ಜನಸ್ಪಂದನ ನ್ಯೂಸ್, ಯಾದಗಿರಿ : ಯಾದಗಿರಿ ಜಿಲ್ಲೆಯ ಸುರಪುರ (Surapur) ತಾಲೂಕಿನ ಬಾದಾಪುರ ಗ್ರಾಮದಲ್ಲಿ ಲೋಕಸಭಾ ಹಾಗೂ ವಿಧಾನಸಭಾ ಉಪಚುನಾವಣೆ ಸಂದರ್ಭ ಗಲಾಟೆ ನಡೆದಿದೆ.
ಈ ಗಲಾಟೆಯಲ್ಲಿ ಭೀಮಣ್ಣ ಮಲ್ಲಪ್ಪ ಬ್ಯಾಳಿ (50) ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ (serious injuries) ಎಂದು ಹೇಳಲಾಗಿದೆ.
ಇದನ್ನು ಓದಿ : ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿ ಹೃದಯಾಘಾತದಿಂದ ಸಾವು.!
ಸದ್ಯ ಅವರನ್ನು ಚಿಕಿತ್ಸೆಗಾಗಿ ಯಾದಗಿರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ ಸಂಭವಿಸಿ ಕಲ್ಲು ತೂರಾಟ ನಡೆದಿರುವ ಘಟನೆ ವರದಿಯಾಗಿದೆ.
ಇದನ್ನು ಓದಿ : ಸಂಭ್ರಮದಿಂದ ನಡೆಯುತ್ತಿದ್ದ marriage : ಮಂಟಪದಿಂದಲ್ಲೋ ವರನನ್ನೇ ಒದ್ದು ಹೊರ ಹಾಕಿದ ವಧು ; ಅಷ್ಟುಕ್ಕೂ ಕಾರಣವಾದ್ರು ಏನು.?
ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಈ ವೇಳೆ ನಮ್ಮ ಊರಿಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ಎಂದು ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದರು ಎನ್ನಲಾಗಿದೆ.