ.

ರೀಲ್ಸ್ ಹುಚ್ಚಿಗಾಗಿ ಯುವತಿ (Lady) ರೈಲ್ವೆ ಹಳಿಯಲ್ಲಿ ವಾಹನ ಚಲಾಯಿಸಿದ್ದಾಳೋ ಇಲ್ಲವೋ ಎಂದು ಕಂಡುಹಿಡಿಯಲು ಪೊಲೀಸರು ಆಕೆಯನ್ನು ಪ್ರಶ್ನಿಸುತ್ತಿದ್ದಾರೆ. ಸದ್ಯ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ (Lady) ಯ ಕೃತ್ಯದಿಂದ ಹೈದರಾಬಾದ್-ಬೆಂಗಳೂರು ಮಾರ್ಗಗಳಲ್ಲಿ ರೈಲ್ವೆ ಸಂಚಾರಕ್ಕೆ ಅಡ್ಡಿಯಾಯಿತ್ತಲ್ಲದೆ, ಸುತ್ತಮುತ್ತಲಿನ ರೈಲ್ವೆ ನಿಲ್ದಾಣಗಳಲ್ಲಿ ಕೆಲವು ರೈಲುಗಳನ್ನು ನಿಲ್ಲಿಸಲಾಯಿತು.

ರೈಲು ಹಳಿ ಮೇಲೆ ಕಾರು ಚಲಾಯಿಸುತ್ತಿರುವ ಯುವತಿ (Lady) ಯ ವಿಡಿಯೋ :

https://twitter.com/i/status/1938159254265073848

Lady : ರೈಲು ಹಳಿ ಮೇಲೆ 7KM ಕಾರು ಚಲಾಯಿಸಿದ ಯುವತಿ ; ಮುಂದೆನಾಯ್ತು.?

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ರೀಲ್ಸ್‌ ಹುಚ್ಚಿಗಾಗಿ ಕುಡಿದ ಅಮಲಿನಲ್ಲಿ ಯುವತಿ (Lady) ಯೋರ್ವಳು ರೈಲು ಹಳಿಯ ಮೇಲೆ ಕಾರು ಚಲಾಯಿಸಿದ ಘಟನೆಯೊಂದು ಗುರುವಾರ (ಜೂ. 26) ಹೈದರಾಬಾದ್ ಬಳಿ ನಡೆದಿದೆ. ಯುವತಿಯ ಈ ಹುಚ್ಚಾಟದಿಂದ ರೈಲು ಸಂಚಾರದಲ್ಲಿ ಸುಮಾರು ಗಂಟೆಗಳ ಕಾಲ ವ್ಯತ್ಯಯ ಉಂಟಾಗಿದೆ.

ರಂಗಾರೆಡ್ಡಿ ಜಿಲ್ಲೆಯಲ್ಲಿ ಮಹಿಳೆ (Lady) ಸುಮಾರು ಏಳು ಕಿಲೋಮೀಟರ್‌ ನಷ್ಟು ದೂರನ್ನು ರೈಲು ಹಳಿಗಳ ಮೇಲೆ ಕಾರನ್ನು ಚಲಾಯಿಸಿದ್ದಾಳೆ. ಪರಿಣಾಮವಾಗಿ ಬೆಳಿಗ್ಗೆ ಸುಮಾರು ಎರಡು ಗಂಟೆಗಳ ಕಾಲ ರೈಲ್ವೆ ಸಂಚಾರಕ್ಕೆ ಅಡ್ಡಿಯಾಯಿತು.

ಕೊಂಡಕಲ್‌ನಲ್ಲಿರುವ ಲೆವೆಲ್ ಕ್ರಾಸಿಂಗ್‌ನಲ್ಲಿ, ಅವಳು ಕಾರನ್ನು ಹಳಿಗೆ ಮೇಲೆ ಹತ್ತಿಸಿದ್ದಾಳೆ. ಇದನ್ನು ಕಂಡ ದಾರಿಹೋಕರಲ್ಲಿ ಭಯ ಹುಟ್ಟಿಸಿದ್ದು, ಸ್ಥಳೀಯರು ನಾಗುಲಪಲ್ಲಿಯಲ್ಲಿ ಅವಳನ್ನು ತಡೆಯಲು ಪ್ರಯತ್ನಿಸಿದ್ದಾರೆ.

ಇದನ್ನು ಓದಿ : Belagavi : ಮೂಡಲಗಿ ತಾಲೂಕಿನ 4 ಸೇತುವೆಗಳು ಜಲಾವೃತ ; ಸಂಚಾರ ಸ್ಥಗಿತ.

ಆದರೆ ಯುವತಿ (Lady) ಅವರನ್ನು ಬೆದರಿಸಿ ವೇಗವಾಗಿ ಕಾರು ಚಲಾಯಿಸಿಕೊಂಡು ಹೋದಳು ಎನ್ನಲಾಗಿದೆ. ಈ ವೇಳೆ ರೈಲು ಸಿಬ್ಬಂದಿ ಅವಳನ್ನು ಸುದೀರ್ಘವಾಗಿ ಬೆನ್ನಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ರೈಲ್ವೆ ನೌಕರರು ಕಾರನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು.

ನಾಗುಲಪಲ್ಲಿ ಮತ್ತು ಶಂಕರಪಲ್ಲಿ ನಡುವೆ ಸುಮಾರು ಏಳು ಕಿಲೋಮೀಟರ್ ದೂರ ಅವಳು ಕಾರನ್ನು ಓಡಿಸಿದ್ದಾಳೆ. ಇದೇ ಸಮಯಕ್ಕೆ ಅದೇ ಹಳಿಯಲ್ಲಿ ಬರುತ್ತಿದ್ದ ರೈಲಿನ ಲೋಕೋ ಪೈಲಟ್ ಕಾರನ್ನು ಗುರುತಿಸಿದ ತಕ್ಷಣ ಬ್ರೇಕ್ ಹಾಕಿ ರೈಲನ್ನು ನಿಲ್ಲಸಿದ ಪರಿಣಾಮ ಸಂಭವಿಸಬಹುದಾದ ದೊಡ್ಡ ಘಟನೆಯೊಂದು ತಪ್ಪಿದಂತಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ. ಕಾರು ಚಲಾಯಿಸಿದ ಯುವತಿ (Lady) ಯನ್ನು ಉತ್ತರ ಪ್ರದೇಶದ ಲಕ್ನೋ ಮೂಲದ ರವಿಕಾ ಸೋನಿ ಎಂದು ಗುರುತಿಸಲಾಗಿದೆ.

ಇದನ್ನು ಓದಿ : Plane : ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನದಲ್ಲಿ ಬೆಂಕಿ ; ವಿಡಿಯೋ.!

ಆಕೆ ಹೈದರಾಬಾದ್‌ನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು ಎಂದು ಹೇಳಲಾಗಿದೆ. ಇತ್ತೀಚೆಗೆ ಆಕೆ (Lady) ಯನ್ನು ಕೆಲಸದಿಂದ ತೆಗೆದುಹಾಕಲಾಗಿದ್ದು, ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ವರದಿಯಾಗಿದೆ.

ರೀಲ್ಸ್ ಹುಚ್ಚಿಗಾಗಿ ಯುವತಿ (Lady) ರೈಲ್ವೆ ಹಳಿಯಲ್ಲಿ ವಾಹನ ಚಲಾಯಿಸಿದ್ದಾಳೋ ಇಲ್ಲವೋ ಎಂದು ಕಂಡುಹಿಡಿಯಲು ಪೊಲೀಸರು ಆಕೆಯನ್ನು ಪ್ರಶ್ನಿಸುತ್ತಿದ್ದಾರೆ. ಸದ್ಯ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ (Lady) ಯ ಕೃತ್ಯದಿಂದ ಹೈದರಾಬಾದ್-ಬೆಂಗಳೂರು ಮಾರ್ಗಗಳಲ್ಲಿ ರೈಲ್ವೆ ಸಂಚಾರಕ್ಕೆ ಅಡ್ಡಿಯಾಯಿತ್ತಲ್ಲದೆ, ಸುತ್ತಮುತ್ತಲಿನ ರೈಲ್ವೆ ನಿಲ್ದಾಣಗಳಲ್ಲಿ ಕೆಲವು ರೈಲುಗಳನ್ನು ನಿಲ್ಲಿಸಲಾಯಿತು.

ರೈಲು ಹಳಿ ಮೇಲೆ ಕಾರು ಚಲಾಯಿಸುತ್ತಿರುವ ಯುವತಿ (Lady) ಯ ವಿಡಿಯೋ :

https://twitter.com/i/status/1938159254265073848

Astrology : ಹೇಗಿದೆ ಗೊತ್ತಾ.? ಜೂನ 26 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 26 ರ ಗುರುವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಎಲ್ಲಾ ಕ್ಷೇತ್ರಗಳಿಗೂ ಋಣಾತ್ಮಕ ವಾತಾವರಣವಿರುತ್ತದೆ. ಆದಾಯ ಸಾಕಾಗುವುದಿಲ್ಲ ಮತ್ತು ಅನವಶ್ಯಕ ಖರ್ಚುಗಳು ಹೆಚ್ಚಾಗುತ್ತವೆ. ದೂರ ಪ್ರಯಾಣದಲ್ಲಿ ಸಮಸ್ಯೆಗಳು ಉಂಟಾಗುತ್ತವೆ. ಬಂಧುಮಿತ್ರರೊಂದಿಗೆ ಆತುರದಿಂದ ಮಾತನಾಡುವುದು ಒಳ್ಳೆಯದಲ್ಲ. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು.

*ವೃಷಭ ರಾಶಿ*

ಆರ್ಥಿಕ ಪರಿಸ್ಥಿತಿ ಸುಧಾರಿಸಿ, ಸಾಲಗಳನ್ನು ಮರುಪಾವತಿಸಲು ಸಾಧ್ಯವಾಗುತ್ತದೆ. ಕೆಲವು ವಿಷಯಗಳಲ್ಲಿ ಹಠಾತ್ ಯಶಸ್ಸು ಸಿಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಹುದ್ದೆಗಳು ಸಿಗುತ್ತವೆ. ಬಾಲ್ಯದ ಸ್ನೇಹಿತರಿಂದ ಶುಭಕಾರ್ಯಗಳಿಗೆ ಆಹ್ವಾನಗಳು ಬರುತ್ತವೆ. ವ್ಯವಹಾರಗಳಲ್ಲಿ ಲಾಭದಾಯಕವಾಗಿರುತ್ತವೆ. ಹೊಸ ಪ್ರೋತ್ಸಾಹ ಸಿಗುತ್ತದೆ.

*ಮಿಥುನ ರಾಶಿ*

ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗುತ್ತದೆ. ಸಂಗಾತಿಯೊಂದಿಗೆ ಶುಭಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಸಂಬಂಧಿಕರು ಮತ್ತು ಸ್ನೇಹಿತರಿಂದ ಆಶ್ಚರ್ಯಕರ ವಿಷಯಗಳನ್ನು ಕಲಿಯುತ್ತೀರಿ. ನಿರುದ್ಯೋಗಿಗಳು ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳಬೇಕು. ವೃತ್ತಿಪರ ಉದ್ಯೋಗಗಳಲ್ಲಿ ಕಾರ್ಯಕ್ಷಮತೆಗೆ ಪ್ರಶಂಸೆ ಸಿಗುತ್ತದೆ. ವ್ಯವಹಾರದಲ್ಲಿ ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸುತ್ತೀರಿ.

*ಕಟಕ ರಾಶಿ*

ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ದೂರದ ಸಂಬಂಧಿಕರಿಂದ ಅನಿರೀಕ್ಷಿತ ಸುದ್ದಿಗಳನ್ನು ಕೇಳಬೇಕಾಗುತ್ತದೆ. ಪ್ರಮುಖ ಕೆಲಸಗಳು ನಿಧಾನವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಯೋಜಿಸಿದ ಕೆಲಸಗಳು ಸಮಯಕ್ಕೆ ಪೂರ್ಣಗೊಳ್ಳುವುದಿಲ್ಲ. ಮನೆಯ ಹೊರಗೆ ಜವಾಬ್ದಾರಿಗಳು ಹೆಚ್ಚಾಗುತ್ತವೆ. ವ್ಯವಹಾರಗಳು ನಿಧಾನವಾಗಿ ಪ್ರಗತಿಯಾಗುತ್ತದೆ.

ಇದನ್ನು ಓದಿ : Silk : ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ 2,400+ ಹುದ್ದೆಗಳಿಗೆ ನೇಮಕಾತಿ.!
*ಸಿಂಹ ರಾಶಿ*

ದೂರ ಪ್ರಯಾಣಗಳಲ್ಲಿ ವಾಹನ ಅಪಘಾತಗಳ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ನಡವಳಿಕೆಯಲ್ಲಿ ಬದಲಾವಣೆ ಕಂಡುಬರುತ್ತದೆ. ಸಾಲದ ಸಮಸ್ಯೆಗಳು ಹೆಚ್ಚಾಗುತ್ತವೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು. ವ್ಯಾಪಾರ-ವ್ಯವಹಾರಗಳು ನಿರಾಶಾದಾಯಕವಾಗಿರುತ್ತವೆ. ಕೆಲಸದಲ್ಲಿ ಒತ್ತಡ ಹೆಚ್ಚಾಗಿ, ಸಮಯಕ್ಕೆ ನಿದ್ದೆ ಆಹಾರ ಇರುವುದಿಲ್ಲ.

*ಕನ್ಯಾ ರಾಶಿ*

ಸಂಬಂಧಿಕರಿಂದ ಬರುವ ಅಪರೂಪದ ಆಹ್ವಾನಗಳು ಆಶ್ಚರ್ಯಗೊಳಿಸುತ್ತವೆ. ಅಗತ್ಯಗಳಿಗೆ ಹಣಕಾಸಿನ ನೆರವು ಸಿಗುತ್ತದೆ. ಪ್ರಸಿದ್ಧ ವ್ಯಕ್ತಿಗಳ ಸಂಪರ್ಕದಿಂದ ಯೋಜಿತ ಕಾರ್ಯಗಳು ತ್ವರಿತವಾಗಿ ಪೂರ್ಣಗೊಳ್ಳುತ್ತವೆ. ಹಳೆಯ ಸಾಲಗಳು ತೀರಿಸಲ್ಪಡುತ್ತವೆ. ವ್ಯಾಪಾರ ವಿಸ್ತರಣೆಗೆ ಮಾಡಿದ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕ ವ್ಯವಹಾರಗಳು ಆಶಾದಾಯಕವಾಗಿರುತ್ತವೆ.

*ತುಲಾ ರಾಶಿ*

ಸಹೋದರರಿಂದ ಅಮೂಲ್ಯ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಹೊಸ ವಾಹನ ಖರೀದಿಗೆ ಮಾಡಿದ ಪ್ರಯತ್ನಗಳು ಯಶಸ್ವಿಯಾಗುತ್ತವೆ. ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಸಮಾಜದ ಪ್ರಸಿದ್ಧ ವ್ಯಕ್ತಿಗಳೊಂದಿಗೆ ಸಂಪರ್ಕ ಹೆಚ್ಚಾಗುತ್ತದೆ. ವೃತ್ತಿಪರ ವ್ಯವಹಾರಗಳು ಉತ್ಸಾಹದಿಂದ ಪ್ರಗತಿಸುತ್ತವೆ. ಉದ್ಯೋಗದ ವಾತಾವರಣ ಉತ್ಸಾಹದಾಯಕವಾಗಿರುತ್ತದೆ.

*ವೃಶ್ಚಿಕ ರಾಶಿ*

ಮನೆಯ ಹೊರಗೆ ಒತ್ತಡ ಹೆಚ್ಚಾಗುತ್ತವೆ ಮತ್ತು ಮಾನಸಿಕ ಸಮಸ್ಯೆಗಳು ಉದ್ಭವಿಸುತ್ತವೆ. ಪ್ರಯಾಣಗಳು ಕೂಡಿ ಬರುವುದಿಲ್ಲ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಬಂಧುಮಿತ್ರರೊಂದಿಗೆ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಆಲೋಚನೆಗಳಲ್ಲಿ ಸ್ಥಿರತೆ ಇರುವುದಿಲ್ಲ. ವೃತ್ತಿ ಮತ್ತು ವ್ಯವಹಾರಗಳು ನಿಧಾನವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಮೇಲಧಿಕಾರಿಗಳ ಕೋಪಕ್ಕೆ ಗುರಿಯಾಗುತ್ತೀರಿ.

*ಧನುಸ್ಸು ರಾಶಿ*

ಪ್ರಮುಖ ವ್ಯವಹಾರಗಳಲ್ಲಿ ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಹಣಕಾಸಿನ ವಿಷಯಗಳು ನಿರೀಕ್ಷಿತ ರೀತಿಯಲ್ಲಿ ಸಾಗುವುದಿಲ್ಲ. ಕುಟುಂಬದಲ್ಲಿ ಕಿರಿಕಿರಿ ಉಂಟಾಗುತ್ತದೆ. ದೈವಿಕ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರ ನಿಧಾನವಾಗಿ ಪ್ರಗತಿಯತ್ತ ಸಾಗುತ್ತದೆ. ಮೇಲಧಿಕಾರಿಗಳೊಂದಿಗೆ ಚಿಂತನಶೀಲವಾಗಿ ಮಾತನಾಡುವುದು ಒಳ್ಳೆಯದು.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!
*ಮಕರ ರಾಶಿ*

ಬಂಧು ಮಿತ್ರರನ್ನು ಭೇಟಿಯಾಗಿ ಮನೆಯಲ್ಲಿಯೇ ಸಂತೋಷದಿಂದ ಸಮಯ ಕಳೆಯುತ್ತೀರಿ. ಆಧ್ಯಾತ್ಮಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸುತ್ತೀರಿ. ಮನೆಯ ಹೊರಗೆ ನಿಮ್ಮ ನಡವಳಿಕೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳಿಂದ ಶುಭಕಾರ್ಯಗಳಿಗೆ ಆಹ್ವಾನ ಬರುತ್ತದೆ. ಮಕ್ಕಳ ಶಿಕ್ಷಣ ಸಂಬಂಧಿತವಾಗಿ ಶುಭ ಸುದ್ದಿ ದೊರೆಯುತ್ತದೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸುತ್ತೀರಿ.

*ಕುಂಭ ರಾಶಿ*

ಸಹೋದರರಿಂದ ಅನಿರೀಕ್ಷಿತ ಆರ್ಥಿಕ ತೊಂದರೆ ಉಂಟಾಗುತ್ತದೆ. ಕಠಿಣ ಆರ್ಥಿಕ ಪರಿಸ್ಥಿತಿ ಎದುರಾಗುತ್ತದೆ. ಇತರರೊಂದಿಗೆ ವಿವಾದಗಳಿಂದ ದೊರೆಯುವುದು ಉತ್ತಮ. ವ್ಯಾಪಾರ ವಿಸ್ತರಣೆ ಪ್ರಯತ್ನಗಳು ವಿಫಲವಾಗುವ ಸಾಧ್ಯತೆ ಇದೆ. ಸಂಗಾತಿಯೊಂದಿಗೆ ವಿವಾದ ಉಂಟಾಗುತ್ತದೆ. ಆಧ್ಯಾತ್ಮಿಕ ಚಿಂತೆಗಳು ಹೆಚ್ಚಾಗುತ್ತವೆ.

*ಮೀನ ರಾಶಿ*

ವೃತ್ತಿ ಮತ್ತು ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳು ಸಂಭವಿಸುತ್ತವೆ. ದೀರ್ಘಾವಧಿಯ ಸಾಲಗಳು ತೀರಿಸಲ್ಪಡುತ್ತವೆ. ಕೈಗೊಂಡ ಕೆಲಸಗಳು ಬೇಗನೆ ಪೂರ್ಣಗೊಳ್ಳುತ್ತವೆ. ಹೊಸ ವಸ್ತ್ರ ಮತ್ತು ಆಭರಣ ಖರೀದಿಸುತ್ತೀರಿ. ಸ್ಥಿರ ಆಸ್ತಿ ಸಂಬಂಧಿತ ವಿವಾದಗಳನ್ನು ಕೌಶಲ್ಯದಿಂದ ಪರಿಹರಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Plane : ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನದಲ್ಲಿ ಬೆಂಕಿ ; ವಿಡಿಯೋ.!

ಜನಸ್ಪಂದನ ನ್ಯೂಸ್, ಡೆಸ್ಕ್‌ :‌ ಟೇಕಾಫ್ ಆದ​ ಕೆಲವೇ ಕ್ಷಣಗಳಲ್ಲಿ 159 ಜನರಿದ್ದ ವಿಮಾನ (plane) ದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯೊಂದು ಅಮೇರಿಕಾದಲ್ಲಿ ನಡೆದಿದೆ. ಏಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಮೆರಿಕನ್ ಏರ್ಲೈನ್ಸ್ (Airlines) ವಿಮಾನವು ಲಾಸ್ ವೇಗಾಸ್ ವಿಮಾನ (plane) ನಿಲ್ದಾಣಕ್ಕೆ ಮರಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನ (plane) ದ ಎಡ ಎಂಜಿನ್‌ನಿಂದ ಹೊಗೆನಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಪೈಲಟ್‌ ತಕ್ಷಣವೇ ಲಾಸ್ ವೇಗಾಸ್ ವಿಮಾನ (plane) ನಿಲ್ದಾಣಕ್ಕೆ ಮರಳಿ ಸುರಕ್ಷಿತವಾಗಿ ಲ್ಯಾಂಡಿಗ್‌ ಮಾಡಿದ್ದಾರೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆದ ಪರಿಣಾಮ ಅದರಲ್ಲಿದ್ದ 159 ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡಾರ್ 24 ಪ್ರಕಾರ, ಅಮೇರಿಕನ್ ಏರ್ಲೈನ್ಸ್ ಫ್ಲೈಟ್ 1665 ಲಾಸ್ ವೇಗಾಸ್‌ನ ಹ್ಯಾರಿ ರೀಡ್ ಅಂತರಾಷ್ಟ್ರೀಯ ವಿಮಾನ (plane) ನಿಲ್ದಾಣದಿಂದ ಸ್ಥಳೀಯ ಸಮಯ ಬೆಳಿಗ್ಗೆ 8:11 ರ ಸುಮಾರಿಗೆ ಉತ್ತರ ಕೆರೊಲಿನಾದ ಷಾರ್ಲೆಟ್‌ಗೆ ಹೊರಟಿತು.

ವಿಮಾನ (plane) ನಿಲ್ದಾಣದ ವಕ್ತಾರರು ಟೇಕ್ ಆಫ್ ಆದ ನಂತರ ಅದರ ಎಡ ಎಂಜಿನ್‌ನಿಂದ ಬೆಂಕಿ ಬಂದಿತು ಎಂದು ಹೇಳಿದರು. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಹಾರಾಟದಲ್ಲಿರುವಾಗ ಎಂಜಿನ್‌ನಿಂದ ಹೊಗೆ ಮತ್ತು ಜ್ವಾಲೆಗಳು ಬರುತ್ತಿರುವುದನ್ನು ಕಾಣಬಹುದಾಗಿದೆ.

ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!

ನಂತರ ವಿಮಾನವು ಬೆಳಿಗ್ಗೆ 8:20 ರ ಸುಮಾರಿಗೆ ಲಾಸ್ ವೇಗಾಸ್ ವಿಮಾನ (plane) ನಿಲ್ದಾಣಕ್ಕೆ ಮರಳಿತು ಎಂದು ಫೆಡರಲ್ ಏವಿಯೇಷನ್ ​​ಅಡ್ಮಿನಿಸ್ಟ್ರೇಷನ್ ಹೇಳಿಕೆಯಲ್ಲಿ ತಿಳಿಸಿದೆ.

ಲ್ಯಾಂಡ್‌ ಆದ ವಿಮಾನವನ್ನು ಪರಿಶೀಲಿಸಿದ ಸಿಬ್ಬಂದಿಗೆ ಯಾವುದೇ ತಾಂತ್ರಿಕ ದೋಷ ಅಥವಾ ಬೆಂಕಿಯ ಸೂಚನೆ ಕಂಡುಬಂದಿಲ್ಲ. ಆದಾಗ್ಯೂ, ಹಾರಾಟವನ್ನು ರದ್ದುಗೊಳಿಸಲಾಯಿತು ಮತ್ತು ಪ್ರಯಾಣಿಕರನ್ನು ಮತ್ತೊಂದು ವಿಮಾನದಲ್ಲಿ ಅವರ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಆದರೂ ಸಹ ಆಕಾಶದಲ್ಲಿ ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳುವ ದೃಶ್ಯವನ್ನು ಕೆಲವರು ತಮ್ಮ ಫೋನ್‌ಗಳಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಘಟನೆಯ ಸಮಯದಲ್ಲಿ 153 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ಅಮೇರಿಕನ್ ಹೇಳಿದರು. ಏರ್‌ಬಸ್ A321 ವಿಮಾನವನ್ನು ಮೌಲ್ಯಮಾಪನಕ್ಕಾಗಿ ಸೇವೆಯಿಂದ ಹಿಂತೆಗೆದುಕೊಳ್ಳಲಾಗಿದ್ದು, ಘಟನೆಯ ಬಗ್ಗೆ FAA ತನಿಖೆ ನಡೆಸುತ್ತದೆ ಎಂದು ಸಂಸ್ಥೆ ತಿಳಿಸಿದೆ.

ವಿಡಿಯೋ :

https://twitter.com/i/status/1938025013614956876

Belagavi : ಮೂಡಲಗಿ ತಾಲೂಕಿನ 4 ಸೇತುವೆಗಳು ಜಲಾವೃತ ; ಸಂಚಾರ ಸ್ಥಗಿತ.

ಜನಸ್ಪಮದನ ನ್ಯೂಸ್‌, ಮೂಡಲಗಿ : ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ (Mudalagi, Belagavi) ತಾಲೂಕಿನಲ್ಲಿ 4 ಸೇತುವೆಗಳು ಜಲಾವೃತವಾದ ಹಿನ್ನಲೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ (Mudalagi, Belagavi) ತಾಲೂಕಿನಲ್ಲಿ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಗುರುವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 26 ರ ದ್ವಾದಶ ರಾಶಿಗಳ ಫಲಾಫಲ.!

ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ (Mudalagi, Belagavi) ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ ಬುಧುವಾರ (ಜೂ.25) ಜಲಾವೃತಗೊಂಡಿತ್ತು.

ಗುರುವಾರ (ಜೂ.26) ಬೆಳಿಗ್ಗೆ ಸುಣಧೋಳಿ ಹಾಗೂ ಮೂಡಲಗಿ (Mudalagi, Belagavi) ಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಮೂಡಲಗಿ : ಇನ್ನೊಂದು ಘಟನೆಯಲ್ಲಿ, ಮೂಡಲಗಿ ಪಟ್ಟಣದ ಸಂಗಪ್ಪನ ವೃತ್ತದ ಹತ್ತಿರ ಹರಿದು ಹೋಗುವ ಹಳ್ಳದ ಪಕ್ಕದಲ್ಲಿರುವ ಬಾವಿಯಲ್ಲಿ ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಬಾವಿಯಲ್ಲಿರುವ ಶವವನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಗಿದ್ದು, ಪಟ್ಟಣದ ನಿವಾಸಿ ಗುರುಪಾದಪ್ಪ ಬಬಲೇಶ್ವರ (42) ಎಂದು ಗುರುತಿಸಲಾಗಿದೆ.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಸಾವಿಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಸದ್ಯ ಸಾರ್ವಜನಿಕ ವಲಯದಲ್ಲಿ ಮಾತ್ರ ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Belagavi : ಮೂಡಲಗಿ ತಾಲೂಕಿನ 4 ಸೇತುವೆಗಳು ಜಲಾವೃತ ; ಸಂಚಾರ ಸ್ಥಗಿತ.

0

ಜನಸ್ಪಮದನ ನ್ಯೂಸ್‌, ಮೂಡಲಗಿ : ಪಶ್ಚಿಮಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಬಿಡುವು ನೀಡದೆ ಸುರಿಯುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ (Mudalagi, Belagavi) ತಾಲೂಕಿನಲ್ಲಿ 4 ಸೇತುವೆಗಳು ಜಲಾವೃತವಾದ ಹಿನ್ನಲೆಯಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ (Mudalagi, Belagavi) ತಾಲೂಕಿನಲ್ಲಿ ಘಟಪ್ರಭಾ ನದಿಗೆ ಹರಿದು ಬರುತ್ತಿರುವ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಗುರುವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 26 ರ ದ್ವಾದಶ ರಾಶಿಗಳ ಫಲಾಫಲ.!

ಘಟಪ್ರಭಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದರಿಂದ (Mudalagi, Belagavi) ತಾಲೂಕಿನ ಅವರಾದಿ ಹಾಗೂ ಮಹಾಲಿಂಗಪೂರಕ್ಕೆ ಸಂಪರ್ಕ ಕಲ್ಪಿಸುವ ಅವರಾದಿ ಸೇತುವೆ ಬುಧುವಾರ (ಜೂ.25) ಜಲಾವೃತಗೊಂಡಿತ್ತು.

ಗುರುವಾರ (ಜೂ.26) ಬೆಳಿಗ್ಗೆ ಸುಣಧೋಳಿ ಹಾಗೂ ಮೂಡಲಗಿ (Mudalagi, Belagavi) ಗೆ ಸಂಪರ್ಕ ಕಲ್ಪಿಸುವ ಸುಣಧೋಳಿ ಸೇತುವೆ, ವಡೇರಹಟ್ಟಿ ಹಾಗೂ ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ವಡೇರಹಟ್ಟಿ ಸೇತುವೆ, ಕಮಲದಿನ್ನಿ ಹಾಗೂ ಹುಣಶ್ಯಾಳ ಪಿವೈಗೆ ಸಂಪರ್ಕ ಕಲ್ಪಿಸುವ ಕಮಲದಿನ್ನಿ ಸೇತುವೆಗಳು ಜಲಾವೃತಗೊಂಡ ಪರಿಣಾಮ ಹಲವು ಸಂಚಾರ ಸ್ಥಗಿತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಮೂಡಲಗಿ : ಇನ್ನೊಂದು ಘಟನೆಯಲ್ಲಿ, ಮೂಡಲಗಿ ಪಟ್ಟಣದ ಸಂಗಪ್ಪನ ವೃತ್ತದ ಹತ್ತಿರ ಹರಿದು ಹೋಗುವ ಹಳ್ಳದ ಪಕ್ಕದಲ್ಲಿರುವ ಬಾವಿಯಲ್ಲಿ ಗುರುವಾರ ಬೆಳಗ್ಗೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಬಾವಿಯಲ್ಲಿರುವ ಶವವನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಗಿದ್ದು, ಪಟ್ಟಣದ ನಿವಾಸಿ ಗುರುಪಾದಪ್ಪ ಬಬಲೇಶ್ವರ (42) ಎಂದು ಗುರುತಿಸಲಾಗಿದೆ.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಸಾವಿಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಸದ್ಯ ಸಾರ್ವಜನಿಕ ವಲಯದಲ್ಲಿ ಮಾತ್ರ ಕುಡಿದ ಮತ್ತಿನಲ್ಲಿ ಬಾವಿಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

SSC ಯಲ್ಲಿ ಉದ್ಯೋಗವಕಾಶ ; 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಹೊಸ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಈ ಹುದ್ದೆಗಳು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 25 ರ ದ್ವಾದಶ ರಾಶಿಗಳ ಫಲಾಫಲ.!
ಸಿಬ್ಬಂದಿ ಆಯ್ಕೆ ಆಯೋಗ (Staff Selection Commission – SSC) ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC).
  • ಹುದ್ದೆಗಳ ಸಂಖ್ಯೆ : 3,131.
  • ಹುದ್ದೆಗಳ ಹೆಸರು : ಎಲ್‌ಡಿಸಿ/ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ಮತ್ತು ಡಿಇಒ (CHSL).
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅಪ್ಲಿಕೇಶನ್ ಮೋಡ್ : Online ಮೋಡ್
ವೇತನ ಶ್ರೇಣಿ :
  • ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ ರೂ.19,900 – ರೂ.91,100/- ಪ್ರತಿ ತಿಂಗಳು ವೇತನ ನೀಡಲಾಗುವುದು.
ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!
ವಯೋಮಿತಿ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು
  • ಗರಿಷ್ಠ 27 ವರ್ಷ  ಮೀರಬಾರದು.

ವಯೋಮಿತಿ ಸಡಿಲಿಕೆ :

  • OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು.
  • SC/ST ಅಭ್ಯರ್ಥಿಗಳಿಗೆ : 05 ವರ್ಷಗಳು.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷಗಳು.
  • PwBD (OBC-NCL) ಅಭ್ಯರ್ಥಿಗಳಿಗೆ : 13 ವರ್ಷಗಳು.
  • PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು. 
ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!
ವಿದ್ಯಾರ್ಹತೆ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಿಂದ 12ನೇ ತರಗತಿ (PUC) ಪಾಸ್ ಆಗಿರಬೇಕು.
ಅರ್ಜಿ ಶುಲ್ಕ :
  • General/OBC/EWS ಅಭ್ಯರ್ಥಿಗಳು : ರೂ.100/-
  • SC/ST/PwBD ಅಭ್ಯರ್ಥಿಗಳು : ಇಲ್ಲ.
ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ (ಶ್ರೇಣಿ-1+ಶ್ರೇಣಿ-2) Written Test (Grade-1+Grade-2).
  • ಕೌಶಲ್ಯ ಪರೀಕ್ಷೆ (Skill Test).
  • ದಾಖಲೆಗಳ ಪರಿಶೀಲನೆ (Document Verification).
  • ವೈದ್ಯಕೀಯ ಪರೀಕ್ಷೆ (Medical Examination.)
ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ WEbsite ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ತುಂಬಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು Submit ಮಾಡಿ.
  • ಕೊನೆಯದಾಗಿ ಅರ್ಜಿಯನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್‌ 23, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 18, 2025.
  •  ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025.
  • ಅರ್ಜಿ ನಮೂನೆ ತಿದ್ದುಪಡಿ ಮತ್ತು ತಿದ್ದುಪಡಿ ಶುಲ್ಕವನ್ನು ಆನ್‌ಲೈನ್ ಪಾವತಿಗೆ ದಿನಾಂಕಗಳು : 23-07-2025 ರಿಂದ 24-07-2025.
ಪ್ರಮುಖ ಲಿಂಕ್ ಗಳು :

Disclaimer : The above given information is available On online, candidates should check it properly before applying. This is for information only.

Alcohol : ಎಣ್ಣೆ ಹೊಡೆದು ಪುಲ್‌ ಟೈಟಾಗಿ ಬಂದು, “ಇದು ನನ್ನ ಶಾಲೆ” ಎಂದ ಶಿಕ್ಷಕಿ ಸಸ್ಪೆಂಡ್.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಎಣ್ಣೆ (Alcohol) ಹೊಡೆದು ಪುಲ್‌ ಟೈಟಾಗಿ ಶಾಲೆಗೆ ಬಂದು, ಇದು ನನ್ನ ಶಾಲೆ, ಬಾಳ್‌ ಜಾಣನಾಗಿ ಮಾತನಾಡಬೇಡ ಎಂದ ಆವಾಜ್‌ ಹಾಕಿದ ಸರ್ಕಾರಿ ಶಾಲಾ ಶಿಕ್ಷಕಿ ಸಸ್ಪೆಂಡ್ ಆದ ಘಟನೆಯೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

ಶಿಕ್ಷಕಿಯ ಈ ವರ್ತನೆಯ ವಿಡಿಯೋದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.‌ ಇನ್ನು ಎಣ್ಣೆ ಹೊಡೆದ (Alcohol) ಶಿಕ್ಷಕಿಯ ವಿಚಾರ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ಆಗಮಿಸಿ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಶಿಕ್ಷಕಿ ಪೋಷಕರೊಂದಿಗೆ ಕೂಡ ವಾಗ್ವಾದ ನಡೆಸುವುದನ್ನು ನೋಡಬಹುದು.

ಇದನ್ನು ಓದಿ : First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

ಧಾರ್ ಜಿಲ್ಲೆಯ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಕುಡಿದ (Alcohol) ಮತ್ತಿನಲ್ಲಿ ಶಾಲೆಗೆ ಬಂದು, ಸಿಬ್ಬಂದಿ ಮತ್ತು ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ತೋರಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಬೆನ್ನಲ್ಲೇ ಶಿಕ್ಷಕಿಯನ್ನು ಬುಧವಾರ ಅಮಾನತುಗೊಳಿಸಲಾಗಿದೆ.

ಕವಿತಾ ಕವ್ಚೆ ಎಂದು ಗುರುತಿಸಲಾದ ಶಿಕ್ಷಕಿ ಸಿಂಘಾನಾ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ಅವರು ಶಾಲಾ ಅವಧಿಯಲ್ಲಿ ಮದ್ಯ (Alcohol) ಸೇವಿಸಿ ಬಂದು ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಬೆದರಿಕೆ ಹಾಕುವುದು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 25 ರ ದ್ವಾದಶ ರಾಶಿಗಳ ಫಲಾಫಲ.!

ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯ ಯಾವಾಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಯಿತೋ, ತಕ್ಷಣವೇ ಧಾರ್ ಜಿಲ್ಲಾಧಿಕಾರಿ (ಬುಡಕಟ್ಟು ಕಲ್ಯಾಣ) ಕಚೇರಿ ಅಧಿಕೃತವಾಗಿ ಅಮಾನತು ಆದೇಶದ ಹೊರಡಿಸಿದೆ.

ಈ ಘಟನೆ ಜೂನ್ 23 ರಂದು ನಡೆದಿದ್ದು, ಕೌಚೆ ಮದ್ಯ (Alcohol) ದ ಅಮಲಿನಲ್ಲಿ ಶಾಲೆಗೆ ಬಂದು, ಆಕ್ಷೇಪಾರ್ಹ ಭಾಷೆಯನ್ನು ಬಳಸಿ ಶಾಲಾ ದುರಸ್ತಿ ಕೆಲಸದಲ್ಲಿ ತೊಡಗಿರುವ ಕಾರ್ಮಿಕರೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ಆರೋಪಿಸಲಾಗಿದೆ.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ವೈರಲ್ ವಿಡಿಯೋದಲ್ಲಿ ಶಿಕ್ಷಕಿ “ಇದು ನನ್ನ ಶಾಲೆ” ಎಂದು ಹೇಳುತ್ತಿರುವುದನ್ನು ಕಾಣಬಹುದಾಗಿದೆ. ವೈರಲ್‌ ವಿಡಿಯೋದ ಸತ್ಯಾಸತ್ಯತೆಯನ್ನು ತಿಳಿಯಲು ಬ್ಲಾಕ್ ಸಂಪನ್ಮೂಲ ಸಂಯೋಜಕ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಲಾಯಿತು. ಶಿಕ್ಷಕಿ (Alcohol) ಕುಡಿದು ಶಾಲೆಯ ದುರಸ್ತಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ ಎಂದು ಬುಡಕಟ್ಟು ಕಲ್ಯಾಣ ಇಲಾಖೆಯ ಸಹಾಯಕ ಆಯುಕ್ತ ತಿಳಿಸಿದರು.

ಈ ಹಿಂದೆಯೂ ಸಹ ಇದೇ ರೀತಿಯ ಘಟನೆಗಳು ಸಂಭವಿಸಿವೆ, ಆದರೆ ಘಟನಾ ನಂತರ ಆಪಾದಿತರು ಕ್ಷಮೆಯಾಚಿಸಿದ ಹಿನ್ನಲೆಯಲ್ಲಿ ಅವುಗಳನ್ನು ಕೈಬಿಡಲಾಗಿತ್ತು. ಈ ಸಂದರ್ಭದಲ್ಲಿ, ಶಿಕ್ಷಕಿಯ ವಿರುದ್ಧ ಮುಂದಿನ ಕ್ರಮವನ್ನು ನಿರ್ಧರಿಸಲು ಇಲಾಖಾ ವಿಚಾರಣೆಯನ್ನು ನಡೆಸಲಾಗುವುದು” ಎಂದು ಅವರು ಹೇಳಿದರು.

ಎಣ್ಣೆ (Alcohol) ಹೊಡೆದ ಶಿಕ್ಷಕಿಯ ವಿಡಿಯೋ ಇಲ್ಲದೆ :

https://twitter.com/i/status/1937520218533659035

SSC ಯಲ್ಲಿ ಉದ್ಯೋಗವಕಾಶ ; 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜನಸ್ಪಂದನ ನ್ಯೂಸ್‌, ನೌಕರಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ನಲ್ಲಿ ಹೊಸ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಈ ಹುದ್ದೆಗಳು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅವಶ್ಯವಿರುವ ಮಾಹಿತಿಯನ್ನು ಇಲ್ಲಿ ನೋಡಬಹುದಾಗಿದ್ದು, ಆದರೂ ಅಧಿಕೃತ ವೆಬ್‌ಸೈಟ್‌ (Official website) ನಲ್ಲಿ ಪರೀಕ್ಷಿಸಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾದ ವಿವರಗಳನ್ನು ಇಲ್ಲಿ ಕೊಡಲಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 25 ರ ದ್ವಾದಶ ರಾಶಿಗಳ ಫಲಾಫಲ.!
ಸಿಬ್ಬಂದಿ ಆಯ್ಕೆ ಆಯೋಗ (Staff Selection Commission – SSC) ಹುದ್ದೆಗಳ ಕುರಿತು ಮಾಹಿತಿ :
  • ಇಲಾಖೆ ಹೆಸರು : ಸಿಬ್ಬಂದಿ ಆಯ್ಕೆ ಆಯೋಗ (SSC).
  • ಹುದ್ದೆಗಳ ಸಂಖ್ಯೆ : 3,131.
  • ಹುದ್ದೆಗಳ ಹೆಸರು : ಎಲ್‌ಡಿಸಿ/ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ಮತ್ತು ಡಿಇಒ (CHSL).
  • ಉದ್ಯೋಗ ಸ್ಥಳ : ಅಖಿಲ ಭಾರತ.
  • ಅಪ್ಲಿಕೇಶನ್ ಮೋಡ್ : Online ಮೋಡ್
ವೇತನ ಶ್ರೇಣಿ :
  • ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ ರೂ.19,900 – ರೂ.91,100/- ಪ್ರತಿ ತಿಂಗಳು ವೇತನ ನೀಡಲಾಗುವುದು.
ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!
ವಯೋಮಿತಿ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು
  • ಗರಿಷ್ಠ 27 ವರ್ಷ  ಮೀರಬಾರದು.

ವಯೋಮಿತಿ ಸಡಿಲಿಕೆ :

  • OBC (NCL) ಅಭ್ಯರ್ಥಿಗಳಿಗೆ : 03 ವರ್ಷಗಳು.
  • SC/ST ಅಭ್ಯರ್ಥಿಗಳಿಗೆ : 05 ವರ್ಷಗಳು.
  • PwBD (UR & EWS) ಅಭ್ಯರ್ಥಿಗಳಿಗೆ : 10 ವರ್ಷಗಳು.
  • PwBD (OBC-NCL) ಅಭ್ಯರ್ಥಿಗಳಿಗೆ : 13 ವರ್ಷಗಳು.
  • PwBD (SC/ST) ಅಭ್ಯರ್ಥಿಗಳಿಗೆ : 15 ವರ್ಷಗಳು. 
ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!
ವಿದ್ಯಾರ್ಹತೆ :

ಸಿಬ್ಬಂದಿ ಆಯ್ಕೆ ಆಯೋಗ (SSC) ನೇಮಕಾತಿ ಅಧಿಸೂಚನೆಯ ಪ್ರಕಾರ,

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಿಂದ 12ನೇ ತರಗತಿ (PUC) ಪಾಸ್ ಆಗಿರಬೇಕು.
ಅರ್ಜಿ ಶುಲ್ಕ :
  • General/OBC/EWS ಅಭ್ಯರ್ಥಿಗಳು : ರೂ.100/-
  • SC/ST/PwBD ಅಭ್ಯರ್ಥಿಗಳು : ಇಲ್ಲ.
ಆಯ್ಕೆ ಪ್ರಕ್ರಿಯೆ :
  • ಲಿಖಿತ ಪರೀಕ್ಷೆ (ಶ್ರೇಣಿ-1+ಶ್ರೇಣಿ-2) Written Test (Grade-1+Grade-2).
  • ಕೌಶಲ್ಯ ಪರೀಕ್ಷೆ (Skill Test).
  • ದಾಖಲೆಗಳ ಪರಿಶೀಲನೆ (Document Verification).
  • ವೈದ್ಯಕೀಯ ಪರೀಕ್ಷೆ (Medical Examination.)
ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!
ಅರ್ಜಿ ಸಲ್ಲಿಸುವುದು ಹೇಗೆ?
  • ಅಧಿಕೃತ WEbsite ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು Download ಮಾಡಿ.
  • ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
  • ಕೊಟ್ಟಿರುವ Form ನ್ನು ಸರಿಯಾಗಿ ಭರ್ತಿ ಮಾಡಿ.
  • ಅರ್ಜಿ ಶುಲ್ಕದ ಪಾವತಿ.
  • ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
  • ತುಂಬಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು Form ನ್ನು Submit ಮಾಡಿ.
  • ಕೊನೆಯದಾಗಿ ಅರ್ಜಿಯನ್ನು ಮುದ್ರಿಸಲು (Print) ಮರೆಯಬೇಡಿ.
ಪ್ರಮುಖ ದಿನಾಂಕಗಳು :
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಜೂನ್‌ 23, 2025.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 18, 2025.
  •  ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 19, 2025.
  • ಅರ್ಜಿ ನಮೂನೆ ತಿದ್ದುಪಡಿ ಮತ್ತು ತಿದ್ದುಪಡಿ ಶುಲ್ಕವನ್ನು ಆನ್‌ಲೈನ್ ಪಾವತಿಗೆ ದಿನಾಂಕಗಳು : 23-07-2025 ರಿಂದ 24-07-2025.
ಪ್ರಮುಖ ಲಿಂಕ್ ಗಳು :

Disclaimer : The above given information is available On online, candidates should check it properly before applying. This is for information only.

First Night ದಿನವೇ “ಮುಟ್ಟಿದ್ರೆ 35 ಪೀಸ್‌ ಮಾಡ್ತೀನಿ” ಎಂದ ವಧು ; ಬೆಚ್ಚಿಬಿದ್ದ ವರ.!

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : “ನನ್ನನ್ನು ಮುಟ್ಟಿದ್ರೆ 35 ಪೀಸ್‌ ಮಾಡತಿನಿ” ಎಂದು ಕೈಯಲ್ಲಿ ಚಾಕು ಹಿಡಿದು ನವ ವಧುವೋರ್ವಳು ಫಸ್ಟ್‌ ನೈಟ್ (First Night) ಶಾಸ್ತ್ರಕ್ಕೆ ಕೋಣೆಗೆ ಬಂದ ಪತಿಗೆ ಬೆದರಿಕೆ ಹಾಕಿದ ರೀತಿ ಇದು. ಕೇಳಲು ಸಿನೆಮಾ ಡೈಲಾಗ್‌ ರೀತಿ ಕಂಡರು ಸಹ ಇಂತಹ ವಿಚಿತ್ರ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಹಿರಿಯರ ಸಮ್ಮುಖದಲ್ಲಿ ಖುಷಿ ಖುಷಿಯಾಗಿ ಏಪ್ರಿಲ್ 29 ರಂದು ಮದುವೆ ಸಮಾರಂಭ ಮುಗಿದೆ. ಪ್ರಯಾಗ್‌ರಾಜ್‌ನ ಎಡಿಎ ಕಾಲೋನಿಯ 26 ವರ್ಷದ ನಿಶಾದ್ ಎಂಬುವವರು ಕರ್ಚನಾ ದೇಹ್‌ನ ಲಕ್ಷ್ಮಿ ನಾರಾಯಣ್ ನಿಶಾದ್ ಅವರ ಪುತ್ರಿ ಸಿತಾರಾ ಎಂಬಾಕೆಯನ್ನು ವಿವಾಹವಾಗಿದ್ದರು.

ಇದನ್ನು ಓದಿ : BPCL : ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ.!

ಮದುವೆಯಾದ ವರ ಫಸ್ಟ್‌ ನೈಟ್ (First Night) ಶಾಸ್ತ್ರಕ್ಕೆ ಎಂದು ವಧುವಿನ ಕೋಣೆಗೆ ಬರುವವರೆಗೆ ಎಲ್ಲವೂ ಚನ್ನಾಗಿಯೇ ಇತ್ತು. ಯಾವಾಗ ನವವಿವಾಹಿತ ನಿಶಾದ್ (First Night) ಕೋಣೆಗೆ ಪ್ರವೇಶಿಸಿದನೋ ಆಗ ವಿಚಿತ್ರ ಎಂಬಂತೆ ಇದ್ದಕ್ಕಿದಂತೆ ನವ ವಧು “ಕೈಯಲ್ಲಿ ಚಾಕು ಹಿಡಿದು ಫಸ್ಟ್‌ ನೈಟ್ (First Night) ಶಾಸ್ತ್ರಕ್ಕೆ ಕೋಣೆಗೆ ಬಂದ ಪತಿಗೆ ನನ್ನನ್ನು ಮುಟ್ಟಿದ್ರೆ 35 ಪೀಸ್‌ ಮಾಡತಿನಿ” ಎಂದು ಬೆದರಿಕೆ ಹಾಕಿದ್ದಾಳೆ.

ತನ್ನ ಪತ್ನಿಯ ಈ ರೀತಿಯ ನಡುವಳಿಕೆ ಕಂಡ ಪತಿ ಗಾಬರಿಯಾಗಿದ್ದು, ಆ ರಾತ್ರಿ ವಧು ಸಿತಾರ ಹಾಸಿಗೆಯ ಮೇಲೆ ಮಲಗಿದರೆ, ವರ ನಿಶಾದ್ ಸೋಫಾದ ಮೇಲೆ ಅಂಜಿಕೆಯಿಂದಲೇ ಎಚ್ಚರವಾಗಿ ಮಲಗಿದ್ದಾರೆ.

ಇದನ್ನು ಓದಿ : SSC ಯಲ್ಲಿ ಭರ್ಜರಿ ಉದ್ಯೋಗವಕಾಶ ; 2,423 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಏತನ್ಮಧ್ಯೆ, ವರನು ಮೂರು ದಿನ ನಿದ್ದೆಯಿಲ್ಲದ, ಭಯಭೀತನಾಗಿ ರಾತ್ರಿಗಳನ್ನು ಕಳೆದಿದ್ದಾನೆ. ಹೀಗಿರುವಾಗ ಅಣ್ಣನ ವರ್ತನೆಯನ್ನು ಗಮನಿಸಿದ ಸಹೋದರಿಯರು ಎಲ್ಲೋ ಏನೋ ಮಿಸ್ ಹೊಡಿತ್ತಾ ಇದೇಯಲ್ಲಾ ಅಂತ ಈ ಕುರಿತು ಅಣ್ಣನ ಬಳಿ ವಿಚಾರಿಸಿದಾಗ ನಿಶಾದ್, ಈ ವಿಷಯವನ್ನು ಬಹಿರಂಗಪಡಿಸಿದರು ಎಂದು ತಿಳಿದು ಬಂದಿದೆ.

ಎರಡು ಕುಟುಂಬದ ಹಿರಿಯರೆಲ್ಲರೂ ಸೇರಿ ವಧುವನ್ನು ವಿಚಾರಿಸಿದಾಗ, ಅವಳು ಅಮನ್‌ ಎಂಬ ಯುವಕನನ್ನು ಪ್ರೀತಿಸುತ್ತಿದ್ದು, ನಾನು ಬಲವಂತವಾಗಿ ಈ ಮದುವೆಯಾಗಿದ್ದೇನೆ. ನಾನು ಅಮನ್‌ ಆಸ್ತಿ, ಅವನು ಮಾತ್ರ ನನ್ನನ್ನು ಮುಟ್ಟಲು ಸಾಧ್ಯ ಎಂದು ಕಡಿಮುರಿದ ಹಾಗೆ ಹೇಳಿದ್ದಾಳೆ.

ಇದನ್ನು ಓದಿ : Kidnap : ಪತಿಗೆ ಗುಂಡು ಹಾರಿಸಿ, ಪತ್ನಿ ಮತ್ತು ಮಕ್ಕಳನ್ನು ಅಪಹರಿಸಿದ ಶಸ್ತ್ರಸಜ್ಜಿತ ಗುಂಪು.!

ಎರಡೂ ಕುಟುಂಬಗಳು ಮೇ 25 ರಂದು ಬಿಕ್ಕಟ್ಟನ್ನು ಪರಿಹರಿಸಲು ಪ್ರಯತ್ನಿಸಿದ್ದಾರೆ. ಆದರೆ ಸಿತಾರಾ ಇಷ್ಟವಿಲ್ಲದೆ ತನ್ನ ಪತಿಯೊಂದಿಗೆ ಇರಲು ಲಿಖಿತವಾಗಿ ಒಪ್ಪಿಕೊಂಡರು, ಆದರೆ ಬೆದರಿಕೆಗಳು ಮುಂದುವರೆಯುತ್ತವೆ ಎಂದಿದ್ದಾಳೆ.

ಕೊನೆಗೆ ಮೇ 30 ರಂದು ಮಧ್ಯರಾತ್ರಿಯ ಸುಮಾರಿಗೆ ಸಿತಾರಾ ಮನೆಯ ಹಿಂದಿನ ಗೋಡೆಯನ್ನು ಹಾರಿ ಮನೆಯಿಂದ ತಪ್ಪಿಸಿಕೊಂಡಿದ್ದು, ಅವಳು ಕುಂಟುತ್ತಾ ಓಡಿ ಹೋಗುವುದು ಸಿಸಿಟಿವಿ ದೃಶ್ಯದಲ್ಲಿ ಕಾಣಿಸುತ್ತದೆ.

ಎಫ್‌ಐಆರ್ ದಾಖಲಾಗಿಲ್ಲ :

ಎರಡೂ ಕುಟುಂಬಗಳು ಪ್ರಕರಣದ ಕುರಿತು ಪರಸ್ಪರ ಲಿಖಿತ ಇತ್ಯರ್ಥವನ್ನು ಮಾಡಿಕೊಂಡ ಕಾರಣ ಈ ಕುರಿತು ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

ವಿಡಿಯೋ :

Kalaburagi : ಡಾಬಾದೊಳಗೆ ನುಗ್ಗಿ ಮೂವರನ್ನು ಹತ್ಯೆಗೈದು ಪರಾರಿಯಾದ ಹಂತಕರು.!

ಜನಸ್ಪಂದನ ನ್ಯೂಸ್, ಕಲಬುರಗಿ : ಕಲಬುರಗಿ (Kalaburagi) ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ರಾತ್ರಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಲಾದ ಘಟನೆ ನಡೆದಿದೆ.

ಕಲಬುರಗಿ (Kalaburagi) ಸಮೀಪದ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು ಯಾರೋ ದುಷ್ಕರ್ಮಿಗಳು ಡಾಬಾದೊಳಗೆ ನುಗ್ಗಿ ಹತ್ಯೆಗೈದಿರುವುದಾಗಿ ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಹತ್ಯೆಯಾದ ದುರ್ದೈವಿಗಳನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಸಂಬಂಧಿಗಳಾಗಿದ್ದು, ಡಾಬಾದಲ್ಲಿ ಕೆಲಸ ಮಾಡ್ತಿದ್ರು.

ನಿನ್ನೆ ಅಂದರೆ ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಸಿದ್ದಾರೂಡ (32), ಜಗದೀಶ್‌ (25) ಹಾಗೂ ರಾಮಚಂದ್ರ (35) ಎನ್ನುವವರನ್ನು ಕಲಬುರಗಿ (Kalaburagi) ಸಮೀಪದ ಡಾಬಾದಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಹಳೆಯ ವೈಷಮ್ಯದಡಿಯಲ್ಲಿ ದುಷ್ಕರ್ಮಿಗಳು ಈ ಕೃತ್ಯೆ ಎಸೆಗಿರಬಹುದು ಎಂದು ಶಂಕಿಸಲಾಗಿದ್ದು, ಹಂತಕರು ಕಲೆಗೈದು ಪರಾರಿಯಾಗಿದ್ದಾರೆ.

ಈ ಸಂಬಂಧ ಸಬ್ ಅರ್ಬನ್ ಪೊಲೀಸ್ (Kalaburagi) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

Kalaburagi : ಡಾಬಾದೊಳಗೆ ನುಗ್ಗಿ ಮೂವರನ್ನು ಹತ್ಯೆಗೈದು ಪರಾರಿಯಾದ ಹಂತಕರು.!

0

ಜನಸ್ಪಂದನ ನ್ಯೂಸ್, ಕಲಬುರಗಿ : ಕಲಬುರಗಿ (Kalaburagi) ಹೊರವಲಯದ ಪಟ್ನಾ ಗ್ರಾಮದ ಬಳಿ ಮಂಗಳವಾರ ರಾತ್ರಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಲಾದ ಘಟನೆ ನಡೆದಿದೆ.

ಕಲಬುರಗಿ (Kalaburagi) ಸಮೀಪದ ಡಾಬಾದಲ್ಲಿ ಕೆಲಸ ಮಾಡುತ್ತಿದ್ದ ಮೂವರನ್ನು ಯಾರೋ ದುಷ್ಕರ್ಮಿಗಳು ಡಾಬಾದೊಳಗೆ ನುಗ್ಗಿ ಹತ್ಯೆಗೈದಿರುವುದಾಗಿ ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಹತ್ಯೆಯಾದ ದುರ್ದೈವಿಗಳನ್ನು ಸಿದ್ದಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಎಂದು ಗುರುತಿಸಲಾಗಿದೆ. ಈ ಮೂವರು ಕೂಡ ಸಂಬಂಧಿಗಳಾಗಿದ್ದು, ಡಾಬಾದಲ್ಲಿ ಕೆಲಸ ಮಾಡ್ತಿದ್ರು.

ನಿನ್ನೆ ಅಂದರೆ ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಸಿದ್ದಾರೂಡ (32), ಜಗದೀಶ್‌ (25) ಹಾಗೂ ರಾಮಚಂದ್ರ (35) ಎನ್ನುವವರನ್ನು ಕಲಬುರಗಿ (Kalaburagi) ಸಮೀಪದ ಡಾಬಾದಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಹಳೆಯ ವೈಷಮ್ಯದಡಿಯಲ್ಲಿ ದುಷ್ಕರ್ಮಿಗಳು ಈ ಕೃತ್ಯೆ ಎಸೆಗಿರಬಹುದು ಎಂದು ಶಂಕಿಸಲಾಗಿದ್ದು, ಹಂತಕರು ಕಲೆಗೈದು ಪರಾರಿಯಾಗಿದ್ದಾರೆ.

ಈ ಸಂಬಂಧ ಸಬ್ ಅರ್ಬನ್ ಪೊಲೀಸ್ (Kalaburagi) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಂತಕರ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

Astrology : ಹೇಗಿದೆ ಗೊತ್ತಾ.? ಜೂನ 25 ರ ದ್ವಾದಶ ರಾಶಿಗಳ ಫಲಾಫಲ.!

ಜನಸ್ಪಂದನ ನ್ಯೂಸ್, ಜೋತಿಷ್ಯ : 2025 ಜೂನ 25 ರ ಬುಧವಾರ ದಿನವಾದ ಇಂದು ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.

ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*

ಪ್ರಮುಖ ದಾಖಲೆಗಳ ವಿಚಾರದಲ್ಲಿ ಜಾಗರೂಕರಾಗಿರಿ. ಕುಟುಂಬದ ಮುಖ್ಯಸ್ಥರ ಆರೋಗ್ಯದ ಬಗ್ಗೆ ವೈದ್ಯಕೀಯ ಸಮಾಲೋಚನೆ ಅಗತ್ಯವಿದೆ. ಆದಾಯ ಕನಿಷ್ಠವಾಗಿರುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ದೈವಿಕ ಸೇವಾ ಕಾರ್ಯಗಳಲ್ಲಿ ವಿಶೇಷವಾಗಿ ಭಾಗವಹಿಸುತ್ತೀರಿ. ಉದ್ಯೋಗಿಗಳು ಸ್ವಲ್ಪ ನಿಧಾನವಾಗಿ ಸಾಗುತ್ತವೆ.

*ವೃಷಭ ರಾಶಿ*

ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಬೇಕು. ಕುಟುಂಬ ಸದಸ್ಯರ ನಡವಳಿಕೆ ಸ್ವಲ್ಪ ಕಿರಿಕಿರಿ ಉಂಟುಮಾಡುತ್ತದೆ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೈಗೆತ್ತಿಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುವುದಿಲ್ಲ, ಹಣಕಾಸಿನ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ.

*ಮಿಥುನ ರಾಶಿ*

ಸ್ತ್ರೀ ಸಂಬಂಧಿ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ವಹಿಸಬೇಕು. ಹೊಸ ವಿಷಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಬಂಧು ಮಿತ್ರರ ಆಗಮನ ಸಂತಸ ತರುತ್ತದೆ. ವ್ಯಾಪಾರಿಗಳು ಅಧಿಕಾರಿಗಳೊಂದಿಗೆ ವಿವಾದಗಳಿಂದ ಉಂಟಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆದಾಯ ಮಾರ್ಗಗಳು ಆಶಾದಾಯಕವಾಗಿರುತ್ತವೆ.

*ಕಟಕ ರಾಶಿ*

ಶತ್ರುಗಳೂ ಸ್ನೇಹಿತರಾಗಿ ಸಹಾಯ ಮಾಡುತ್ತಾರೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಸಮಾಜದಲ್ಲಿ ಕೀರ್ತಿ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ ಅಧಿಕಾರಿಗಳನ್ನು ಮೆಚ್ಚಿಸುತ್ತೀರಿ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ.

ಇದನ್ನು ಓದಿ : Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!
*ಸಿಂಹ ರಾಶಿ*

ದೈವಿಕ ಸೇವೆಗಳಿಗೆ ಹಣ ವ್ಯಯವಾಗುತ್ತದೆ. ಪ್ರಮುಖ ವಿಷಯಗಳಲ್ಲಿ ಆತುರ ಒಳ್ಳೆಯದಲ್ಲ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೀರಿ. ವ್ಯವಹಾರಗಳಲ್ಲಿ ಹೊಸ ಹೂಡಿಕೆಗಳನ್ನು ಮರುಪರಿಶೀಲಿಸುವುದು ಉತ್ತಮ. ಉದ್ಯೋಗಾಕಾಂಕ್ಷಿಗಳಿಗೆ ಕೆಲವು ಅನುಕೂಲಕರ ವಾತಾವರಣವಿರುತ್ತದೆ.

*ಕನ್ಯಾ ರಾಶಿ*

ದೈವಿಕ ಸೇವಾ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕೆಲಸದ ಒತ್ತಡ ಹೆಚ್ಚಾಗಿ, ಸಮಯಕ್ಕೆ ಸರಿಯಾಗಿ ನಿದ್ದೆ ಆಹಾರ ಇರುವುದಿಲ್ಲ. ಇತರರಿಗೆ ಹಣ ನೀಡುವ ಮೊದಲು ಯೋಚಿಸುವುದು ಉತ್ತಮ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗುತ್ತೀರಿ. ವ್ಯಾಪಾರ ವಿಸ್ತರಣೆಗೆ ತೆಗೆದುಕೊಂಡ ನಿರ್ಧಾರಗಳು ಸ್ವಲ್ಪ ವಿರುದ್ಧ ಫಲಿತಾಂಶಗಳನ್ನು ನೀಡುತ್ತವೆ.

*ತುಲಾ ರಾಶಿ*

ಮನೆಯ ಹೊರಗೆ ನಿಮ್ಮ ಮಾತಿನ ಬೆಲೆ ಕಡಿಮೆಯಾಗುತ್ತದೆ. ಸಂಗಾತಿಯೊಂದಿಗೆ ವಿವಾದಗಳಿರುತ್ತವೆ. ಹೊಸ ಕಾರ್ಯಕ್ರಮಗಳನ್ನು ಪ್ರಾರಂಭಿಸದಿರುವುದು ಉತ್ತಮ. ಸಹೋದರ ಸಹೋದರಿಯರ ನಡುವೆ ಸಣ್ಣಪುಟ್ಟ ವಿವಾದಗಳು ಉಂಟಾಗುತ್ತವೆ. ವ್ಯಾಪಾರ ವ್ಯವಹಾರಗಳು ಸ್ವಲ್ಪ ನಿಧಾನವಾಗಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚು ಜಾಗರೂಕರಾಗಿರಿ.

*ವೃಶ್ಚಿಕ ರಾಶಿ*

ವ್ಯರ್ಥ ಖರ್ಚುಗಳ ಬಗ್ಗೆ ಎಚ್ಚರದಿಂದಿರಿ. ನೇತ್ರ ಸಂಬಂಧಿ ಕಾಯಿಲೆಗಳು ನೋವೂನರು ಮಾಡುತ್ತದೆ. ಆರ್ಥಿಕ ಪರಿಸ್ಥಿತಿ ಅಸ್ತವ್ಯಸ್ತವಾಗಿರುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ವೃತ್ತಿಪರ ಕೆಲಸಗಳಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಕಾರ್ಯರೂಪಕ್ಕೆ ಬರುವುದಿಲ್ಲ. ನಿರುದ್ಯೋಗ ಪ್ರಯತ್ನಗಳು ಸ್ವಲ್ಪಮಟ್ಟಿಗೆ ನಿಧಾನವಾಗಿರುತ್ತವೆ.

*ಧನುಸ್ಸು ರಾಶಿ*

ನಿರುದ್ಯೋಗಿಗಳಿಗೆ ಅಧಿಕಾರಿಗಳ ನೆರವಿನಿಂದ ಹೊಸ ಅವಕಾಶಗಳು ಸಿಗುತ್ತವೆ. ಕುಟುಂಬ ಸದಸ್ಯರಿಂದ ನಿರೀಕ್ಷಿತ ಬೆಂಬಲ ದೊರೆಯುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಬಡ್ತಿ ಹೆಚ್ಚಾಗುತ್ತದೆ. ವ್ಯಾಪಾರದಲ್ಲಿ ಹೊಸ ಲಾಭ ದೊರೆಯುತ್ತದೆ.

ಇದನ್ನು ಓದಿ : Reels : ಮಳೆ ನಿಂತ ಮೇಲೆ ರೀಲ್ಸ್‌ಗೆ ಮುಂದಾದ ಯುವತಿ ; ಮುಂದೆನಾಯ್ತು.?
*ಮಕರ ರಾಶಿ*

ಹಣದ ವಿಷಯದಲ್ಲಿ ಏರುಪೇರು ಉಂಟಾಗುತ್ತದೆ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ. ದೂರ ಪ್ರಯಾಣವನ್ನು ಮುಂದೂಡಲಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹೊಸ ಸಾಲವನ್ನು ತೆಗೆದುಕೊಳ್ಳದಿರುವುದು ಉತ್ತಮ.

*ಕುಂಭ ರಾಶಿ*

ರಾಜಕೀಯ ವರ್ಗದಿಂದ ಅಪರೂಪದ ಆಹ್ವಾನಗಳು ಬರುತ್ತವೆ. ಸ್ನೇಹಿತರಿಂದ ನಿರೀಕ್ಷಿತ ಆರ್ಥಿಕ ಸಹಾಯ ದೊರೆಯುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ. ಕೌಟುಂಬಿಕ ಸಮಸ್ಯೆಗಳು ರಾಜಿಯಾಗುತ್ತವೆ.

*ಮೀನ ರಾಶಿ*

ಪ್ರಯಾಣದಲ್ಲಿ ಆತುರ ಒಳ್ಳೆಯದಲ್ಲ. ವ್ಯಾಪಾರದಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ಶ್ರಮದಿಂದ ಕೆಲಸಗಳು ಪೂರ್ಣಗೊಳ್ಳುತ್ತವೆ, ನಿರುದ್ಯೋಗಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ ವಿವಾದಗಳಿಗೆ ಹೋಗದಿರುವುದು ಉತ್ತಮ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ.

Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್‌ಗೂ, ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.

Belagavi : ಸ್ವಾಮೀಜಿ ಬೆಂಬಲಿಗರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ; ಗೊಂದಲ ಸೃಷ್ಟಿ.!

0

ಜನಸ್ಪಂದನ ನ್ಯೂಸ್, ಮೂಡಲಗಿ : ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಸ್ವಾಮೀಜಿಯ ಪ್ರಕರಣಕ್ಕೆ ಸಂಬಂದಿಸಿದಂತೆ ಮೂಡಲಗಿ ಪೊಲೀಸ್ ಠಾಣೆ ಮುಂದೆ ಕೆಲಕಾಲ ಗೊಂದಲ ಸೃಷ್ಟಿಯಾದ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಮೂಡಲಗಿ (Belagavi) ತಾಲ್ಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಸ್ವಾಮೀಜಿಯ ಪ್ರಕರಣದ ಹಿನ್ನಲೆ ಮಂಗಳವಾರದಂದು ಮಠದಲ್ಲಿ ದುರ್ಗಪ್ಪ ಎಂಬಾತ ಸ್ವಾಮೀಜಿ ಬೆಂಬಲಿಗರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಕೂಡಲೇ ಆತನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪೊಲೀಸ್ ಠಾಣೆಗೆ ತಡರಾತ್ರಿ ಗ್ರಾಮಸ್ಥರು ಜಮಾಯಿಸಿದ್ದಾರೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಸುಮಾರು 200 ಜನ ಏಕಾಏಕಿ ಜಮಾಯಿಸಿದ ಗ್ರಾಮಸ್ಥರು, ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ಏರ್ಪಟ್ಟಿತು.

ಕೊಡಲೇ ಪಿಎಸ್ಐ ರಾಜು ಪೊಜೇರಿ ಗ್ರಾಮಸ್ಥರಿಗೆ ತಿಳಿ ಹೇಳಿ ಕಳುಹಿಸಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಘಟನೆ ವಿವರ :

ಸ್ವಾಮೀಜಿ ವಿರೋಧ ಗುಂಪು ಮಂಗಳವಾರದಂದು ಶ್ರೀ ಮಠದಲ್ಲಿ ಸೇರಿದರು, ಆದರೆ ದುರ್ಗಪ್ಪ ಎಂಬಾತ ವ್ಯಕ್ತಿ ಸ್ವಾಮೀಜಿ ಬೆಂಬಲಿಗ ಮಹಿಳೆಯರಿಗೆ ಹಾಗೂ ಪುರುಷರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ. ಸ್ವಾಮೀಜಿ ಬೆಂಬಲಿಗರಿಗೆ ಮತ್ತಷ್ಟು ರೊಚ್ಚಿಗೆಬ್ಬಿಸಿದೆ.

ಶಾಸಕರ ಕಚೇರಿಯಲ್ಲಿ ಸಭೆ :

ಮಂಗಳವಾರದಂದು ಸ್ವಾಮೀಜಿ ಬೆಂಬಲಿಗರು ಗೋಕಾಕದ ಶಾಸಕರ ಕಚೇರಿಗೆ ಆಗಮಿಸಿದ ವೇಳೆ ಮೂಡಲಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ಜೂ. 26ರಂದು ಗೋಕಾಕದ ಶೂನ್ಯ ಸಂಪಾದನ ಮಠದಲ್ಲಿ ಶ್ರೀಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ತೀರ್ಮಾನಿಸಲಾಗುವುದೆಂದು ತಿಳಿ ಹೇಳಿದ್ದಾರೆ.

Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೋಚಿಂಗ್‌ನಿಂದ ಮನೆಗೆ ಹಿಂತಿರುಗುತ್ತಿದ್ದ ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ (Sexual) ದೌರ್ಜನ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ (Sexual) ದೌರ್ಜನ್ಯ ಎಸಗಿದ ಆರೋಪಿ ಯುವಕನನ್ನು ಹಾಲು ಮಾರಾಟ ಮಾಡುತ್ತಿರುವ ಮಠ್ ಕಮಲ್ ನಯನ್‌ಪುರ ನಿವಾಸಿಯಾದ ಮುಸಬ್ಬೀರ್ ಎಂದು ಗುರುತಿಸಲಾಗಿದೆ. ಕೋಚಿಂಗ್‌ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ (Sexual harassment) ನಡೆದಿದೆ ಎಂದು ಹೇಳಲಾಗುತ್ತಿದೆ.

ಸಂಸ್ರಸ್ತೆ ಅಪ್ರಾಪ್ತ ಬಾಲಕಿ ಕೋಚಿಂಗ್‌ನಿಂದ ಶಾಲಾ ಡ್ರೆಸ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಸವಾರನೊಬ್ಬ ಆಕೆಯ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕ (Sexual) ದೌರ್ಜನ್ಯ ಎಸಗಿದ್ದಾನೆ. ನಂತರ ಅಶ್ಲೀಲ ಕೃತ್ಯಗಳನ್ನು ಮಾಡುತ್ತಾ ಅಶ್ಲೀಲ ಹೇಳಿಕೆಗಳನ್ನು ನೀಡಿ ಪರಾರಿಯಾಗಿದ್ದಾನೆ. ರಸ್ತೆಯಲ್ಲಿರುವ ಮನೆಯ ಹೊರಗೆ ಅಳವಡಿಸಿರುವ CCTV ಕ್ಯಾಮರಾದಲ್ಲಿ ಇಡೀ ಘಟನೆಯ ದೃಶ್ಯ ಸೆರೆಯಾಗಿದೆ.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಮನೆಗೆ ಬಂದು ಬಾಲಕಿ ನಡೆದ ಘಟನೆಯ (Sexual harassment) ಬಗ್ಗೆ ಪಾಲಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿದ ಪಾಲಕರು ತಕ್ಷಣವೇ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಸಂಪೂರ್ಣ ವಿಷಯ (Sexual harassment) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರ ಗಮನಕ್ಕೆ ಬಂದಾಗ, ಅವರು ತಕ್ಷಣ ಇಜ್ಜತ್‌ನಗರ ಪೊಲೀಸ್ ಠಾಣೆ ಮತ್ತು ವಿಶೇಷ ಕಾರ್ಯಾಚರಣೆ ಗುಂಪಿನ ಎಸ್‌ಒಜಿ ಜಂಟಿ ತಂಡಗಳನ್ನು ರಚಿಸಿದರು.

ತಂಡಗಳು CCTV ದೃಶ್ಯಾವಳಿಗಳನ್ನು ಸರಿಯಾಗಿ ಪರಿಶೀಲಿಸಿದ ನಂತರ ಆರೋಪಿತನು ಇಜ್ಜತ್‌ನಗರದ ಮಠ್ ಕಮಲ್ ನಯನ್‌ಪುರದ ನಿವಾಸಿ ಮುಸಬ್ಬೀರ್ ಎಂದು, ಆತ ವೃತ್ತಿಯಲ್ಲಿ ಹಾಲು ಮಾರಾಟಗಾರನಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಆರೋಪಿಯನ್ನು ಹುಡುಕುವಾಗ ಪೊಲೀಸ್ ತಂಡ ಕರ್ಮಚಾರಿ ನಗರ ಚೌಕಿ ಪ್ರದೇಶದ ಕಾಶ್ಮೀರಿ ಕೋಥಿಯ ಹಿಂಭಾಗದಲ್ಲಿರುವ ತೋಟವನ್ನು ತಲುಪಿದಾಗ ಮುಸಬ್ಬೀರ್ ಅಲ್ಲಿ ಕಂಡುಬಂದನು. ಆತನನ್ನು (Sexual harassment ಮಾಡಿದ ವ್ಯಕ್ತಿ) ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ.

ಈ ವೇಳೆ ಪ್ರತಿದಾಳಿಯಾಗಿ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂದಿಸಿದ್ದು, ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಬೈಕ್‌ನಲ್ಲಿ 10 ಜನ ; ‘Full Family Trip’ ವಿಡಿಯೋ ನೋಡಿ.

0

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಸಾಮಾನ್ಯವಾಗಿ ಒಂದು ಬೈಕ್‌ ನಲ್ಲಿ 2-3 ಜನ ಪ್ರಯಾಣಿಸುವುದನ್ನು ನೋಡಿದ್ದೇವೆ. ಒಮ್ಮೋಮ್ಮೆ ಅಪರೂಪಕ್ಕೆ 3-4 ಜನರೂ ಸಹ ಒಂದೇ ಬೈಕ್‌ನಲ್ಲಿ ಪ್ರಯಾಣಿಸುವುದನ್ನು ನೋಡಿದ್ದೇನೆ. ನೀವೇನಾದರೂ ‘ಫುಲ್ ಫ್ಯಾಮಿಲಿ ಟ್ರಿಪ್’ (Full Family Trip) ಗಾಗಿ ಬೈಕ್‌ ಅಲ್ಟ್‌ರೇಷನ್‌ (Alteration) ಮಾಡಿರುವುದನ್ನು ಎಲ್ಲಾದರೂ ನೋಡಿದ್ದೀರಾ.? ನೋಡದಿದ್ದರೇ ಇಲ್ಲಿದೆ ನೋಡಿ ವಿಡಿಯೋ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ. ಇದರಲ್ಲಿ ಒಂದು ಸಾಮಾನ್ಯ ಬೈಕ್‌ನಲ್ಲಿ 8ಕ್ಕೂ ಹೆಚ್ಚು ಮಂದಿ ಕುಳಿತುಕೊಂಡಿದ್ದು, ‘ಒಟ್ಟು ಕುಟುಂಬದ ಸಫರೀ’ (Full Family Trip) ಎನ್ನುವಂತಾಗಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ವಿಡಿಯೋದಲ್ಲಿ ಕಂಡು ಬರುವ ದೃಶ್ಯದಲ್ಲಿ ಯಾವುದೇ ಭದ್ರತಾ ಕ್ರಮಗಳಿಲ್ಲದೇ ಮುಖ್ಯ ರಸ್ತೆ ಮೇಲೆ ಪ್ರಯಾಣಿಸುತ್ತಿರುವುದು ಸ್ಪಷ್ಟವಾಗಿದೆ. ಹೆಲ್ಮೆಟ್ ಧರಿಸದ ಚಾಲಕ, ಮಕ್ಕಳಿಗೆ ಯಾವುದೇ ಭದ್ರತಾ ಸೀಟುಗಳಿಲ್ಲದ ಸ್ಥಿತಿ ಹಾಗೂ ಎಷ್ಟೋ ಮಂದಿ ಬೈಕ್‌ನಲ್ಲಿ (Full Family Trip) ಹತ್ತಿರುವುದು – ಇವೆಲ್ಲವೂ ಅಪಾಯಕಾರಿ ನಡವಳಿಕೆಯಾಗಿದ್ದು, ಯಾವುದೇ ಕ್ಷಣದಲ್ಲಿ ಅಪಘಾತಕ್ಕೆ ದಾರಿ ನೀಡಬಹುದಾದ ಸ್ಥಿತಿಯಾಗಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರೋ ಈ (Full Family Trip) ವಿಡಿಯೋ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ್ದು ಎಂದು ಹೇಳಲಾಗುತ್ತಿದೆ. ಈ ರೀತಿ ರಸ್ತೆಯಲ್ಲಿ ಬೈಕ್‌ ಸವಾರ ಸಂಚರಿಸುತ್ತಿರಬೇಕಾದರೆ, ಆಟೋದಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಇದನ್ನು ರೆಕಾರ್ಡ್ ಮಾಡಿದ್ದಾರೆ.

ಇದನ್ನು ಓದಿ : Silk : ಕರ್ನಾಟಕ ರೇಷ್ಮೆ ಇಲಾಖೆಯಲ್ಲಿ 2,400+ ಹುದ್ದೆಗಳಿಗೆ ನೇಮಕಾತಿ.!

ಈ ವೀಡಿಯೊವನ್ನು @soo_funny_memes ಎಂಬ ಹೆಸರಿನ ಖಾತೆಯಲ್ಲಿ Instagram ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಜನರು ಇದಕ್ಕೆ ಸಾರ್ವಜನಿಕರು ತೀವ್ರವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋಗೆ 20,501 likes ದೊರೆತಿವೆ.

Full Family Trip ವಿಡಿಯೋದಲ್ಲೇನಿದೆ :

ಮುಖ್ಯ ರಸ್ತೆಯಲ್ಲಿ ಆಟೋ ಒಂದು ಸಾಗುತ್ತಿದೆ, ಈ ವೇಳೆ ಆಟೋದ ಎಡ ಬದಿಯಿಂದ ಬೈಕ್‌ ಒಂದು ಸೈಡ್‌ ಹೊಡೆದು ಮುಂದೆ ಸಾಗುತ್ತಿದೆ. ಆ ಬೈಕ್‌ನಲ್ಲಿ ಸವಾರ, ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ನಾಲ್ಕು ಜನರು ಬೈಕ್‌ನಲ್ಲಿ (Full Family Trip) ಸವಾರಿ ಮಾಡುವುದನ್ನು ಸ್ಪಷ್ಟವಾಗಿ ಕಾಣಬಹುದು.

ಇದನ್ನು ಓದಿ : ಆರೋಪಿಗಳು ಪರಾರಿಯಾಗಲು ಸಹಕರಿಸಿದ ಆರೋಪ ; PSI ಸೇರಿ ಇಬ್ಬರು Suspended.!

ಇದು ಇಷ್ಟೆ ನಿಲ್ಲುತ್ತಿಲ್ಲ, ಸವಾರ ತಮ್ಮ ಬೈಕ್‌ನ ಹಿಂಭಾಗದಲ್ಲಿ ಒಂದು ಎರಡು ಚಕ್ರದ ಟ್ರಾಲಿಯಂತಹ ದೇಸಿ ಬಂಡಿಯನ್ನು ಸಹ ಅಳವಡಿಸಿದೆ, ಅದರ ಮೇಲೆ ಮನೆಯ ಇತರ ಆರು ಮಕ್ಕಳನ್ನು ಸಹ ಕೂರಿಸಲಾಗಿದೆ. ಹೀಗೆ ಒಟ್ಟು ಹತ್ತು ಜನರು ಒಂದೇ ಬೈಕ್‌ನಲ್ಲಿ (Full Family Trip) ಸವಾರಿ ಮಾಡುತ್ತಿರುವುದನ್ನು ನೀವು ವಿಡಿಯೋದಲ್ಲಿ ನೋಡಬಹುದಾಗಿದೆ.

ವಿಡಿಯೋ ನೋಡಿದರೆ ಪಾಕಿಸ್ತಾನಿ ವ್ಯಕ್ತಿಯ ಈ ಅದ್ಭುತ ದೇಸಿ ಬೈಕ್‌ ಸವಾರಿ ಅದ್ಬುತ್‌ ಎನ್ನಬಹುದು, ಆದರೆ ಈ ರೀತಿ ರಸ್ತೆಯಲ್ಲಿ ಸಂಚರಿಸುವುದು “ಸಂಚಾರ ನಿಯಮಗಳ” ಗಂಭೀರ ಉಲ್ಲಂಘನೆಯಾಗಿದೆ. ಅಷ್ಟೆ ಅಲ್ಲಾ. ಸ್ವಲ್ಪ ಹೆಚ್ಚು ಕಮ್ಮಿಯಾದರೂ ಸಹ ಪ್ರಾಣಕ್ಕೆ ಸಂಚಕಾರ ತಪ್ಪಿದ್ದಲ್ಲ. ಅಷ್ಟೆ ಏಕೆ ಈ ರೀತಿಯ ಸವಾರಿ ಇತರರಿಗೂ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಕಾಮೆಂಟ್​ ಮಾಡುತ್ತಿದ್ದಾರೆ.

Full Family Trip ವಿಡಿಯೋ :

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಈ ದೃಶ್ಯವು ಮಜಾಕಾಗಿ ಕಂಡರೂ, ಇದು ಗಂಭೀರ ಸಂದೇಶವನ್ನು ನೀಡುತ್ತದೆ. ರಸ್ತೆ ಸುರಕ್ಷತೆಗೆ ನಾವು ಎಷ್ಟು ನಿರ್ಲಕ್ಷ್ಯ ವಹಿಸುತ್ತಿದ್ದೇವೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಂತಿದೆ ಈ ಸವಾರಿ.

Sexual : ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಗುಂಡೇಟು.!

ಜನಸ್ಪಂದನ ನ್ಯೂಸ್‌, ಡೆಸ್ಕ್‌ : ಕೋಚಿಂಗ್‌ನಿಂದ ಮನೆಗೆ ಹಿಂತಿರುಗುತ್ತಿದ್ದ ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ (Sexual) ದೌರ್ಜನ್ಯ ಎಸಗಿದ ಆರೋಪಿ ಯುವಕನನ್ನು ಪೊಲೀಸರು ಗುಂಡೇಟು ಕೊಟ್ಟು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

ಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ (Sexual) ದೌರ್ಜನ್ಯ ಎಸಗಿದ ಆರೋಪಿ ಯುವಕನನ್ನು ಹಾಲು ಮಾರಾಟ ಮಾಡುತ್ತಿರುವ ಮಠ್ ಕಮಲ್ ನಯನ್‌ಪುರ ನಿವಾಸಿಯಾದ ಮುಸಬ್ಬೀರ್ ಎಂದು ಗುರುತಿಸಲಾಗಿದೆ. ಕೋಚಿಂಗ್‌ನಿಂದ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ (Sexual harassment) ನಡೆದಿದೆ ಎಂದು ಹೇಳಲಾಗುತ್ತಿದೆ.

ಸಂಸ್ರಸ್ತೆ ಅಪ್ರಾಪ್ತ ಬಾಲಕಿ ಕೋಚಿಂಗ್‌ನಿಂದ ಶಾಲಾ ಡ್ರೆಸ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಸವಾರನೊಬ್ಬ ಆಕೆಯ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕ (Sexual) ದೌರ್ಜನ್ಯ ಎಸಗಿದ್ದಾನೆ. ನಂತರ ಅಶ್ಲೀಲ ಕೃತ್ಯಗಳನ್ನು ಮಾಡುತ್ತಾ ಅಶ್ಲೀಲ ಹೇಳಿಕೆಗಳನ್ನು ನೀಡಿ ಪರಾರಿಯಾಗಿದ್ದಾನೆ. ರಸ್ತೆಯಲ್ಲಿರುವ ಮನೆಯ ಹೊರಗೆ ಅಳವಡಿಸಿರುವ CCTV ಕ್ಯಾಮರಾದಲ್ಲಿ ಇಡೀ ಘಟನೆಯ ದೃಶ್ಯ ಸೆರೆಯಾಗಿದೆ.

ಇದನ್ನು ಓದಿ : Crocodile : ನದಿಯಲ್ಲಿ ಎಮ್ಮೆಗೆ ಸ್ನಾನ ಮಾಡಿಸುತ್ತಿದ್ದಾಗ ಬಾಲಕನ ಎಳೆದೊಯ್ದಿ ಮೊಸಳೆ.!

ಮನೆಗೆ ಬಂದು ಬಾಲಕಿ ನಡೆದ ಘಟನೆಯ (Sexual harassment) ಬಗ್ಗೆ ಪಾಲಕರಿಗೆ ತಿಳಿಸಿದ್ದಾಳೆ. ವಿಷಯ ತಿಳಿದ ಪಾಲಕರು ತಕ್ಷಣವೇ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದಾರೆ. ಸಂಪೂರ್ಣ ವಿಷಯ (Sexual harassment) ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರ ಗಮನಕ್ಕೆ ಬಂದಾಗ, ಅವರು ತಕ್ಷಣ ಇಜ್ಜತ್‌ನಗರ ಪೊಲೀಸ್ ಠಾಣೆ ಮತ್ತು ವಿಶೇಷ ಕಾರ್ಯಾಚರಣೆ ಗುಂಪಿನ ಎಸ್‌ಒಜಿ ಜಂಟಿ ತಂಡಗಳನ್ನು ರಚಿಸಿದರು.

ತಂಡಗಳು CCTV ದೃಶ್ಯಾವಳಿಗಳನ್ನು ಸರಿಯಾಗಿ ಪರಿಶೀಲಿಸಿದ ನಂತರ ಆರೋಪಿತನು ಇಜ್ಜತ್‌ನಗರದ ಮಠ್ ಕಮಲ್ ನಯನ್‌ಪುರದ ನಿವಾಸಿ ಮುಸಬ್ಬೀರ್ ಎಂದು, ಆತ ವೃತ್ತಿಯಲ್ಲಿ ಹಾಲು ಮಾರಾಟಗಾರನಾಗಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜೂನ 24 ರ ದ್ವಾದಶ ರಾಶಿಗಳ ಫಲಾಫಲ.!

ಆರೋಪಿಯನ್ನು ಹುಡುಕುವಾಗ ಪೊಲೀಸ್ ತಂಡ ಕರ್ಮಚಾರಿ ನಗರ ಚೌಕಿ ಪ್ರದೇಶದ ಕಾಶ್ಮೀರಿ ಕೋಥಿಯ ಹಿಂಭಾಗದಲ್ಲಿರುವ ತೋಟವನ್ನು ತಲುಪಿದಾಗ ಮುಸಬ್ಬೀರ್ ಅಲ್ಲಿ ಕಂಡುಬಂದನು. ಆತನನ್ನು (Sexual harassment ಮಾಡಿದ ವ್ಯಕ್ತಿ) ಬಂಧಿಸಲು ತೆರಳಿದ ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಪ್ರತಿದಾಳಿಯಾಗಿ ಪೊಲೀಸರು ಆತನ ಬಲಗಾಲಿಗೆ ಗುಂಡು ಹಾರಿಸಿ ಬಂದಿಸಿದ್ದು, ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೈಂಗಿಕ (Sexual) ಕಿರುಕುಳದ CCTV ದೃಶ್ಯಾವಳಿ :

https://twitter.com/i/status/1937087381628236213