ಶುಕ್ರವಾರ, ಜನವರಿ 2, 2026

Janaspandhan News

HomeGeneral Newsಸ್ವಾಮೀಜಿಯ ಬೆತ್ತಲೆ ಮಸಾಜ್ ವಿಡಿಯೋ ವೈರಲ್ ; ಬ್ಲಾಕ್‌ಮೇಲ್ ಆರೋಪ.
spot_img
spot_img
spot_img

ಸ್ವಾಮೀಜಿಯ ಬೆತ್ತಲೆ ಮಸಾಜ್ ವಿಡಿಯೋ ವೈರಲ್ ; ಬ್ಲಾಕ್‌ಮೇಲ್ ಆರೋಪ.

- Advertisement -

ಜನಸ್ಪಂದನ ನ್ಯೂಸ್‌, ಧಾರವಾಡ : ಧಾರವಾಡ ಜಿಲ್ಲೆಯ ಶಿವಾನಂದ ಮಠದ ಪೀಠಾಧಿಪತಿ ಸರಸ್ವತಿ ಸ್ವಾಮೀಜಿಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಮಠದ ಭಕ್ತರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಠದ ಆವರಣದಲ್ಲಿ ಮಹಿಳೆಯೊಬ್ಬರಿಂದ ಎಣ್ಣೆ ಮಸಾಜ್ ಪಡೆಯುತ್ತಿರುವ ದೃಶ್ಯಗಳು ಎನ್ನಲಾಗಿರುವ ವಿಡಿಯೋ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಪ್ರಕರಣ ಸದ್ದು ಮಾಡುತ್ತಿದೆ.

ವಿಡಿಯೋ ವೈರಲ್ ಆದ ಬಳಿಕ ಗ್ರಾಮಸ್ಥರು ಸ್ವಾಮೀಜಿಯ ವರ್ತನೆ ಕುರಿತು ಪ್ರಶ್ನೆ ಎತ್ತಿದ್ದು, ಮಠದ ಪಾವಿತ್ರ್ಯ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋರ್ನ್ ಸ್ಟಾರ್ ಆಗುವ ಆಸೆಗೆ ಪತ್ನಿ ಜೊತೆಗಿನ ಖಾಸಗಿ ವಿಡಿಯೋ ಹರಿಬಿಟ್ಟ ಪತಿ.

ಕೆಲವು ದಿನಗಳ ಕಾಲ ಅವರನ್ನು ಮಠದಿಂದ ಹೊರಗಿಡಲಾಗಿತ್ತು. ನಂತರ ಗ್ರಾಮದ ಕೆಲವರ ಮಧ್ಯಸ್ಥಿಕೆಯಿಂದ ಅವರನ್ನು ಮಠಕ್ಕೆ ಮರಳಿ ಕರೆತರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬ್ಲಾಕ್‌ಮೇಲ್ ಆರೋಪ ಮಾಡಿದ ಸ್ವಾಮೀಜಿ :

ಈ ಬೆಳವಣಿಗೆಗಳ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದು, ತಾನು ಬ್ಲಾಕ್‌ಮೇಲ್‌ಗೆ ಒಳಗಾಗಿದ್ದೇನೆ ಎಂದು ಆರೋಪಿಸಿದ್ದಾರೆ. ಮಹಿಳೆಯೊಬ್ಬರು ಪರಿಚಯ ಮಾಡಿಕೊಂಡು ನಂತರ ತಮ್ಮ ವಿರುದ್ಧ ವಿಡಿಯೋ ಬಳಸಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಸುಮಾರು ಐದು ಮಂದಿಯ ಗುಂಪು 20 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದು, ಮಾತುಕತೆ ಬಳಿಕ 10 ಲಕ್ಷ ರೂಪಾಯಿಗೆ ಒಪ್ಪಂದವಾಗಿದೆ ಎಂಬುದಾಗಿ ಸ್ವಾಮೀಜಿ ತಿಳಿಸಿದ್ದಾರೆ.

ಇತರೇ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಅದರಂತೆ, ಮಠಕ್ಕೆ ಬಂದ ನಾಲ್ವರಿಗೆ ಹಂತ ಹಂತವಾಗಿ ಹಣ ನೀಡಲಾಗಿದೆ. ಆದರೆ ಉಳಿದ ಹಣ ನೀಡದ ಕಾರಣ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗಿದೆ ಎಂದು ಅವರು ದೂರಿದ್ದಾರೆ. ಈ ವಿಷಯದಲ್ಲಿ ತಮಗೆ ಮೋಸವಾಗಿದೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ತನಿಖೆಗೆ ಒತ್ತಾಯ :

ವಿಡಿಯೋ ಯಾರು ಚಿತ್ರೀಕರಿಸಿದ್ದಾರೆ, ಹೇಗೆ ಹೊರಬಂದಿದೆ ಎಂಬುದರ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಸ್ವಾಮೀಜಿ ಹೇಳಿಕೊಂಡಿದ್ದಾರೆ. ಈ ಸಂಬಂಧ ಬ್ಲಾಕ್‌ಮೇಲ್ ಮಾಡಿದವರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಇನ್ನೊಂದೆಡೆ, ಈ ಪ್ರಕರಣದ ಸತ್ಯಾಸತ್ಯತೆ ಕುರಿತು ಸಂಪೂರ್ಣ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಮಠದ ಗೌರವ ಮತ್ತು ಧಾರ್ಮಿಕ ಸಂಸ್ಥೆಗಳ ಮೇಲಿನ ನಂಬಿಕೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ಕೇಳಿಬರುತ್ತಿದೆ.

ಇದನ್ನು ಓದಿ : ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಅತಿರೇಕದ ಪ್ರೇಮ ಕಾಟ ; ಮಹಿಳೆ ವಿರುದ್ಧ ಎಫ್‌ಐಆರ್.

ಪ್ರಕರಣ ಇದೀಗ ಕಾನೂನು ಹಂತದಲ್ಲಿದ್ದು, ಮುಂದಿನ ತನಿಖೆಯ ನಂತರವೇ ನಿಖರವಾದ ಸತ್ಯಾಂಶ ಬಹಿರಂಗವಾಗಲಿದೆ.‌

ವರದಿ : ಜನಸ್ಪಂದನ ನ್ಯೂಸ್ ತಂಡ

ಹೆಚ್ಚಿನ ಸುದ್ದಿಗಳಿಗಾಗಿ janaspandhan.com ಕ್ಲಿಕ್ ಮಾಡಿ

- Advertisement -
Janaspandhan News
Janaspandhan Newshttp://WWW.janaspandhan.com
Janaspandana News is a digital news platform that reports crime and local news from Karnataka.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments