ಜನಸ್ಪಂದನ ನ್ಯೂಸ್, ಬೆಂಗಳೂರು : ಬ್ಲ್ಯಾಕ್ ಮ್ಯಾಜಿಕ್ (Black Magic) ಗಾಗಿ ಮಾಟಗಾತಿಯೋಬ್ಬಳು ನಾಯಿಗಳ ಸರಣಿ ಹತ್ಯೆ ಮಾಡಿರುವ ಅಮಾನಿಯ ಘಟನೆ ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿ ಎಂದೇ ಪ್ರಖ್ಯಾತಿ ಪಡೆದ ಬೆಂಗಳೂರಿನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಘಟನೆ ನಾಲ್ಕು ದಿನಗಳ ಹಿಂದೆ ನಡೆದಿದ್ದು, ಅದು ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ಮಾಟ (Black Magic) ಕ್ಕಾಗಿ ನಾಯಿಯನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಇಡೀ ಚಿನ್ನಪ್ಪ ಲೇಔಟ್ನ ಖಾಸಗಿ ಅಪಾರ್ಟ್ಮೆಂಟ್ನ ತುಂಬೆಲ್ಲಾ ದುರ್ನಾತ ಬೀರಿದೆ.
ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!
ತ್ರಿಪಾರ್ಣ ಪಾಯ್ಕ ಎಂಬ ಪಶ್ಚಿಮ ಬಂಗಾಳದ ಮಹಿಳೆಯು ನಾಲ್ಕು ದಿನಗಳ ಹಿಂದೆ ತನ್ನದೇ ಪೋಷಣೆಯಲ್ಲಿದ್ದ ನಾಯಿಯನ್ನು ಕತ್ತು ಕೊಯ್ದು (Black Magic) ಹತ್ಯೆ ಮಾಡಿ ನಂತರ ಬಟ್ಟೆಯಿಂದ ಸುತ್ತಿಹಾಕಿ ಬಚ್ಚಿಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಮಾಟಕ್ಕಾಗಿ (Black Magic) ಹತ್ಯೆ ಮಾಡಿದ ನಾಯಿಯ ಶವದ ಸುತ್ತ ಶ್ರೀ ಯಂತ್ರವನ್ನು ಬರೆಯಲಾಗಿದ್ದು, ರೂಮಿನ ತುಂಬೆಲ್ಲಾ ದೇವರ ಪೋಟೊಗಳನ್ನ ಇಟ್ಟು ಪೂಜೆ ಮಾಡಲಾಗಿದೆ.
ಪಶ್ಚಿಮ ಬಂಗಾಳದ ಈ ಮಹಿಳೆ ನಾಲ್ಕು ಲ್ಯಾಬ್ರೋಡರ್ ನಾಯಿಗಳನ್ನ ಸಾಕಿದ್ದಳು. ಇದೇ ಮಹಿಳೆಯ ಮನೆಯೊಂದರಲ್ಲಿ ಸುಮಾರು ನಾಲ್ಕು ತಿಂಗಳ ಹಿಂದೆ ನಾಯಿ ಕಾಣೆಯಾಗಿತ್ತು, ಇದೀಗ ನಾಯಿಯ ಹತ್ಯೆ (Black Magic) ನಡೆದಿರುವುದು ಅನುಮಾನಕ್ಕೆ ಎಡೆಮಾಡಿದೆ.
ಇದನ್ನು ಓದಿ : Mango : ಮಾವಿನಹಣ್ಣನ್ನು Night ವೇಳೆ ತಿನ್ನುತ್ತೀರಾ.? ಹಾಗಿದ್ರೆ ಈ ಸುದ್ದಿ ಓದಿ.
ಬ್ಲ್ಯಾಕ್ ಮ್ಯಾಜಿಕ್ (Black Magic) ಗಾಗಿ ಹತ್ಯೆಯಾದ ನಾಯಿಯಿಂದ ಬರುವ ದುರ್ವಾಸನೆಯ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಹೋಗಿ ನೋಡಲಾಗಿ, ನಾಯಿಯನ್ನು ಹತ್ಯೆ ಮಾಡಿ ಬಟ್ಟೆಯಲ್ಲಿ ಸುತ್ತಿಯಿಟ್ಟಿದ್ದಾಳೆ.
ಸದ್ಯ ಹತ್ಯೆಯಾದ ನಾಯಿಯ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ನಾಲ್ಕು ದಿನಗಳ ಹಿಂದೆಯೇ ಹತ್ಯೆ ನಡೆದಿರುವುದನ್ನು ದೃಢಪಡಿಸಿದೆ. ಬ್ಲ್ಯಾಕ್ ಮ್ಯಾಜಿಕ್ (Black Magic) ಕ್ಕಾಗಿ ಹತ್ಯೆ ಮಾಡಲಾಗಿತ್ತೆಂಬ ಶಂಕೆಯೂ ವ್ಯಕ್ತವಾಗಿದೆ. ಮಹಾದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Astrology : ಹೇಗಿದೆ ಗೊತ್ತಾ.? ಜೂನ 28 ರ ದ್ವಾದಶ ರಾಶಿಗಳ ಫಲಾಫಲ.!
ಜನಸ್ಪಂದನ ನ್ಯೂಸ್, ಜೋತಿಷ್ಯ (Astrology) : 2025 ಜೂನ 27 ರ ಶುಕ್ರವಾರ ದಿನವಾದ ಇಂದು, ನಿಮ್ಮ ದಿನವು ಹೇಗಿರಲಿದೆ..? ಇಂದು ಯಾವ ರಾಶಿಯವರಿಗೆ ಶುಭ.? ಯಾವ ರಾಶಿಯವರು ಎಚ್ಚರಿಕೆ.? ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ ನೋಡಿ.
ದೈನಂದಿನ ದ್ವಾದಶ ರಾಶಿಗಳ ಫಲಾಫಲ (ಜಾತಕ) ದ ಮೂಲಕ ಭವಿಷ್ಯ (Astrology) ವನ್ನು ಊಹಿಸುವುದು ಪ್ರಾಚೀನ ಕಾಲದಿಂದಲೂ ಇಂದಿನವರೆಗೆ ಪ್ರಸ್ತುತವಾಗಿದೆ. ಗ್ರಹಗಳ ಸ್ಥಾನಗಳು, ನಕ್ಷತ್ರಗಳು, ತಿಥಿ ಮತ್ತು ಇತರ ಜ್ಯೋತಿಷ್ಯ (Astrology) ಅಂಶಗಳ ಆಧಾರದ ಮೇಲೆ ರಾಶಿಗಳ ಫಲಾಫಲ (ಜಾತಕ) ವು ವ್ಯಕ್ತಿಯ ಭವಿಷ್ಯ (Astrology) ವನ್ನು ಮುನ್ಸೂಚಿಸುತ್ತದೆ.
ಇಂದಿನ ದ್ವಾದಶ ರಾಶಿಗಳ ಫಲಾಫಲ (Astrology) ಹೇಗಿದೆ :
*ಮೇಷ ರಾಶಿ*
ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದ ಆದಾಯದ ಮಾರ್ಗಗಳಿವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಶುಭ ಸುದ್ದಿ ದೊರೆಯುತ್ತದೆ. ಸಂಗಾತಿಯೊಂದಿಗೆ ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ.
*ವೃಷಭ ರಾಶಿ*
ಪ್ರಮುಖ ವ್ಯವಹಾರಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಉದ್ಯೋಗಿಗಳಿಗೆ ಅನುಕೂಲಕರ ಬದಲಾವಣೆಗಳು ಕಂಡುಬರುತ್ತವೆ. ಕುಟುಂಬ ವ್ಯವಹಾರಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳನ್ನು ನಿವಾರಿಸುತ್ತೀರಿ. ಹೊಸ ಸಾಲ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ.
*ಮಿಥುನ ರಾಶಿ*
ಬಹಳ ದಿನಗಳಿಂದ ನಿಮ್ಮನ್ನು ಕಾಡುತ್ತಿದ್ದ ಸಮಸ್ಯೆಗಳು ದೂರವಾಗುತ್ತವೆ. ಹೊಸ ವ್ಯವಹಾರಗಳಿಗೆ ಹೂಡಿಕೆಗಳು ದೊರೆಯುತ್ತವೆ. ಮಕ್ಕಳ ವಿವಾಹ ಉದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಹಠಾತ್ ಆರ್ಥಿಕ ಲಾಭ ದೊರೆಯುತ್ತದೆ. ಉದ್ಯೋಗಿಗಳು ತಮ್ಮ ಜವಾಬ್ದಾರಿಗಳಲ್ಲಿ ಅಡೆತಡೆಗಳನ್ನು ನಿವಾರಿಸಿ ಮುನ್ನಡೆಯುತ್ತೀರಿ. ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
*ಕಟಕ ರಾಶಿ*
ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ಉದ್ಯೋಗಿಗಳು ಉನ್ನತ ಹುದ್ದೆಗಳನ್ನು ಪಡೆಯುತ್ತಾರೆ, ಮನೆಯಲ್ಲಿ ಹೊಸ ಕಾರ್ಯಕ್ರಮಗಳು ಪ್ರಾರಂಭವಾಗುತ್ತವೆ.
ಇದನ್ನು ಓದಿ : ನೀರು ಮಿಶ್ರಿತ ಡಿಸೇಲ್ ; ರಸ್ತೆಯಲ್ಲಿಯೇ ನಿಂತ 19 CM ಬೆಂಗಾವಲು ವಾಹನ.!
*ಸಿಂಹ ರಾಶಿ*
ಮನೆಯಲ್ಲಿ ಶುಭ ಕಾರ್ಯಗಳು ನೆರವೇರುತ್ತವೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ಪಾಲುದಾರರೊಂದಿಗೆ ಸೌಹಾರ್ದತೆ ಹೆಚ್ಚಾಗುತ್ತದೆ. ಕೆಲವು ಕಾರ್ಯಕ್ರಮಗಳನ್ನು ಉತ್ಸಾಹದಿಂದ ಪ್ರಾರಂಭಿಸಿ ಸಮಯಕ್ಕೆ ಪೂರ್ಣಗೊಳಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಆಶಾದಾಯಕವಾಗಿರುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ.
*ಕನ್ಯಾ ರಾಶಿ*
ವ್ಯಾಪಾರ ವಿಸ್ತರಣೆಗೆ ಹೊಸ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಇದ್ದ ಸಮಸ್ಯೆಗಳು ಬಗೆಹರಿಯುತ್ತವೆ. ಕೈಗೊಂಡ ವ್ಯವಹಾರಗಳಲ್ಲಿ ಯಶಸ್ವಿಯಾಗುತ್ತೀರಿ. ಸಮಾಜದಲ್ಲಿ ನಿಮ್ಮ ಮೌಲ್ಯ ಹೆಚ್ಚಾಗುತ್ತದೆ. ಭೂಮಿಗೆ ಸಂಬಂಧಿಸಿದ ಖರೀದಿಗಳು ಲಾಭದಾಯಕವಾಗಿರುತ್ತವೆ. ಖರ್ಚು ವೆಚ್ಚಗಳ ವಿಷಯದಲ್ಲಿ ಮರುಪರಿಶೀಲಿಸಬೇಕು.
*ತುಲಾ ರಾಶಿ*
ದೀರ್ಘಕಾಲದ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಮಾನಸಿಕ ಪ್ರಶಾಂತತೆ ಪಡೆಯುತ್ತೀರಿ. ಹಳೆಯ ವಿಷಯಗಳು ನೆನಪಾಗುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಹೊಸ ವಾಹನಗಳನ್ನು ಖರೀದಿಸಲಾಗುತ್ತದೆ. ಪ್ರತಿಸ್ಪರ್ಧಿಗಳು ಸಹ ಸ್ನೇಹಿತರಾಗಿ ಪರಸ್ಪರ ಸಹಾಯ ಮಾಡುತ್ತಾರೆ. ವ್ಯಾಪಾರ ಉದ್ಯೋಗಗಳಲ್ಲಿ ನಿರೀಕ್ಷಿತ ಬದಲಾವಣೆಗಳಾಗುತ್ತವೆ.
*ವೃಶ್ಚಿಕ ರಾಶಿ*
ಆಲೋಚನೆಗಳು ಕಾರ್ಯರೂಪಕ್ಕೆ ಬರುತ್ತವೆ. ಮನೆಯ ಹೊರಗೆ ಗೌರವ ಮತ್ತು ಘನತೆ ಹೆಚ್ಚಾಗುತ್ತದೆ. ಕುಟುಂಬದ ಕೆಲವರ ವರ್ತನೆ ಅಚ್ಚರಿ ಮೂಡಿಸುತ್ತದೆ. ವೃತ್ತಿಪರ ವ್ಯವಹಾರಗಳಿಗೆ ಲಾಭ ದೊರೆಯುತ್ತದೆ. ಉದ್ಯೋಗಗಳಲ್ಲಿ ಅನುಕೂಲತೆ ಹೆಚ್ಚಾಗುತ್ತದೆ. ಆರ್ಥಿಕ ಸಂಕಷ್ಟವಿದ್ದರೂ ಆದಾಯದ ವಿಷಯದಲ್ಲಿ ಕೊರತೆಯಿರುವುದಿಲ್ಲ.
ಇದನ್ನು ಓದಿ : Savadatti ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ; ರೂ. 1.04 ಕೋಟಿ ಕಾಣಿಕೆ ಸಂಗ್ರಹ.!
*ಧನುಸ್ಸು ರಾಶಿ*
ಖರ್ಚಿಗೆ ತಕ್ಕಷ್ಟು ಆದಾಯ ದೊರೆಯುತ್ತದೆ. ಪ್ರಮುಖ ಕಾರ್ಯಕ್ರಮಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲಾಗುತ್ತದೆ. ಹಳೆಯ ಸ್ನೇಹಿತರ ಪುನರ್ಮಿಲನವು ಸಂತೋಷವನ್ನು ತರುತ್ತದೆ ಮತ್ತು ಸ್ಥಿರಾಸ್ತಿ ವಿವಾದಗಳು ರಾಜಿಯಾಗುತ್ತವೆ. ವ್ಯಾಪಾರಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಕನಸುಗಳು ನನಸಾಗುತ್ತವೆ.
*ಮಕರ ರಾಶಿ*
ಆತ್ಮೀಯರ ಸಹಕಾರದಿಂದ ಸಾಲದ ಸಮಸ್ಯೆಯಿಂದ ಮುಕ್ತಿ ಹೊಂದುತ್ತೀರಿ. ವಾಹನ ಖರೀದಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ವೃತ್ತಿಪರ ವ್ಯವಹಾರಗಳಲ್ಲಿ. ಇತರರ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ಉದ್ಯೋಗಿಗಳು ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತರಾಗುತ್ತಾರೆ.
*ಕುಂಭ ರಾಶಿ*
ಆದಾಯ ಅಗತ್ಯಕ್ಕೆ ಸಾಕಾಗದೇ ಹೊಸ ಸಾಲ ಮಾಡಬೇಕಾಗುತ್ತದೆ. ಕೌಟುಂಬಿಕ ವಿಚಾರಗಳಲ್ಲಿ ಸರಿಯಾದ ಆಲೋಚನೆಯಿಲ್ಲದೆ ಹೊಸ ಸಮಸ್ಯೆಗಳು ಉದ್ಭವಿಸುತ್ತವೆ. ವ್ಯಾಪಾರ-ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ವೃತ್ತಿಪರ ಉದ್ಯೋಗಗಳು ಹೆಚ್ಚುವರಿ ಜವಾಬ್ದಾರಿಗಳನ್ನು ಹೊಂದಿರುತ್ತವೆ. ಸಣ್ಣ ಕೈಗಾರಿಕೆಗಳು ಏರಿಳಿತಗಳನ್ನು ಎದುರಿಸಬೇಕಾಗುತ್ತದೆ.
*ಮೀನ ರಾಶಿ*
ಮನೆಯೊಳಗೆ ಜನಪ್ರಿಯತೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ. ಅಗತ್ಯಕ್ಕೆ ಆರ್ಥಿಕ ನೆರವು ದೊರೆಯುತ್ತವೆ. ಹೊಸ ವಸ್ತ್ರ, ಆಭರಣಗಳನ್ನು ಖರೀದಿಸಲಾಗುತ್ತದೆ. ವ್ಯಾಪಾರ-ವ್ಯವಹಾರಗಳಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತಂದು ಲಾಭವನ್ನು ಪಡೆಯಲಾಗುತ್ತದೆ. ಉದ್ಯೋಗಿಗಳಿಗೆ ಉನ್ನತ ಹುದ್ದೆಗಳು ದೊರೆಯುತ್ತವೆ.
Disclaimer : ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು ಮತ್ತು ಮಾಹಿತಿಗಳನ್ನು ಆಧರಿಸಿ ಈ ಲೇಖನವನ್ನು (Astrology) ಬರೆಯಲಾಗಿದೆ. ಹೀಗಾಗಿ ಜನಸ್ಪಂದನ ನ್ಯೂಸ್ಗೂ, ಈ ಲೇಖನಕ್ಕೂ (Astrology) ಸಂಬಂಧವಿಲ್ಲ ಮತ್ತು ಇದಕ್ಕೆ ನಾವು ಜವಾಬ್ದಾರಿಯಲ್ಲ.