ಜನಸ್ಪಂದನ ನ್ಯೂಸ್, ಕ್ರಿಕೆಟ್ : ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು 5 ವಿಕೆಟ್ಗಳಿಂದ ಮಣಿಸುವಲ್ಲಿ ಶ್ರೇಯಸ್ ಅಯ್ಯರ್ ಪಡೆ ಯಶಸ್ವಿಯಾಗಿದೆ.
ಈ ಮ್ಯಾಚ್ನೊಂದಿಗೆ ಉಭಯ ತಂಡಗಳು ಐಪಿಎಲ್ನ ಮೊದಲಾರ್ಥ ಪೂರ್ಣಗೊಳಿಸಿದೆ. ಇದೀಗ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲೇ ಉಭಯ ತಂಡಗಳು ಮುಖಾಮುಖಿಯಾಗಲಿದೆ. ಅದು ಕೂಡ ನಾಳೆ (ಏಪ್ರಿಲ್ 20) ಎಂಬುದು ವಿಶೇಷ.
ಐಪಿಎಲ್ ಮ್ಯಾನೇಜ್ಮೆಂಟ್ ರೂಪಿಸಿರುವ ವೇಳಾಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳಿಗೆ ಬ್ಯಾಕ್ ಟು ಬ್ಯಾಕ್ ಪಂದ್ಯಗಳನ್ನು ನಿಗದಿ ಮಾಡಲಾಗಿದೆ. ಅದರಂತೆ ಉಭಯ ತಂಡಗಳು ಭಾನುವಾರ ಮತ್ತೆ ಮುಖಾಮುಖಿಯಾಗಬೇಕಿದೆ.
ಇದನ್ನು ಓದಿ : ಕಾರಿಗೆ ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ.!
ಪಂದ್ಯ ಎಲ್ಲಿ, ಎಷ್ಟು ಗಂಟೆಗೆ?
ಈ ಪಂದ್ಯವು ಪಂಜಾಬ್ ಕಿಂಗ್ಸ್ ತಂಡದ ತವರು ಮೈದಾನದಲ್ಲಿ ನಡೆಯಲಿದೆ. ಅಂದರೆ ಚಂಡೀಗಢ್ನ ಮುಲ್ಲನ್ಪುರ್ ಸ್ಟೇಡಿಯಂನಲ್ಲಿ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಲಿದೆ.
ಏಪ್ರಿಲ್ 20 ರಂದು, ಭಾನುವಾರ ಸಂಜೆ 3.30 ಕ್ಕೆ ಈ ಮ್ಯಾಚ್ ಶುರುವಾಗಲಿದ್ದು, ಇದಕ್ಕಾಗಿ ಉಭಯ ತಂಡಗಳು ಶನಿವಾರ ಬೆಂಗಳೂರಿನಿಂದ ಚಂಡೀಗಢ್ನತ್ತ ಪ್ರಯಾಣ ಬೆಳೆಸಲಿದೆ. ಅಂದರೆ ಉಭಯ ತಂಡಗಳ ನಡುವಣ ಮುಖಾಮುಖಿಗೆ ಕೇವಲ ಒಂದು ದಿನಗಳ ಬಿಡುವು ಮಾತ್ರ ಇದೆ.
ಇದನ್ನು ಓದಿ : ಹೆಬ್ಬಾವು ತಿಂದ ಹುಲಿರಾಯ ; ಮುಂದೆನಾಯ್ತು? ಈ Video ನೋಡಿ.!
ಇತ್ತ ಕಳೆದ ಪಂದ್ಯದಲ್ಲಿ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಾಳಿನ (ಏ.20) ಪಂದ್ಯದಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಿದೆ.
ಪಂಜಾಬ್ ಪಡೆ ಜಯಭೇರಿ:
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಮುಖಾಮುಖಿಯಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಮಳೆಯ ಕಾರಣ 14 ಓವರ್ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.
ಅದರಲ್ಲೂ ಕೇವಲ 63 ರನ್ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಸ್ಪೋಟಕ ಇನಿಂಗ್ಸ್ ಆಡಿದ ಟಿಮ್ ಡೇವಿಡ್ 26 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 50 ರನ್ ಬಾರಿಸಿದರು. ಈ ಮೂಲಕ ಆರ್ಸಿಬಿ ತಂಡವು ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು.
ಇದನ್ನು ಓದಿ : ಬೆಳಿಗ್ಗೆ ಮಜ್ಜಿಗೆ ಜೊತೆ ಇದನ್ನು ಸೇರಿಸಿ ಕುಡಿಯಿರಿ ; ಆಮೇಲೆ Magic ನೋಡಿ.!
ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 12.1 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 98 ರನ್ ಬಾರಿಸಿ ಐದು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಮೊದಲಾರ್ಥವನ್ನು ಜಯದೊಂದಿಗೆ ಅಂತ್ಯಗೊಳಿಸಿದೆ. ಇದೀಗ ಭಾನುವಾರ ನಡೆಯಲಿರುವ ದ್ವಿತೀಯಾರ್ಧ ಮೊದಲ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಬೇಕಿದೆ.