ಜನಸ್ಪಂದನ ನ್ಯೂಸ್, ಡೆಸ್ಕ್ : ಸಾಮಾನ್ಯವಾಗಿ ಜನರು ಬೇಡಿಕೆ ಈಡೇರಿಸಲು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದನ್ನು ನಾವು ನೋಡಿರುತ್ತೇವೆ. ಆದರೆ ಗುಜರಾತ್ನ ವಡೋದರ ನಗರದಲ್ಲಿ ನಡೆದ ಘಟನೆಯೊಂದು ಅಚ್ಚರಿ ಮೂಡಿಸಿದೆ.
ಬೀದಿ ಆಹಾರ ಮಾರಾಟಗಾರ ಗೋಲ್ಗಪ್ಪ/ಪಾನಿಪುರಿ (Panipuri) ಯಲ್ಲಿ ಕಡಿಮೆ ಪೂರಿ ನೀಡಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆ ತಡೆ ನಡೆಸಿದ್ದಾರೆ!
ಸುರ್ಸಾಗರ್ ಸರೋವರ ಪ್ರದೇಶದಲ್ಲಿ ನಡೆದ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಹಿಳೆ ಪಾನಿಪುರಿ (Panipuri) ಮಾರಾಟಗಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಾಣಿಸಿದೆ.
Snake : “40 ದಿನಗಳಲ್ಲಿ 10 ಬಾರಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು ; ಕೊನೆಗೂ ಬಲೆಗೆ”
ಆಕೆಯ ಆರೋಪದ ಪ್ರಕಾರ, 20 ರೂ.ಗೆ ಆರು ಪೂರಿ ಸಿಗಬೇಕಿದ್ದಲ್ಲಿ ಕೇವಲ ನಾಲ್ಕು ಪೂರಿ ಮಾತ್ರ ನೀಡಿದ್ದಾರೆ ಎಂದು ಆಕ್ರೋಶಗೊಂಡಿದ್ದಾಳೆ.
ಕೋಪಗೊಂಡ ಮಹಿಳೆ ನೇರವಾಗಿ ರಸ್ತೆಯ ಮಧ್ಯದಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು, ತನ್ನ ಬೇಡಿಕೆ ಈಡೇರಿಸುವವರೆಗೆ ಎದ್ದು ನಿಲ್ಲುವುದಿಲ್ಲ ಎಂದು ಹಠ ಹಿಡಿದಿದ್ದಾಳೆ.
ಪರಿಣಾಮವಾಗಿ, ಆ ಭಾಗದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಯಿತು. ಸ್ಥಳೀಯರು ಸಮಾಧಾನಪಡಿಸಲು ಪ್ರಯತ್ನಿಸಿದರೂ ಮಹಿಳೆ ಒಪ್ಪದೇ ಹಠ ಹಿಡಿದಿದ್ದಾಳೆ.
ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಕೆಯನ್ನು ರಸ್ತೆ ಬದಿಗೆ ಕರೆದುಕೊಂಡು ಹೋದರು. ಈ ವೇಳೆ ಮಹಿಳೆ ಕಣ್ಣೀರು ಸುರಿಸುತ್ತಾ “ವ್ಯಾಪಾರದಲ್ಲಿ ನ್ಯಾಯ ಇರಬೇಕು” ಎಂದು ಅಧಿಕಾರಿಗಳಿಗೆ ಒತ್ತಾಯಿಸಿದ್ದಾಳೆ.
“Heart Blockage ನ ಆರಂಭಿಕ ಲಕ್ಷಣಗಳಿವು! ಒಂದೇ ಬದಲಾವಣೆ ಕಂಡರೂ ನಿರ್ಲಕ್ಷ್ಯ ಬೇಡ”.!
ಅಂತಿಮವಾಗಿ, ಪೊಲೀಸರು ಮಹಿಳೆಗೆ ಮತ್ತೊಮ್ಮೆ ಗೋಲ್ಗಪ್ಪ (Panipuri) ತಂದುಕೊಟ್ಟ ನಂತರ ಘಟನೆಗೆ ತೆರೆ ಬಿದ್ದಿತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಗೋಲ್ಗಪ್ಪ (Panipuri) ಗಾಗಿ ರಸ್ತೆ ಮಧ್ಯೆ ಅಳುತ್ತಾ ಕೂತ ಮಹಿಳೆಯ ವಿಡಿಯೋ :
गुजरात के वडोदरा से एक एक अजीबो-गरीब मामला सामने आया है, यहां एक महिला को 20 रुपये में 6 पानीपुरी की जगह सिर्फ चार गोलगप्पे खिलाए. जिसके बाद महिला सड़क पर बैठ गई. घटना की जानकारी मिलने के बाद DIAL 112 की टीम ने स्थिति को संभाला. pic.twitter.com/koxLZ8uMRB
— Versha Singh (@Vershasingh26) September 19, 2025
Accident : ಕಾರು ಪಲ್ಟಿಯಾಗಿ ಬಸ್ಗೆ ಡಿಕ್ಕಿ ; ಸ್ಥಳದಲ್ಲೇ 3 ಜನರ ದುರ್ಮರಣ.!
ಜನಸ್ಪಂದನ ನ್ಯೂಸ್, ಗದಗ : ಗದಗ ಜಿಲ್ಲೆಯ ಹರ್ಲಾಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ (Accident) ದಲ್ಲಿ ಮೂವರು ವ್ಯಕ್ತಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಕೊಪ್ಪಳ ದಿಕ್ಕಿನಿಂದ ಗದಗ ಕಡೆಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ, ರಸ್ತೆ ವಿಭಜಕ (ಡಿವೈಡರ್) ದಾಟಿ ಎದುರುಗಡೆಯಿಂದ ಬರುತ್ತಿದ್ದ ಗೋವಾ ನೋಂದಣಿ ಹೊಂದಿದ ಬಸ್ಗೆ ಡಿಕ್ಕಿ ಹೊಡೆದಿದೆ.
Lawyers : ನ್ಯಾಯಾಲಯ ಆವರಣದಲ್ಲಿಯೇ ವಕೀಲರಿಂದ ಪೊಲೀಸರ ಮೇಲೆ ಹಲ್ಲೆ ; FIR ದಾಖಲು.!
ಅಪಘಾತ (Accident) ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ (Accident) ದಲ್ಲಿ ಮೃತರನ್ನು ಹಾವೇರಿ ಮೂಲದವರು ಎಂದು ಗುರುತಿಸಲಾಗಿದೆ. ಮೃತಪಟ್ಟವರಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೇದೆಯಾದ ಅರ್ಜುನ್ ನೆಲ್ಲೂರು (34), ಆತನ ಸಂಬಂಧಿ ರವಿ ನೆಲ್ಲೂರು (35) ಹಾಗೂ ಈರಣ್ಣ ಉಪ್ಪಾರ (38) ಸೇರಿದ್ದಾರೆ.
3.65 ಲಕ್ಷ ಅನರ್ಹ BPL Ration Card ರದ್ದು ; ನೋಟಿಸ್ ನೀಡಲು ಆಹಾರ ಇಲಾಖೆ ಕ್ರಮ.!
ಅಪಘಾತ (Accident) ದ ವಿಷಯ ತಿಳಿದ ತಕ್ಷಣ ಗದಗ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಾಥಮಿಕ ತನಿಖೆ ಪ್ರಕಾರ, ಗೋವಾ, ಹುಬ್ಬಳ್ಳಿ, ಗದಗ ಮಾರ್ಗವಾಗಿ ಹೊಸಪೇಟೆ ಗೆ ಹೊರಡಿದ್ದ ಬಸ್ ಗೆ ಕೊಪ್ಪಳ ಕಡೆಯಿಂದ ಗದಗ ಮಾರ್ಗವಾಗಿ ಬಂಕಾಪೂರ ಕಡೆಗೆ ಹೊರಟಿದ್ದ ಕಾರು ಢಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ.
ಸೇತುವೆ ಕೆಳಗೆ ಚೀಲದಲ್ಲಿ ಸುತ್ತಿದ Woman ಶವ ಪತ್ತೆ ; ಶಾಕ್ ಆದ ಸ್ಥಳೀಯರು.!
ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ. ಅಪಘಾತ (Accident) ದ ವಿಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.