ಜನಸ್ಪಂದನ ನ್ಯೂಸ್, ಡೆಸ್ಕ್ : ಕಾಲೇಜ್ ಒಂದರಲ್ಲಿ ಪ್ರಿನ್ಸಿಪಾಲ್ (Principal) ಮತ್ತು ಲೈಬ್ರೇರಿಯನ್ (Librarian) ಪರಸ್ಪರ ಜುಟ್ಟು ಹಿಡಿದು ಹೊಡೆದಾಟ ಮಾಡಿದ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಶಾಲಾ ಕಾಲೇಜುಗಳೆಂದರೆ ವಿದ್ಯಾರ್ಥಿಗಳಿಗೆ ವಿದ್ಯಾ ಬುದ್ದಿ ಮತ್ತು ಆಚಾರ ವಿಚಾರ ಹಾಗು ಶಿಸ್ತು ಕಲಿಸು ತಾಣಗಳು. ಇಂತಹ ಸ್ಥಳದಲ್ಲಿಯೇ ಮಹಿಳಾ ಅಧಿಕಾರಗಳಿಬ್ಬರು ಸಾರ್ವಜನಿಕವಾಗಿ ಹೊಡೆದಾಟ ಮಾಡಿಕೊಂಡ ಘಟನೆ ನಿಜಕ್ಕೂ ನಾಚಿಕೆಗೇಡಿನ ಕೆಲಸ.
ಇದನ್ನು ಓದಿ : Reels ಗಾಗಿ ಪ್ಯಾಂಟ್ಗೆ ಬೆಂಕಿ ಹಚ್ಚಿಕೊಂಡ ಯುವಕ ; ಮುಂದೆನಾಯ್ತು ವಿಡಿಯೋ ನೋಡಿ.
ಹೌದು, ಇಂತಹ ನಾಚಿಕೆಗೇಡಿನ ಘಟನೆ ನಡೆದದ್ದು, ಮಧ್ಯಪ್ರದೇಶದ ಶಾಲೆಯೊಂದರಲ್ಲಿ ನಡೆದಿದ್ದು, ಇದರ ಫೈಟಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಮಧ್ಯಪ್ರದೇಶದ ಖಾರ್ಗೋನ್ನಲ್ಲಿರುವ ಸರ್ಕಾರಿ ಏಕಲವ್ಯ ಶಾಲೆಯ ಪ್ರಾಂಶುಪಾಲೆ (Principal) ಪ್ರವೀಣ್ ದಹಿಯಾ ಮತ್ತು ಲೈಬ್ರೇರಿಯನ್ (Librarian) ಮಧುರಾಣಿ ಎಂಬುವವರೇ ಹೊಡೆದಾಟ ಮಾಡಿಕೊಂಡವರು ಎಂದು ಹೇಳಲಾಗುತ್ತಿದೆ.
ಕೆಲಸಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಭಿನ್ನಾಭಿಪ್ರಾಯದಿಂದಾಗಿ ಇಬ್ಬರ ನಡುವೆ ಜಗಳ ಪ್ರಾರಂಭವಾಯಿತು ಎಂದು ಹೇಳಲಾಗಿದೆ.
ಇದನ್ನು ಓದಿ : ಕೇವಲ ರೂ. 12,999 ಕ್ಕೆ 6000mAh ಬ್ಯಾಟರಿಯ ಸ್ಮಾರ್ಟ್ಫೋನ್.
ವಿಡಿಯೋದಲ್ಲೇನಿದೆ :
ವಿಡಿಯೋದಲ್ಲಿ ಮೊದಲಿಗೆ ಇಬ್ಬರೂ ಅಧಿಕಾರಿಗಳು (ಪ್ರಾಂಶುಪಾಲರು ಮತ್ತು ಗ್ರಂಥಪಾಲಕಿ) ಪರಸ್ಪರ ಬೈದಾಡುಕೊಳ್ಳುವುದನ್ನು ಕಾಣಬಹುದು.
ನಂತರ ಪ್ರಾಂಶುಪಾಲರು, ಗ್ರಂಥಪಾಲಕಿಗೆ ಕಪಾಳಮೋಕ್ಷ ಮಾಡಿ ಮೊಬೈಲ್ ಫೋನ್ ಅನ್ನು ಸಹ ಬಿಸಾಡಿ ಒಡೆದು ಹಾಕುವುದನ್ನು ವಿಡಿಯೋದಲ್ಲಿ ನೋಡಬಹುದು.
ಇದನ್ನು ಓದಿ : ರಸ್ತೆ ಅಪಘಾತ : ರೂ. 1.5 ಲಕ್ಷದವರೆಗೆ ನಗದು ರಹಿತ ಉಚಿತ ಚಿಕಿತ್ಸೆ.
ನಂತರ ಇಬ್ಬರು ಅಧಿಕಾರಿಗಳ ನಡುವೇ ಜೋರಾದ ಗಲಾಟೆ ನಡೆದಿದ್ದು, ಇಬ್ಬರು ಪರಸ್ಪರ ಕಪಾಳಮೋಕ್ಷ ಮಾಡಿದಲ್ಲದೆ ಜುಟ್ಟು ಹಿಡಿದು ಎಳೆದಾಡಿಕೊಂಡಿದ್ದಾರೆ.
ಕೊನೆಗೆ ಓರ್ವ ಮಹಿಳೆ ಆಗಮಿಸಿ ಇಬ್ಬರ ಜಲಗಕ್ಕೇ ಇತಿಶ್ರೀ ಹಾಡುವಂತೆ ಮಾಡಿರುವುದು ದೃಶ್ಯದಲ್ಲಿ ಕಾಣಬಹುದು.
ಇದನ್ನು ಓದಿ : ಈ ಲಕ್ಷಣಗಳಿದರೆ ಅದು ಮೆದುಳಿನಲ್ಲಿ Blood ಹೆಪ್ಪುಗಟ್ಟುವಿಕೆಯ ಕಾರಣವಾಗಿರಬಹುದು.!
ದೂರು ದಾಖಲು :
ಈ ಅಧಿಕಾರಿಗಳ ಜಗಳ ಪೊಲೀಸ್ ಠಾಣೆ ಮೆಟ್ಟಿಲು ತ್ತಿದ್ದು, ಇಬ್ಬರೂ ಪರಸ್ಪರ ಪೊಲೀಸ್ ಠಾಣೆಯಲ್ಲಿ ದೂರುಗಳನ್ನು ದಾಖಲಿಸಿದರು.
ದೂರು ದಾಖಲಿಸಿದ ಪೊಲೀಸರು ಇಬ್ಬರನ್ನೂ ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಈ ಸಮಯದಲ್ಲಿ ಪ್ರಾಂಶುಪಾಲರನ್ನು ICUಗೆ ದಾಖಲಿಸಲಾಯಿತು ಮತ್ತು ಗ್ರಂಥಪಾಲಕಿ ಮಧುರಾಣಿಯನ್ನೂ Word ಗೆ ದಾಖಲಿಸಲಾಯಿತು.
ಇದನ್ನು ಓದಿ : ಪಿಯುಸಿ ಆದವರಿಗೆ NIAಯಲ್ಲಿ ಬೃಹತ್ ಉದ್ಯೋಗವಕಾಶ.
ಇತ್ತ ವಿಡಿಯೋ ವೈರಲ್ ಆದ ನಂತರ ಜಿಲ್ಲಾಧಿಕಾರಿ ಭವ್ಯಾ ಮಿತ್ತಲ್ ಅವರು ಅಧಿಕಾರಿಗಳಿಬ್ಬರನ್ನು ಕೆಲಸದಿಂದ ತೆಗೆದುಹಾಕುವಂತೆ ಆದೇಶಿಸಿದ್ದಾರೆ.
ಇತ್ತ ಬುಡಕಟ್ಟು ಅಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್ ಆರ್ಯ ಅವರು ಪ್ರಾಂಶುಪಾಲರು ಮತ್ತು ಲೈಬ್ರೇರಿಯನ್ ನನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದ್ದಾರೆ.
ಇಲ್ಲಿದೆ ನೋಡಿ ಫೈಟಿಂಗ್ ವಿಡಿಯೋ :
The school principal and librarian indulged into a physical fight at the premises of a government Eklavya School in Madhya Pradesh’s Khargone.
In the video, it can be seen, both the officials slapped each other, pulled hair, and pushed each other. The principal also broke the… pic.twitter.com/nk2z63oWIL
— ForMenIndia (@ForMenIndia_) May 4, 2025
ಹಿಂದಿನ ಸುದ್ದಿ : Health : ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ.?
ಜನಸ್ಪಂದನ ನ್ಯೂಸ್, ಡೆಸ್ಕ್ : ನೀರು ಮಾನವನಿಗೆ ಪ್ರಕೃತಿ ನೀಡಿದ ಅತ್ಯಮೂಲ್ಯ ಕೊಡುಗೆಯಾಗಿದೆ. ಹಲವರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಆದರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜಾಸ್ತಿ ನೀರು ಕುಡಿದರೆ ಏನಾಗುತ್ತದೆ ಅಂತ ಗೊತ್ತಾ.? ಮುಂದೆ ತಿಳಿಯೋಣ ಬನ್ನಿ.
ಬಹಳಷ್ಟು ಮಂದಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವ ಅಭ್ಯಾಸ ಮಾಡಿಕೊಂಡಿರುತ್ತಾರೆ. ಆರೋಗ್ಯದ ವಿಷಯಕ್ಕೆ ಬಂದರೆ ಇದು ಚಮತ್ಕಾರ ಮಾಡುತ್ತದೆ ಎಂದು ಹೇಳುತ್ತಾರೆ ತಜ್ಞರು.
ಹಾಗಾದರೆ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯ ಪ್ರಯೋಜನಗಳನ್ನು ನೀಡುತ್ತದೆಯೇ.?
ಇದನ್ನು ಓದಿ : ಗರ್ಭಿಣಿಯಾಗದ ಅತ್ತಿಗೆಯನ್ನು ನಿಂದಿಸುವುದು ಕ್ರೌರ್ಯಕ್ಕೆ ಸಮವಲ್ಲ : Highcourt.!
ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಆಗುವ ಆರೋಗ್ಯ ಪ್ರಯೋಜನಗಳು :
* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಉತ್ತಮವಾಗಿರುತ್ತದೆ.
* ಖಾಲಿ ಹೊಟ್ಟೆಯಲ್ಲಿ, ನೈಸರ್ಗಿಕವಾಗಿ ತಲೆನೋವು ಕಡಿಮೆಯಾಗಲು ಕಾರಣವಾಗಬಹುದು.
* ದೀರ್ಘಾವಧಿಯಲ್ಲಿ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತದೆ.
* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಸ್ವಚ್ಛ ಮತ್ತು ಹೊಳೆಯುವ ಚರ್ಮವನ್ನು ಪಡೆಯಬಹುದು.
ಇದನ್ನು ಓದಿ : ಕರ್ನಾಟಕ AYUSH ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
* ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
* ಪೋಷಕಾಂಶಗಳನ್ನು ವೇಗವಾಗಿ ಹೀರಿಕೊಳ್ಳಲು ಅನುವು ಮಾಡಿಕೊಡುತ್ತದೆ.
* ಖಾಲಿ ಹೊಟ್ಟೆಯಲ್ಲಿ ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಗೆ ಪುನಃಸ್ಥಾಪನೆ ಹಾಗೂ ಹೆಚ್ಚಿದ ಶಕ್ತಿಯ ಮಟ್ಟಗಳೊಂದಿಗೆ ಪ್ರಯೋಜನಕಾರಿ ಎಂದು ಸಾಬೀತು ಪಡಿಸಬಹುದು.
* ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು ನೋಡಿ.!
* ಸಾಕಷ್ಟು ನೀರು ಕುಡಿಯುವುದರಿಂದ ಬಾಯಿಯ ಅಥವಾ ಹಲ್ಲಿನ ಸಮಸ್ಯೆಗಳನ್ನು ದೂರವಿಡಲು ಸಹಾಯ ಮಾಡುತ್ತದೆ.
* ಸುಧಾರಿತ ಕರುಳಿನ ಚಲನೆ ಮತ್ತು ಉಬ್ಬುವುದು ಕಡಿಮೆಯಾಗುತ್ತದೆ.
* ದೇಹದಿಂದ ತ್ಯಾಜ್ಯವನ್ನು ತೊಡೆದು ಹಾಕಲು ಸಹ ಉಪಯುಕ್ತವಾಗಿದೆ.
* ಕೆಟ್ಟ ಕ್ಯಾಲೊರಿಗಳನ್ನು ವೇಗವಾಗಿ ಸುಡುವಲ್ಲಿ ಸಹಾಯ ಮಾಡುತ್ತದೆ.
ಇದನ್ನು ಓದಿ : Belagavi : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ.!
* ನಿದ್ದೆ ಅಥವಾ ಆಲಸ್ಯ ತೊಂದರೆಗಳಿದ್ದರೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ನೀವು ತಕ್ಷಣವೇ ಸಕ್ರಿಯರಾಗಬಹುದು.
* ಇದು ಕೆಂಪು ರಕ್ತ ಕಣಗಳನ್ನು ವೇಗವಾಗಿ ಬೆಳೆಯಲು ಉತ್ತೇಜಿಸುತ್ತದೆ.
* ಇದು ಹೆಚ್ಚು ಆಮ್ಲಜನಕ ಮತ್ತು ಶಕ್ತಿಯನ್ನು ನೀಡುತ್ತದೆ.
* ಮೂತ್ರ ಪಿಂಡದ ಕಲ್ಲುಗಳನ್ನು ಹೊರ ಹಾಕುವುದು
* ಕೂದಲಿನ ಆರೋಗ್ಯವನ್ನು ಸುಧಾರಿಸುವುದು.
ಇದನ್ನು ಓದಿ : Charge ಇಟ್ಟಾಗ ನೀವು ಮಾಡುವ ಈ ಸಣ್ಣ ತಪ್ಪಿನಿಂದ ಸ್ಮಾರ್ಟ್ಫೋನ್ ಬ್ಲಾಸ್ಟ್ ಆಗಬಹುದು.?
ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರು ಕುಡಿಯುವುದರಿಂದ ನಾವು ಇಷ್ಟೊಂದು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಆದರೆ ಆರಾಮವಾಗಿರ್ತಿವಿ ಎಂದು ಜಾಸ್ತಿ ನೀರು ಕುಡಿಯಬಾರದು.
ಅತಿಯಾಗಿ ನೀರು ಕುಡಿಯುವುದರಿಂದ ದೇಹದ ಮೇಲೆ ಕೆಲವು ಋಣಾತ್ಮಕ ಪರಿಣಾಮಗಳು ಉಂಟಾಗಬಹುದು.
* ಮೂತ್ರಪಿಂಡಗಳು ದೇಹದಿಂದ ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡಬೇಕಾಗುತ್ತದೆ. ಆದರೆ ಏಕಾಏಕಿ ಹೆಚ್ಚು ನೀರು ಕುಡಿದರೆ ಮೂತ್ರಪಿಂಡಗಳಿಗೆ ಒತ್ತಡ ಹೆಚ್ಚಾಗಿ, ದೀರ್ಘಕಾಲದಲ್ಲಿ ಹಾನಿಯಾಗಬಹುದು.
ಇದನ್ನು ಓದಿ : Special news : ಪ್ರೀತಿಸಿದವರಿಗೆ ಮೋಸ ಮಾಡ್ತಾರಂತೆ ಈ 5 ರಾಶಿಯವರು.!
* ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಹೆಚ್ಚು ಕುಡಿಯುವುದರಿಂದ ರಕ್ತದಲ್ಲಿ ಸೋಡಿಯಂ ಮಟ್ಟ ಕಡಿಮೆಯಾಗಿ, ಹೈಪೊನಾಟ್ರೇಮಿಯಾ ಎಂಬ ಸ್ಥಿತಿ ಉಂಟಾಗಲು ಕಾರಣವಾಗಬಹುದು. ಇದರಿಂದ ವಾಕರಿಕೆ, ಆಯಾಸ, ತಲೆನೋವು ಮತ್ತು ಗಂಭೀರ ಸಂದರ್ಭಗಳಲ್ಲಿ ಮೂರ್ಛೆಯಂತಹ ಲಕ್ಷಣಗಳು ಕಾಣಿಸಬಹುದು.
* ಖಾಲಿ ಹೊಟ್ಟೆಯಲ್ಲಿ ಒಮ್ಮೆಲೆ ಜಾಸ್ತಿ ನೀರು ಕುಡಿದರೆ ಹೊಟ್ಟೆ ಉಬ್ಬಿದಂತಾಗಬಹುದು. ಇದರಿಂದ ಅಸ್ವಸ್ಥತೆ ಉಂಟಾಗುವ ಸಾಧ್ಯತೆ ಇದೆ.
* ಅತಿಯಾದ ನೀರು ಜೀರ್ಣರಸಗಳನ್ನು ದುರ್ಬಲಗೊಳಿಸುತ್ತದೆ. ಇದರಿಂದ ಜೀರ್ಣಕ್ರಿಯೆಯ ಸಾಮರ್ಥ್ಯ ಕಡಿಮೆಯಾಗಿ, ಆಮ್ಲೀಯತೆ ಅಥವಾ ಗ್ಯಾಸ್ ಸಮಸ್ಯೆ ಉಂಟಾಗುತ್ತದೆ.
ಈ ರೀತಿ ಪಾಲಿಸುವುದು ಒಳ್ಳೆಯದು :
ಬೆಳಗ್ಗೆ 1-2 ಗ್ಲಾಸ್ (250-500 ಮಿಲಿ) ನೀರು ಕುಡಿಯುವುದು ಉತ್ತಮ.
ಇದನ್ನು ಓದಿ : ಮದ್ಯದ ನಿಶೆ, ಕೈಯಲ್ಲಿ ರೈಫಲ್ : ರಸ್ತೆಯಲ್ಲಿ ಉರುಳಾಡಿದ ಪೊಲೀಸಪ್ಪನ ವಿಡಿಯೋ ವೈರಲ್.!
ದಿನವಿಡೀ ಸಣ್ಣ ಸಣ್ಣ ಪ್ರಮಾಣದಲ್ಲಿ ನೀರು ಕುಡಿಯುವುದು ಒಳ್ಳೆಯದು.
ದೇಹದ ತೂಕ, ಚಟುವಟಿಕೆ ಮಟ್ಟ ಮತ್ತು ಹವಾಮಾನಕ್ಕೆ ತಕ್ಕಂತೆ 2.5-3.5 ಲೀಟರ್ ನೀರನ್ನು ದಿನವಿಡೀ ಸೇವಿಸಬಹುದು.
ನೀರಿನೊಂದಿಗೆ ನಿಂಬೆ, ಜೇನುತುಪ್ಪ ಅಥವಾ ಉಪ್ಪು ಸೇರಿಸಿದರೆ ಎಲೆಕ್ಟ್ರೋಲೈಟ್ ಸಮತೋಲನ ಕಾಯ್ದುಕೊಳ್ಳಲು ಸಹಾಯವಾಗುವುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿ, ವರದಿಯನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.