Tuesday, May 13, 2025
HomeHealth & FitnessHealth : ಬೇಸಿಗೆಯಲ್ಲಿ ಯಾವುದು ಉತ್ತಮ ಮೊಸರು Or ಮಜ್ಜಿಗೆ.!
spot_img
spot_img
spot_img

Health : ಬೇಸಿಗೆಯಲ್ಲಿ ಯಾವುದು ಉತ್ತಮ ಮೊಸರು Or ಮಜ್ಜಿಗೆ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಬೇಸಿಗೆಯಲ್ಲಿ (summer) ವಿಪರೀತ ಬಾಯಾರಿಕೆ ಒಂದು ಕಡೆಯಾದರೆ, ಉರಿ ಬಿಸಿಲಿನಿಂದ, ಆಯಾಸ, ಸುಸ್ತು, ವಿಪರೀತ ಬೆವರುವಿಕೆ ಕೂಡ ಮನುಷ್ಯರನ್ನು ಬೇಡ್ವೆ ಬೇಡ ಇದರ ಸಹವಾಸ ಎನ್ನುವ ಮಟ್ಟಿಗೆ ಕಾಡಿಸುತ್ತದೆ.

ಬಿಸಿಲು ತಡೆದುಕೊಳ್ಳಲು ಸಾಧ್ಯವಾಗದೇ ಕೋಲ್ಡ್ ಡ್ರಿಂಕ್ಸ್, ಐಸ್ ಕ್ರೀಂ ಅಂತ ತಿನ್ನುತ್ತಾರೆ ಕೆಲವರು. ಇನ್ನೂ ಕೆಲವರು ನೈಸರ್ಗಿಕವಾಗಿ ಸಿಗುವ ಕಲ್ಲಂಗಡಿ ಜ್ಯೂಸ್ (watermelon juice), ಕಬ್ಬಿನದ ಹಾಲು (sugarcane juice), ಮೊಸರು, ಮಜ್ಜಿಗೆಯಂತಹ ಡ್ರಿಂಕ್ಸ್ (A natural drink) ಕುಡಿಯುತ್ತಾರೆ.

ಇದನ್ನು ಓದಿ : ಅಪಾಯದಿಂದ ಪಾರಾಗಲು 5 ನೇ ಮಹಡಿಯಿಂದ ಜಿಗಿದ ಯುವತಿ ; ವಿಡಿಯೋ ನೋಡಿ.!

ಇನ್ನೂ ಮೊಸರು, ಮಜ್ಜಿಗೆ (Buttermilk) ವಿಷಯಕ್ಕೆ ಬಂದರೆ ಬೇಸಿಗೆಯಲ್ಲಿ ಈ ಎರಡು ಪಾನೀಯಗಳಲ್ಲಿ ಯಾವುದು ಕುಡಿಯುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಅಂತ ಗೊತ್ತಾ.?

ಮೊಸರು (curd) ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಬೇಸಿಗೆಯಲ್ಲಿ ಪ್ರತಿದಿನ ಒಂದು ಬಟ್ಟಲು ಮೊಸರು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ (Digestive system improvement). ಹೊಟ್ಟೆ ತಂಪಾಗಿದ್ದು, ಆಮ್ಲೀಯತೆಯಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.

ಇದನ್ನು ಓದಿ : 10th, 12th ಮತ್ತು ಡಿಗ್ರಿ ಪಾಸಾದವರಿಗೆ ಪಶುಸಂಗೋಪನಾ ಇಲಾಖೆಯಲ್ಲಿ 12,981 ಉದ್ಯೋಗವಕಾಶ.!

ಇದಲ್ಲದೆ ಮೊಸರು ನಮ್ಮ ತ್ವಚೆಗೆ ಕೂಡ ಒಳ್ಳೆಯದು. ಮುಖವನ್ನು ಹೊಳೆಯುವಂತೆ ಮಾಡುತ್ತದೆ. ಅಲ್ಲದೇ ಮೊಡವೆಯಂತಹ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ. ಮೊಸರು ತಾಜಾವಾಗಿದೆಯೇ ಎಂದು ಖಚಿತಪಡಿಸಿಕೊಂಡು ತಿನ್ನುವುದು ಒಳ್ಳೆಯದು. ರೆಫ್ರಿಜರೇಟರ್‌ನಿಂದ ತುಂಬಾ ತಂಪಾಗಿರುವ ಮೊಸರನ್ನು ತಿನ್ನಬಾರದು.

ಮಜ್ಜಿಗೆ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು :
ಇನ್ನೂ ಮಜ್ಜಿಗೆ ವಿಷಯಕ್ಕೆ ಬಂದರೆ ಮಜ್ಜಿಗೆ ಮೊಸರಿಗಿಂತ ಹಗುರವಾಗಿದ್ದು, ಹೆಚ್ಚಿನ ನೀರಿನ ಅಂಶವನ್ನು (High water content) ಹೊಂದಿದೆ. ಹೀಗಾಗಿ ಇದನ್ನು ಕುಡಿಯುವುದರಿಂದ ದೇಹದಲ್ಲಿ ನೀರನ್ನು ಉಳಿಸಲು ಬಹಳಷ್ಟು ಸಹಾಯ ಮಾಡುತ್ತದೆ.

ಇದನ್ನು ಓದಿ : ಹಠ ಮಾಡುತ್ತಾರೆ ಅಂತ ಮಕ್ಕಳ ಕೈಗೆ ಮೊಬೈಲ್ ಕೊಡುವ ಪಾಲಕರೇ ಈ Video ನಿಮಗಾಗಿ.!

ಹೆಚ್ಚು ಕೆಲಸ ಅಥವಾ ದೈಹಿಕ ಚಟುವಟಿಕೆ ಮಾಡುವವರಿಗೆ ಮಜ್ಜಿಗೆ ಸೂಕ್ತವಾಗಿದೆ. ಹೊಟ್ಟೆಯಲ್ಲಿ ಗ್ಯಾಸ್ ಸಮಸ್ಯೆಯಿದ್ದರೆ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ತಕ್ಷಣ ಪರಿಹಾರ ಪಡೆಯಬಹುದು.

ಬೇಸಿಗೆಯಲ್ಲಿ ಯಾವುದು ಒಳ್ಳೆಯದು ಮೊಸರು ಅಥವಾ ಮಜ್ಜಿಗೆ.?
ಬೇಸಿಗೆಯಲ್ಲಿ ಇವೆರಡೂ ಉತ್ತಮವಾಗಿವೆ. ನಿಮಗೆ ಪೌಷ್ಠಿಕಾಂಶ ಬೇಕೆಂದರೆ, ಚರ್ಮದ ಆರೋಗ್ಯ ಸುಧಾರಿಸಬೇಕಾದರೆ ಮೊಸರು ಉತ್ತಮ. ನಿಮ್ಮ ಜೀರ್ಣಕ್ರಿಯೆಯನ್ನು ಆರೋಗ್ಯಕರವಾಗಿಡಲು ಬಯಸಿದರೆ ಮಜ್ಜಿಗೆ ಸೂಕ್ತ.

ಇದನ್ನು ಓದಿ : ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕುರಿತು ಅಶ್ಲೀಲ ಪೋಸ್ಟ್ ಮಾಡಿದ ಮಹಿಳಾ Influencer.!

ಆದರೆ ನೀವು ಹಗಲಿನಲ್ಲಿ ಮೊಸರು ತಿನ್ನಬಹುದು ಮತ್ತು ಮಧ್ಯಾಹ್ನದ ಊಟದ ನಂತರ ಅಥವಾ ಸಂಜೆ ಒಂದು ಲೋಟ ಮಜ್ಜಿಗೆಯನ್ನು ಕುಡಿಯುವುದು ಸೂಕ್ತ.

ಹಿಂದಿನ ಸುದ್ದಿ : Health : ನಿಮ್ಮ ಮನೆ ಅಕ್ಕಪಕ್ಕದಲ್ಲಿ ಸಿಗುವ ಈ ಹಣ್ಣಿನಿಂದ ಸಿಗುತ್ತೆ ಮಧುಮೇಹದಿಂದ ಮುಕ್ತಿ.!

ಜನಸ್ಪಂದನ ನ್ಯೂಸ್, ಡೆಸ್ಕ್ : ಸೀಮೆ ಹುಣಸೆ ಹಣ್ಣು, ಇಲಾಚಿ ಹಣ್ಣು ಎಂದು ಕರೆಯುವ ಈ ಹಣ್ಣು ಜಂಗಲ್ ಜಿಲೇಬಿ (Jungle Jilebi) ಎಂದೇ ಖ್ಯಾತಿ ಪಡೆದಿದೆ. ಪ್ರತಿದಿನ ಇಪ್ಪತ್ತರಿಂದ ಮೂವತ್ತು ಗ್ರಾಂ ಇಲಾಚಿ ಹಣ್ಣು ತಿನ್ನುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ದೂರ ಆಗುತ್ತವೆ.

ಪಿಥೆಸೆಲ್ಲೋಬಿಯಂ ಡುಲ್ಸ್ (Pithecellobium dulce) ಎಂದು ಕರೆಯಲ್ಪಡುವ ಸೀಮೆ ಹುಣಸೆ ಹಣ್ಣು, ವಿಶಿಷ್ಟವಾದ ರುಚಿ ಹೊಂದಿದೆ. ಇದರ ಔಷಧೀಯ ಗುಣಗಳು ಆರೋಗ್ಯಕ್ಕೂ ವರದಾನವಿದ್ದಂತೆ.

ಇದನ್ನು ಓದಿ : Revenue Department : ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಜಂಗಲ್ ಜಲೇಬಿಯನ್ನು ಊಟ ಮಾಡುವುದಕ್ಕಿಂತ ಒಂದು ಗಂಟೆ ಮುಂಚೆ ಅಥವಾ ಒಂದು ಗಂಟೆ ನಂತರ ತಿನ್ನಬೇಕು (Eat one hour before or one hour after) ಎನ್ನುತ್ತಾರೆ ಹಿರಿಯರು.

ಈ ಹಣ್ಣು ವಿಟಮಿನ್ ಸಿ, ಪ್ರೋಟೀನ್, ಕೊಬ್ಬು, ಕಾರ್ಬೋಹೈಡ್ರೇಟ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ, ಥಯಾಮಿನ್, ರಿಬೋಫ್ಲಾವಿನ್ ಮುಂತಾದ ಅನೇಕ ಅಂಶಗಳನ್ನು ಹೊಂದಿದೆ.

ಕಣ್ಣಿನ ಸಮಸ್ಯೆ ಮತ್ತು ಚರ್ಮದ ಕಾಯಿಲೆಗೆ (Eye problems and skin disease) ಈ ಹಣ್ಣು ತುಂಬಾ ಉಪಯೋಗಕರ ಎಂದು ಪರಿಗಣಿಸಲಾಗಿದೆ.

ಇದನ್ನು ಓದಿ : ಅತ್ಯಂತ ದುರ್ಬಲ ಪಾಸ್‌ವರ್ಡ್ ಗಳಿವು; 1 ನಿ‌ಮಿಷ ಸಾಕು ಖಾತೆ ಹ್ಯಾಕ್ ಮಾಡಲು.!

ಇದು ದೇಹವನ್ನು ಸ್ವತಂತ್ರ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ರಕ್ಷಿಸುತ್ತದೆ. ಈ ಗುಣವು ವಯಸ್ಸಾಗುವುದನ್ನು ತಡೆಯುತ್ತದೆ (Prevents aging) ಮತ್ತು ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ಈ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವುದು (To strengthen the digestive system).

ಜಂಗಲ್ ಜಲೇಬಿಯನ್ನು ಒಂದು ತಿಂಗಳು ನಿಯಮಿತವಾಗಿ ಸೇವಿಸಿದರೆ, ಸಕ್ಕರೆಯನ್ನು ನಿಯಂತ್ರಿಸಬಹುದಂತೆ.

ಇದನ್ನು ಓದಿ : Pahalgam attack : ಭಾರತದಿಂದ ಪ್ರತಿಕಾರದ ಭಯ ; ಪಾಕಿಸ್ತಾನ ಸೈನಿಕರ ಸಾಮೂಹಿಕ ರಾಜೀನಾಮೆ.?

ಇದರಲ್ಲಿರುವ ಆಂಟಿಆಕ್ಸಿಡೆಂಟ್, ಆಂಟಿಇನ್ಫ್ಲಾಮೇಟರಿ, ಆಂಟಿಡಿಯಾಬೆಟಿಕ್ ಅಂಶಗಳು ಕ್ಯಾನ್ಸರ್ ರೋಗಿಗಳಿಗೆ ಉಪಯುಕ್ತವಾಗಿವೆ (Useful for cancer patients).

ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು (To maintain body temperature) ಮತ್ತು ಶಾಖ ಸಂಬಂಧಿತ ಅಸ್ವಸ್ಥತೆಯನ್ನು ತಡೆಯಲು ಸಹಾಯ ಮಾಡುತ್ತದೆ.

ನೈಸರ್ಗಿಕ ನೋವು ನಿವಾರಕವಾಗಿಯೂ ಕಾರ್ಯನಿರ್ವಹಿಸುತ್ತದೆ

ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಇದನ್ನು ಓದಿ : Health : ಏಕಾಏಕಿ ಕೈಗಳು ನಡುಗುವುದು ಈ ಗಂಭೀರ ಕಾಯಿಲೆಯಾಗಿರಬಹುದು.!

ಫೈಲೇರಿಯಾಸಿಸ್ ಎಂಬ ಸಾರವನ್ನು ಈ ಹಣ್ಣಿನ ಎಲೆ ಮತ್ತು ಬೀಜಗಳು ಹೊಂದಿದ್ದು, ಇದು ಸೊಳ್ಳೆಗಳನ್ನು ಹಿಮ್ಮೆಟ್ಟಿಸಲು ಉಪಯುಕ್ತವಾಗಿದೆ. ಅಲ್ಲದೇ ಸೊಳ್ಳೆಗಳ ವಿರುದ್ಧ ನೈಸರ್ಗಿಕ ಕೀಟನಾಶಕವಾಗಿಯೂ (Natural insecticide against mosquitoes) ಈ ಹಣ್ಣು ಕೆಲಸ ಮಾಡುತ್ತದೆ.

ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುತ್ತದೆ.

ಇದು ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಇದನ್ನು ಓದಿ : ಬೇಡ, ಬೇಡ ಅಂದ್ರು ಮಧ್ಯರಾತ್ರಿ ಮಹಿಳೆ ಮನೆಯೊಳಗೆ ನುಗ್ಗಿದ Teacher ; ಮುಂದೆನಾಯ್ತು.!

ಕೆಮ್ಮು ಮತ್ತು ಅಸ್ತಮಾದಂತಹ ರೋಗಗಳನ್ನು ಗುಣಪಡಿಸಬಹುದು.

Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿದೆ. ಜನಸ್ಪಂದನ ನ್ಯೂಸ್ ಗೂ (Janaspandhan News) ಈ ಲೇಖನಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರರಲ್ಲ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments