ಜನಸ್ಪಂದನ ನ್ಯೂಸ್, ಡೆಸ್ಕ್ : ನೀವೂ ಹಾವೂಗಳು ಆಕಳಿಸುವು (yawning) ದನ್ನು ನೋಡಿದಿರಾ.? ಇಲ್ವಾ, ಹಾಗಾದ್ರೆ ಇಲ್ಲಿದೆ ನೋಡಿ ಹಾವೂ ಆಕಳಿಸುವ ವಿಡಿಯೋ. ಇಲ್ಲಿ ನಿಮಗೆ ಕೆಲ ಪ್ರಶ್ನೆಗಳು ಉದ್ಭವಿಸಿಬಹುದು.
ಹಾವುಗಳು ಮನುಷ್ಯರಂತೆ ಆಕಳಿಸುತ್ತವೆಯಾ? ಈ ಪ್ರಶ್ನೆಗೆ ನೇರ ಉತ್ತರ ಇಲ್ಲದಿದ್ದರೂ, ಇತ್ತೀಚೆಗೆ ವೈರಲ್ ಆದ ಒಂದು ವೀಕ್ಷಣೀಯ ದೃಶ್ಯವು ಎಲ್ಲರ ದೃಷ್ಠಿಯನ್ನು ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಆಗುತ್ತಿರುವ ಈ ವಿಡಿಯೋದಲ್ಲಿ, ಒಂದು ದೈತ್ಯ ಹೆಬ್ಬಾವು ಬಾಯಿಯನ್ನು ತುಂಬಾ ಅಗಲವಾಗಿ ತೆರೆದು ಆಕಳಿಸು (yawning) ತ್ತಿರುವಂತೆ ಕಾಣಿಸುತ್ತದೆ.
ಹಾಗಾದ್ರೆ ವೈರಲ್ ವಿಡಿಯೋದಲ್ಲಿ ಏನಿದೆ?
ಈ ಅಪರೂಪದ ದೃಶ್ಯವನ್ನು @lauraisabelaleon ಎಂಬ Instagram ಸಾಮಾಜಿಕ ಜಾಲತಾಣದಲ್ಲಿ ಬಳಕೆದಾರರು ಪೋಸ್ಟ್ ಮಾಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ದೈತ್ಯ ಹೆಬ್ಬಾವು ಬಾಯಿಯನ್ನು ವಿಶಾಲವಾಗಿ ತೆರೆದು ನಿಟ್ಟುಸಿರೆ ಬಿಟ್ಟಂತೆ ಕಾಣಿಸುತ್ತಿರುವುದು ವಿಡಿಯೋ ಸ್ಪಷ್ಟವಾಗಿದೆ. ಈ ದೃಶ್ಯ ಮನುಷ್ಯರ ಆಕಳಿಸುವ ಹಾವಭಾವಕ್ಕೆ ಹತ್ತಿರವಾಗಿದ್ದು, ಹಲವಾರು ಬಳಕೆದಾರರು ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.
ಇದನ್ನು ಓದಿ : NIMHANS ಬೆಂಗಳೂರು : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ.!
ವೈರಲ್ ವಿಡಿಯೋವನ್ನು ಈವರೆಗೆ 34 ಸಾವಿರಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ಲೈಕ್ ಮಾಡಿದ್ದು, ಸಾವಿರಾರು ಜನರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ನಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಓರ್ವರು, “ನಾನು ಹಾವುಗಳು ಹೀಗೆ ಆಕಳಿಸುತ್ತವೆ ಎಂದು ಇದೇ ಮೊದಲು ನೋಡಿದ್ದೇನೆ” ಎಂದಿದ್ದಾರೆ. ಮತ್ತೋಬ್ಬ ಬಳಕೆದಾರರು, “ಇದು ನಿಜವೋ ಅಥವಾ AI ಕ್ರಿಯೇಷನ್ನಾ?” ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ. ಹೀಗೆ ಹಲವಾರು ಬಾಳಕೆದಾರರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಹಾವುಗಳು ನಿಜವಾಗಿಯೂ ಆಕಳಿಸು (yawning) ತ್ತವೆಯೇ?
ಜೀವಶಾಸ್ತ್ರಜ್ಞರ ಪ್ರಕಾರ, ಹಾವುಗಳು ದೊಡ್ಡ ಆಹಾರವನ್ನು ನುಂಗಿದ ನಂತರ ತಮ್ಮ ದವಡೆಗಳ ಜೋಡಣೆಯನ್ನು ಮತ್ತೆ ಸರಿಹೊಂದಿಸಲು ಬಾಯಿಯನ್ನು ಅಗಲವಾಗಿ ತೆರೆದು ನಿರ್ವಹಣೆಯ ಕ್ರಿಯೆಯನ್ನು ನಡೆಸುತ್ತವೆ. ಈ ಸಂದರ್ಭ ಮನುಷ್ಯನಂತೆ “ಆಕಳಿಸುತ್ತಿರುವ (yawning)” ಭಾವನೆ ಉಂಟಾಗಬಹುದು.
ಹಾಗಾದರೆ, ಇದು ನಿಜವಾದ ಆಕಳಿಕೆ (yawning) ಯಲ್ಲ. ಆದರೆ ಈ “Snake Yawning” ಎಂಬ ದೃಶ್ಯ ಮಾನವ ಕಣ್ಣಿಗೆ ಆಕರ್ಷಕವಾಗಿ ಕಾಣಿಸುತ್ತದೆ.
ವೈರಲ್ ವಿಡಿಯೋ :
View this post on Instagram
Note : ಈ ಲೇಖನದಲ್ಲಿ ನೀಡಲಾದ ಮಾಹಿತಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತುತವಿರುವ ವಿಡಿಯೋ/ಪೋಸ್ಟ್ನ್ನು ಆಧರಿಸಿದೆ. ಈ ಬಗ್ಗೆ ಜನಸ್ಪಂದನ ನ್ಯೂಸ್ ಯಾವುದೇ ರೀತಿಯ ಹಕ್ಕು ಮತ್ತು ಸತ್ಯಾಸತ್ಯತೆಯನ್ನು ದೃಢೀಕರಿಸುವುದಿಲ್ಲ.
“ಈ ಲಕ್ಷಣಗಳು ಕಂಡುಬಂದರೆ ನಿಮ್ಮ Kidney ಅಪಾಯದಲ್ಲಿದೆ ಎಂದೇ ಅರ್ಥ.!”
ಜನಸ್ಪಂದನ ನ್ಯೂಸ್, ಆರೋಗ್ಯ : ಮೂತ್ರಪಿಂಡ (Kidney) ಗಳು ನಮ್ಮ ದೇಹದಲ್ಲಿ ಉಂಟಾಗುವ ಕಶ್ಮಲಗಳನ್ನು ಶೋಧಿಸುವ ಪ್ರಮುಖ ಅಂಗಾಂಗಗಳಲ್ಲೊಂದು. ರಕ್ತದಲ್ಲಿರುವ ತ್ಯಾಜ್ಯಗಳನ್ನು ಮತ್ತು ಅಗತ್ಯವಿಲ್ಲದ ದ್ರವಗಳನ್ನು ಶುದ್ಧಗೊಳಿಸಿ, ಅವುಗಳನ್ನು ಮೂತ್ರದ ಮೂಲಕ ಹೊರಹಾಕುವ ಕಾರ್ಯ ಈ ಅಂಗಾಂಗ (Kidney) ಗಳು ನಿರ್ವಹಿಸುತ್ತವೆ.
ಒಂದು ವೇಳೆ ಮೂತ್ರಪಿಂಡ (Kidney) ಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿ ಕಶ್ಮಲಗಳು ಸಂಗ್ರಹವಾಗಲು ಆರಂಭವಾಗುತ್ತವೆ. ಇದು ವಿವಿಧ ಆರೋಗ್ಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು.
ಇದನ್ನು ಓದಿ : Girl : ಶಾಲೆಯಿಂದ ಮನೆಗೆ ಹೊರಟ 10 ವರ್ಷದ ಬಾಲಕಿ ಅಪಹರಿಸಿ ದೌರ್ಜನ್ಯಕ್ಕೆ ಯತ್ನ.!
ಈ ರೀತಿಯ ಸ್ಥಿತಿಯನ್ನು ದೀರ್ಘಕಾಲದ ಮೂತ್ರಪಿಂಡ (Kidney) ಕಾಯಿಲೆ ಅಥವಾ ಕ್ರೋನಿಕ್ ಕಿಡ್ನಿ ಡಿಸೀಸ್ (CKD) ಎಂದು ಕರೆಯಲಾಗುತ್ತದೆ.
ಇದು ನಿಧಾನವಾಗಿ ಬೆಳೆಯುವ ರೋಗವಾಗಿದ್ದು, ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾದ್ಯವಾಗಬಹುದು.
ಇದನ್ನು ಓದಿ : DRDO ನೇಮಕಾತಿ 2025 : 148 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!
ಇವು ಮೂತ್ರಪಿಂಡ (Kidney) ವೈಫಲ್ಯವನ್ನು ಸೂಚಿಸಬಹುದಾದ ಕೆಲವು ಪ್ರಮುಖ ಸಂಕೇತಗಳು :
1. ಮೂತ್ರದಲ್ಲಿ ಬದಲಾವಣೆಗಳು :
- ಸಾಮಾನ್ಯಕ್ಕಿಂತ ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆ.
- ರಾತ್ರಿಯ ವೇಳೆ ಮಿಕ್ಕಷ್ಟು ಬಾರಿ ಮೂತ್ರದ ಅವಶ್ಯಕತೆ.
- ಮೂತ್ರದಲ್ಲಿ ನೊರೆ, ರಕ್ತ ಅಥವಾ ಬದಲಾಗಿದ ಬಣ್ಣ.
- ಮೂತ್ರ ವಿಸರ್ಜನೆ ವೇಳೆ ಗಂಭೀರ ತೊಂದರೆ.
2. ದೇಹದ ಅವಯವಗಳಲ್ಲಿ ಊತ :
- ಕಾಲುಗಳು, ಪಾದಗಳು, ಕೈಗಳು ಮತ್ತು ಕಣ್ಣುಗಳ ಸುತ್ತಲೂ ಉಂಟಾಗುವ ಊತ.
- ದೇಹದಲ್ಲಿ ನೀರಿನ ಶೇಖರಣೆಯಿಂದ ಉಂಟಾಗುವ ಶ್ವಾಸದ ತೊಂದರೆ.
ಇದನ್ನು ಓದಿ : Astrology : ಹೇಗಿದೆ ಗೊತ್ತಾ.? ಜುಲೈ 20 ರ ದ್ವಾದಶ ರಾಶಿಗಳ ಫಲಾಫಲ.!
3. ದಣಿವು ಮತ್ತು ಅಶಕ್ತತತೆ :
- ಮೂತ್ರಪಿಂಡಗಳ ಕಾರ್ಯ ಕ್ಷೀಣಗೊಂಡಾಗ, ರಕ್ತಹೀನತೆ ಉಂಟಾಗಬಹುದು.
- ಕಡಿಮೆ ಶ್ರಮದಲ್ಲಿಯೇ ದಣಿವು ಅನುಭವಿಸುವುದು.
4. ತುರಿಕೆ ಮತ್ತು ಸ್ನಾಯು ಸೆಳೆತ :
- ರಕ್ತದಲ್ಲಿ ತ್ಯಾಜ್ಯ ಪದಾರ್ಥಗಳು ಮತ್ತು ಖನಿಜಗಳ ಅಸಮತೋಲನದಿಂದ ತುರಿಕೆ.
- ವಿಶೇಷವಾಗಿ ರಾತ್ರಿ ವೇಳೆ ಹೆಚ್ಚು ಕಿರಿಕಿರಿ.
- ಕಾಲುಗಳಲ್ಲಿ ಸ್ನಾಯು ಸೆಳೆತ ಮತ್ತು ನೋವು.
5. ಇತರ ಲಕ್ಷಣಗಳು :
- ಊಟದ ಮೇಲೆ ಆಸೆ ಕಡಿಮೆಯಾಗುವುದು.
- ವಾಕರಿಕೆ ಅಥವಾ ಒಮ್ಮೆ ಎದೆಯಲ್ಲಿ ತೀವ್ರ ಒತ್ತಡ.
- ಏಕಾಏಕಿ ತೂಕ ಇಳಿಕೆ ಅಥವಾ ಹೆಚ್ಚಳ.
ಇದನ್ನು ಓದಿ : ಕೋರ್ಟ್ ಆವರಣದಲ್ಲೇ ಪರಸ್ಪರ ಜುಟ್ಟು ಹಿಡಿದು ಎಳೆದಾಡಿಕೊಂಡ ಮಹಿಳಾ Lawyers ; ವಿಡಿಯೋ.!
ಆರೋಗ್ಯ ಸಲಹೆ : ಮೇಲ್ಕಂಡ ಲಕ್ಷಣಗಳಲ್ಲಿ ಯಾವುದಾದರೂ ಕಾಣಿಸಿದರೆ ವೈದ್ಯರ ಸಲಹೆ ಪಡೆಯುವುದು ಅತ್ಯಂತ ಅಗತ್ಯ. ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಪ್ರಾರಂಭಿಸಿದರೆ, ಮೂತ್ರಪಿಂಡ (Kidney) ದ ಸಮಸ್ಯೆಗಳನ್ನು ನಿಯಂತ್ರಣದಲ್ಲಿರಿಸಬಹುದು.
Kidney : In humans, the kidneys are two reddish-brown bean-shaped blood-filtering organs that are a multilobar, multipapillary form of mammalian kidneys, usually without signs of external lobulation.
> Disclaimer : ಈ ಲೇಖನದ ಉದ್ದೇಶ ಅರಿವು ಮೂಡಿಸುವುದು ಮಾತ್ರ. ಯಾವುದೇ ಚಿಕಿತ್ಸೆಯನ್ನು ಆರಂಭಿಸುವ ಮೊದಲು ನುರಿತ ವೈದ್ಯರ ಸಲಹೆ ಅನಿವಾರ್ಯ. ಇಲ್ಲಿ ನೀಡಲಾದ ಮಾಹಿತಿ ಜನಸ್ಪಂದನ ನ್ಯೂಸ್ನ ದೃಷ್ಟಿಕೋಣವಲ್ಲ, ಇದು ವೈದ್ಯಕೀಯ ಸಲಹೆಯಾಗಿ ಪರಿಗಣಿಸಬಾರದು.