Wednesday, February 5, 2025
HomeNational Newsಕುಂಭಮೇಳ ಕಾಲ್ತುಳಿತದಲ್ಲಿ ಅನೇಕ ಭಕ್ತರ ಪ್ರಾಣ ಉಳಿಸಿ ಹುತಾತ್ಮರಾದ PSI.!
spot_img
spot_img
spot_img
spot_img

ಕುಂಭಮೇಳ ಕಾಲ್ತುಳಿತದಲ್ಲಿ ಅನೇಕ ಭಕ್ತರ ಪ್ರಾಣ ಉಳಿಸಿ ಹುತಾತ್ಮರಾದ PSI.!

WhatsApp Channel Join Now
Telegram Group Join Now
Instagram Account Follow Now

ಜನಸ್ಪಂದನ ನ್ಯೂಸ್, ಡೆಸ್ಕ್ : ಪ್ರಯಾಗ್‌ರಾಜ್‌ನ ಮಹಾಕುಂಭಮೇಳ (Mahakumbh Mela of Prayagraj) ಕೆಲ ದಿನಗಳ ಹಿಂದಷ್ಟೇ (ಮೌನಿ ಅಮವಾಸ್ಯೆ ದಿನ) ಒಂದು ಭೀಕರ ದುರಂತ ಸಂಭವಿಸಿತು. ಭಕ್ತರು ಪವಿತ್ರ ಸ್ನಾನ ಮಾಡುವ ಸಂದರ್ಭ ಇದ್ದಕ್ಕಿದ್ದಂತೆ ಕಾಲ್ತುಳಿತ (stampede) ಸಂಭವಿಸಿ ಭಯದ ವಾತಾವರಣ ನಿರ್ಮಾಣವಾಯಿತು. ಈ ಅನಿರೀಕ್ಷಿತ ಘಟನೆಯಲ್ಲಿ (unexpected incident) ಕೆಲ ಭಕ್ತರು ತಮ್ಮ ಪ್ರಾಣ ಕಳೆದುಕೊಂಡರು.

ಈ ಅವಘಡದಲ್ಲಿ 30ಕ್ಕೂ ಹೆಚ್ಚು ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮೃತರಲ್ಲಿ 19 ಮಂದಿ ಉತ್ತರ ಪ್ರದೇಶದವರಾಗಿದ್ದು, ಉಳಿದವರು ಗುಜರಾತ್, ಕರ್ನಾಟಕ ಮತ್ತು ಅಸ್ಸಾಂ (Gujarat, Karnataka and Assam) ರಾಜ್ಯದವರು.

ಇದನ್ನು ಓದಿ : `SSLC’ ಪಾಸಾಗಿದ್ದೀರಾ.? ‘ಭಾರತೀಯ ಅಂಚೆ ಇಲಾಖೆ’ಯಲ್ಲಿ 65,200 ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ದುರಂತದಲ್ಲಿ ಭಕ್ತರನ್ನು ರಕ್ಷಿಸಿದ ನಿಜವಾದ ಹಿರೋ ಒಬ್ಬರಿದ್ದಾನೆ. ಅವರು ಯಾರೆಂದ್ರೆ ಸಬ್​ ಇನ್ಸ್​ಪೆಕ್ಟರ್​ (PSI) ಅಂಜನಿ ಕುಮಾರ್ ರಾಯ್.

ಬಹ್ರೈಚ್ ಪೊಲೀಸ್ ಲೈನ್ಸ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ (Working in Bahraich Police Lines) ಅಂಜನಿ ಕುಮಾರ್ ರಾಯ್ ಅವರನ್ನು ಮಹಾಕುಂಭಮೇಳದ ಭದ್ರತೆಗಾಗಿ ಅವರನ್ನು ಪ್ರಯಾಗ್‌ರಾಜ್‌ಗೆ ನಿಯೋಜಿಸಲಾಯಿತು.

ಇದನ್ನು ಓದಿ : ಪ್ರೀತಿಯಿಂದ ರೊಟ್ಟಿ ಕೊಡುತ್ತಿದ್ದ ಅಜ್ಜಿ ತೀರಿಕೊಂಡಾಗ ಹಸು ಮಾಡಿದ್ದೇನು ಗೊತ್ತೇ ; ಈ Vedio ನೋಡಿ.!

ಇನ್ನೂ ಇವರು ಗಾಜಿಯಾಬಾದ್ ಜಿಲ್ಲೆಯ ಬಸುಖಾ ಮತ್ತು ಮುಹಮ್ಮದಾಬಾದ್‌ನ ನಿವಾಸಿ ಎಂದು ವರದಿಯಿಂದ ತಿಳಿದು ಬಂದಿದೆ.

ಕಾಲ್ತುಳಿತದ ಸಮಯದಲ್ಲಿ ಅಂಜನಿ ಕುಮಾರ್​ ಅವರು ತಮ್ಮ ಜೀವವನ್ನು ಲೆಕ್ಕಿಸದೇ ಅನೇಕ ಭಕ್ತರನ್ನು ಉಳಿಸಿದರು. ಅವರೇ ಖುದ್ದಾಗಿ ಹಲವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು (He personally moved many people to safer places). ಆದರೆ ಈ ರಕ್ಷಣಾ ಕಾರ್ಯಾಚರಣೆಯ ಸಂದರ್ಭ ಅಂಜನಿ ಕುಮಾರ್ ರಾಯ್ ಅವರು ತೀವ್ರ ಅಸ್ವಸ್ಥರಾದರು.

ಇದನ್ನು ಓದಿ : ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ CCB ಪೊಲೀಸರ ದಾಳಿ : ಮಹಿಳೆಯರ ರಕ್ಷಣೆ ; ಇಬ್ಬರ ಬಂಧನ.!

ಇದ್ದಕ್ಕಿದ್ದಂತೆ ಆರೋಗ್ಯ ಸಮಸ್ಯೆ ಎದುರಾಯಿತು. ಹತ್ತಿರದ ಕುಂಭಮೇಳ ಆಸ್ಪತ್ರೆಗೆ ತೆರಳಿದರು. ಈ ವೇಳೆ ವೈದ್ಯರು ಅವರನ್ನು ಪರೀಕ್ಷಿಸಿ, ಔಷಧಿ ನೀಡಿ ಉಪಚರಿಸಿದರು (Check, give medicine and treat).

ಸ್ವಲ್ಪ ಸಮಯದ ಬಳಿಕ ಚೇತರಿಸಿಕೊಂಡ ನಂತರ, ಅಂಜನಿ ಕುಮಾರ್ ರಾಯ್​ ಅವರು ತಮ್ಮ ಕರ್ತವ್ಯಕ್ಕೆ ಮತ್ತೆ ಹಾಜರಾದರು (He returned to his duty). ಆದರೆ, ಕೆಲವೇ ಕ್ಷಣದಲ್ಲಿ ಇದ್ದಕ್ಕಿದ್ದಂತೆ ಅವರು ಕುಸಿದು ಬಿದ್ದರು. ಈ ವೇಳೆ ಬಾಯಿಯಲ್ಲಿ ನೊರೆ ಬರುತ್ತಿತ್ತು ಎಂದು ವರದಿಯಾಗಿದೆ.

ಇದನ್ನು ಓದಿ : “ಕೋಚಿಂಗ್ ಗುರು” ಫೆಬ್ರವರಿ 1 ಮತ್ತು 2 ರಂದು ನ್ಯೂಸ್​​ಫಸ್ಟ್​​ನಿಂದ ಮೆಗಾ Coaching Expo ಆಯೋಜನೆ.!  

ಬಹ್ರೈಚ್‌ನಿಂದ ಅವರೊಂದಿಗೆ ಬಂದಿದ್ದ ಸಂಬಂಧಿಯೊಬ್ಬರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಂಜನಿ ಕುಮಾರ್ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು.

 

View this post on Instagram

 

A post shared by Instant Bollywood (@instantbollywood)

ಹಿಂದಿನ ಸುದ್ದಿ : ಸರ್ಕಾರಿ ನೌಕರಿ ಸಿಗುತ್ತಿದಂತೆಯೇ ಕಷ್ಟಪಟ್ಟು ಓದಿಸಿದ ಪತಿ ಬಿಟ್ಟು ಪತ್ನಿ ಎಸ್ಕೇಪ್ ; ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಗಂಡ ; ಏನದು ಗೊತ್ತಾ.?

ಜನಸ್ಪಂದನ ನ್ಯೂಸ್, ಡೆಸ್ಕ್ : ಜ್ಯೋತಿ ಮೌರ್ಯ ಪ್ರಕರಣ ಬಹಳಷ್ಟು ಜನರಿಗೆ ಗೊತ್ತಿರಬಹುದು. ಕಷ್ಟ ಪಟ್ಟು ಓದಿಸಿದ (He studied hard) ಗಂಡನನ್ನು ಬಿಟ್ಟು ಪತ್ನಿ ಜ್ಯೋತಿ ಬೇರೊಬ್ಬನನ್ನು ಮದುವೆಯಾದ ಘಟನೆ ಇದು.

ಇದನ್ನು ಓದಿ : ಪ್ರಯಾಗ್‌ರಾಜ್ : ಕಾಲ್ತುಳಿತದಲ್ಲಿ ಬೆಳಗಾವಿಯ ಇಬ್ಬರು ಬಾಲಕಿಯರು ಸೇರಿ ನಾಲ್ಕು ಮಹಿಳೆಯರಿಗೆ ಗಾಯ.!

ಫ್ಯೂನ್ ಆಗಿದ್ದ ಗಂಡ, ಜ್ಯೋತಿಗೆ ಉನ್ನತ ಶಿಕ್ಷಣ ಕೊಡಿಸಿದ, ಅದು ತುಂಬಾ ಕಷ್ಟಪಟ್ಟು. ಆದರೆ ಪತ್ನಿ ಜ್ಯೋತಿ ಗಂಡನನ್ನು ಬಿಟ್ಟು ಸರ್ಕಾರಿ ನೌಕರಿ ಸಿಕ್ಕ ನಂತರ ಬೇರೆ ಪುರುಷನನ್ನು ಮದುವೆಯಾದಳು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.

ಇಂತದ್ದೆ ಮತ್ತೊಂದು ಘಟನೆ ವರದಿಯಾಗಿದ್ದು, ಈ ಬಾರಿ ತನ್ನನ್ನು ತೊರೆದ ಪತ್ನಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟು ಹೆಂಡತಿಗೆ ಭರ್ಜರಿ ಶಾಕ್ ನೀಡಿದ್ದಾನೆ.

ಇದನ್ನು ಓದಿ : ಬೆಳಗಾವಿ : ವೇಶ್ಯಾವಾಟಿಕೆ ನಡೆಸುತ್ತಿದ್ದ Spa and Beauty parlour ಮೇಲೆ ಪೊಲೀಸರ ದಾಳಿ.!

ಗಂಡನ ಸಹಾಯ ಮತ್ತು ಸಹಕಾರದಿಂದ ಓದಿ ಉದ್ಯೋಗ (job) ಗಿಟ್ಟಿಸಿದ್ದ ಪತ್ನಿ ಉದ್ಯೋಗ ದೊರೆತ ಬಳಿಕ ಪತಿಯನ್ನೇ ತೊರೆದಿದ್ದು, ಆಕೆ ಮಾಡಿದ ಕೆಲಸಕ್ಕೆ ತಕ್ಕ ಪಾಠ ಕಲಿಸಲು ಪತಿ, ಪತ್ನಿ ಮಾಡಿದ್ದ ಎಡವಟ್ಟನ್ನು ಜಗಜ್ಜಾಹಿರು ಮಾಡಿ ಆಕೆ ಉದ್ಯೋಗ ಕಳೆದುಕೊಳ್ಳುವ ಸ್ಥಿತಿಗೆ ತಂದಿದ್ದಾನೆ.

ಘಟನೆಯ ವಿವರ :
ಕೆಲ ವರ್ಷಗಳ ಹಿಂದೆ ರಾಜಸ್ಥಾನದ ಕೋಟಾದ (Khota of Rajasthan) ಮನೀಶ್ ಮೀನಾ ಮತ್ತು ಸಪ್ನಾ ಮೀನಾ ಮದುವೆಯಾಗಿದ್ದರು. ಆದರೆ, ಸಪ್ನಾಗೆ ಓದುವ ಆಸೆ ಇದೆ ಎಂದು ಅರಿತ ಪತಿ ಮನೀಶ್, ಉನ್ನತ ವ್ಯಾಸಂಗ ಮಾಡಲು ನೆರವಾದರು. ಯಾವುದೇ ಬೆಲೆ ತೆತ್ತಾದರೂ ತನ್ನ ಪತ್ನಿಗೆ ಉನ್ನತ ಶಿಕ್ಷಣಕ್ಕೆ (Higher education) ಕೊಡಿಸಲು ಮನೀಶ್ ನಿರ್ಧರಿಸಿದ್ದ. ಆತನ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರೂ ಸಹ ಆತ ಮಾತ್ರ ತನ್ನ ಹೆಂಡತಿಯನ್ನು ಓದಿಸಬೇಕು ಎಂಬ ಸಂಕಲ್ಪ (determination) ಮಾಡಿಕೊಂಡಿದ್ದ.

ಇದನ್ನು ಓದಿ : ಬಸ್‌ನಿಂದ ತಲೆ ಹೊರಹಾಕಿದ ಮಹಿಳೆ ; Lorry ಡಿಕ್ಕಿಯಾಗಿ ದೇಹದಿಂದ ‌ಬೇರ್ಪಟ್ಟ ರುಂಡ.!

ಅದರಂತೆ ಆತನ ಕಷ್ಟಕ್ಕೆ ಪ್ರತಿಫಲವೆಂಬಂತೆ ರೈಲ್ವೆ ಪರೀಕ್ಷೆಯಲ್ಲಿ (Railway exam) ಪತ್ನಿ ಸಪ್ನಾ ಪಾಸ್ ಆದಳು. ಆಕೆಗೆ ರೈಲ್ವೆ ಇಲಾಖೆಯಲ್ಲಿ ಸರ್ಕಾರಿ ಕೆಲಸ ಕೂಡ ಸಿಕ್ಕಿತು. ಆದರೆ ಕೆಲಸ ಸಿಕ್ಕ ಬಳಿಕ ಸಪ್ನಾ ಬದಲಾಗುತ್ತಾ ಹೋದಳು. ಅದರಲ್ಲೂ ಗಂಡನ ಕುರಿತು ಸಪ್ನಾಳ ನಡೆಯೇ ಬದಲಾಗಿತ್ತು. ಗಂಡನನ್ನು ಕೀಳಾಗಿ ಕಂಡು, ಕೊನೆಗೆ ಜಗಳ ಮಾಡಿಕೊಂಡು ಗಂಡನನ್ನೇ ಬಿಟ್ಟಳು.

ಸಪ್ನಾಳ ನಡೆಯಿಂದ ಸಿಟ್ಟಾಗಿದ್ದ ಗಂಡ ಮನೀಶ್ ಆಕೆಗೆ ಬುದ್ಧಿವಾದ ಹೇಳಿದರೂ, ಆತನ ಯಾವುದೇ ಸಂಧಾನಕ್ಕೂ (negotiation) ಒಪ್ಪದ ಸಪ್ನಾ ಆತನಿಂದ ದೂರ ಉಳಿಯಲು ನಿರ್ಧರಿಸಿದಳು.

ಇದನ್ನು ಓದಿ : ‘Pinki is kil*ling me’ ಎಂದು ಪತ್ನಿಯ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾದ ಪತಿ.!

ಇದರಿಂದ ಆಕ್ರೋಶಗೊಂಡ ಗಂಡ ಮನೀಶ್ ರೈಲ್ವೆ ಇಲಾಖೆಗೆ ದೂರು ನೀಡಿದ್ದ. ದೂರಿನಲ್ಲಿ ಸಪ್ನಾ ತನ್ನ ಸ್ವಂತ ಪ್ರತಿಭೆಯಿಂದ ಕೆಲಸ ಪಡೆಯಲು ಸಾಧ್ಯವಿಲ್ಲ (sapna cannot get a job by your own talent) ಎಂದು ಆರೋಪಿಸಿ, ಅಧಿಕಾರಿಗಳಿಗೆ ಸಾಕ್ಷ್ಯಾಧಾರಗಳನ್ನು (Evidence) ಸಹ ತೋರಿಸಿದ್ದ.

ತನ್ನ ಪತ್ನಿ ಸಪ್ನಾ, ಇನ್ನೊಬ್ಬ ಅಭ್ಯರ್ಥಿಯ (ಡಮ್ಮಿ ಅಭ್ಯರ್ಥಿ) ಸಹಾಯದಿಂದ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆಯಲ್ಲಿ (Railway Recruitment Board Exam) ಪಾಸ್ ಆಗಿದ್ದಾರೆ ಎಂದು ಪ್ರೂವ್ ಮಾಡಿದ.

ಇದನ್ನು ಓದಿ : ಬೋರ್​​​ವೆಲ್​​ನಿಂದ ಆಕಾಶದೆತ್ತರಕ್ಕೆ ಚಿಮ್ಮಿದ ನೀರು ; Video ನೋಡಿ.!

ಈ ವಿಷಯ ಬೆಳಕಿಗೆ ಬಂದ ನಂತರ ಅಧಿಕಾರಿಗಳು ಸಪ್ನಾ ಅವರನ್ನು ಸಸ್ಪೆಂಡ್ ಮಾಡಿದ್ದಾರೆ. ಅಲ್ಲದೆ ಅಂದು ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳ ವಿರುದ್ಧ ತನಿಖೆಗೆ ಮುಂದಾಗಿದ್ದಾರೆ (An investigation has been initiated against all the candidates) ಎಂದು ಕೋಟಾ ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ಅಧಿಕಾರಿ ಸೌರಭ್ ಜೈನ್ (Saurabh Jain, Senior Divisional Commercial Officer, Kota Division) ಮಾಹಿತಿ ನೀಡಿದ್ದಾರೆ ಎಂದು ವರದಿಯಿಂದ ತಿಳಿದು ಬಂದಿದೆ.

WhatsApp Channel Join Now
Telegram Group Join Now
Instagram Account Follow Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!