ಜನಸ್ಪಂದನ ನ್ಯೂಸ್, ಡೆಸ್ಕ್ : ಯುವಕನೋರ್ವನಿಗೆ ಬೈಕ್ (Bike) ಓಡಿಸುತ್ತಿರುವಾಗಲೇ ಹೃದಯಾಘಾತವಾಗದ ಘಟನೆಯೊಂದು ನಡೆದಿದ್ದು, ಸದ್ಯ ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.
ಈ ಸಾವು ಎನ್ನುವುದು ಯಾವಾಗ, ಎಲ್ಲಿ ಮತ್ತು ಹೇಗೆ ಬರುತ್ತದೆ ಎಂದು ಹೇಳಲು ಅಸಾಧ್ಯ. ಊಟ ಮಾಡಿ ಕೈ ತೊಳಿಯುವಾಗ, ಚಹಾ ಕುಡಿಯುವಾಗ, ವಾಕಿಂಗ್ ಹೋದಾಗ ಅಷ್ಟೆ ಏಕೆ ಮಲಗಿದಲ್ಲಿಯೇ ಎಷ್ಟೊ ಜನ ಸಾವನ್ನಪ್ಪಿರುವ ಘಟನೆಗಳು ನಡೆದಿವೆ.
ಇದನ್ನು ಓದಿ : whatsapp : ವಾಟ್ಸಪ್ಗೆ ಬರುವ ಈ ಪೋಟೋ ಕ್ಲಿಕ್ ಮಾಡಿದ್ರೆ ಖಾತೆಯಲ್ಲಿನ ಹಣವೆಲ್ಲ ಮಾಯ.!
ಈಗಂತು ಹೃದಯಾಘಾತ (heart attack) ದಿಂದ ಸಾಯುವವರ ಸಂಖ್ಯೆ ತುಂಬಾನೇ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಏಕೆಂದರೆ ಈಗ ಈ ಹೃದಯಾಘಾತಕ್ಕೆ ಬಲಿಯಾಗುವವರೆ ಹೆಚ್ಚಾಗಿದ್ದಾರೆ.
ಈ heart attack ವಯಸ್ಸು ನೋಡಿ ಅಂತು ಖಂಡಿತಾ ಬರುತ್ತಿಲ್ಲ. ಕಡಿಮೆ ವಯಸ್ಸಿನ ಯುವಕ ಯುವತಿಯರಲ್ಲಿ ಹೆಚ್ಚಾಗಿ ಹೃದಯಾಘಾತವಾಗುತ್ತಿದೆ. ಅಷ್ಟೆ ಏಕೆ 5-8 ವರ್ಷದ ಮಕ್ಕಳು ಕೂಡ ಇದಕ್ಕೆ ಬಲಿಯಾಗುತ್ತಿದ್ದಾರೆ.
ಇದನ್ನು ಓದಿ : Health : ಕಾಲಿನಲ್ಲಿ ಈ ಲಕ್ಷಣಗಳಿವೆಯೇ? ಇವು ಈ ಗಂಭೀರ ಕಾಯಿಲೆಯ ಲಕ್ಷಣಗಳಾಗಿರಬಹುದು?
ಹೃದಯಾಘಾತ ಎನ್ನುವುದು ಯಾವಾಗ, ಎಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಎಷ್ಟೋ ಜನ ಕುಂತಲಿಯೋ, ಜಿಮ್ಮನಲ್ಲಿಯೋ, ವಾಕಿಂಗ್ ಹೋದಾಗಲೋ ಅಥವಾ ಒಮ್ಮೋಮ್ಮೆ ವಾಹನ ಚಾಲನೆ ಮಾಡುವಾಗಲೂ ಸಹ ಈ ಹೃದಯಾಘಾತ ಸಂಭವಿಸುತ್ತದೆ ಎನ್ನುವ ವಿಚಾರ ತಮಗೂ ಗೋತ್ತಿದೆ.
ಇದೀಗ ಓರ್ವ ಯುವಕ ಬೈಕ್ ಓಡಿಸುತ್ತಿರುವಾಗಲೇ ಹೃದಯಘಾತಕ್ಕೆ ಒಳಗಾಗಿ ಸಾವನ್ನಪಿರುವ ಈ ಹೃದಯ ವಿದ್ರಾವಕ ಘಟನೆಯೂ ಉತ್ತರ ಪ್ರದೇಶ (uttar pradesh) ದ ಮೊರಾದಾಬಾದ್ನ ಕತ್ ಘರ್ (kat ghar) ಪೊಲೀಸ್ ಠಾಣೆ ವ್ಯಾಪ್ತಿಯ ಪಚ್ ಪೇಡಾ ಪ್ರದೇಶದಲ್ಲಿ ನಡೆದಿದೆ.
ಇದನ್ನು ಓದಿ : ಕಪ್ಪಾದ ಭಾಗವನ್ನು ಕ್ಷಣದಲ್ಲಿ ತೆಗೆದು ಹಾಕುತ್ತೇ ಈ ಪೇಸ್ಟ್ ; ಈ ವಿಡಿಯೋ ನೋಡಿ.
ಸದ್ಯ ಇದರ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಯುವಕ ಈ ರೀತಿ ಹಠಾತ್ ಹೃದಯಘಾತಕ್ಕೆ ಒಳಗಾಗುತ್ತಿರುವುದು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.
@priyarajputlive ಹೆಸರಿನ X ಖಾತೆಯಲ್ಲಿ ಈ ಘಟನೆಯ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, 2,605 Views ಪಡೆದುಕೊಂಡಿದೆ.
ವಿಡಿಯೋದಲ್ಲೇನಿದೆ :
ಸುಮಾರು 22 ವರ್ಷದ ಯುವಕನೊಬ್ಬನು ಬೈಕ್ೋಡಿಸುತ್ತ ಒಂದು ಬೀದಿಯಲ್ಲಿ ಹೋಗುವುದನ್ನು ನೀವು ವಿಡಿಯೋದಲ್ಲಿ ಕಾಣಬಹುದು. ಈ ವೇಳೆ ಹಠಾತ್ ಆಗಿ ಹೃದಯಾಘಾತ ಉಂಟಾದ ಪರಿಣಾಮ ಸಮತೋಲನ ಕಳೆದುಕೊಂಡು ಬೈಕ್ ಮೇಲೆ ಬಿದ್ದು ವಿಲವಿಲ ಒದ್ದಾಡುತ್ತಿದ್ದಾನೆ.
ಇದನ್ನು ಓದಿ : Nuclear leak : ಭಾರತೀಯ ಸೇನಾ ಇಫೆಕ್ಟ್ ; ಪಾಕ್ನಲ್ಲಿ ವೈದ್ಯಕೀಯ ಎಮರ್ಜೆನ್ಸಿ?
ಬೈಕ್ನಿಂದ ಯುವಕ ಬೀಳುತ್ತಿದಂತೆಯೇ ಅಲ್ಲೆ ಇದ್ದ ಸಾರ್ವಜನಿಕರು ಬೈಕ್ ಎಬ್ಬುವುದರ ಜೊತೆ ಯುವಕನ್ನು ಎಬ್ಬಸಿ ಉಪಚರಿಸಿದ್ದಾರೆ. ಆದರೆ ಇದು ಸಾಧ್ಯವಾಗದೇ ಇದ್ದಾಗ ಆಸ್ಪತ್ರೆಗೆ ಕರೆದು ಹೋಗಿದ್ದಾರೆ. ಆದರೆ ಯುವಕನು ಮೃತ ಪಟ್ಟಿದ್ದಾಗಿ ವೈದ್ಯರೇ ಘೋಷಿಸಿದ್ದಾರೆ.
ಇಲ್ಲಿದೆ ನೋಡಿ ವೈರಲ್ ವಿಡಿಯೋ :
मुरादाबाद में एक युवक का बाइक चलाते समय अचानक पड़ा दिल का दौरा मौके पर मौत pic.twitter.com/lgOVuAMWxe
— Priya singh (@priyarajputlive) April 23, 2025
ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!
ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.
ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.
ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.
ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.
ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.
ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್ವರ್ಡ್ ಗಳಿವು; 1 ನಿಮಿಷ ಸಾಕು ಖಾತೆ ಹ್ಯಾಕ್ ಮಾಡಲು.!
ಇದು ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.
ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).
ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.
ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?
ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).
ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ
ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!
ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.
ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.
ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!
ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.