ಜನಸ್ಪಂದನ ನ್ಯೂಸ್, ಡೆಸ್ಕ್ : ಕಳೆದ ಏ.22 ಮಂಗಳವಾರದಂದು ನಡೆದ ಪುಲ್ವಾಮಾ ದಾಳಿಯನ್ನು ಸಮರ್ಥಿಸಿಕೊಂಡ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಿವೃತ ಶಿಕ್ಷಕ, ವಕೀಲ, ಪತ್ರಕರ್ತ ಹಾಗು ಓರ್ವ ಶಾಸಕ (MLA) ಸೇರಿದ್ದಾರೆ.
ಈ ಬಂಧಿತರೆಲ್ಲರೂ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ ಮತ್ತು ತ್ರಿಪುರದವರಾಗಿದ್ದಾರೆ. ಇದರಲ್ಲಿ ಅಸ್ಸಾಂನಲ್ಲಿ ಮಾತ್ರ ಒಟ್ಟು 14 ಜನರನ್ನು ಬಂಧಿಸಲಾಗಿದ್ದು, 4 ಜನ ತ್ರಿಪುರ ಮತ್ತು ಓರ್ವ ಮೇಘಾಲಯ ರಾಜ್ಯಕ್ಕೆ ಸೇರಿದ್ದಾನೆ.
ಇದನ್ನು ಓದಿ : ಬೆಂಗಳೂರಿನಲ್ಲಿ ಮೇ 03 ರಂದು ಉದ್ಯೋಗ ಮೇಳ.!
ಅಸ್ಸಾಂ :
ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಶಾಸಕ ಅಮೀನುಲ್ ಇಸ್ಲಾಂ ಇವರ ಬಂಧನವು ಅಸ್ಸಾಂನಲ್ಲಿ ಮೊದಲ ಬಂಧನವಾಗಿದೆ. ಶಾಸಕ ಈ ದಾಳಿ ಸರ್ಕಾರದ ಪಿತೂರಿ (Government conspiracy) ಎಂದು ಆರೋಪಿಸಿದ ಹಿನ್ನಲೇಯಲ್ಲಿ ಗುರುವಾರ ಬಂಧಿಸಿ, ಶುಕ್ರವಾರ 4 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ಇನ್ನುಳಿದಂತೆ, ಹೈಲಕಂಡಿ, ಸಿಲ್ಚಾರ್, ಮೊರಿಗಾಂವ್, ಶಿವಸಾಗರ್, ಕರಿಂಗಂಜ್ನಲ್ಲಿ ಸಾಮಾಜಿಕ ಮಾಧ್ಯಮ (Sosial Media) ದಲ್ಲಿ ವಿವಾದಾತ್ಮಕ ಪೋಸ್ಟ್ಗಳನ್ನು ಮಾಡಿದ್ದಕ್ಕಾಗಿ 11 ಜನರನ್ನು ಶುಕ್ರವಾರ ಬಂಧಿಸಲಾಗಿದೆ.
ಇದನ್ನು ಓದಿ : ಕೇವಲ ಬಾಲದ ಮೇಲೆ ದೇಹದ ಭಾರ ಹಾಕಿ ನಿಂತ ಹಾವು ; ನಿಬ್ಬೇರಗಾಗುವ Video.!
ಈ ಕುರಿತು ಮಾತನಾಡಿದ ಅಸ್ಸಾಂ CM ಹಿಮಂತ ಬಿಸ್ವಾ ಶರ್ಮಾ, ಅಗತ್ಯವಿದ್ದರೆ ಬಂಧಿತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ (National Security Act) ಯ ನಿಬಂಧನೆಗಳನ್ನು ಹೇರುತ್ತೇವೆ. ಅಲ್ಲದೆ ಎಲ್ಲಾ ಸಾಮಾಜಿಕ ಮಾಧ್ಯಮ ಪೋಸ್ಟ್ಗಳನ್ನು (All Posts) ಪರಿಶೀಲಿಸುತ್ತಿದ್ದೇವೆ. ರಾಷ್ಟ್ರ ವಿರೋಧಿ (Anti-national) ಎಂದು ಕಂಡುಬಂದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತ್ರಿಪುರಾ :
ತ್ರಿಪುರಾದ ಧಲೈ ಜಿಲ್ಲೆಯ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ದೇಶ ವಿರೋಧಿ ಕಾಮೆಂಟ್ಗಳನ್ನು ಮಾಡಿದ್ದಕ್ಕಾಗಿ ಓರ್ವ ನಿವೃತ್ತ ಶಿಕ್ಷಕ (Rtd Teacher) ಸೇರಿ ಇಬ್ಬರನ್ನು ಬಂಧಿಸಲಾಗಿದೆ.
ಇದನ್ನು ಓದಿ : Astrology : ಎಪ್ರಿಲ್ 27 ರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ.!
ಉತ್ತರ ತ್ರಿಪುರ ಜಿಲ್ಲೆಯ ಧರ್ಮನಗರದಲ್ಲಿ ಮತ್ತೊಬ್ಬ ನಿವೃತ್ತ ಶಿಕ್ಷಕ ಹಾಗು ಸೆಪಾಹಿಜಲಾ ಜಿಲ್ಲೆಯ ಸೋನಮುರಾದಲ್ಲಿ ಬಂಧಿಸಲಾಗಿದೆ.
ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!
ಮೇಘಾಲಯ :
ಗುವಾಹಟಿ (ಮೇಘಾಲಯ) ಮೂಲದ ಸುದ್ದಿ ಚಾನೆಲ್ (News Channel) ಪ್ರಸಾರ ಮಾಡಿದ ವೀಡಿಯೊದಲ್ಲಿ ದೇಶ ವಿರೋಧಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ ತರುವಾಯ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಶುಕ್ರವಾರ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದಿನ ಸುದ್ದಿ : ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಸಾಧ್ಯತೆ : KMD.!
ಜನಸ್ಪಂದನ ನ್ಯೂಸ್, ಬೆಂಗಳೂರು : ಮುಂದಿನ 4-5 ದಿನ ಬೆಳಗಾವಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಅಂದರೆ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರಿಯುವ ಮುನ್ಸೂಚನೆ (Forecast) ಸಿಕ್ಕಿದೆ.
ನಾಳೆ ಅಂದರೆ ದಿ. 27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ (KMD) ತಿಳಿಸಿದೆ.
ಇದನ್ನು ಓದಿ : Video : ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ.!
ಹಾಗೆಯೇ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ (thunderstorms) ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ದಿ. 28ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ವಿಜಯನಗರ, ದಾವಣಗೆರೆ, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ (Moderate rain) ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!
ದಿ. 29ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅದರಂತೆ ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮ, ತುಮಕೂರು, ಚಿತ್ರದುರ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆ ಸಾಧ್ಯತೆ (Chance of rain) ಇದೆ.
ಇದನ್ನು ಓದಿ : Bengaluru : ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಹಾಗೆಯೇ ದಿ. 30ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೀದರ್, ಯಾದಗಿರಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ (Chance) ಹೆಚ್ಚಿದೆ.
ಇದರೊಂದಿಗೆ ದಕ್ಷಿಣ ಒಳನಾಡಿನ ಮೈಸೂರು, ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ (Hail rain) ಯಾಗುವ ಸಾಧ್ಯತೆ ಇದೆ.
ಇದನ್ನು ಓದಿ : ಲಂಚ ಪ್ರಕರಣದಲ್ಲಿ Jail ಸೇರಿದ್ದ ಪುರಸಭೆ ಮುಖ್ಯಾಧಿಕಾರಿ ಸಾವು.!
ಇನ್ನು ಮೇ 1 ಮತ್ತು 2ರಂದು ಕೂಡ ಇದೇ ರೀತಿಯ ವಾತಾವರಣ ಇರಲಿದ್ದು, ಬರುವ ಐದು ದಿನಗಳ ಕಾಲ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಆದರೆ ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಿಲ್ಲ. ನಂತರದ ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-3 0C ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.